Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:30 - ಪರಿಶುದ್ದ ಬೈಬಲ್‌

30 ಸುಗ್ಗಿಕಾಲದವರೆಗೆ ಹಣಜಿಯೂ ಗೋಧಿಯೂ ಒಟ್ಟಿಗೆ ಬೆಳೆಯಲಿ. ಸುಗ್ಗಿಕಾಲದ ಸಮಯದಲ್ಲಿ ನಾನು ಕೆಲಸದವರಿಗೆ, ಮೊದಲು ಹಣಜಿಗಳನ್ನು ಕೂಡಿಸಿ ಅದನ್ನು ಸುಡುವುದಕ್ಕಾಗಿ ಹೊರೆ ಕಟ್ಟಿ, ನಂತರ ಗೋಧಿಯನ್ನು ಕೂಡಿಸಿ ಅದನ್ನು ನನ್ನ ಕಣಜಕ್ಕೆ ತನ್ನಿರಿ ಎಂದು ಹೇಳುವೆನು’ ಎಂದು ಉತ್ತರಕೊಟ್ಟನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಸುಗ್ಗಿ ಕಾಲದ ತನಕ ಎರಡೂ ಒಟ್ಟಿಗೆ ಬೆಳೆಯಲಿ. ಸುಗ್ಗಿ ಕಾಲದಲ್ಲಿ ನಾನು ಕೊಯ್ಯುವವರಿಗೆ, ಮೊದಲು ಕಳೆಯನ್ನು ಕಿತ್ತು ತೆಗೆದು ಹೊರೆಕಟ್ಟಿ ಅದನ್ನು ಸುಡುವುದಕ್ಕೆ ಹಾಕಿ, ಗೋದಿಯನ್ನು ಕೂಡಿಸಿ ನನ್ನ ಕಣಜಕ್ಕೆ ತುಂಬಿರಿ ಎಂದು ಹೇಳುವೆನು’” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಸುಗ್ಗಿಯವರೆಗೆ ಎರಡೂ ಒಟ್ಟಿಗೆ ಬೆಳೆಯಲಿ; ಸುಗ್ಗಿಯ ಕಾಲದಲ್ಲಿ ಮೊದಲು ಕಳೆ ಕಿತ್ತು, ಸುಟ್ಟುಹಾಕಲು ಕಟ್ಟಿಡಿ; ಬಳಿಕ ಗೋದಿಯನ್ನು ಒಕ್ಕಣೆಮಾಡಿ ನನ್ನ ಕಣಜಕ್ಕೆ ತುಂಬಿರಿ, ಎಂದು ಕೊಯ್ಲುಗಾರರಿಗೆ ಹೇಳುತ್ತೇನೆ,’ ಎಂದ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಸುಗ್ಗೀಕಾಲದ ತನಕ ಎರಡೂ ಕೂಡ ಬೆಳೆಯಲಿ; ಸುಗ್ಗೀಕಾಲದಲ್ಲಿ ನಾನು ಕೊಯ್ಯುವವರಿಗೆ - ಮೊದಲು ಹಣಜಿಯನ್ನು ಆರಿಸಿತೆಗೆದು ಅದನ್ನು ಸುಡುವದಕ್ಕೆ ಹೊರೆಕಟ್ಟಿಹಾಕಿ, ಗೋದಿಯನ್ನು ನನ್ನ ಕಣಜಕ್ಕೆ ತುಂಬಿರಿ ಎಂದು ಹೇಳುವೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಸುಗ್ಗಿಯ ಕಾಲದವರೆಗೆ ಎರಡೂ ಜೊತೆಯಲ್ಲಿ ಬೆಳೆಯಲಿ. ಸುಗ್ಗಿಯ ಕಾಲದಲ್ಲಿ ನಾನು ಕೊಯ್ಯುವವರಿಗೆ: ಮೊದಲು ಕಳೆಯನ್ನು ಕೂಡಿಸಿ ಅವುಗಳನ್ನು ಸುಡುವುದಕ್ಕೆ ಬೇರೆ ಕಟ್ಟಿಡಿರಿ, ಗೋಧಿಯನ್ನು ನನ್ನ ಕಣಜದಲ್ಲಿ ಕೂಡಿಸಿರಿ ಎಂದು ಹೇಳುವೆನು,’ ಅಂದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಸುಗ್ಗಿ ಯೆಯ್‍ ಪತರ್ ಕಳೆಬಿ ಘವ್‍ಬಿ ವಾಂಗ್ಡಾಚ್ ರ್‍ಹಂವ್ದಿ, ತನ್ನಾ ಸುಗ್ಗಿಚ್ಯಾ ದಿಸಿ ಕಾಮ್ ಕರ್‍ತಲ್ಯಾಕ್ನಿ ಮಿಯಾ ಅದ್ದಿ ಕಳೆ ಉಪ್ಸುನ್ ಕಾಡುನ್ ಜಾಳ್ವುನ್ ಟಾಕುಸಾಟ್ನಿ ಪೆಂಡಿಯಾ ಭಾಂದಾ ಅನಿ ಮಾನಾ ಘವ್ ಗೊಳಾ ಕರಾ ಅನಿ ಮಾಜ್ಯಾ ತಟ್ಟ್ಯಾತ್ ಭರುನ್ ಥವಾ ಮನುನ್ ಮಿಯಾ ಸಾಂಗ್ತಾ”. ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:30
20 ತಿಳಿವುಗಳ ಹೋಲಿಕೆ  

ಆತನು ಕಾಳನ್ನು ಸ್ವಚ್ಛಗೊಳಿಸಲು ಸಿದ್ಧನಾಗಿದ್ದಾನೆ. ಆತನು ಕಾಳನ್ನು ಹೊಟ್ಟಿನಿಂದ ಬೇರ್ಪಡಿಸಿ ಒಳ್ಳೆಯ ಕಾಳುಗಳನ್ನು ಕಣಜದಲ್ಲಿ ತುಂಬಿಸಿ ಹೊಟ್ಟನ್ನು ನಂದಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವನು” ಎಂದು ಹೇಳಿದನು.


ಕೆಲವು ಜನರ ಪಾಪಗಳು ಎದ್ದುಕಾಣುತ್ತವೆ. ಅವರಿಗೆ ನ್ಯಾಯತೀರ್ಪಾಗುವುದೆಂಬುದನ್ನು ಅವರ ಪಾಪಗಳೇ ತೋರ್ಪಡಿಸುತ್ತವೆ. ಆದರೆ ಇತರ ಕೆಲವು ಜನರ ಪಾಪಗಳು ಸ್ವಲ್ಪಕಾಲದ ನಂತರ ತಿಳಿದುಬರುತ್ತವೆ.


ಆದ್ದರಿಂದ ಸರಿಯಾದ ಸಮಯಕ್ಕಿಂತ ಮೊದಲೇ ತೀರ್ಪುಮಾಡಬೇಡಿ. ಪ್ರಭುವು ಬರುವ ತನಕ ಕಾದುಕೊಂಡಿರಿ. ಕತ್ತಲೆಯಲ್ಲಿ ಅಡಗಿಕೊಂಡಿರುವವುಗಳ ಮೇಲೆ ಆತನು ಬೆಳಕನ್ನು ಬೆಳಗಿಸುವನು. ಮನುಷ್ಯರ ಹೃದಯಗಳ ರಹಸ್ಯವಾದ ಉದ್ದೇಶಗಳನ್ನು ಆತನು ಬಹಿರಂಗಪಡಿಸುವನು. ಆಗ ಪ್ರತಿಯೊಬ್ಬನಿಗೂ ಬರತಕ್ಕ ಹೊಗಳಿಕೆಯು ದೇವರಿಂದಲೇ ಬರುವುದು.


ನನ್ನಲ್ಲಿ ನೆಲೆಗೊಂಡಿಲ್ಲದವನು ಹೊರಗೆ ಬಿಸಾಡಲ್ಪಟ್ಟ ಕವಲಿನಂತಿರುವನು. ಆ ಕವಲು ಸತ್ತುಹೋಗುವುದು. ಸತ್ತ ಕವಲುಗಳನ್ನು ಜನರು ಒಟ್ಟುಗೂಡಿಸಿ ಬೆಂಕಿಯೊಳಕ್ಕೆ ಎಸೆದು ಸುಟ್ಟುಹಾಕುವರು.


ನೀವು ನನ್ನ ಬಳಿಗೆ ಹಿಂತಿರುಗಿ ಬರುವಿರಿ. ಆಗ ನೀವು ಒಳ್ಳೆಯವರಿಗೂ ಕೆಟ್ಟವರಿಗೂ ಇರುವ ವ್ಯತ್ಯಾಸವನ್ನು ತಿಳಿದುಕೊಳ್ಳುವಿರಿ. ಆಗ ನೀವು ದೇವರನ್ನು ಹಿಂಬಾಲಿಸುವವರಿಗೂ ಹಿಂಬಾಲಿಸದೆ ಇರುವವರಿಗೂ ಇರುವ ವ್ಯತ್ಯಾಸವನ್ನು ನೋಡುವಿರಿ.


ಭೂಲೋಕದ ಜನರೆಲ್ಲರೂ ಆತನ ಮುಂದೆ ಒಟ್ಟುಗೂಡುತ್ತಾರೆ. ಕುರುಬನು ಕುರಿಗಳನ್ನು ಆಡುಗಳಿಂದ ಪ್ರತ್ಯೇಕಿಸಿದಂತೆ ಆತನು ಅವರನ್ನು ಬೇರ್ಪಡಿಸುವನು;


ಆತನು ರಾಶಿಯನ್ನು ಶುದ್ಧಮಾಡುವುದಕ್ಕೆ ಸಿದ್ಧನಾಗಿ ಬರುವನು. ಆತನು ಒಳ್ಳೆಯ ಕಾಳನ್ನು ಹೊಟ್ಟಿನಿಂದ ಬೇರ್ಪಡಿಸಿ ತನ್ನ ಕಣಜದಲ್ಲಿ ಹಾಕುವನು. ನಂತರ ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು” ಎಂದು ಉತ್ತರಕೊಟ್ಟನು.


“ಆಮೇಲೆ ರಾಜನು ತನ್ನ ಎಡಗಡೆಯಿದ್ದ ಜನರಿಗೆ, ‘ನನ್ನಿಂದ ತೊಲಗಿಹೋಗಿರಿ, ನಿಮಗೆ ಶಿಕ್ಷೆಯಾಗಬೇಕೆಂದು ದೇವರು ತೀರ್ಮಾನಿಸಿದ್ದಾನೆ. ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


ನಿನ್ನನ್ನು ಕೊಲ್ಲಲು ಒಬ್ಬ ವ್ಯಕ್ತಿಯು ಅಟ್ಟಿಸಿಕೊಂಡು ಬಂದರೆ, ನಿನ್ನ ದೇವರಾದ ಯೆಹೋವನು ನಿನ್ನ ಜೀವವನ್ನು ರಕ್ಷಿಸುತ್ತಾನೆ! ಆದರೆ ಯೆಹೋವನು ನಿನ್ನ ಶತ್ರುಗಳನ್ನು ಕವಣೆಯ ಕಲ್ಲನ್ನು ಎಸೆಯುವಂತೆ ಎಸೆದುಬಿಡುತ್ತಾನೆ!


ಒಬ್ಬ ವ್ಯಕ್ತಿಯು ಅವುಗಳನ್ನು ಮುಟ್ಟಿದರೆ, ಅವು ಮರದ ಮತ್ತು ಕಬ್ಬಿಣದ ಕತ್ತಿಗಳಿಂದ ಚುಚ್ಚಿದಂತಾಗುತ್ತದೆ. ಆ ಜನರು ಮುಳ್ಳುಗಳಂತಿದ್ದಾರೆ. ಅವರನ್ನು ಬೆಂಕಿಯಲ್ಲಿ ಎಸೆದು ಸಂಪೂರ್ಣವಾಗಿ ಸುಟ್ಟುಬಿಡುವರು!”


“ಆ ಸಮಯದಲ್ಲಿ ರೆಫಾಯೀಮ್ ಕಣಿವೆಯಲ್ಲಿ ಧಾನ್ಯದ ಸುಗ್ಗಿಯಂತಿರುವದು. ಕೆಲಸಗಾರರು ಹೊಲಗಳಲ್ಲಿ ಬೆಳೆಯನ್ನು ಕೊಯ್ದು ಧಾನ್ಯವನ್ನು ಶೇಖರಿಸುವರು.


ಆ ರಾತ್ರಿ ಜನರೆಲ್ಲರೂ ನಿದ್ರಿಸುತ್ತಿದ್ದಾಗ ಅವನ ವೈರಿ ಬಂದು ಗೋಧಿಯ ನಡುವೆ ಹಣಜಿಯನ್ನು ಬಿತ್ತಿ ಹೊರಟುಹೋದನು.


“ಆ ಮನುಷ್ಯನು, ‘ಬೇಡ, ಏಕೆಂದರೆ ನೀವು ಹಣಜಿಗಳನ್ನು ಕೀಳುವಾಗ ಗೋಧಿಯನ್ನು ಸಹ ಕೀಳಬಹುದು.


ಅದು ನಿನ್ನ ಬೆಳೆಯನ್ನು ಕೂಡಿಸಿ, ನಿನ್ನ ಕಣಕ್ಕೆ ಹೊತ್ತುಕೊಂಡು ಬರುವುದೆಂದು ಭರವಸವಿಡುವಿಯಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು