Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:23 - ಪರಿಶುದ್ದ ಬೈಬಲ್‌

23 “ಒಳ್ಳೆಯ ನೆಲದ ಮೇಲೆ ಬಿದ್ದ ಬೀಜ ಅಂದರೇನು? ಬೋಧನೆಯನ್ನು ಕೇಳಿ ಅದನ್ನು ಅರ್ಥಮಾಡಿಕೊಂಡ ವ್ಯಕ್ತಿಯೇ ಬೀಜ ಬಿದ್ದ ಒಳ್ಳೆಯ ನೆಲವಾಗಿರುವನು. ಆ ಮನುಷ್ಯನು ಬೆಳೆದು ಕೆಲವು ಸಾರಿ ನೂರರಷ್ಟು ಕೆಲವು ಸಾರಿ ಅರವತ್ತರಷ್ಟು ಮತ್ತು ಕೆಲವು ಸಾರಿ ಮೂವತ್ತರಷ್ಟು ಫಲ ಕೊಡುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಒಳ್ಳೆಯ ಮಣ್ಣಿನಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿ ತಿಳಿದುಕೊಂಡು ಫಲವಂತನಾಗಿ ನೂರರಷ್ಟಾಗಲಿ, ಅರವತ್ತರಷ್ಟಾಗಲಿ, ಮೂವತ್ತರಷ್ಟಾಗಲಿ ಫಲವನ್ನು ಕೊಡುವವನೇ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಇನ್ನೊಬ್ಬನು ವಾಕ್ಯವನ್ನು ಕೇಳುತ್ತಾನೆ, ಗ್ರಹಿಸಿಕೊಳ್ಳುತ್ತಾನೆ; ಫಲಪ್ರದನಾಗಿ ನೂರರಷ್ಟು, ಅರವತ್ತರಷ್ಟು, ಮೂವತ್ತರಷ್ಟು ಫಲಕೊಡುತ್ತಾನೆ. ಇವನು ಹದವಾದ ಭೂಮಿಯಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಒಬ್ಬನು ವಾಕ್ಯವನ್ನು ಕೇಳಿ ತಿಳುಕೊಂಡು ಫಲವಂತನಾಗಿ ನೂರರಷ್ಟಾಗಲಿ ಅರುವತ್ತರಷ್ಟಾಗಲಿ ಮೂವತ್ತರಷ್ಟಾಗಲಿ ಫಲವನ್ನು ಕೊಡುತ್ತಾನೆ; ಇವನೇ ಒಳ್ಳೆಯ ನೆಲವಾಗಿರುವವನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದರೆ ಒಳ್ಳೆಯ ಭೂಮಿಯಲ್ಲಿ ಬಿತ್ತಲಾಗಿರುವ ಬೀಜವಾಗಿರುವವರು, ವಾಕ್ಯವನ್ನು ಕೇಳಿ ಅದನ್ನು ಗ್ರಹಿಸಿಕೊಳ್ಳುತ್ತಾರೆ. ಇವರು ಫಲ ಫಲಿಸುವವರಾಗಿ ನೂರರಷ್ಟು ಅರವತ್ತರಷ್ಟು ಮತ್ತು ಮೂವತ್ತರಷ್ಟು ಫಲವನ್ನು ಕೊಡುತ್ತಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಬರ್‍ಯಾ ಮಾಟಿತ್ ಸಿಪಡಲ್ಲೆ ಭ್ಹಿಂಯ್ ಮಟ್ಲ್ಯಾರ್, ದೆವಾಚಿ ಬರಿ ಖಬರ್ ಆಯ್ಕುನ್ ಅರ್ತ್‍ ಕರುನ್ ಘೆಟಲ್ಲಿ ಲೊಕಾ. ತೆಂಚ್ಯಾತ್ಲಿ ಉಲ್ಲಿ ಲೊಕಾ, ಸೆಂಬರಾಕ್ ಸೆಂಬರ್ ಫಳ್ ದಿತ್ಯಾತ್, ಉಲ್ಲೆ ಜಾನಾ ಸಾಟ್, ಅನಿ ಉಲ್ಲೆ ಜಾನಾ ತಿಸ್”. ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:23
43 ತಿಳಿವುಗಳ ಹೋಲಿಕೆ  

ಕ್ರಿಸ್ತನ ಸಹಾಯದಿಂದ ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಉಂಟುಮಾಡುವುದಕ್ಕಾಗಿ ನೀವು ಅನೇಕ ಕಾರ್ಯಗಳನ್ನು ಮಾಡುವಂಥವರಾಗಬೇಕು.


“ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ; ನಾನು ನಿಮ್ಮನ್ನು ಆರಿಸಿಕೊಂಡೆನು. ನೀವು ಹೊರಟುಹೋಗಿ ಫಲಕೊಡಬೇಕು. ಇದೇ ನಾನು ನಿಮಗೆ ಕೊಟ್ಟಿರುವ ಕೆಲಸ. ಈ ಫಲವು ನಿಮ್ಮ ಜೀವನದಲ್ಲಿ ಶಾಶ್ವತವಾಗಿರಲಿ ಎಂಬುದೇ ನನ್ನ ಬಯಕೆ. ಹೀಗಿರಲಾಗಿ, ನೀವು ನನ್ನ ಹೆಸರಿನಲ್ಲಿ ಏನು ಕೇಳಿಕೊಂಡರೂ ತಂದೆಯು ಅದನ್ನು ನಿಮಗೆ ಕೊಡುವನು.


“ನಿಮಗೆ ಒಳ್ಳೆಯ ಫಲ ಬೇಕಾಗಿದ್ದರೆ ನೀವು ಒಳ್ಳೆಯ ಮರ ಹೊಂದಿರಬೇಕು. ನಿಮ್ಮ ಮರ ಒಳ್ಳೆಯದಾಗಿಲ್ಲದಿದ್ದರೆ ಅದು ಕೆಟ್ಟ ಫಲವನ್ನೇ ಬಿಡುವುದು. ಮರವನ್ನು ಅದರಲ್ಲಿ ಬಿಡುವ ಫಲದಿಂದಲೇ ತಿಳಿದುಕೊಳ್ಳಬಹುದು.


ಬೇರೆ ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದವು. ಅವು ಬೆಳೆದು ಕಾಳುಬಿಟ್ಟವು. ಕೆಲವು ಗಿಡಗಳು ನೂರರಷ್ಟು, ಕೆಲವು ಗಿಡಗಳು ಅರವತ್ತರಷ್ಟು, ಇನ್ನು ಕೆಲವು ಮೂವತ್ತರಷ್ಟು ಕಾಳುಬಿಟ್ಟವು.


ನಿಮ್ಮ ಮನಸ್ಸು ನಿಜವಾಗಿಯೂ ದೇವರ ಕಡೆಗೆ ತಿರುಗಿಕೊಂಡಿದೆ ಎಂಬುದನ್ನು ನೀವು ತಕ್ಕ ಕಾರ್ಯಗಳ ಮೂಲಕ ತೋರಿಸಿ.


ಆಗ ಮುಂದಿನ ವರ್ಷ ಈ ಮರ ಫಲವನ್ನು ಕೊಡಬಹುದು. ಒಂದುವೇಳೆ ಇದು ಫಲವನ್ನು ಕೊಡದಿದ್ದರೆ ನೀನು ಇದನ್ನು ಕಡಿದುಹಾಕು’ ಎಂದು ಉತ್ತರಿಸಿದನು.”


ದೇವರ ಮಗನು ಬಂದಿದ್ದಾನೆಂಬುದು ನಮಗೆ ತಿಳಿದಿದೆ. ದೇವರ ಮಗನು ನಮಗೆ ತಿಳುವಳಿಕೆಯನ್ನು ದಯಪಾಲಿಸಿರುವನು. ಈಗ ನಾವು ದೇವರನ್ನು ತಿಳಿದುಕೊಳ್ಳಬಲ್ಲೆವು. ಸತ್ಯವಾಗಿರುವಾತನು ದೇವರೇ. ಸತ್ಯ ದೇವರಲ್ಲಿಯೂ ಮತ್ತು ಆತನ ಮಗನಾದ ಯೇಸು ಕ್ರಿಸ್ತನಲ್ಲಿಯೂ ನಾವು ನೆಲೆಸಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.


ನಿಮ್ಮ ಪ್ರಭುವಾದ ಮತ್ತು ರಕ್ಷಕನಾದ ಯೇಸು ಕ್ರಿಸ್ತನ ಕೃಪೆಯಲ್ಲಿಯೂ ತಿಳುವಳಿಕೆಯಲ್ಲಿಯೂ ಬೆಳೆಯುತ್ತಲೇ ಇರಿ. ಆತನಿಗೆ ಈಗಲೂ ಎಂದೆಂದಿಗೂ ಮಹಿಮೆಯಾಗಲಿ! ಆಮೆನ್.


ಪ್ರಭುವಿಗೆ ಯೋಗ್ಯರಾಗಿ ನಡೆದು ಪ್ರತಿಯೊಂದು ವಿಷಯದಲ್ಲಿ ಆತನನ್ನು ಸಂತೋಷಪಡಿಸಬೇಕೆಂತಲೂ ನೀವು ಎಲ್ಲಾ ವಿಧವಾದ ಒಳ್ಳೆಯ ಕಾರ್ಯಗಳನ್ನು ಮಾಡುತ್ತಾ ದೇವಜ್ಞಾನದಲ್ಲಿ ಬೆಳಯಬೇಕೆಂತಲೂ


ನಾನು ಇಸ್ರೇಲರೊಡನೆ ಮುಂದಿನ ದಿನಗಳಲ್ಲಿ ಮಾಡಿಕೊಳ್ಳುವ ಹೊಸ ಒಡಂಬಡಿಕೆಯು ಇಂತಿದೆ: ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇರಿಸುವೆನು; ಅವರ ಹೃದಯದ ಮೇಲೆ ಬರೆಯುವೆನು; ನಾನು ಅವರ ದೇವರಾಗಿರುವೆನು; ಅವರು ನನ್ನ ಜನರಾಗಿರುವರು.


ರಕ್ಷಣಾಮಾರ್ಗದ ಕುರಿತು ಅವರಿಗೆ ತಿಳಿಸಲ್ಪಟ್ಟಂತೆಯೇ ನಮಗೂ ತಿಳಿಸಲಾಯಿತು. ಅವರು ಆ ಬೋಧನೆಯನ್ನು ಕೇಳಿದರೂ ಅವರಿಗೆ ಪ್ರಯೋಜನವಾಗಲಿಲ್ಲ. ಏಕೆಂದರೆ ಅವರು ಅದನ್ನು ನಂಬಿಕೆಯಿಂದ ಸ್ವೀಕರಿಸಿಕೊಳ್ಳಲಿಲ್ಲ.


ಸತ್ಯವನ್ನು ಪ್ರೀತಿಸದೆ ತಪ್ಪಿಹೋಗಿರುವ ಜನರನ್ನು ಮೋಸಗೊಳಿಸಲು, ಅವನು ಎಲ್ಲಾ ವಿಧವಾದ ತಂತ್ರಗಳನ್ನು ಮಾಡುವನು. (ಅವರು ಸತ್ಯವನ್ನು ಪ್ರೀತಿಸಿದ್ದರೆ, ರಕ್ಷಣೆ ಹೊಂದುತ್ತಿದ್ದರು.)


ಸಹೋದರ ಸಹೋದರಿಯರೇ, ಈಗ ನಿಮಗೆ ಇತರ ಕೆಲವು ವಿಚಾರಗಳನ್ನು ತಿಳಿಸುತ್ತೇನೆ. ದೇವರನ್ನು ಮೆಚ್ಚಿಸಲು ಹೇಗೆ ಜೀವಿಸಬೇಕೆಂದು ನಿಮಗೆ ಕಲಿಸಿದ್ದೇವೆ. ನೀವು ಅದೇ ರೀತಿಯಲ್ಲಿ ಜೀವಿಸುತ್ತಿರುವಿರಿ. ಅದೇ ರೀತಿಯಲ್ಲಿ ಇನ್ನೂ ಹೆಚ್ಚು ಸಮರ್ಪಕವಾಗಿ ಜೀವಿಸಬೇಕೆಂದು ನಾವು ನಿಮ್ಮನ್ನು ಕ್ರಿಸ್ತನಲ್ಲಿ ಕೇಳಿಕೊಳ್ಳುತ್ತೇವೆ ಮತ್ತು ಪ್ರೋತ್ಸಾಹಿಸುತ್ತೇವೆ.


ನಿಜವಾಗಿಯೂ, ನಿಮ್ಮಿಂದ ಕೊಡುಗೆಗಳನ್ನು ಪಡೆದುಕೊಳ್ಳಬೇಕೆಂಬುದು ನನ್ನ ಅಪೇಕ್ಷೆಯಲ್ಲ. ಆದರೆ ಕೊಡುವುದರ ಮೂಲಕ ಮುಂದೆ ಹೇರಳವಾಗಿ ದೊರೆಯುವ ಆಶೀರ್ವಾದಗಳನ್ನು ನೀವು ಹೊಂದಿಕೊಳ್ಳಬೇಕೆಂಬುದೇ ನನ್ನ ಅಪೇಕ್ಷೆ.


ಬಿತ್ತುವವನಿಗೆ ಬೀಜವನ್ನು ಕೊಡುವವನು ದೇವರೇ. ಆತನು ಆಹಾರಕ್ಕಾಗಿ ರೊಟ್ಟಿಯನ್ನು ಕೊಡುವನು. ಅಂತೆಯೇ, ದೇವರು ಆತ್ಮಿಕ ಬೀಜವನ್ನು ಕೊಡುವನು ಮತ್ತು ನಿಮ್ಮ ಬೀಜವನ್ನು ಬೆಳೆಯಮಾಡುವನು. ನಿಮ್ಮ ಒಳ್ಳೆಯ ಕ್ರಿಯೆಯಿಂದ ಆತನು ಮಹಾ ಸುಗ್ಗಿಯನ್ನು ಉಂಟುಮಾಡುವನು.


ಈ ಯೆಹೂದ್ಯರು ಥೆಸಲೋನಿಕದ ಯೆಹೂದ್ಯರಿಗಿಂತಲೂ ಉತ್ತಮರಾಗಿದ್ದರು. ಪೌಲ ಸೀಲರು ಹೇಳಿದ ಸಂಗತಿಗಳನ್ನು ಇವರು ಬಹಳ ಸಂತೋಷದಿಂದ ಕೇಳಿದರು. ಮತ್ತು ಈ ಸಂಗತಿಗಳು ನಿಜವೇ ಎಂಬುದನ್ನು ತಿಳಿದುಕೊಳ್ಳಲು ಪವಿತ್ರ ಗ್ರಂಥವನ್ನು ಪ್ರತಿದಿನವೂ ಅಧ್ಯಯನ ಮಾಡಿದರು.


ಅಲ್ಲಿ ಲಿಡಿಯಾ ಎಂಬ ಒಬ್ಬ ಹೆಂಗಸಿದ್ದಳು. ಆಕೆಯು ಥುವತೈರ ಪಟ್ಟಣದವಳು. ಕೆನ್ನೇರಳೆ ಬಣ್ಣದ ಬಟ್ಟೆಗಳನ್ನು ಮಾರುವುದು ಆಕೆಯ ಕಸುಬಾಗಿತ್ತು. ಆಕೆಯು ನಿಜ ದೇವರನ್ನು ಆರಾಧಿಸುತ್ತಿದ್ದಳು. ಪೌಲನ ಮಾತನ್ನು ಲಿಡಿಯಾ ಆಲಿಸುತ್ತಿದ್ದಳು. ಪ್ರಭುವು ಆಕೆಯ ಹೃದಯವನ್ನು ತೆರೆದನು. ಪೌಲನು ಹೇಳಿದ ಸಂಗತಿಗಳನ್ನು ಆಕೆ ನಂಬಿಕೊಂಡಳು.


ದೇವರಿಂದ ಹುಟ್ಟಿದವನು ದೇವರು ಹೇಳುವ ಮಾತುಗಳನ್ನು ಸ್ವೀಕರಿಸಿಕೊಳ್ಳುವನು. ಆದರೆ ನೀವು ದೇವರಿಂದ ಹುಟ್ಟಿಲ್ಲದ ಕಾರಣ ಆತನ ಮಾತುಗಳನ್ನು ಸ್ವೀಕರಿಸಿಕೊಳ್ಳುವುದಿಲ್ಲ” ಎಂದನು.


ಒಳ್ಳೆಯ ನೆಲದಲ್ಲಿ ಬಿದ್ದ ಬೀಜವೆಂದರೇನು? ಒಳ್ಳೆಯದಾದ ಮತ್ತು ಯಥಾರ್ಥವಾದ ಹೃದಯದಿಂದ ದೇವರ ವಾಕ್ಯವನ್ನು ಕೇಳುವ ಜನರೇ ಬೀಜಬಿದ್ದ ಒಳ್ಳೆಯ ನೆಲವಾಗಿದ್ದಾರೆ. ಅವರು ದೇವರ ವಾಕ್ಯಕ್ಕೆ ವಿಧೇಯರಾಗಿ ತಾಳ್ಮೆಯಿಂದ ಒಳ್ಳೆಯ ಫಲವನ್ನು ನೀಡುವರು.


ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ದೇವರ ರಾಜ್ಯವನ್ನು ಮಕ್ಕಳ ಮನೋಭಾವದಿಂದ ಸ್ವೀಕರಿಸದಿದ್ದರೆ ನೀವು ಅದರೊಳಗೆ ಸೇರುವುದೇ ಇಲ್ಲ” ಎಂದು ಹೇಳಿದನು.


“ಇನ್ನು ಕೆಲವರು ಬೀಜಬಿದ್ದ ಒಳ್ಳೆಯ ನೆಲದಂತಿದ್ದಾರೆ. ಅವರು ವಾಕ್ಯವನ್ನು ಸ್ವೀಕರಿಸಿಕೊಂಡು ಫಲವನ್ನು ಫಲಿಸುತ್ತಾರೆ. ಕೆಲವು ಸಂದರ್ಭಗಳಲ್ಲಿ ಮೂವತ್ತರಷ್ಟು ಹೆಚ್ಚಾಗಿ, ಇನ್ನು ಕೆಲವು ಸಂದರ್ಭಗಳಲ್ಲಿ ಅರವತ್ತರಷ್ಟು ಹೆಚ್ಚಾಗಿ, ಮತ್ತೆ ಕೆಲವು ಸಂಧರ್ಭಗಳಲ್ಲಿ ನೂರರಷ್ಟು ಹೆಚ್ಚಾಗಿ ಫಲ ಫಲಿಸುತ್ತಾರೆ” ಎಂದು ಹೇಳಿದನು.


ಮರಗಳನ್ನು ಕಡಿದುಹಾಕಲು ಕೊಡಲಿ ಈಗಲೇ ಸಿದ್ಧವಾಗಿದೆ. ಒಳ್ಳೆಯ ಫಲಬಿಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಗೆ ಹಾಕಲಾಗುವುದು.


ದೇವರು ಹೇಳಿದ್ದೇನೆಂದರೆ, “ನಾನು ನಿಮ್ಮಲ್ಲಿ ಒಂದು ಹೊಸ ಆತ್ಮವನ್ನಿಟ್ಟು ನಿಮ್ಮ ಯೋಚನೆಯ ರೀತಿಯನ್ನು ಬದಲಾಯಿಸುವೆನು. ನಿಮ್ಮ ಕಲ್ಲಿನ ಹೃದಯವನ್ನು ತೆಗೆದುಬಿಟ್ಟು ಮೃದುವಾದ ಮಾನವ ಹೃದಯವನ್ನು ಕೊಡುವೆನು.


ನಿಮ್ಮ ದಂಗೆಕೋರತನದ ಮಾರ್ಗಗಳನ್ನೆಲ್ಲ ತೊರೆದುಬಿಟ್ಟು ನಿಮ್ಮ ಹೃದಯವನ್ನೂ ಸ್ವಭಾವವನ್ನೂ ನೂತನ ಮಾಡಿಕೊಳ್ಳಿರಿ. ಇಸ್ರೇಲ್ ಜನರೇ, ನೀವು ಮರಣವನ್ನು ಬರಮಾಡಿಕೊಳ್ಳುವುದೇಕೆ?


ಆ ಜನರು ತನ್ನ ಮೇಲೆ ಪದೇಪದೇ ಸುರಿಯುವ ಮಳೆಯನ್ನು ಹೀರಿಕೊಳ್ಳುವ ಭೂಮಿಯಂತಿದ್ದಾರೆ. ಅದು ಜನರಿಗೆ ಆಹಾರವನ್ನು ಕೊಡಲೆಂದು ರೈತನು ಅದರಲ್ಲಿ ಸಸಿಯನ್ನು ನೆಟ್ಟು ಬೆಳೆಸುತ್ತಾನೆ. ಅದು ಜನರಿಗೆ ಉಪಯುಕ್ತವಾದ ಬೆಳೆಗಳನ್ನು ಬೆಳೆಸಿದರೆ, ಅದಕ್ಕೆ ದೇವರಿಂದ ಆಶೀರ್ವಾದ ದೊರೆಯುತ್ತದೆ.


ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದವು. ಈ ಬೀಜಗಳು ಮೊಳೆತು ಬೆಳೆದು ನೂರರಷ್ಟು ಹೆಚ್ಚು ಫಲವನ್ನು ಕೊಟ್ಟವು.” ಯೇಸು ಈ ಸಾಮ್ಯವನ್ನು ಹೇಳಿ ಮುಗಿಸಿದ ಮೇಲೆ, “ನನ್ನ ಮಾತನ್ನು ಆಲಿಸುತ್ತಿರುವ ಜನರೇ, ಕೇಳಿರಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು