Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:39 - ಪರಿಶುದ್ದ ಬೈಬಲ್‌

39 ಹಣಜಿಯನ್ನು ಬಿತ್ತಿದ ವೈರಿಯೇ ಸೈತಾನ. ಸುಗ್ಗಿಕಾಲ ಅಂದರೆ ಲೋಕದ ಅಂತ್ಯಕಾಲ. ಕೂಡಿಸುವ ಕೆಲಸಗಾರರೇ ದೇವದೂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಕಳೆಯೆಂದರೆ ದುಷ್ಟನ ಮಕ್ಕಳು. ಅದನ್ನು ಬಿತ್ತುವ ವೈರಿ ಎಂದರೆ ಸೈತಾನನು. ಸುಗ್ಗಿಯ ಕಾಲವೆಂದರೆ ಯುಗದ ಸಮಾಪ್ತಿ. ಕೊಯ್ಯುವವರು ಅಂದರೆ ದೇವದೂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಆ ಕಳೆಗಳನ್ನು ಬಿತ್ತಿದ ವೈರಿಯೇ ಪಿಶಾಚಿ. ಸುಗ್ಗಿಯೇ ಕಾಲಾಂತ್ಯ. ಕೊಯ್ಲುಗಾರರೇ ದೇವದೂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಅದನ್ನು ಬಿತ್ತುವ ವೈರಿ ಅಂದರೆ ಸೈತಾನನು; ಸುಗ್ಗೀಕಾಲ ಅಂದರೆ ಯುಗದ ಸಮಾಪ್ತಿ; ಕೊಯ್ಯುವವರು ಅಂದರೆ ದೇವದೂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಅದನ್ನು ಬಿತ್ತಿದ ವೈರಿಯು ಸೈತಾನನೇ. ಸುಗ್ಗಿಯ ಕಾಲವು ಲೋಕಾಂತ್ಯವಾಗಿದೆ. ಕೊಯ್ಯುವವರು ದೇವದೂತರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ಅನಿ ಕಳೆ ಪೆರ್‍ತಲೊ ದುಸ್ಮಾನ್ ಮಟ್ಲ್ಯಾರ್, ಗಿರೊ. ಸುಗ್ಗಿಚೊ ಕಾಲ್ ಮಟ್ಲ್ಯಾರ್ ಜಗಾಚೊ ಅಕ್ರಿಚೊ ಕಾಲ್. ಸುಗ್ಗಿಚ್ಯಾ ಕಾಲಾಚೆ ಕಾಮ್ಗಾರಿ ಮಟ್ಲ್ಯಾರ್, ದೆವಾಚಿ ದುತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:39
29 ತಿಳಿವುಗಳ ಹೋಲಿಕೆ  

ಈ ಪ್ರಪಂಚದ ಅಂತ್ಯದಲ್ಲಿ ಅದೇ ರೀತಿ ಆಗುವುದು. ದೇವದೂತರು ಬಂದು ಒಳ್ಳೆಯ ಜನರಿಂದ ಕೆಟ್ಟಜನರನ್ನು ಬೇರೆ ಮಾಡುವರು.


“ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಸಮಸ್ತ ದೇವದೂತರ ಸಮೇತ ಮತ್ತೆ ಬರುವಾಗ ರಾಜನಾಗಿ ಮಹಾಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಾನೆ.


ಬೆಳೆಯು ಪಕ್ವವಾಗಿದೆ; ಕುಡುಗೋಲನ್ನು ತನ್ನಿರಿ. ಬನ್ನಿ, ದ್ರಾಕ್ಷಿಯನ್ನು ಆಲೆಯಲ್ಲಿ ತುಳಿಯಿರಿ, ಯಾಕೆಂದರೆ ಆಲೆಯು ತುಂಬಿಹೋಗಿದೆ. ಪಿಪಾಯಿಗಳು ತುಂಬಿತುಳುಕುತ್ತಿವೆ, ಯಾಕೆಂದರೆ ಅವರ ದುಷ್ಟತ್ವವು ವಿಪರೀತವಾಗಿದೆ!


ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.


ಈ ಎರಡನೆಯ ಮೃಗವು ಅದ್ಭುತಗಳನ್ನು ಮಾಡಲು ತನಗೆ ನೀಡಿರುವ ಶಕ್ತಿಯಿಂದ ಭೂಮಿಯ ಮೇಲೆ ವಾಸಿಸುವ ಜನರನ್ನು ಮರುಳು ಗೊಳಿಸುತ್ತದೆ. ಮೊದಲನೆಯ ಮೃಗದ ಸೇವೆಯನ್ನು ಮಾಡಲು ಅದು ಈ ಅದ್ಭುತಗಳನ್ನು ಮಾಡುತ್ತದೆ. ಕತ್ತಿಯಿಂದ ಗಾಯಗೊಂಡಿದ್ದೂ ಸಾಯದೆ ಬದುಕಿದ ಮೊದಲನೆಯ ಮೃಗಕ್ಕೆ ಗೌರವ ತೋರಲು ವಿಗ್ರಹವನ್ನು ನಿರ್ಮಿಸುವಂತೆ ಅದು ಜನರಿಗೆ ಆಜ್ಞಾಪಿಸಿತು.


ಆ ಘಟಸರ್ಪವನ್ನು ಪರಲೋಕದಿಂದ (ಆ ಘಟಸರ್ಪಕ್ಕೆ ಸೈತಾನನೆಂತಲೂ ಪಿಶಾಚನೆಂತಲೂ ಹೆಸರಿದೆ. ಅದು ಲೋಕವನ್ನೆಲ್ಲಾ ತಪ್ಪು ಮಾರ್ಗಕ್ಕೆ ಎಳೆಯುತ್ತಿತ್ತು.) ಅದರ ದೂತರೊಂದಿಗೆ ಭೂಮಿಯ ಮೇಲೆ ಎಸೆಯಲಾಯಿತು.


ಬಳಿಕ ಯೇಸು ಆಲಿವ್ ಗುಡ್ಡದ ಮೇಲೆ ಕುಳಿತುಕೊಂಡಿದ್ದಾಗ, ಶಿಷ್ಯರು ಪ್ರತ್ಯೇಕವಾಗಿ ಯೇಸುವಿನ ಬಳಿಗೆ ಬಂದು, “ಇವುಗಳೆಲ್ಲಾ ಯಾವಾಗ ಸಂಭವಿಸುತ್ತವೆ! ನೀನು ಈ ಲೋಕಕ್ಕೆ ಮತ್ತೊಮ್ಮೆ ಬರುವಾಗ ಮತ್ತು ಲೋಕದ ಸಮಾಪ್ತಿಯ ಸಮಯ ಬಂದಾಗ ಸೂಚನೆಗಾಗಿ ಏನು ಸಂಭವಿಸುವುದು? ನಮಗೆ ತಿಳಿಸು!” ಎಂದು ಕೇಳಿದರು.


ಆ ರಾತ್ರಿ ಜನರೆಲ್ಲರೂ ನಿದ್ರಿಸುತ್ತಿದ್ದಾಗ ಅವನ ವೈರಿ ಬಂದು ಗೋಧಿಯ ನಡುವೆ ಹಣಜಿಯನ್ನು ಬಿತ್ತಿ ಹೊರಟುಹೋದನು.


ಆದಾಮನ ಏಳನೆಯ ತಲೆಮಾರಿನವನಾದ ಹನೋಕನು ಈ ಜನರನ್ನು ಕುರಿತು ಹೀಗೆ ಹೇಳಿದ್ದಾನೆ: “ಇಗೋ, ಪ್ರಭುವು ತನ್ನ ಲಕ್ಷಾಂತರ ಪರಿಶುದ್ಧ ದೂತರೊಂದಿಗೆ ಬರುತ್ತಿದ್ದಾನೆ.


ಸ್ವಸ್ಥಚಿತ್ತರಾಗಿರಿ ಮತ್ತು ಎಚ್ಚರವಾಗಿರಿ! ಸೈತಾನನು ನಿಮ್ಮ ಶತ್ರು. ಗರ್ಜಿಸುವ ಸಿಂಹವು ಯಾರನ್ನು ತಿನ್ನಲಿ ಎಂದು ಹುಡುಕುತ್ತಿರುವಂತೆ ಅವನು ಮನುಷ್ಯನನ್ನು ಹುಡುಕುತ್ತಿದ್ದಾನೆ.


ಕ್ರಿಸ್ತನು ಅನೇಕ ಸಲ ತನ್ನನ್ನು ಅರ್ಪಿಸಿಕೊಂಡಿದ್ದರೆ, ಈ ಲೋಕವು ಸೃಷ್ಟಿಯಾದಂದಿನಿಂದ ಆತನು ಅನೇಕ ಸಲ ಸಂಕಟವನ್ನು ಅನಭವಿಸ ಬೇಕಾಗುತ್ತಿತ್ತು. ಆದರೆ ಕ್ರಿಸ್ತನು ಯುಗಾಂತ್ಯದಲ್ಲಿ ಪಾಪನಿವಾರಣೆ ಮಾಡುವುದಕ್ಕಾಗಿ ಬಂದು ಒಂದೇ ಸಲ ತನ್ನನ್ನು ಅರ್ಪಿಸಿಕೊಂಡನು.


ಹೌದು, ಮೊದಲು ನೀವು ಆ ಪಾಪಗಳನ್ನೇ ಮಾಡುತ್ತಿದ್ದಿರಿ. ಈ ಲೋಕದ ಮಾರ್ಗಗಳಿಗನುಸಾರವಾಗಿ ನೀವು ಜೀವಿಸಿದಿರಿ. ವಾಯುಮಂಡಲದಲ್ಲಿರುವ ದುಷ್ಟಶಕ್ತಿಗಳ ಅಧಿಪತಿಯನ್ನು ನೀವು ಅನುಸರಿಸಿದಿರಿ. ದೇವರಿಗೆ ಅವಿಧೇಯರಾದ ಜನರಲ್ಲಿ ಈಗ ಕಾರ್ಯಮಾಡುತ್ತಿರುವುದು ಅದೇ ಆತ್ಮ.


ಹವ್ವಳು ಸರ್ಪದ ಕುಯುಕ್ತಿಯಿಂದ ಮೋಸಗೊಂಡಂತೆ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿ ಇರಬೇಕಾದ ಯಥಾರ್ಥತೆಯನ್ನೂ ಪರಿಶುದ್ಧತೆಯನ್ನೂ ಬಿಟ್ಟು ಕೆಟ್ಟುಹೋದೀತೆಂಬ ಭಯ ನನಗಿದೆ.


ಇತರ ಅನೇಕರು ಮಾಡುವಂತೆ ನಾವು ದೇವರ ವಾಕ್ಯವನ್ನು ಕಲಬೆರಕೆ ಮಾಡುವುದಿಲ್ಲ. ಆದರೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸನ್ನಿಧಾನದಲ್ಲಿ ಸತ್ಯವನ್ನು ಹೇಳುತ್ತೇವೆ. ದೇವರಿಂದ ಕಳುಹಿಸಲ್ಪಟ್ಟ ಜನರಂತೆ ನಾವು ಮಾತಾಡುತ್ತೇವೆ.


ನಾನು ನಿಮಗೆ ಆಜ್ಞಾಪಿಸಿದವುಗಳಿಗೆಲ್ಲಾ ವಿಧೇಯರಾಗುವಂತೆ ಜನರಿಗೆ ಉಪದೇಶಿಸಿ, ಲೋಕಾಂತ್ಯದವರೆಗೂ ಸದಾಕಾಲ ನಾನು ನಿಮ್ಮೊಂದಿಗಿರುತ್ತೇನೆ” ಎಂದು ಹೇಳಿದನು.


“ಆ ಮನುಷ್ಯನು, ‘ಒಬ್ಬ ವೈರಿ ಹಣಜಿಯನ್ನು ಬಿತ್ತಿದ್ದಾನೆ’ ಎಂದು ಉತ್ತರಕೊಟ್ಟನು. “ಆ ಸೇವಕರು ‘ನಾವು ಹೋಗಿ ಹಣಜಿಗಳನ್ನು ಕೀಳಬೇಕೆ?’ ಎಂದು ಕೇಳಿದರು.


ಆ ಪುರಾತನ ರಾಜನ ಮುಂದೆ ಬೆಂಕಿಯ ನದಿಯೊಂದು ಹರಿಯುತ್ತಿತ್ತು. ಲಕ್ಷೋಪಲಕ್ಷ ದೂತರು ಆತನನ್ನು ಸೇವಿಸುತ್ತಿದ್ದರು. ಕೋಟ್ಯಾನುಕೋಟಿ ಪರಲೋಕ ಸಮೂಹದವರು ಆತನ ಮುಂದೆ ನಿಂತಿದ್ದರು. ನ್ಯಾಯಾಲಯವು ಪ್ರಾರಂಭವಾಗುವುದಕ್ಕೆ ಎಲ್ಲ ಸಿದ್ಧತೆಗಳು ಆಗಿದ್ದವು ಮತ್ತು ಪುಸ್ತಕಗಳು ತೆರೆಯಲ್ಪಟ್ಟವು.


ಮನುಷ್ಯಕುಮಾರನಿಗೆ ವಿರೋಧವಾಗಿ ಮಾತನಾಡಿದರೂ ಅದಕ್ಕೆ ಕ್ಷಮಾಪಣೆ ಉಂಟು. ಆದರೆ ಪವಿತ್ರಾತ್ಮನಿಗೆ ವಿರೋಧವಾಗಿ ಮಾತನಾಡಿದರೆ ಅದಕ್ಕೆ ಕ್ಷಮಾಪಣೆಯು ಇಹದಲ್ಲಾಗಲಿ ಪರದಲ್ಲಾಗಲಿ ಇಲ್ಲವೇ ಇಲ್ಲ.


“ಮುಳ್ಳುಗಿಡಗಳ ನಡುವೆ ಬಿದ್ದ ಬೀಜ ಅಂದರೇನು? ಬೋಧನೆಯನ್ನು ಕೇಳಿದರೂ ಜೀವನದ ಚಿಂತೆಗಳಿಂದ ಮತ್ತು ಹಣದ ಮೇಲಿನ ಪ್ರೀತಿಯಿಂದ ಬೋಧನೆಯನ್ನು ತನ್ನಲ್ಲಿ ಬೆಳೆಯದಂತೆ ಮಾಡುವವನೇ ಬೀಜ ಬಿದ್ದ ಮುಳ್ಳುಗಿಡಗಳ ನೆಲವಾಗಿರವನು. ಆದ್ದರಿಂದ ಬೋಧನೆಯು ಆ ಮನುಷ್ಯನ ಜೀವಿತದಲ್ಲಿ ಫಲ ಕೊಡುವುದಿಲ್ಲ.


“ಹಣಜಿಗಳನ್ನು ಕಿತ್ತು ಬೆಂಕಿಯಲ್ಲಿ ಸುಟ್ಟುಬಿಡುತ್ತಾರೆ. ಈ ಲೋಕದ ಅಂತ್ಯದಲ್ಲಿ ಆಗುವಂಥದ್ದು ಇದೇ.


ಆ ಜನರಿಗೆ ಸಂಭವಿಸಿದ ಸಂಗತಿಗಳು ನಮಗೆ ನಿದರ್ಶನಗಳಾಗಿವೆ. ನಮ್ಮನ್ನು ಎಚ್ಚರಿಸುವುದಕ್ಕಾಗಿ ಆ ಸಂಗತಿಗಳನ್ನು ಬರೆದಿಡಲಾಗಿದೆ. ಈಗ ನಾವು ಯುಗದ ಅಂತಿಮ ಕಾಲದಲ್ಲಿ ಜೀವಿಸುತ್ತಿದ್ದೇವೆ.


ಈಗ, ಕೊನೆಯ ದಿನಗಳಲ್ಲಿ ದೇವರು ಮತ್ತೆ ನಮ್ಮ ಜೊತೆಯಲ್ಲಿ ತನ್ನ ಮಗನ ಮೂಲಕ ಮಾತನಾಡಿದನು. ದೇವರು ತನ್ನ ಮಗನ ಮೂಲಕ ಲೋಕವನ್ನೆಲ್ಲ ಸೃಷ್ಟಿಸಿ, ಸಮಸ್ತಕ್ಕೂ ಆತನನ್ನೇ ಬಾಧ್ಯಸ್ತನನ್ನಾಗಿ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು