Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 15:27 - ಪರಿಶುದ್ದ ಬೈಬಲ್‌

27 ಆ ಸ್ತ್ರೀಯು, “ಹೌದು ಪ್ರಭುವೇ, ಆದರೂ ನಾಯಿಗಳು ತಮ್ಮ ಯಜಮಾನರ ಮೇಜಿನಿಂದ ಬೀಳುವ ಆಹಾರದ ತುಂಡುಗಳನ್ನು ತಿನ್ನುತ್ತವೆಯಲ್ಲಾ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆಕೆಯು, “ಹೌದು, ಕರ್ತನೇ, ಆದರೆ ನಾಯಿಮರಿಗಳಂತೂ ತಮ್ಮ ಯಜಮಾನನ ಮೇಜಿನಿಂದ ಬೀಳುವ ರೊಟ್ಟಿಯ ತುಂಡುಗಳನ್ನು ತಿನ್ನುತ್ತವಲ್ಲಾ” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆಗ ಆಕೆ, “ಅದು ನಿಜ ಸ್ವಾಮೀ, ನಾಯಿಗಳಾದರೂ ತಮ್ಮ ಯಜಮಾನನ ಮೇಜಿನಿಂದ ಕೆಳಕ್ಕೆ ಬೀಳುವ ಚೂರುಪಾರನ್ನು ತಿನ್ನುತ್ತವೆ, ಅಲ್ಲವೇ?’ ಎಂದು ಮರುತ್ತರ ಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆಕೆ - ಸ್ವಾಮೀ, ಆ ಮಾತು ನಿಜವೇ; ನಾಯಿಮರಿಗಳಂತೂ ತಮ್ಮ ಯಜಮಾನರ ಮೇಜಿನಿಂದ ಬೀಳುವ ರೊಟ್ಟಿಯ ತುಂಡುಗಳನ್ನು ತಿನ್ನುತ್ತವಲ್ಲಾ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆಗ ಆಕೆಯು, “ಸ್ವಾಮೀ, ಅದು ನಿಜವೇ, ಆದರೂ ತಮ್ಮ ಯಜಮಾನರ ಮೇಜಿನಿಂದ ಬೀಳುವ ರೊಟ್ಟಿತುಂಡುಗಳನ್ನು ನಾಯಿಮರಿಗಳು ತಿನ್ನುತ್ತವಲ್ಲಾ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ತನ್ನಾ ತ್ಯಾ ಬಾಯ್ಕೊಮನ್ಸಿನ್,“ತಿಯಾ ಸಾಂಗ್ತಲೆ ಸಮಾ ಹಾಯ್ ಧನಿಯಾ; ಖರೆ ಅಪ್ನಾಚ್ಯಾ ಧನಿಯಾಚೆ ಹುರಲ್ಲೆ ಉಸ್ಟೆ ತರ್‍ಬಿ ಕುತ್ರಿ ಖಾತ್ಯಾತ್ ನ್ಹಯ್”. ಮನುನ್ ಜಬಾಬ್ ದಿಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 15:27
24 ತಿಳಿವುಗಳ ಹೋಲಿಕೆ  

ದೇವಜನರಲ್ಲಿ ನಾನೇ ಅತ್ಯಲ್ಪನು. ಕ್ರಿಸ್ತನ ಐಶ್ವರ್ಯವನ್ನು ಕುರಿತಾದ ಸುವಾರ್ತೆಯನ್ನು ನಾನು ಯೆಹೂದ್ಯರಲ್ಲದವರಿಗೆ ತಿಳಿಸಬೇಕೆಂದು ದೇವರು ನನಗೆ ಈ ಕೃಪಾವರವನ್ನು ಕೊಟ್ಟನು. ಆ ಐಶ್ವರ್ಯವನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ.


ಐಶ್ವರ್ಯವಂತನು ಊಟ ಮಾಡಿದ ಮೇಲೆ ಹೊರಗೆಸೆದ ಎಂಜಲನ್ನು ತಿನ್ನುವುದಕ್ಕಾಗಿ ಅಲ್ಲಿ ಬಿದ್ದುಕೊಂಡಿರುತ್ತಿದ್ದನು. ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು.


ಏಕೆಂದರೆ ಯೆಹೂದ್ಯರಿಗೂ ಯೆಹೂದ್ಯರಲ್ಲದವರಿಗೂ ಯಾವ ವ್ಯತ್ಯಾಸವೂ ಇಲ್ಲ. ಎಲ್ಲರಿಗೂ ಒಬ್ಬನೇ ಪ್ರಭು. ತನ್ನಲ್ಲಿ ನಂಬಿಕೆಯಿಡುವ ಜನರೆಲ್ಲರಿಗೆ ಪ್ರಭುವು ಅನೇಕ ಆಶೀರ್ವಾದಗಳನ್ನು ಕೊಡುತ್ತಾನೆ.


ದೇವರು ಕೇವಲ ಯೆಹೂದ್ಯರ ದೇವರಲ್ಲ. ಆತನು ಯೆಹೂದ್ಯರಲ್ಲದವರಿಗೂ ಸಹ ದೇವರಾಗಿದ್ದಾನೆ.


“ಸುಂಕವಸೂಲಿಗಾರನು ಅಲ್ಲಿ ಒಬ್ಬಂಟಿಗನಾಗಿಯೇ ನಿಂತುಕೊಂಡಿದ್ದನು. ಅವನು ಆಕಾಶದ ಕಡೆಗೆ ಕಣ್ಣೆತ್ತಿ ನೋಡದೇ, ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು, ‘ದೇವರೇ, ನನಗೆ ಕರುಣೆತೋರು; ನಾನು ಪಾಪಿಯಾಗಿದ್ದೇನೆ’ ಎಂದು ಪ್ರಾರ್ಥಿಸಿದನು.


ಅದಕ್ಕೆ ಆ ಅಧಿಕಾರಿ, “ಪ್ರಭುವೇ, ನನ್ನ ಮನೆಗೆ ನೀನು ಬರುವಷ್ಟು ಯೋಗ್ಯತೆ ನನಗಿಲ್ಲ. ಅವನಿಗೆ ಗುಣವಾಗಲಿ ಎಂದು ನೀನು ಆಜ್ಞಾಪಿಸಿದರೆ ಸಾಕು, ಅವನಿಗೆ ಗುಣವಾಗುವುದು.


ಆಗ ನೀವು ಪರಲೋಕದಲ್ಲಿರುವ ನಿಮ್ಮ ತಂದೆಯ ನಿಜವಾದ ಮಕ್ಕಳಾಗುವಿರಿ. ನಿಮ್ಮ ತಂದೆಯು ಒಳ್ಳೆಯವರಿಗಾಗಿ ಮತ್ತು ಕೆಟ್ಟವರಿಗಾಗಿ ಸೂರ್ಯನನ್ನು ಉದಯಿಸುತ್ತಾನೆ ಮತ್ತು ಮಳೆಯನ್ನು ಸುರಿಸುತ್ತಾನೆ.


ಇಲ್ಲ! ಪ್ರತಿಯೊಬ್ಬ ವ್ಯಕ್ತಿ ಸುಳ್ಳುಗಾರನಾದರೂ ದೇವರು ಸತ್ಯವಂತನಾಗಿಯೇ ಇರುತ್ತಾನೆ. ಪವಿತ್ರ ಗ್ರಂಥವು ಹೀಗೆಂದು ಹೇಳುತ್ತದೆ: “ನಿನ್ನ ಮಾತುಗಳಲ್ಲಿ ನೀನು ನ್ಯಾಯಸ್ಥನೆಂದು ನಿರೂಪಿತನಾಗಬೇಕು. ನಿನಗೆ ತೀರ್ಪಾಗುವಾಗ ನೀನು ಜಯಗಳಿಸಬೇಕು.”


ನನ್ನ ದೇವರೆ, ನನ್ನ ಪ್ರಾರ್ಥನೆಯನ್ನು ಕೇಳು. ನಿನ್ನ ಕಣ್ಣುಗಳನ್ನು ತೆರೆದು ನಮಗಾದ ಎಲ್ಲ ಕೇಡನ್ನು ನೋಡು. ನಿನ್ನ ಹೆಸರುಳ್ಳ ಪಟ್ಟಣದ ಗತಿ ಏನಾಗಿದೆ ನೋಡು. ನಾವು ಒಳ್ಳೆಯ ಜನರೆಂದು ನಾನು ಹೇಳುತ್ತಿಲ್ಲ. ನಾವು ಒಳ್ಳೆಯ ಜನರೆಂದು ಇದೆಲ್ಲವನ್ನು ಕೇಳುತ್ತಿಲ್ಲ. ನೀನು ಕರುಣಾಮಯನಾಗಿರುವುದರಿಂದಲೇ ಇದನ್ನೆಲ್ಲ ಕೇಳುತ್ತಿದ್ದೇನೆ.


ಹೀಗಿರಲು, ನಿನ್ನ ಕಾರ್ಯಗಳನ್ನೆಲ್ಲಾ ನಾನು ಕ್ಷಮಿಸುವಾಗ, ನೀನು ಅವುಗಳನ್ನು ಜ್ಞಾಪಿಸಿಕೊಂಡು ನಾಚಿಕೆಪಡುವೆ. ಅಹಂಕಾರದಿಂದ ಮಾತನಾಡಲು ಮತ್ತೊಮ್ಮೆ ಬಾಯಿ ತೆರೆಯಲಾಗದಂತೆ ನೀನು ಬಹಳವಾಗಿ ಅವಮಾನಿತಳಾಗುವೆ.” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.


ಕ್ರಿಸ್ತನ ಪ್ರೀತಿಯನ್ನು ಮನುಷ್ಯನು ಗ್ರಹಿಸಿಕೊಳ್ಳಲು ಸಾಧ್ಯವಿಲ್ಲ. ಆದರೆ ಆ ಪ್ರೀತಿಯನ್ನು ನೀವು ತಿಳಿದುಕೊಳ್ಳಶಕ್ತರಾಗಲೆಂದು ಪ್ರಾರ್ಥಿಸುತ್ತೇನೆ. ಆಗ ನೀವು ದೇವರ ಸಂಪೂರ್ಣತೆಯಿಂದ ತುಂಬಿದವರಾಗಲು ಸಾಧ್ಯವಾಗುತ್ತದೆ.


ಧರ್ಮಶಾಸ್ತ್ರದ ಅಧೀನದಲ್ಲಿರುವ ಜನರ ವಿಷಯವಾಗಿಯೇ ಧರ್ಮಶಾಸ್ತ್ರವು ಈ ಸಂಗತಿಯನ್ನು ಹೇಳುತ್ತಿದೆ. ಆದ್ದರಿಂದ ಯೆಹೂದ್ಯರು ನೆವ ಹೇಳಲು ಸಾದ್ಯವಿಲ್ಲ. ಅಲ್ಲದೆ ಇಡೀ ಲೋಕವೇ ದೇವರ ನ್ಯಾಯತೀರ್ಪಿಗೆ ಒಳಗಾಗಿದೆ.


ನೀನು ನನಗೆ ತುಂಬ ಕರುಣೆ ತೋರಿದೆ. ನೀನು ನನಗೆ ಅನೇಕ ಒಳ್ಳೆಯ ಕಾರ್ಯಗಳನ್ನು ಮಾಡಿದೆ. ಮೊದಲನೆ ಸಲ ನಾನು ಜೋರ್ಡನ್ ನದಿಯನ್ನು ದಾಟಿ ಪ್ರಯಾಣ ಮಾಡಿದಾಗ, ಕೇವಲ ನನ್ನ ಊರುಗೋಲೇ ಹೊರತು ಬೇರೇನೂ ನನಗಿರಲಿಲ್ಲ. ಆದರೆ ಈಗ ಎರಡು ಗುಂಪುಗಳಿಗೆ ಬೇಕಾದ ವಸ್ತುಗಳನ್ನು ನಾನು ಪಡೆದಿದ್ದೇನೆ.


ಯೇಸು, “ಮಕ್ಕಳು ತಿನ್ನುವ ರೊಟ್ಟಿಯನ್ನು ತೆಗೆದುಕೊಂಡು ನಾಯಿಗಳಿಗೆ ಕೊಡುವುದು ಸರಿಯಲ್ಲ” ಎಂದು ಉತ್ತರಕೊಟ್ಟನು.


ಆಗ ಯೇಸು, “ಅಮ್ಮಾ, ನಿನ್ನ ನಂಬಿಕೆ ದೊಡ್ಡದು. ನಿನ್ನ ಕೋರಿಕೆಯನ್ನು ನಾನು ಈಡೇರಿಸುತ್ತೇನೆ” ಎಂದನು. ಆ ಕ್ಷಣದಲ್ಲೇ ಆಕೆಯ ಮಗಳು ಗುಣವಾದಳು.


ಆ ಸ್ತ್ರೀಯು, “ಅದು ನಿಜ ಪ್ರಭು. ಆದರೆ ಮಕ್ಕಳು ತಿನ್ನದೆ ಬಿಟ್ಟ ಆಹಾರದ ಚೂರುಗಳನ್ನು ಮೇಜಿನ ಕೆಳಗಿರುವ ನಾಯಿಗಳು ತಿನ್ನಬಹುದಲ್ಲವೇ?” ಎಂದು ಉತ್ತರಕೊಟ್ಟಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು