Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 16:13 - ಪರಿಶುದ್ದ ಬೈಬಲ್‌

13 ಯೇಸು ಫಿಲಿಪ್ಪನ ಸೆಜರೇಯ ಎಂಬ ಪ್ರಾಂತ್ಯಕ್ಕೆ ಹೋದನು. ಯೇಸು ತನ್ನ ಶಿಷ್ಯರಿಗೆ, “ಮನುಷ್ಯಕುಮಾರನಾದ ನನ್ನನ್ನು ಜನರು ಯಾರೆಂದು ಹೇಳುತ್ತಾರೆ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೇಸು ಫಿಲಿಪ್ಪನ ಕೈಸರೈಯ ಎಂಬ ಪಟ್ಟಣದ ಪ್ರಾಂತ್ಯಕ್ಕೆ ಬಂದಾಗ, “ಜನರು ಮನುಷ್ಯಕುಮಾರನಾದ ನನ್ನನ್ನು ಯಾರೆಂದು ಹೇಳುತ್ತಾರೆ” ಎಂದು ತನ್ನ ಶಿಷ್ಯರನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಯೇಸುಸ್ವಾಮಿ ‘ಫಿಲಿಪ್ಪನ ಸೆಜರೇಯ’ ಎಂಬ ಪ್ರಾಂತ್ಯಕ್ಕೆ ಬಂದರು. ಅಲ್ಲಿ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ನರಪುತ್ರನನ್ನು ಜನರು ಯಾರೆಂದು ಹೇಳುತ್ತಾರೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೇಸು ಫಿಲಿಪ್ಪನ ಕೈಸರೈಯ ಎಂಬ ಪಟ್ಟಣದ ಪ್ರಾಂತ್ಯಕ್ಕೆ ಬಂದಾಗ - ಜನರು ಮನುಷ್ಯಕುಮಾರನೆಂಬ ನನ್ನನ್ನು ಯಾರು ಅನ್ನುತ್ತಾರೆ ಎಂದು ತನ್ನ ಶಿಷ್ಯರನ್ನು ಕೇಳಿದ್ದಕ್ಕೆ ಅವರು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೇಸು ಕೈಸರೈಯ ಫಿಲಿಪ್ಪಿ ಪ್ರಾಂತಗಳಿಗೆ ಬಂದಾಗ ತಮ್ಮ ಶಿಷ್ಯರಿಗೆ, “ಮನುಷ್ಯಪುತ್ರನಾದ ನನ್ನನ್ನು ಯಾರೆಂದು ಜನರು ಹೇಳುತ್ತಾರೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಜೆಜು ಸೆಜರಿಯಾ ಫಿಲಿಪ್ಪಿ ಮನ್ತಲ್ಯಾ ಶಾರಾಂಚ್ಯಾ ಜಗ್ಗೊಳ್ಲ್ಯಾ ಪ್ರಾಂತ್ಯಾತ್ ಪಾವಲ್ಲೊ, ತನ್ನಾ ತೆನಿ ಅಪ್ನಾಚ್ಯಾ ಶಿಸಾಕ್ನಿ,“ಲೊಕಾ ಮಾನ್ಸಾಚ್ಯಾ ಲೆಕಾಕ್ ಕೊನ್ ಮನುನ್ ಮನ್ತ್ಯಾತ್?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 16:13
23 ತಿಳಿವುಗಳ ಹೋಲಿಕೆ  

“ನನಗಾದ ರಾತ್ರಿಯ ದರ್ಶನದಲ್ಲಿ, ನನ್ನ ಎದುರಿಗೆ ಮನುಷ್ಯಕುಮಾರನಂತಿರುವವನನ್ನು ಕಂಡೆ. ಆತನು ಆಕಾಶದಲ್ಲಿ ಮೇಘಗಳ ಮೇಲೆ ಬರುತ್ತಿದ್ದನು. ಅವನು ಆ ಪುರಾತನ ರಾಜನ ಸಮೀಪಕ್ಕೆ ಬಂದನು; ಅವನನ್ನು ಆ ಮಹಾವೃದ್ಧನ ಸನ್ನಿಧಿಗೆ ತರಲಾಯಿತು.


ಮತ್ತು ಎಲ್ಲಾ ಜನರಿಗೆ ತೀರ್ಪುಮಾಡುವ ಅಧಿಕಾರವನ್ನು ತಂದೆಯು ಮಗನಿಗೂ ಕೊಟ್ಟಿದ್ದಾನೆ. ಏಕೆಂದರೆ ಆ ಮಗನು ಮನುಷ್ಯಕುಮಾರನಾಗಿದ್ದಾನೆ.


ಆದರೆ ಮನುಷ್ಯಕುಮಾರನಿಗೆ ಪಾಪಗಳನ್ನು ಕ್ಷಮಿಸಲು ಭೂಲೋಕದಲ್ಲಿ ಅಧಿಕಾರವಿದೆ ಎಂಬುದನ್ನು ನಾನು ನಿಮಗೆ ನಿರೂಪಿಸುತ್ತೇನೆ” ಎಂದನು. ನಂತರ ಯೇಸು ಪಾರ್ಶ್ವವಾಯು ರೋಗಿಗೆ, “ಎದ್ದು, ನಿನ್ನ ಹಾಸಿಗೆಯನ್ನು ತೆಗೆದುಕೊಂಡು ಮನೆಗೆ ಹೋಗು” ಎಂದನು.


ಯೇಸು ಹೀಗೆ ಉತ್ತರಿಸಿದನು: “ಹೊಲದಲ್ಲಿ ಒಳ್ಳೆಯ ಬೀಜವನ್ನು ಬಿತ್ತುವವನೇ ಮನುಷ್ಯಕುಮಾರನು.


“ಮನುಷ್ಯಕುಮಾರನು ಸಬ್ಬತ್‌ ದಿನಕ್ಕೂ ಪ್ರಭುವಾಗಿದ್ದಾನೆ” ಎಂದು ಹೇಳಿದನು.


ಯೇಸು ಅವನಿಗೆ, “ನರಿಗಳಿಗೆ ಗುಹೆಗಳಿವೆ, ಪಕ್ಷಿಗಳಿಗೆ ಗೂಡುಗಳಿವೆ. ಆದರೆ ಮನುಷ್ಯಕುಮಾರನಿಗೆ ತಲೆ ಇಡುವಷ್ಟು ಸ್ಥಳವೂ ಇಲ್ಲ” ಅಂದನು.


ನಜರೇತಿನ ಯೇಸುವಿನ ಬಗ್ಗೆ ನಿಮಗೆ ಗೊತ್ತಿದೆ. ದೇವರು ಆತನಿಗೆ ಪವಿತ್ರಾತ್ಮನನ್ನೂ ಶಕ್ತಿಯನ್ನೂ ಕೊಡುವುದರ ಮೂಲಕ ಆತನನ್ನು ಅಭಿಷೇಕಿಸಿದನು. ಆತನು ಎಲ್ಲಾ ಕಡೆಗಳಲ್ಲೂ ಜನರಿಗೆ ಒಳ್ಳೆಯದನ್ನು ಮಾಡುತ್ತಾ ಸಂಚರಿಸಿದನು. ದೆವ್ವದಿಂದ ಪೀಡಿತರಾಗಿದ್ದವರನ್ನು ಯೇಸು ಗುಣಪಡಿಸಿದನು. ದೇವರು ಯೇಸುವಿನೊಂದಿಗೆ ಇದ್ದನೆಂಬುದನ್ನು ಇದು ತೋರಿಸಿಕೊಟ್ಟಿತು.


“ಇಗೋ, ಪರಲೋಕವು ತೆರೆದಿರುವುದನ್ನೂ ಮನುಷ್ಯಕುಮಾರನು (ಯೇಸು) ದೇವರ ಬಲಗಡೆಯಲ್ಲಿ ನಿಂತಿರುವುದನ್ನೂ ನಾನು ನೋಡುತ್ತಿದ್ದೇನೆ!” ಎಂದು ಹೇಳಿದನು.


ಜನರು, “ಕ್ರಿಸ್ತನು ಸದಾಕಾಲ ಜೀವಿಸುತ್ತಾನೆ ಎಂದು ನಮ್ಮ ಧರ್ಮಶಾಸ್ತ್ರವು ಹೇಳುತ್ತದೆ. ಹೀಗಿರಲಾಗಿ, ‘ಮನುಷ್ಯಕುಮಾರನು ಮೇಲೆತ್ತಲ್ಪಡುವನು’ ಎಂದು ನೀನು ಹೇಳುವುದೇಕೆ? ಈ ಮನುಷ್ಯಕುಮಾರನು ಯಾರು?” ಎಂದು ಕೇಳಿದರು.


ಅದೇ ರೀತಿ ಮನುಷ್ಯಕುಮಾರನು ಜನರಿಂದ ಸೇವೆ ಮಾಡಿಸಿಕೊಳ್ಳಲು ಬರದೆ, ಜನರ ಸೇವೆಮಾಡಲು ಬಂದನು. ಮನುಷ್ಯಕುಮಾರನು ಅನೇಕ ಜನರನ್ನು ರಕ್ಷಿಸುವುದಕ್ಕಾಗಿ ತನ್ನ ಪ್ರಾಣವನ್ನೇ ಈಡುಕೊಡಲು ಬಂದನು” ಎಂದು ಹೇಳಿದನು.


ವ್ಯಭಿಚಾರಿಣಿಯಂತಿರುವ ಈ ಕೆಟ್ಟ ಸಂತತಿಯವರಲ್ಲಿ ಯಾವನಾದರೂ ನನಗೂ ನನ್ನ ಉಪದೇಶಕ್ಕೂ ನಾಚಿಕೊಂಡರೆ, ಮನುಷ್ಯಕುಮಾರನಾದ ನಾನು ನನ್ನ ತಂದೆಯ ಮಹಿಮೆಯೊಂದಿಗೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವ ಸಮಯದಲ್ಲಿ ಅವನ ಬಗ್ಗೆ ನಾಚಿಕೆಪಡುವೆನು” ಎಂದು ಹೇಳಿದನು.


“ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಸಮಸ್ತ ದೇವದೂತರ ಸಮೇತ ಮತ್ತೆ ಬರುವಾಗ ರಾಜನಾಗಿ ಮಹಾಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಾನೆ.


ಯೇಸು ಆ ಸ್ಥಳವನ್ನು ಬಿಟ್ಟು, ಟೈರ್ ಮತ್ತು ಸೀದೋನ್‌ಗಳ ಸುತ್ತಮುತ್ತಲಿನ ಪ್ರದೇಶಕ್ಕೆ ಹೋದನು.


ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿಸುವನು. ಆತನ ದೂತರು ಪಾಪಕ್ಕೆ ಕಾರಣರಾದ ಮತ್ತು ಕೇಡುಮಾಡುವ ಜನರನ್ನೆಲ್ಲ ಕೂಡಿಸುವರು; ಅವರನ್ನು ಆತನ ರಾಜ್ಯದಿಂದ ಹೊರಗೆ ಹಾಕಿ


ಮನುಷ್ಯಕುಮಾರನಿಗೆ ವಿರೋಧವಾಗಿ ಮಾತನಾಡಿದರೂ ಅದಕ್ಕೆ ಕ್ಷಮಾಪಣೆ ಉಂಟು. ಆದರೆ ಪವಿತ್ರಾತ್ಮನಿಗೆ ವಿರೋಧವಾಗಿ ಮಾತನಾಡಿದರೆ ಅದಕ್ಕೆ ಕ್ಷಮಾಪಣೆಯು ಇಹದಲ್ಲಾಗಲಿ ಪರದಲ್ಲಾಗಲಿ ಇಲ್ಲವೇ ಇಲ್ಲ.


“ಮೋಶೆಯು ಮರಳುಗಾಡಿನಲ್ಲಿ ಸರ್ಪವನ್ನು ಎತ್ತರವಾದ ಕಂಬದ ಮೇಲಿಟ್ಟನು. ಅಂತೆಯೇ ಮನುಷ್ಯಕುಮಾರನನ್ನು ಸಹ ಎತ್ತರವಾದ ಕಂಬದ ಮೇಲಿಡಬೇಕು.


ಅದಲ್ಲದೆ ಯೇಸು, “ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ಪರಲೋಕವು ತೆರೆದಿರುವುದನ್ನೂ ಮನುಷ್ಯಕುಮಾರನ ಮೇಲೆ ದೇವದೂತರುಗಳು ಏರಿಹೋಗುವುದನ್ನೂ ಕೆಳಗೆ ಇಳಿದುಬರುವುದನ್ನೂ ನೀವು ನೋಡುವಿರಿ” ಎಂದು ಹೇಳಿದನು.


ಪ್ರವಾದಿಯಾದ ಯೋನನು ಮೂರು ದಿವಸ ಹಗಲಿರುಳು ಒಂದು ದೊಡ್ಡ ಮೀನಿನ ಹೊಟ್ಟೆಯಲ್ಲಿ ಹೇಗಿದ್ದನೋ ಅದೇ ರೀತಿಯಲ್ಲಿ ಮನುಷ್ಯಕುಮಾರನು ಸಮಾಧಿಯಲ್ಲಿ ಮೂರು ದಿನ ಹಗಲಿರುಳು ಇರುವನು. ಇದಲ್ಲದೆ ಬೇರೆ ಯಾವ ಸೂಚಕಕಾರ್ಯವನ್ನು ಅವರಿಗೆ ತೋರಿಸಲಾಗುವುದಿಲ್ಲ.


ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ಮತ್ತು ತನ್ನ ದೂತರೊಡನೆ ಮರಳಿ ಬಂದು ಪ್ರತಿಯೊಬ್ಬನಿಗೂ ಅವನವನ ಕಾರ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡುವನು.


ನಾನು ನಿಮಗೆ ಸತ್ಯವನ್ನೇ ಹೇಳುತ್ತೇನೆ. ಈಗ ಇಲ್ಲಿ ನಿಂತಿರುವ ಕೆಲವರು, ಮನುಷ್ಯಕುಮಾರನು ತನ್ನ ರಾಜ್ಯದೊಡನೆ ಬರುವುದನ್ನು ನೋಡುವ ತನಕ ಸಾಯುವುದಿಲ್ಲ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು