Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:36 - ಪರಿಶುದ್ದ ಬೈಬಲ್‌

36 ನಂತರ ಯೇಸು ಜನರನ್ನು ಬಿಟ್ಟು ಮನೆಯೊಳಕ್ಕೆ ಹೋದನು. ಆತನ ಶಿಷ್ಯರು ಆತನ ಬಳಿಗೆ ಬಂದು, “ಹೊಲದಲ್ಲಿರುವ ಹಣಜಿಯನ್ನು ಕುರಿತಾದ ಸಾಮ್ಯದ ಅರ್ಥವನ್ನು ನಮಗೆ ವಿವರಿಸು” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಅನಂತರ ಯೇಸು ಜನರ ಗುಂಪನ್ನು ಬಿಟ್ಟು ಮನೆಯೊಳಗೆ ಹೋದನು. ಆಗ ಆತನ ಶಿಷ್ಯರು ಆತನ ಬಳಿಗೆ ಬಂದು, ಹೊಲದ ಕಳೆಯ ಸಾಮ್ಯದ ಅರ್ಥವನ್ನು ನಮಗೆ ವಿವರಿಸು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಯೇಸುಸ್ವಾಮಿ ಜನರನ್ನು ಬೀಳ್ಕೊಟ್ಟು ಮನೆಗೆ ಬಂದರು. ಶಿಷ್ಯರು ಅವರ ಬಳಿಗೆ ಬಂದು, “ಹೊಲದಲ್ಲಿ ಬಿತ್ತಲಾದ ಕಳೆಗಳ ಸಾಮತಿಯನ್ನು ನಮಗೆ ವಿವರಿಸಿರಿ,” ಎಂದು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಆಗ ಯೇಸು ಜನರನ್ನು ಬಿಟ್ಟು ಮನೆಗೆ ಹೋದ ಮೇಲೆ ಆತನ ಶಿಷ್ಯರು ಬಂದು - ಹೊಲದಲ್ಲಿಯ ಹಣಜಿಯ ಸಾಮ್ಯದ ಅರ್ಥವನ್ನು ನಮಗೆ ಹೇಳು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ತರುವಾಯ ಯೇಸು ಜನಸಮೂಹವನ್ನು ಕಳುಹಿಸಿಬಿಟ್ಟು ಮನೆಯೊಳಕ್ಕೆ ಹೋದರು. ಆಗ ಶಿಷ್ಯರು ಯೇಸುವಿನ ಬಳಿಗೆ ಬಂದು, “ಹೊಲದಲ್ಲಿರುವ ಕಳೆಯ ಸಾಮ್ಯವನ್ನು ನಮಗೆ ವಿವರಿಸಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ಜೆಜು ಲೊಕಾಂಚ್ಯಾ ತಾಂಡ್ಯಾಕ್ ಸೊಡುನ್ ಭುತ್ತುರ್ ಘರಾತ್ ಗೆಲೊ. ತನ್ನಾ ತೆಚಿ ಶಿಸಾ ತೆಚೆಕ್ಡೆ ಯೆಲಿ. ಅನಿ,“ಶೆತಾತ್ಲ್ಯಾ ಕಳ್ಯಾಂಚ್ಯಾ ಕಾನಿಚೊ ಅರ್ತ್‍ ಅಮ್ಕಾ ಸಾಂಗ್.” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:36
13 ತಿಳಿವುಗಳ ಹೋಲಿಕೆ  

ಅಲ್ಲಿ ಊಟ ಮಾಡಿದವರಲ್ಲಿ ಸುಮಾರು ನಾಲ್ಕು ಸಾವಿರ ಗಂಡಸರಿದ್ದರು. ಅವರು ಊಟಮಾಡಿದ ಮೇಲೆ, ಯೇಸು ಅವರನ್ನು ಕಳುಹಿಸಿಕೊಟ್ಟನು.


ನಂತರ ಯೇಸು ಜನರನ್ನು ಅಲ್ಲೇ ಬಿಟ್ಟು ಮನೆಯೊಳಕ್ಕೆ ಹೋದನು. ಶಿಷ್ಯರು ಈ ಕಥೆಯ ಬಗ್ಗೆ ಯೇಸುವನ್ನು ಕೇಳಿದರು.


ಆಗ ಯೇಸು ತನ್ನ ಶಿಷ್ಯರಿಗೆ ದೋಣಿಯೊಳಕ್ಕೆ ಹೋಗಲು ತಿಳಿಸಿದನು. ಸರೋವರದ ಆಚೆಯ ದಡದಲ್ಲಿದ್ದ ಬೆತ್ಸಾಯಿದಕ್ಕೆ ಹೋಗಬೇಕೆಂತಲೂ ಸ್ವಲ್ಪ ಸಮಯದ ನಂತರ ತಾನು ಬರುವುದಾಗಿಯೂ ಯೇಸು ಅವರಿಗೆ ಹೇಳಿ ಅವರನ್ನು ಕಳುಹಿಸಿದನು. ತಮ್ಮತಮ್ಮ ಮನೆಗಳಿಗೆ ಹೋಗುವಂತೆ ಜನರಿಗೆ ತಿಳಿಸುವುದಕ್ಕಾಗಿ ಯೇಸು ಅಲ್ಲಿ ಉಳಿದುಕೊಂಡನು.


ಯೇಸು, “ಪರಲೋಕರಾಜ್ಯದ ರಹಸ್ಯವಾದ ಸತ್ಯಗಳನ್ನು ನೀವು ಮಾತ್ರ ತಿಳಿದುಕೊಳ್ಳಬಲ್ಲಿರಿ. ಈ ಸತ್ಯಗಳ ರಹಸ್ಯವು ಬೇರೆ ಜನರಿಗೆ ತಿಳಿಯಲಾರದು.


ಅದೇ ದಿನದಲ್ಲಿ ಯೇಸು ಮನೆಯಿಂದ ಹೊರಟು ಸರೋವರದ ತೀರದಲ್ಲಿ ಕುಳಿತುಕೊಂಡನು.


ಯೇಸು ಮನೆಯೊಳಗೆ ಹೋದನು. ಕುರುಡರೂ ಆತನ ಸಂಗಡ ಹೋದರು. ಯೇಸು ಅವರಿಗೆ, “ನಾನು ನಿಮ್ಮನ್ನು ಗುಣಪಡಿಸಬಲ್ಲೆನೆಂದು ನೀವು ನಂಬುತ್ತೀರೋ?” ಎಂದು ಕೇಳಿದನು. ಕುರುಡರು, “ಹೌದು ಪ್ರಭುವೇ, ನಾವು ನಂಬುತ್ತೇವೆ” ಎಂದು ಉತ್ತರಕೊಟ್ಟರು.


ಬಳಿಕ ಯೇಸು ತಮ್ಮತಮ್ಮ ಮನೆಗಳಿಗೆ ಹೋಗುವಂತೆ ಅವರಿಗೆ ಹೇಳಿ ಕಳುಹಿಸಿದನು. ಅನಂತರ ದೋಣಿಯನ್ನು ಹತ್ತಿ ಮಗದಾನ್ ಎಂಬ ಪ್ರಾಂತ್ಯಕ್ಕೆ ಹೋದನು.


ಬಳಿಕ ಯೇಸು ತನ್ನ ಶಿಷ್ಯರಿಗೆ, “ನಾನು ಈ ಜನರನ್ನು ಬೀಳ್ಕೊಟ್ಟು ಬರುತ್ತೇನೆ. ನೀವು ಈಗಲೇ ದೋಣಿ ಹತ್ತಿಕೊಂಡು ಸರೋವರದ ಆಚೆದಡಕ್ಕೆ ಹೋಗಿರಿ” ಎಂದು ಹೇಳಿ ಕಳುಹಿಸಿದನು.


ಯೇಸುವು ಜನರಿಗೆ ಯಾವಾಗಲೂ ಸಾಮ್ಯಗಳ ಮೂಲಕ ಉಪದೇಶಿಸಿದನು. ಆದರೆ ತನ್ನ ಶಿಷ್ಯರು ಮಾತ್ರ ಇರುವಾಗ ಎಲ್ಲವನ್ನೂ ಅವರಿಗೆ ವಿವರಿಸಿ ತಿಳಿಸುತ್ತಿದ್ದನು.


“ಹೀಗಿರಲು ಒಕ್ಕಲಿಗನ ಕುರಿತಾದ ಸಾಮ್ಯದ ಅರ್ಥವನ್ನು ಲಾಲಿಸಿರಿ.


ಆ ರಾತ್ರಿ ಜನರೆಲ್ಲರೂ ನಿದ್ರಿಸುತ್ತಿದ್ದಾಗ ಅವನ ವೈರಿ ಬಂದು ಗೋಧಿಯ ನಡುವೆ ಹಣಜಿಯನ್ನು ಬಿತ್ತಿ ಹೊರಟುಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು