Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:42 - ಪರಿಶುದ್ದ ಬೈಬಲ್‌

42 ಬೆಂಕಿಯ ಸ್ಥಳಕ್ಕೆ ಎಸೆದುಬಿಡುವರು. ಅಲ್ಲಿ ಅವರು ಗೋಳಾಡುತ್ತಾ ನೋವಿನಿಂದ ತಮ್ಮ ಹಲ್ಲುಗಳನ್ನು ಕಡಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಮತ್ತು ದುಷ್ಕರ್ಮಿಗಳೆಲ್ಲರನ್ನೂ ಒಟ್ಟುಗೂಡಿಸಿ ಅಗ್ನಿಕುಂಡದಲ್ಲಿ ಹಾಕುವರು; ಅಲ್ಲಿ ಅವರು ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಅಧರ್ಮಿಗಳನ್ನೂ ಕೂಡಿಸಿ ಬೆಂಕೀಕೊಂಡದಲ್ಲಿ ಹಾಕುವರು; ಅಲ್ಲಿ ಗೋಳಾಟವೂ ಕಟಕಟನೆ ಹಲ್ಲುಕಡಿಯೋಣವೂ ಇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ದೂತರು ಅವರನ್ನು ಅಗ್ನಿಕುಂಡದಲ್ಲಿ ಹಾಕುವರು. ಅಲ್ಲಿ ಗೋಳಾಟವೂ ಹಲ್ಲು ಕಡಿಯುವಿಕೆಯೂ ಇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ಅನಿ ತಿ ದೆವಾಚಿ ದುತಾ ತ್ಯಾ ಲೊಕಾಕ್ನಿ ಜಳ್ತಲ್ಯಾ ಆಗಿತ್ ಟಾಕ್ತ್ಯಾತ್. ಥೈ ತೆನಿ ರಡ್ತ್ಯಾತ್ ಅನಿ ಕಟ್‍ಕಟ್‍ ದಾತಾ ಚಾವ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:42
19 ತಿಳಿವುಗಳ ಹೋಲಿಕೆ  

ದೇವದೂತರು ಕೆಟ್ಟಜನರನ್ನು ಬೆಂಕಿಯ ಸ್ಥಳದೊಳಕ್ಕೆ ಎಸೆಯುವರು. ಆ ಸ್ಥಳದಲ್ಲಿ ಜನರು ಗೋಳಾಡುತ್ತಾ ನೋವಿನಿಂದ ತಮ್ಮ ಹಲ್ಲುಗಳನ್ನು ಕಡಿಯುವರು.”


ಸೈತಾನನನ್ನು (ಇವನೇ ಜನರನ್ನು ಮೋಸಗೊಳಿಸಿದವನು.) ಬೆಂಕಿಗಂಧಕಗಳು ಉರಿಯುತ್ತಿದ್ದ ಕೆರೆಗೆ ಎಸೆಯಲಾಯಿತು. ಅಲ್ಲಿ ಮೃಗವೂ ಇತ್ತು, ಸುಳ್ಳುಪ್ರವಾದಿಗಳೂ ಇದ್ದರು. ಅಲ್ಲಿ ಅವರು ಹಗಲಿರುಳು ಎಂದೆಂದಿಗೂ ಹಿಂಸೆ ಅನುಭವಿಸುವರು.


ಪರಲೋಕರಾಜ್ಯವನ್ನು ಹೊಂದತಕ್ಕವರು ಹೊರಗೆ ಕತ್ತಲೆಗೆ ಎಸೆಯಲ್ಪಡುವರು. ಅಲ್ಲಿ ಅವರು ಗೋಳಾಡುವರು ಮತ್ತು ನೋವಿನಿಂದ ಹಲ್ಲುಗಳನ್ನು ಕಡಿಯುವರು” ಎಂದನು.


ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.


ಅವನು ದೇವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಯುತ್ತಾನೆ. ದೇವರ ಕೋಪವೆಂಬ ಬಟ್ಟಲಿನಲ್ಲಿ ಈ ದ್ರಾಕ್ಷಾರಸವನ್ನು ಅದರ ಪೂರ್ಣಶಕ್ತಿಯ ಸಮೇತವಾಗಿ ತಯಾರಿಸಲಾಗಿದೆ. ಅವನನ್ನು ಪರಿಶುದ್ಧ ದೇವದೂತರ ಮತ್ತು ಕುರಿಮರಿಯಾದಾತನ ಮುಂದೆ ಉರಿಯುವ ಗಂಧಕದಿಂದ ಯಾತನೆಪಡಿಸಲಾಗುವುದು.


“ಆಮೇಲೆ ರಾಜನು ತನ್ನ ಎಡಗಡೆಯಿದ್ದ ಜನರಿಗೆ, ‘ನನ್ನಿಂದ ತೊಲಗಿಹೋಗಿರಿ, ನಿಮಗೆ ಶಿಕ್ಷೆಯಾಗಬೇಕೆಂದು ದೇವರು ತೀರ್ಮಾನಿಸಿದ್ದಾನೆ. ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


ಆಗ ರಾಜನು ಕೆಲವು ಸೇವಕರಿಗೆ, ‘ಇವನ ಕೈಕಾಲು ಕಟ್ಟಿ ಹೊರಗೆ ಕತ್ತಲೆಯೊಳಕ್ಕೆ ಎಸೆಯಿರಿ’ ಅಂದನು. ಆ ಸ್ಥಳದಲ್ಲಿ ಜನರು ಗೋಳಾಡುತ್ತಾ ಬಾಧೆಯಿಂದ ತಮ್ಮ ಹಲ್ಲುಗಳನ್ನು ಕಡಿಯುತ್ತಿರುವರು.


ಯಾರಾದರೂ ಈ ಬಂಗಾರದ ವಿಗ್ರಹಕ್ಕೆ ಅಡ್ಡಬೀಳದಿದ್ದರೆ ಮತ್ತು ಪೂಜಿಸದಿದ್ದರೆ ತಕ್ಷಣ ಅವರನ್ನು ಬೆಂಕಿಯ ಕೊಂಡಕ್ಕೆ ಎಸೆಯಲಾಗುವುದು” ಎಂದು ಸಾರಿದನು.


ಆದರೆ ಹೇಡಿಗಳಿಗೆ, ನಂಬಿಕೆಯಿಲ್ಲದವರಿಗೆ, ಅಸಹ್ಯಕೃತ್ಯ ಮಾಡುವವರಿಗೆ, ಕೊಲೆಗಾರರಿಗೆ, ಲೈಂಗಿಕ ಪಾಪಮಾಡುವವರಿಗೆ, ಮಾಟಮಂತ್ರಗಾರರಿಗೆ, ವಿಗ್ರಹಾರಾಧಕರಿಗೆ, ಸುಳ್ಳುಗಾರರಿಗೆ ಸಿಕ್ಕುವ ಸ್ಥಳ ಬೆಂಕಿಗಂಧಕಗಳು ಉರಿಯುವ ಕೆರೆಯೇ. ಇದು ಎರಡನೆಯ ಮರಣವಾಗಿರುತ್ತದೆ.”


“ಅಬ್ರಹಾಮ, ಇಸಾಕ, ಯಾಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರ ರಾಜ್ಯದಲ್ಲಿರುವುದನ್ನು ನೀವು ನೋಡುವಿರಿ. ಆದರೆ ನಿಮ್ಮನ್ನು ಹೊರಗೆ ಹಾಕಲಾಗುವುದು. ಆಗ ನೀವು ಭಯದಿಂದಲೂ ಕೋಪದಿಂದಲೂ ಕೂಗಿಕೊಳ್ಳುವಿರಿ.


ಆತನು ಕಾಳನ್ನು ಸ್ವಚ್ಛಗೊಳಿಸಲು ಸಿದ್ಧನಾಗಿದ್ದಾನೆ. ಆತನು ಕಾಳನ್ನು ಹೊಟ್ಟಿನಿಂದ ಬೇರ್ಪಡಿಸಿ ಒಳ್ಳೆಯ ಕಾಳುಗಳನ್ನು ಕಣಜದಲ್ಲಿ ತುಂಬಿಸಿ ಹೊಟ್ಟನ್ನು ನಂದಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವನು” ಎಂದು ಹೇಳಿದನು.


ಯೆಹೋವನೇ, ನೀನು ರಾಜನೊಂದಿರುವಾಗ ಅವನು ಉರಿಯುವ ಕುಲಿಮೆಯಂತಿರುವನು. ಅವನ ಕೋಪವು ಧಗಧಗಿಸುವ ಬೆಂಕಿಯಂತೆ ಸುಡುವುದು; ಅವನು ಶತ್ರುಗಳನ್ನು ನಾಶಮಾಡುವನು.


ನಂತರ ಆ ನಕ್ಷತ್ರವು ತಳವಿಲ್ಲದ ಆಳವಾದ ಕೂಪವನ್ನು ತೆರೆಯಿತು. ದೊಡ್ಡ ಕುಲುಮೆಯಿಂದ ಹೊಗೆಯು ಬರುವಂತೆ ಆ ಕೂಪದಿಂದ ಹೊಗೆ ಮೇಲಕ್ಕೆ ಬಂದಿತು. ಆ ಕೂಪದಿಂದ ಬಂದ ಹೊಗೆಯಿಂದ ಸೂರ್ಯನೂ ಆಕಾಶವೂ ಕಪ್ಪಾದವು.


ಒಬ್ಬ ವ್ಯಕ್ತಿಯು ಅವುಗಳನ್ನು ಮುಟ್ಟಿದರೆ, ಅವು ಮರದ ಮತ್ತು ಕಬ್ಬಿಣದ ಕತ್ತಿಗಳಿಂದ ಚುಚ್ಚಿದಂತಾಗುತ್ತದೆ. ಆ ಜನರು ಮುಳ್ಳುಗಳಂತಿದ್ದಾರೆ. ಅವರನ್ನು ಬೆಂಕಿಯಲ್ಲಿ ಎಸೆದು ಸಂಪೂರ್ಣವಾಗಿ ಸುಟ್ಟುಬಿಡುವರು!”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು