Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:33 - ಪರಿಶುದ್ದ ಬೈಬಲ್‌

33 ಬಳಿಕ ಯೇಸು ಜನರಿಗೆ ಇನ್ನೊಂದು ಸಾಮ್ಯವನ್ನು ಹೇಳಿದನು: “ಪರಲೋಕರಾಜ್ಯವು ಒಬ್ಬ ಸ್ತ್ರೀ ರೊಟ್ಟಿ ಮಾಡುವುದಕ್ಕೆ ಒಂದು ದೊಡ್ಡ ಬೋಗುಣಿಯ ಹಿಟ್ಟಿಗೆ ಬೆರೆಸಿದ ಹುಳಿಗೆ ಹೋಲಿಕೆಯಾಗಿದೆ. ಆ ಹುಳಿಯು ನಾದಿದ ಹಿಟ್ಟನ್ನೆಲ್ಲಾ ಉಬ್ಬಿಸಿತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, “ಪರಲೋಕ ರಾಜ್ಯವು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಸ್ತ್ರೀ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿಡಲು ಆ ಹಿಟ್ಟೆಲ್ಲಾ ಹುಳಿಯಾಯಿತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಯೇಸುಸ್ವಾಮಿ ಮತ್ತೊಂದು ಸಾಮತಿಯನ್ನು ಜನರಿಗೆ ಹೇಳಿದರು: “ಸ್ವರ್ಗಸಾಮ್ರಾಜ್ಯ ಹುದುಗೆಬ್ಬಿಸುವ ಹುಳಿಯನ್ನು ಹೋಲುತ್ತದೆ. ಅದನ್ನು ಒಬ್ಬಾಕೆ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿದಳು. ಆ ಹಿಟ್ಟೆಲ್ಲಾ ಹುಳಿಯಾಯಿತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು; ಅದೇನಂದರೆ - ಪರಲೋಕ ರಾಜ್ಯವು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಹೆಂಗಸು ತಕ್ಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿಡಲು ಆ ಹಿಟ್ಟೆಲ್ಲಾ ಹುಳಿಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದರು: “ಪರಲೋಕ ರಾಜ್ಯವು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಸ್ತ್ರೀಯು ತೆಗೆದುಕೊಂಡು ಹುಳಿಯಿಲ್ಲದ ಸುಮಾರು ಇಪ್ಪತ್ತೇಳು ಕಿಲೋಗ್ರಾಂ ಹಿಟ್ಟಿನಲ್ಲಿ ಕಲಸಿದಾಗ ಆ ಹಿಟ್ಟೆಲ್ಲಾ ಹುಳಿಯಾಯಿತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಜೆಜುನ್ ತೆಂಕಾ, ಅನಿಎಕ್ ಕಾನಿ ಸಾಂಗಟ್ಲ್ಯಾನ್: “ಸರ್ಗಾಚೊ ರಾಜ್ ಮಟ್ಲ್ಯಾರ್, ಎಕ್ ಬಾಯ್ಕೊಮನುಸ್ ಸೊಡಾ ಘೆತಾ ಅನಿ ತಿನ್ ಶೆರ್ ಪಿಟ್ಟಾತ್ ಘಾಲುನ್ ಥವ್ತಾ ಅನಿ ತೆ ಪಿಟ್ಟ್ ಸಗ್ಳೆ ಫುಗ್ತಾ.” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:33
19 ತಿಳಿವುಗಳ ಹೋಲಿಕೆ  

ಎಚ್ಚರಿಕೆಯಿಂದಿರಿ! “ಸ್ವಲ್ಪ ಹುಳಿಯಿಂದ ಪಾತ್ರೆಯಲ್ಲಿರುವ ನಾದಿದ ಹಿಟ್ಟೆಲ್ಲಾ ಹುಳಿಯಾಗುವುದು.”


ಅದು, ಸ್ತ್ರೀಯೊಬ್ಬಳು ರೊಟ್ಟಿಮಾಡುವುದಕ್ಕಾಗಿ ದೊಡ್ಡ ಪಾತ್ರೆಯೊಂದರಲ್ಲಿರುವ ಹಿಟ್ಟಿಗೆ ಬೆರೆಸುವ ಹುಳಿಯಂತಿದೆ. ಆ ಹುಳಿಯು ನಾದಿದ ಹಿಟ್ಟನ್ನೆಲ್ಲ ಉಬ್ಬಿಸುತ್ತದೆ.”


ನೀತಿವಂತರ ಜೀವಿತವು ಮಧ್ಯಾಹ್ನದವರೆಗೂ ಹೆಚ್ಚುತ್ತಾ ಬರುವ ಮುಂಜಾನೆಯ ಬೆಳಕಿನಂತಿರುವುದು.


ಯೆಹೋವನ ವಿಷಯವಾಗಿ ನಾವು ಕಲಿಯೋಣ. ಆತನನ್ನು ಅರಿತುಕೊಳ್ಳಲು ಅತಿಯಾಗಿ ಪ್ರಯತ್ನಿಸೋಣ. ಸೂರ್ಯೋದಯ ಆಗುತ್ತದೆಯೆಂಬುದು ನಮಗೆ ಗೊತ್ತಿರುವಂತೆಯೇ ಆತನು ಬರುವುದೂ ನಮಗೆ ಗೊತ್ತಿದೆ. ವಸಂತಕಾಲದ ಮಳೆಯಂತೆ ಯೆಹೋವನು ಬರುವನು.”


ನೀತಿವಂತರು ಸನ್ಮಾರ್ಗದಲ್ಲಿ ಜೀವಿಸುವರು. ನಿರಪರಾಧಿಗಳು ಸದ್ಗುಣದಲ್ಲಿ ಬಲವಾಗುತ್ತಲೇ ಇರುವರು.


ಅಬ್ರಹಾಮನು ಗುಡಾರಕ್ಕೆ ಬೇಗನೆ ಹೋಗಿ ಸಾರಳಿಗೆ, “ಮೂರು ದೊಡ್ಡ ರೊಟ್ಟಿಗಳಿಗೆ ಬೇಕಾಗುವಷ್ಟು ಗೋಧಿ ಹಿಟ್ಟನ್ನು ಬೇಗನೆ ನಾದು” ಎಂದು ಹೇಳಿದನು.


ನಿಮ್ಮ ಪ್ರಭುವಾದ ಮತ್ತು ರಕ್ಷಕನಾದ ಯೇಸು ಕ್ರಿಸ್ತನ ಕೃಪೆಯಲ್ಲಿಯೂ ತಿಳುವಳಿಕೆಯಲ್ಲಿಯೂ ಬೆಳೆಯುತ್ತಲೇ ಇರಿ. ಆತನಿಗೆ ಈಗಲೂ ಎಂದೆಂದಿಗೂ ಮಹಿಮೆಯಾಗಲಿ! ಆಮೆನ್.


ನಿಮಗಾಗಿ ನಾನು ಪ್ರಾರ್ಥಿಸುವುದೇನೆಂದರೆ: ನೀವು ಪ್ರೀತಿಯಲ್ಲಿ ವೃದ್ಧಿಯಾಗುತ್ತಾ ಜ್ಞಾನವಂತರೂ ತಿಳುವಳಿಕೆಯುಳ್ಳವರೂ ಆಗಬೇಕು.


ದೇವರು ನಿಮ್ಮಲ್ಲಿ ಒಳ್ಳೆಯ ಕಾರ್ಯವನ್ನು ಆರಂಭಿಸಿ ನಡೆಸಿಕೊಂಡು ಬರುತ್ತಿದ್ದಾನೆ. ಯೇಸು ಕ್ರಿಸ್ತನು ಮತ್ತೆ ಬಂದಾಗ ದೇವರು ಆ ಕಾರ್ಯವನ್ನು ಸಂಪೂರ್ಣಗೊಳಿಸುವನೆಂದು ನನಗೆ ಭರವಸೆ ಇದೆ.


ಫಲಕೊಡದಿರುವ ಪ್ರತಿಯೊಂದು ಕವಲನ್ನು ಆತನು ಕತ್ತರಿಸಿಹಾಕುವನು. ಫಲಕೊಡುವ ಕವಲು ಇನ್ನೂ ಹೆಚ್ಚು ಫಲಕೊಡುವಂತೆ ಅದನ್ನು ಶುದ್ಧಗೊಳಿಸುವನು.


ದೇವರು ಆ ಭಯಂಕರ ಕಾಲವನ್ನು ಕಡಿಮೆಗೊಳಿಸಲು ನಿರ್ಧರಿಸಿದ್ದಾನೆ. ಇಲ್ಲವಾಗಿದ್ದರೆ, ಯಾವ ಮನುಷ್ಯನೂ ಬದುಕಿ ಉಳಿಯಲು ಸಾಧ್ಯವಿಲ್ಲ. ಆದರೆ ದೇವರು ತಾನು ಆರಿಸಿಕೊಂಡ ವಿಶೇಷ ಜನರಿಗೆ ಸಹಾಯ ಮಾಡಲು ಆ ಸಮಯವನ್ನು ಕಡಿಮೆ ಮಾಡುವನು.


ಬಳಿಕ ಯೇಸು ಅವರಿಗೆ ಇನ್ನೊಂದು ಸಾಮ್ಯದ ಮೂಲಕ ಬೋಧಿಸಿದನು. ಅದೇನೆಂದರೆ: “ಪರಲೋಕರಾಜ್ಯ ಒಳ್ಳೆಯ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ ಒಬ್ಬ ರೈತನಂತಿದೆ.


ಗಿದ್ಯೋನನು ಒಳಗೆ ಹೋಗಿ ಒಂದು ಆಡಿನ ಮರಿಯನ್ನು ಬೇಯಿಸಿದನು. ಅವನು ಸುಮಾರು ಇಪ್ಪತ್ತು ಸೇರಿನಷ್ಟು ಹಿಟ್ಟನ್ನು ತೆಗೆದುಕೊಂಡು ಹುಳಿಯಿಲ್ಲದ ರೊಟ್ಟಿಯನ್ನು ಮಾಡಿದನು. ತರುವಾಯ ಗಿದ್ಯೋನನು ಆ ಮಾಂಸವನ್ನು ಒಂದು ಬುಟ್ಟಿಯಲ್ಲಿಟ್ಟನು, ಮಾಂಸ ಬೇಯಿಸಿದ ನೀರನ್ನು ಒಂದು ಪಾತ್ರೆಯಲ್ಲಿ ಹಾಕಿದನು. ಗಿದ್ಯೋನನು ಆ ಮಾಂಸವನ್ನೂ ಮಾಂಸ ಬೇಯಿಸಿದ ನೀರನ್ನೂ ಹುಳಿಯಿಲ್ಲದ ರೊಟ್ಟಿಯನ್ನೂ ತೆಗೆದುಕೊಂಡು ಬಂದನು. ಗಿದ್ಯೋನನು ಏಲಾ ಮರದ ಕೆಳಗೆ ಯೆಹೋವನಿಗೆ ಆಹಾರವನ್ನು ಕೊಟ್ಟನು.


ಮಗುವು ಗಟ್ಟಿಯಾದ ಊಟ ಮಾಡುವಂತಾದಾಗ ಹನ್ನಳು ಶೀಲೋವಿನಲ್ಲಿದ್ದ ಯೆಹೋವನ ಆಲಯಕ್ಕೆ ಅವನನ್ನು ಕರೆದುಕೊಂಡು ಹೋದಳು. ಹನ್ನಳು ಮೂರು ವರ್ಷದ ಒಂದು ಹೋರಿಯನ್ನೂ ಮೂವತ್ತು ಸೇರು ಹಿಟ್ಟನ್ನೂ ಒಂದು ಸೀಸೆ ದ್ರಾಕ್ಷಾರಸವನ್ನೂ ತೆಗೆದುಕೊಂಡು ಹೋದಳು.


ಅಮ್ನೋನನು ಹಾಸಿಗೆಯಲ್ಲಿ ಮಲಗಿ ಕಾಯಿಲೆಯವನಂತೆ ನಟಿಸಿದನು. ಅವನನ್ನು ನೋಡಲು ರಾಜನಾದ ದಾವೀದನು ಅಲ್ಲಿಗೆ ಬಂದನು. ಅಮ್ನೋನನು ರಾಜನಾದ ದಾವೀದನಿಗೆ, “ದಯವಿಟ್ಟು ನನ್ನ ಸೋದರಿಯಾದ ತಾಮಾರಳನ್ನು ಒಳಕ್ಕೆ ಕರೆಯಿರಿ. ನಾನು ನೋಡುತ್ತಿರುವಂತೆ ಅವಳು ನನಗಾಗಿ ಎರಡು ಸಿಹಿ ರೊಟ್ಟಿಗಳನ್ನು ತಯಾರಿಸಲಿ. ಅವಳ ಕೈಗಳಿಂದ ಮಾಡಿದ ರೊಟ್ಟಿಗಳನ್ನೇ ನಾನು ತಿನ್ನುತ್ತೇನೆ” ಎಂದು ಬೇಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು