Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 14:27 - ಪರಿಶುದ್ದ ಬೈಬಲ್‌

27 ಕೂಡಲೇ ಯೇಸು, “ಚಿಂತಿಸಬೇಡಿ! ನಾನೇ! ಭಯಪಡಬೇಡಿ” ಎಂದು ಅವರೊಂದಿಗೆ ಮಾತಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಕೂಡಲೆ ಯೇಸು ಮಾತನಾಡಿ ಅವರಿಗೆ, “ಧೈರ್ಯವಾಗಿರಿ ನಾನೇ ಭಯಪಡಬೇಡಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ತಕ್ಷಣವೇ ಯೇಸು, “ಭಯಪಡಬೇಡಿ, ನಾನೇ ಬೇರೆ ಯಾರೂ ಅಲ್ಲ, ಧೈರ್ಯದಿಂದಿರಿ,” ಎಂದು ಅವರೊಡನೆ ಮಾತನಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಕೂಡಲೆ ಯೇಸು ಮಾತಾಡಿ ಅವರಿಗೆ - ಧೈರ್ಯವಾಗಿರಿ; ನಾನು; ಅಂಜಬೇಡಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಯೇಸು ತಕ್ಷಣವೇ ಅವರಿಗೆ, “ಧೈರ್ಯವಾಗಿರಿ, ನಾನೇ, ಭಯಪಡಬೇಡಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ತನ್ನಾ ಎಗ್ದಮ್ ಜೆಜುನ್ ತೆಂಕಾ,“ಧೈರೊ ಕರಾ, ಭಿಂವ್‍ನಕಾಶಿ. ಮಿಯಾ ತೊ!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 14:27
21 ತಿಳಿವುಗಳ ಹೋಲಿಕೆ  

“ನೀವು ನನ್ನಲ್ಲಿ ಶಾಂತಿಯನ್ನು ಹೊಂದಿದವರಾಗಿರಬೇಕೆಂದು ನಾನು ನಿಮಗೆ ಈ ಸಂಗತಿಗಳನ್ನೆಲ್ಲಾ ಹೇಳಿದ್ದೇನೆ. ಈ ಲೋಕದಲ್ಲಿ ನಿಮಗೆ ಸಂಕಟವಿದೆ. ಆದರೆ ಧೈರ್ಯದಿಂದಿರಿ! ನಾನು ಈ ಲೋಕವನ್ನು ಸೋಲಿಸಿದ್ದೇನೆ!” ಎಂದು ಹೇಳಿದನು.


ಮರುದಿನ ರಾತ್ರಿ ಪ್ರಭು ಯೇಸುವು ಬಂದು ಪೌಲನ ಬಳಿ ನಿಂತುಕೊಂಡು, “ಧೈರ್ಯದಿಂದಿರು! ನೀನು ನನ್ನ ಬಗ್ಗೆ ಜೆರುಸಲೇಮಿನ ಜನರಿಗೆ ತಿಳಿಸಿರುವೆ. ನೀನು ರೋಮಿಗೂ ಹೋಗಿ ಅಲ್ಲಿರುವ ಜನರಿಗೆ ನನ್ನ ಬಗ್ಗೆ ತಿಳಿಸಬೇಕು!” ಎಂದು ಹೇಳಿದನು.


ನಾನೇ ನಿನ್ನ ಸಂಗಡವಿದ್ದೇನೆ. ಆದ್ದರಿಂದ ಚಿಂತಿಸದಿರು. ನಾನೇ ನಿನ್ನ ದೇವರು, ಆದ್ದರಿಂದ ಭಯಪಡಬೇಡ. ನಿನ್ನನ್ನು ಬಲಪಡಿಸುವೆನು. ನಿನಗೆ ಸಹಾಯ ಮಾಡುವೆನು. ನನ್ನ ನೀತಿಯ ಬಲಗೈಯಿಂದ ನಿನಗೆ ಆಧಾರ ಕೊಡುವೆನು.


ಇವೆಲ್ಲಾ ನೆರವೇರುವಂತೆ ಮಾಡಿದವರು ಯಾರು? ಆದಿಯಿಂದ ಎಲ್ಲಾ ಜನರನ್ನು ಕರೆದವರು ಯಾರು? ಯೆಹೋವನೆಂಬ ನಾನೇ ಇವೆಲ್ಲವನ್ನು ಮಾಡಿದೆನು. ನಾನೇ ಮೊದಲನೆಯವನಾಗಿದ್ದೇನೆ. ಅನಾದಿಕಾಲಕ್ಕಿಂತ ಮೊದಲು ನಾನಿದ್ದೆನು. ಎಲ್ಲವೂ ಅಂತ್ಯವಾಗುವ ತನಕ ನಾನು ಇರುತ್ತೇನೆ.


ಯೇಸು ಅವರಿಗೆ, “ಹೆದರಬೇಡಿರಿ, ನಾನೇ” ಎಂದು ಹೇಳಿದನು.


ಆಗ ಆತನು ಶಿಷ್ಯರ ಬಳಿಗೆ ಬಂದು ಅವರನ್ನು ಮುಟ್ಟಿ, “ಏಳಿ, ಹೆದರಬೇಡಿ” ಎಂದನು.


ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಯೇಸುವಿನ ಬಳಿಗೆ ತಂದರು. ಅವನು ತನ್ನ ಹಾಸಿಗೆಯ ಮೇಲೆ ಮಲಗಿದ್ದನು. ಯೇಸು ಈ ಜನರಲ್ಲಿದ್ದ ದೊಡ್ಡ ನಂಬಿಕೆಯನ್ನು ಕಂಡು ಪಾರ್ಶ್ವವಾಯು ರೋಗಿಗೆ, “ಯುವಕನೇ, ಸಂತೋಷಪಡು. ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು.


ಯೆಹೋವನು ಹೇಳುವುದೇನೆಂದರೆ, “ನಿನ್ನನ್ನು ಸಂತೈಸುವಾತನು ನಾನೇ. ಆದ್ದರಿಂದ ನೀನು ಜನರಿಗೆ ಯಾಕೆ ಹೆದರಬೇಕು. ಅವರು ಹುಟ್ಟಿ ಸಾಯುವ ನರರಾಗಿದ್ದಾರೆ. ಅವರು ಹುಲ್ಲಿನಂತೆ ಸಾಯುವ ಕೇವಲ ಮಾನವರಾಗಿದ್ದಾರೆ.”


ದೇವದೂತನು ಆಕೆಗೆ, “ಮರಿಯಳೇ, ಭಯಪಡಬೇಡ. ದೇವರು ನಿನ್ನನ್ನು ಬಹಳವಾಗಿ ಆಶೀರ್ವದಿಸಿದ್ದಾನೆ.


ಆದರೆ ದೇವದೂತನು ಅವನಿಗೆ, “ಜಕರೀಯನೇ, ಹೆದರಬೇಡ. ನಿನ್ನ ಪ್ರಾರ್ಥನೆ ದೇವರಿಗೆ ಕೇಳಿಸಿತು. ನಿನ್ನ ಹೆಂಡತಿಯಾದ ಎಲಿಜಬೇತಳು ಒಂದು ಗಂಡುಮಗುವನ್ನು ಹೆರುವಳು. ನೀನು ಅವನಿಗೆ ಯೋಹಾನ ಎಂದು ಹೆಸರಿಡಬೇಕು.


ಯೇಸು ಆ ಸ್ತ್ರೀಯರಿಗೆ, “ಹೆದರಬೇಡಿ, ನನ್ನ ಸಹೋದರರ ಬಳಿಗೆ ಹೋಗಿ ಗಲಿಲಾಯಕ್ಕೆ ಬರಲು ತಿಳಿಸಿರಿ. ಅವರು ನನ್ನನ್ನು ಅಲ್ಲಿ ಕಾಣುವರು” ಎಂದು ಹೇಳಿದನು.


ದೇವದೂತನು ಅವರಿಗೆ, “ಹೆದರಬೇಡಿರಿ, ಜನರೆಲ್ಲರಿಗೆ ಮಹಾಸಂತೋಷವನ್ನು ಉಂಟುಮಾಡುವ ಶುಭಸಂದೇಶವನ್ನು ನಿಮಗೆ ತಿಳಿಸುತ್ತೇನೆ. ಅದೇನೆಂದರೆ:


ನನಗೆ ಅಮೂಲ್ಯವಾದ ಯಾಕೋಬೇ, ಭಯಪಡಬೇಡ. ನನ್ನ ಪ್ರಿಯ ಇಸ್ರೇಲೇ, ಹೆದರಬೇಡ. ನಾನು ನಿಜವಾಗಿಯೂ ನಿನಗೆ ಸಹಾಯ ಮಾಡುತ್ತೇನೆ.” ಇದು ಯೆಹೋವನ ನುಡಿ. “ಇಸ್ರೇಲರ ಪರಿಶುದ್ಧನೂ ನಿನ್ನನ್ನು ರಕ್ಷಿಸುವಾತನೂ ಈ ಮಾತುಗಳನ್ನು ಹೇಳಿದ್ದಾನೆ:


ಪೇತ್ರನು, “ಪ್ರಭುವೇ, ನಿಜವಾಗಿಯೂ ನೀನೇ ಆಗಿದ್ದರೆ, ನೀರಿನ ಮೇಲೆ ನಡೆದುಕೊಂಡು ನಿನ್ನ ಬಳಿಗೆ ಬರಲು ನನಗೆ ಆಜ್ಞಾಪಿಸು” ಎಂದನು.


ದೇವದೂತನು ಆ ಸ್ತ್ರೀಯರಿಗೆ, “ಹೆದರಬೇಡಿ, ಶಿಲುಬೆಗೇರಿಸಲ್ಪಟ್ಟ ಯೇಸುವನ್ನು ನೀವು ಹುಡುಕುತ್ತಿದ್ದೀರೆಂಬುದು ನನಗೆ ತಿಳಿದಿದೆ.


ಶಿಷ್ಯರೆಲ್ಲರೂ ಯೇಸುವನ್ನು ನೋಡಿ ಬಹಳವಾಗಿ ಹೆದರಿದ್ದರು. ಆದರೆ ಯೇಸು ಅವರೊಂದಿಗೆ ಮಾತನಾಡಿ, “ಚಿಂತಿಸದಿರಿ! ನಾನೇ! ಅಂಜಬೇಡಿ” ಎಂದು ಹೇಳಿದನು.


ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರೂ ಆಶ್ಚರ್ಯಪಟ್ಟರು. (ಇವರಿಬ್ಬರೂ ಸೀಮೋನನ ಪಾಲುಗಾರರಾಗಿದ್ದರು.) ಯೇಸು ಸೀಮೋನನಿಗೆ, “ಭಯಪಡಬೇಡ. ಇಂದಿನಿಂದ ನೀನು ಮೀನನ್ನು ಹಿಡಿಯದೆ, ಮನುಷ್ಯರನ್ನು ಒಟ್ಟುಗೂಡಿಸಲು ದುಡಿಯುವೆ!” ಎಂದು ಹೇಳಿದನು.


“ಚಿಕ್ಕ ಮಂದೆಯೇ, ಹೆದರಬೇಡ, ನಿಮಗೆ ರಾಜ್ಯವನ್ನು ಕೊಡಲು ನಿಮ್ಮ ತಂದೆ ಬಯಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು