Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 14:36 - ಪರಿಶುದ್ದ ಬೈಬಲ್‌

36 ಆತನ ಮೇಲಂಗಿಯನ್ನಾದರೂ ಮುಟ್ಟಿ ಗುಣಹೊಂದಲು ಅವಕಾಶಕೊಡಬೇಕೆಂದು ಅವರು ಬೇಡಿಕೊಂಡರು. ಆತನ ಮೇಲಂಗಿಯನ್ನು ಮುಟ್ಟಿದ ಜನರೆಲ್ಲರೂ ಗುಣಹೊಂದಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಅವರು ಆತನನ್ನು ನಿನ್ನ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಬೇಡಿಕೊಂಡರು, ಮತ್ತು ಮುಟ್ಟಿದವರೆಲ್ಲರು ಸ್ವಸ್ಥರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಇವರು, “ನಿಮ್ಮ ಉಡುಪಿನ ಅಂಚನ್ನಾದರೂ ಮುಟ್ಟಲು ಅಪ್ಪಣೆಯಾದರೆ ಸಾಕು,” ಎಂದು ಯೇಸುವನ್ನು ಬೇಡಿಕೊಂಡರು. ಹಾಗೆ ಮುಟ್ಟಿದವರೆಲ್ಲಾ ಗುಣಹೊಂದಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಆತನನ್ನು - ನಿನ್ನ ಉಡುಪಿನ ಗೊಂಡೆಯನ್ನಾದರೂ ಮುಟ್ಟಗೊಡಿಸಬೇಕೆಂದು ಬೇಡಿಕೊಂಡರು. ಮುಟ್ಟಿದವರೆಲ್ಲರು ಸ್ವಸ್ಥರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಅವರು ಯೇಸುವಿನ ಉಡುಪಿನ ಅಂಚನ್ನಾದರೂ ಸ್ಪರ್ಶಿಸಬೇಕೆಂದು ಅವರನ್ನು ಬೇಡಿಕೊಂಡರು. ಯೇಸುವನ್ನು ಮುಟ್ಟಿದವರೆಲ್ಲರೂ ಸ್ವಸ್ಥರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ತೆನಿ ಶಿಕ್ ಹೊತ್ತ್ಯಾ ಲೊಕಾಕ್ನಿ ತುಜ್ಯಾ ಅಂಗಿಚ್ಯಾ ತುದಿಚ್ಯಾ ಘೊಂಡ್ಯಾಕ್ ತರ್‍ಬಿ ಹಾತ್ ಲಾವಿ ಸರ್ಕೊ ಅವ್ಕಾಸ್ ಕರುನ್ ದಿ ಮನುನ್ ಮಾಗ್ಲ್ಯಾನಿ. ಅನಿ ಕೊನ್ ಕೊನ್ ತೆಚ್ಯಾ ಅಂಗಿಕ್ ಅಪಡ್ಲ್ಯಾನಿ ತೆನಿ ಬರೆ ಹೊಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 14:36
15 ತಿಳಿವುಗಳ ಹೋಲಿಕೆ  

ಜನರೆಲ್ಲರೂ ಯೇಸುವನ್ನು ಮುಟ್ಟುವುದಕ್ಕೆ ಪ್ರಯತ್ನಿಸಿದರು, ಏಕೆಂದರೆ ಆತನಿಂದ ಶಕ್ತಿಯು ಹರಿದುಬಂದು ಎಲ್ಲರನ್ನೂ ಗುಣಪಡಿಸುತ್ತಿತ್ತು!


ಯೇಸು ಅನೇಕ ಜನರನ್ನು ಗುಣಪಡಿಸಿದನು. ಆದ್ದರಿಂದ ಕಾಯಿಲೆಯಾಗಿದ್ದ ಜನರೆಲ್ಲರೂ ಆತನನ್ನು ಮುಟ್ಟುವುದಕ್ಕಾಗಿ ಆತನ ಮೇಲೆ ಬೀಳುತ್ತಿದ್ದರು. ದೆವ್ವಗಳಿಂದ ಪೀಡಿತರಾಗಿದ್ದ ಕೆಲವು ಜನರು ಅಲ್ಲಿದ್ದರು.


“ನಿಮ್ಮ ಕಣ್ಣೆದುರಿಗಿರುವ ಇವನ ಪರಿಚಯ ನಿಮ್ಮೆಲ್ಲರಿಗೂ ಇದೆ. ಇವನು ಗುಣವಾದದ್ದಕ್ಕೆ ಇವನು ಯೇಸುವಿನ ಹೆಸರಿನಲ್ಲಿ ಇಟ್ಟ ನಂಬಿಕೆಯೇ ಕಾರಣ. ಆ ಹೆಸರೇ ಇವನನ್ನು ಬಲಪಡಿಸಿತು. ಆತನ ಮೂಲಕ ಉಂಟಾಗಿರುವ ನಂಬಿಕೆಯೇ ಇವನನ್ನು ನಿಮ್ಮೆಲ್ಲರ ಮುಂದೆ ಗುಣಪಡಿಸಿತು.


ಒಬ್ಬ ವ್ಯಕ್ತಿಯು ಮೋಶೆಯ ಕಟ್ಟಳೆಗೆ ವಿಧೇಯನಾಗುವುದಕ್ಕಾಗಿ ಸಬ್ಬತ್‌ದಿನದಂದು ಸುನ್ನತಿ ಮಾಡಬಹುದು ಎಂಬುದನ್ನು ಇದು ತೋರಿಸುತ್ತದೆ. ಹೀಗಿರುವಲ್ಲಿ, ಸಬ್ಬತ್‌ದಿನದಂದು ಒಬ್ಬನ ಇಡೀ ದೇಹವನ್ನು ಗುಣಪಡಿಸಿದ್ದಕ್ಕೋಸ್ಕರ ನೀವು ಏಕೆ ಕೋಪಗೊಂಡಿದ್ದೀರಿ?


ತಂದೆಯು ನನ್ನ ಜನರನ್ನು ನನಗೆ ಕೊಡುತ್ತಾನೆ. ಆ ಜನರಲ್ಲಿ ಪ್ರತಿಯೊಬ್ಬರೂ ನನ್ನ ಬಳಿಗೆ ಬರುತ್ತಾರೆ. ನನ್ನಲ್ಲಿಗೆ ಬರುವ ಪ್ರತಿಯೊಬ್ಬರನ್ನೂ ನಾನು ಖಂಡಿತವಾಗಿ ಸ್ವೀಕರಿಸಿಕೊಳ್ಳುವೆನು, ಅವರನ್ನು ಎಂದಿಗೂ ತಳ್ಳಿಬಿಡುವುದಿಲ್ಲ.


“ತಮ್ಮನ್ನು ಬೇರೆ ಜನರು ನೋಡಲಿ ಎಂಬ ಒಂದೇ ಉದ್ದೇಶದಿಂದ ಅವರು ಒಳ್ಳೆಯ ಕಾರ್ಯಗಳನ್ನು ಮಾಡುತ್ತಾರೆ. ಪವಿತ್ರ ಗ್ರಂಥಗಳು ತುಂಬಿರುವ ವಿಶೇಷವಾದ ಚರ್ಮದ ಚೀಲಗಳನ್ನು ಅವರು ಕಟ್ಟಿಕೊಂಡಿರುತ್ತಾರೆ. ಅವರು ಈ ಚೀಲಗಳನ್ನು ಇನ್ನೂ ಹೆಚ್ಚುಹೆಚ್ಚು ದೊಡ್ಡದನ್ನಾಗಿ ಮಾಡುತ್ತಾರೆ. ಜನರು ನೋಡಲಿ ಎಂದು ಅವರು ತಮ್ಮ ವಿಶೇಷ ಪ್ರಾರ್ಥನೆಯ ಉಡುಪುಗಳನ್ನು ಮತ್ತಷ್ಟು ಉದ್ದ ಮಾಡುತ್ತಾರೆ.


ಅಲ್ಲಿದ್ದ ಜನರು ಯೇಸುವನ್ನು ನೋಡಿದರು. ಆತನು ಯಾರೆಂಬುದು ಅವರಿಗೆ ತಿಳಿದಿತ್ತು. ಆದ್ದರಿಂದ ಅವರು ಸುತ್ತಮುತ್ತಲಿನ ಪ್ರದೇಶದ ಜನರಿಗೆ ಯೇಸು ಬಂದಿದ್ದಾನೆ ಎಂದು ತಿಳಿಸಿದರು. ಜನರು ರೋಗಗಳಿಂದ ಬೇನೆಗಳಿಂದ ನರಳುತ್ತಿದ್ದವರನ್ನೆಲ್ಲ ಆತನ ಬಳಿಗೆ ತಂದರು.


ಯೇಸು ಆ ಪ್ರದೇಶದಲ್ಲಿದ್ದ ಪಟ್ಟಣಗಳಿಗೆ, ನಗರಗಳಿಗೆ ಮತ್ತು ತೋಟಗಳಿಗೆ ಹೋದನು. ಆತನು ಹೋದ ಕಡೆಗಳಲ್ಲೆಲ್ಲಾ ಜನರು ಮಾರುಕಟ್ಟೆಯ ಸ್ಥಳಗಳಿಗೆ ಕಾಯಿಲೆಯ ಜನರನ್ನು ಕರೆತಂದರು. ಅವರು ಯೇಸುವಿಗೆ, ನಿನ್ನ ಮೇಲಂಗಿಯ ಅಂಚನ್ನಾದರೂ ಮುಟ್ಟಲು ತಮಗೆ ಅವಕಾಶ ಕೊಡಬೇಕೆಂದು ಬೇಡಿಕೊಂಡರು. ಆತನನ್ನು ಸ್ಪರ್ಶಿಸಿದ ಜನರೆಲ್ಲರಿಗೂ ಗುಣವಾಯಿತು.


ಯೇಸು ಮತ್ತು ಆತನ ಶಿಷ್ಯರು ಬೆತ್ಸಾಯಿದಕ್ಕೆ ಬಂದರು. ಕೆಲವು ಜನರು ಯೇಸುವಿನ ಬಳಿಗೆ ಒಬ್ಬ ಕುರುಡನನ್ನು ತಂದು ಅವನನ್ನು ಮುಟ್ಟಬೇಕೆಂದು ಯೇಸುವನ್ನು ಬೇಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು