Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 16:18 - ಪರಿಶುದ್ದ ಬೈಬಲ್‌

18 ಆದ್ದರಿಂದ ನಾನು ನಿನಗೆ ಹೇಳುವುದೇನೆಂದರೆ, ನೀನೇ ಪೇತ್ರ. ನಾನು ಈ ಬಂಡೆಯ ಮೇಲೆ ನನ್ನ ಸಭೆಯನ್ನು ಕಟ್ಟುತ್ತೇನೆ. ಪಾತಾಳಲೋಕದ ಬಲವು ನನ್ನ ಸಭೆಯನ್ನು ಸೋಲಿಸಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಾನು ಇದನ್ನು ಸಹ ನಿನಗೆ ಹೇಳುತ್ತೇನೆ, “ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ಶಕ್ತಿಗಳು ಅದನ್ನು ಸೋಲಿಸಲಾರವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನಾನು ನಿನಗೆ ಹೇಳುತ್ತೇನೆ, ಕೇಳು: “ನಿನ್ನ ಹೆಸರು ಪೇತ್ರ! ಈ ಬಂಡೆಯ ಮೇಲೆ ನನ್ನ ಧರ್ಮಸಭೆಯನ್ನು ಕಟ್ಟುವೆನು, ಪಾತಾಳಲೋಕದ ಶಕ್ತಿಯು ಅದನ್ನು ಎಂದಿಗೂ ಜಯಿಸಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಮತ್ತು ನಾನೂ ನಿನಗೆ ಒಂದು ಮಾತನ್ನು ಹೇಳುತ್ತೇನೆ, ಅದೇನಂದರೆ - ನೀನು ಪೇತ್ರನು, ಈ ಬಂಡೆಯ ಮೇಲೆ ನನ್ನ ಸಭೆಯನ್ನು ಕಟ್ಟುವೆನು; ಪಾತಾಳಲೋಕದ ಬಲವು ಅದನ್ನು ಸೋಲಿಸಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಾನು ಸಹ ನಿನಗೆ ಹೇಳುವುದೇನಂದರೆ, ನೀನು ಪೇತ್ರನು. ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ದ್ವಾರಗಳು ಅದನ್ನು ಜಯಿಸಲಾರವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತೆಚೆಸಾಟ್ನಿ ಪೆದ್ರು ಮಿಯಾ ತುಕಾ ಸಾಂಗ್ತಾ, ತಿಯಾ ಎಕ್ ಮೊಟೊ ಖಡಾಪ್ ಅನಿ ಹ್ಯಾ ಖಡ್ಪಾ ವರ್‍ತಿ ಮಿಯಾ ಮಾಜ್ಯಾ ವಿಶ್ವಾಸಾಚ್ಯಾ ಲೊಕಾಂಚೊ ತಾಂಡೊ ಭಾಂದ್ತಾ, ಅನಿ ನರ್‍ಕಾಚ್ಯಾ ಬಳಾಕ್ ಸೈತ್ ಕನ್ನಾಬಿ ಹ್ಯಾ ಮಾಜ್ಯಾ ತಾಂಡ್ಯಾಕ್ ನಾಸ್ ಕರುಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 16:18
42 ತಿಳಿವುಗಳ ಹೋಲಿಕೆ  

ಇದಕ್ಕೋಸ್ಕರವಾಗಿಯೇ, ನನ್ನ ಒಡೆಯನಾದ ಯೆಹೋವನು ಹೀಗೆನ್ನುವನು: “ಚೀಯೋನಿನಲ್ಲಿ ನಾನು ಒಂದು ಮೂಲೆಗಲ್ಲು ಇಡುವೆನು, ಇದು ಬಹು ಅಮೂಲ್ಯವಾದ ಕಲ್ಲು. ಈ ವಿಶೇಷವಾದ ಕಲ್ಲಿನ ಮೇಲೆ ಎಲ್ಲವೂ ಕಟ್ಟಲ್ಪಡುವದು. ಆ ಕಲ್ಲಿನ ಮೇಲೆ ಭರವಸವಿಡುವ ಯಾವನು ಆಶಾಭಂಗಪಡುವುದಿಲ್ಲ.


ಕ್ರಿಸ್ತನು ದೇಹಕ್ಕೆ (ಸಭೆಯ) ಶಿರಸ್ಸಾಗಿದ್ದಾನೆ. ಪ್ರತಿಯೊಂದೂ ಆತನಿಂದಲೇ ಬರುತ್ತದೆ. ಮರಣದಿಂದ ಪ್ರಥಮವಾಗಿ ಎದ್ದುಬಂದವನು ಆತನೇ. ಆದ್ದರಿಂದ ಎಲ್ಲಾದರಲ್ಲಿಯೂ ಯೇಸುವೇ ಅತ್ಯಂತ ಪ್ರಾಮುಖ್ಯನಾಗಿದ್ದಾನೆ.


ಅವನು ಸೀಮೋನನನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದನು. ಯೇಸು ಸೀಮೋನನ ಕಡೆಗೆ ನೋಡಿ, “ಯೋಹಾನನ ಮಗನಾದ ನಿನ್ನ ಹೆಸರು ಸೀಮೋನ. ನೀನು ಕೇಫನೆಂದು ಕರೆಸಿಕೊಳ್ಳುವೆ” ಎಂದು ಹೇಳಿದನು. (“ಕೇಫ” ಅಂದರೆ “ಪೇತ್ರ” ಎಂದರ್ಥ).


ಆದ್ದರಿಂದ, ನಡುಗಿಸಲಾಗದಿರುವ ರಾಜ್ಯವನ್ನು ನಾವು ಹೊಂದಿರುವುದರಿಂದ ದೇವರಿಗೆ ಕೃತಜ್ಞತೆಯಿಂದಿರಬೇಕು. ಆತನಿಗೆ ಮೆಚ್ಚಿಕೆಕರವಾದ ಆರಾಧನೆಯನ್ನು ಭಯಭಕ್ತಿಯಿಂದ ಮಾಡಬೇಕು.


ಅವರು ದೇವರನ್ನು ಕೊಂಡಾಡುತ್ತಿದ್ದರು ಮತ್ತು ಜನರೆಲ್ಲರೂ ಅವರನ್ನು ಇಷ್ಟಪಡುತ್ತಿದ್ದರು. ಪ್ರತಿದಿನವೂ ಹೆಚ್ಚುಹೆಚ್ಚು ಜನರು ರಕ್ಷಣೆ ಹೊಂದುತ್ತಿದ್ದರು; ಪ್ರಭುವು ಅವರನ್ನೆಲ್ಲಾ ವಿಶ್ವಾಸಿಗಳ ಸಭೆಗೆ ಸೇರಿಸುತ್ತಿದ್ದನು.


ನಂತರ ನಾನು ನಿನ್ನ ಬಳಿಗೆ ಬೇಗ ಬಾರದೆ ಇದ್ದರೂ, ದೇವರ ಮನೆಯಲ್ಲಿ ಜನರು ಮಾಡಲೇಬೇಕಾದ ಕಾರ್ಯಗಳ ಬಗ್ಗೆ ನಿನಗೆ ತಿಳಿದಿದೆ. ಆ ಮನೆಯು ಜೀವಂತ ದೇವರ ಸಭೆ. ಅದು ಸತ್ಯದ ಅಡಿಪಾಯವೂ ಆಧಾರವೂ ಆಗಿದೆ.


“ನಿನಗೆ ವಿರುದ್ಧವಾಗಿ ಯುದ್ಧಮಾಡಲು ಜನರು ಆಯುಧಗಳನ್ನು ತಯಾರಿಸುವರು. ಆದರೆ ಆ ಆಯುಧಗಳು ನಿನ್ನನ್ನು ಸೋಲಿಸಲಾರವು. ಅವರು ನಿನಗೆ ವಿರುದ್ಧವಾಗಿ ಮಾತಾಡಿದರೂ ಆ ಮಾತುಗಳು ನಿನ್ನನ್ನು ತಪ್ಪಿತಸ್ಥಳೆಂದು ತೋರಿಸಲಾರವು. “ಯೆಹೋವನ ಸೇವಕರಿಗೆ ದೊರೆಯುವುದೇನು? ಅವರಿಗೆ ಆತನಿಂದಲೇ ಸುಫಲಗಳು ದೊರೆಯುತ್ತವೆ” ಎಂದು ಯೆಹೋವನು ಅನ್ನುತ್ತಾನೆ.


ನಾನು ಕ್ರಿಸ್ತನಿಗೂ ಸಭೆಗೂ ಇರುವ ಸಂಬಂಧವನ್ನು ಕುರಿತು ಮಾತಾಡುತ್ತಿದ್ದೇನೆ. ರಹಸ್ಯವಾದ ಈ ಸತ್ಯವು ಬಹು ಮುಖ್ಯವಾದದ್ದು.


ತನ್ನ ನಾನಾ ವಿಧವಾದ ಜ್ಞಾನವು ಆಕಾಶಮಂಡಲದಲ್ಲಿರುವ ಎಲ್ಲಾ ಅಧಿಪತಿಗಳಿಗೂ ಅಧಿಕಾರಿಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂಬುದೇ ದೇವರ ಉದ್ದೇಶವಾಗಿತ್ತು.


ಮೂಢರು ಜ್ಞಾನವನ್ನು ಅರ್ಥಮಾಡಿಕೊಳ್ಳಲಾರರು; ಮುಖ್ಯವಾದ ವಿಷಯಗಳನ್ನು ಚರ್ಚಿಸುವಾಗ ಮೂಢನು ಏನೂ ಹೇಳಲಾರ.


ಯೋಬನೇ, ಪಾತಾಳದ ದ್ವಾರಗಳನ್ನಾಗಲಿ ಘೋರಾಂಧಕಾರದ ಬಾಗಿಲುಗಳನ್ನಾಗಲಿ ನೀನು ಎಂದಾದರೂ ನೋಡಿರುವಿಯಾ?


ಆ ನಗರದ ಗೋಡೆಗಳನ್ನು ಹನ್ನೆರಡು ಅಡಿಪಾಯದ ಕಲ್ಲುಗಳ ಮೇಲೆ ಕಟ್ಟಲಾಗಿತ್ತು. ಆ ಕಲ್ಲುಗಳ ಮೇಲೆ ಕುರಿಮರಿಯಾದಾತನ ಹನ್ನರೆಡು ಮಂದಿ ಅಪೊಸ್ತಲರ ಹೆಸರುಗಳನ್ನು ಬರೆಯಲಾಗಿತ್ತು.


ಸ್ತೆಫನನ ಕೊಲೆಗೆ ಸೌಲನ ಸಮ್ಮತಿಯಿತ್ತು. ಕೆಲವು ಭಕ್ತರು ಸ್ತೆಫನನನ್ನು ಸಮಾಧಿ ಮಾಡಿದರು. ಅವರು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು. ಜೆರುಸಲೇಮಿನಲ್ಲಿದ್ದ ವಿಶ್ವಾಸಿಗಳ ಸಮುದಾಯವನ್ನು ಹಿಂಸಿಸಲು ಯೆಹೂದ್ಯರು ಅಂದೇ ಆರಂಭಿಸಿ ಅವರನ್ನು ಬಹಳವಾಗಿ ಸಂಕಟಪಡಿಸಿದರು. ಆ ಸಭೆಯನ್ನು ನಾಶಮಾಡಲು ಸೌಲನು ಮನೆಗಳಿಗೆ ನುಗ್ಗಿ ಗಂಡಸರನ್ನೂ ಹೆಂಗಸರನ್ನೂ ಎಳೆದೊಯ್ದು ಸೆರೆಮನೆಗೆ ಹಾಕಿದನು. ವಿಶ್ವಾಸಿಗಳೆಲ್ಲಾ ಜೆರುಸಲೇಮನ್ನು ಬಿಟ್ಟುಹೋದರು. ಅಪೊಸ್ತಲರು ಮಾತ್ರ ಅಲ್ಲೇ ಇದ್ದರು. ವಿಶ್ವಾಸಿಗಳು ಜುದೇಯ ಮತ್ತು ಸಮಾರ್ಯದ ಬೇರೆಬೇರೆ ಸ್ಥಳಗಳಿಗೆ ಹೊರಟುಹೋದರು.


“ಯೆಹೋವನೇ, ನನ್ನನ್ನು ಕನಿಕರಿಸು. ಇಗೋ, ವೈರಿಗಳು ನನಗೆ ಕೇಡುಮಾಡುತ್ತಿದ್ದಾರೆ. ‘ಮರಣ ದ್ವಾರ’ದಿಂದ ತಪ್ಪಿಸಿ ಕಾಪಾಡು.”


(ತನ್ನ ಸ್ವಂತ ಕುಟುಂಬವನ್ನು ಆಳಲು ತಿಳಿಯದವನು ದೇವರ ಸಭೆಯನ್ನು ಪರಾಮರಿಸಲು ಸಮರ್ಥನಲ್ಲ.)


ದೇವರು ನನಗೆ ಈ ವಿಶೇಷವಾದ ವರವನ್ನು ಕೊಟ್ಟಿದ್ದಾನೆಂಬುದನ್ನು ನಾಯಕರೆನಿಸಿಕೊಂಡಿದ್ದ ಯಾಕೋಬ, ಪೇತ್ರ, ಯೋಹಾನರು ಕಂಡುಕೊಂಡರು. ಆದ್ದರಿಂದ ಅವರು ಬಾರ್ನಬನನ್ನು ಮತ್ತು ನನ್ನನ್ನು ಸ್ವೀಕರಿಸಿಕೊಂಡರು. ಅವರು ನಮಗೆ, “ಪೌಲ ಮತ್ತು ಬಾರ್ನಬರೇ, ನೀವು ಯೆಹೂದ್ಯರಲ್ಲದವರ ಬಳಿಗೆ ಹೋಗಿರಿ. ನಾವು ಯೆಹೂದ್ಯರ ಬಳಿಗೆ ಹೋಗುತ್ತೇವೆ” ಎಂದು ತಿಳಿಸಿದರು.


ಅವನು ಅವರ ಮಾತನ್ನೂ ಕೇಳದಿದ್ದರೆ, ಸಭೆಗೆ ತಿಳಿಸು. ಅವನು ಸಭೆಯ ಮಾತನ್ನೂ ಕೇಳದಿದ್ದರೆ ಅವನನ್ನು ದೇವರಲ್ಲಿ ನಂಬಿಕೆ ಇಡದ ಮನುಷ್ಯನಂತಾಗಲಿ ಸುಂಕವಸೂಲಿಗಾರನಂತಾಗಲಿ ಪರಿಗಣಿಸಿರಿ.


“ಕಪೆರ್ನೌಮೇ, ನೀನು ಪರಲೋಕಕ್ಕೆ ಎತ್ತಲ್ಪಡುವುದಾಗಿ ಯೋಚಿಸುವಿಯೋ? ಇಲ್ಲ! ನೀನು ಪಾತಾಳಕ್ಕೆ ಇಳಿಯುವೆ. ನಾನು ನಿನ್ನಲ್ಲಿ ಅನೇಕ ಅದ್ಭುತಕಾರ್ಯಗಳನ್ನು ನಡೆಸಿದೆ. ಸೊದೋಮಿನಲ್ಲಿ ಆ ಅದ್ಭುತಕಾರ್ಯಗಳನ್ನು ನಡೆಸಿದ್ದರೆ ಆ ಜನರು ಪಾಪಮಾಡುವುದನ್ನು ನಿಲ್ಲಿಸಿಬಿಡುತ್ತಿದ್ದರು ಮತ್ತು ಇಂದಿನವರೆಗೂ ಅದು ಪಟ್ಟಣವಾಗಿಯೇ ಉಳಿದಿರುತ್ತಿತ್ತು.


ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಹೀಗಿವೆ: ಸೀಮೋನ (ಪೇತ್ರನೆಂದು ಕರೆಯುತ್ತಾರೆ) ಮತ್ತು ಇವನ ಸಹೋದರ ಅಂದ್ರೆಯ, ಜೆಬೆದಾಯನ ಮಗನಾದ ಯಾಕೋಬ, ಅವನ ಸಹೋದರ ಯೋಹಾನ,


ಅವರು ನನ್ನ ಬಗ್ಗೆ ಬಹಿರಂಗ ಸ್ಥಳಗಳಲ್ಲಿ ಮಾತಾಡುವರು. ಕುಡುಕರು ನನ್ನ ವಿಷಯದಲ್ಲಿ ಹಾಡನ್ನು ರಚಿಸುವರು.


ನಾನು ನಿನ್ನನ್ನು ಖಂಡಿತವಾಗಿಯೂ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಖಂಡಿತವಾಗಿಯೂ ಹೆಚ್ಚಿಸುವೆನು; ನಿನ್ನ ಸಂತತಿಯವರನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದ ಮರಳಿನಂತೆಯೂ ಅಸಂಖ್ಯಾತರನ್ನಾಗಿ ಮಾಡುವೆನು. ಅವರು ತಮ್ಮ ಶತ್ರುಗಳ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.


ಏಳನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳು ಉಂಟಾದವು. ಆ ಶಬ್ದಗಳು ಹೀಗೆ ಹೇಳಿದವು: “ಈ ಲೋಕದ ರಾಜ್ಯವು ಈಗ ನಮ್ಮ ಪ್ರಭುವಿನ ಮತ್ತು ಆತನವನಾಗಿರುವ ಕ್ರಿಸ್ತನ ರಾಜ್ಯವಾಗಿ ಮಾರ್ಪಾಟಾಯಿತು. ಆತನು ಯುಗಯುಗಾಂತರಗಳಲ್ಲಿಯೂ ಆಳುವನು.”


“ಮರಣವೇ, ನಿನ್ನ ಜಯವೆಲ್ಲಿ? ಮರಣವೇ, ಕೇಡುಮಾಡುವ ನಿನ್ನ ಶಕ್ತಿ ಎಲ್ಲಿ?”


ನಾನು ವೃದ್ಧನಾಗುವ ತನಕ ಬದುಕುವೆನೆಂದು ನಾನು ನನ್ನೊಳಗೆ ಅಂದುಕೊಂಡಿದ್ದೆನು. ಆದರೆ ನಾನು ಮರಣದ್ವಾರದ ಮೂಲಕ ಹೋಗುವ ಸಮಯ ಬಂತು. ನನ್ನ ಜೀವಮಾನವೆಲ್ಲ ಅಲ್ಲಿ ಕಳೆಯುವೆನು.


ಆತನ ಜನರನ್ನು ಆಳುವ ನ್ಯಾಯಾಧಿಪತಿಗಳಿಗೆ ಯೆಹೋವನು ಜ್ಞಾನವನ್ನು ಕೊಡುವನು. ಪುರದ್ವಾರದಲ್ಲಿ ಯುದ್ಧಮಾಡುವ ಆತನ ಜನರಿಗೆ ಯೆಹೋವನು ಬಲವನ್ನು ಕೊಡುವನು.


ಆ ಜನರು ಊಟವನ್ನು ನಿರಾಕರಿಸಿದ್ದರಿಂದ ಮರಣಾವಸ್ಥೆಗೆ ಬಂದರು.


ರಾಜನು ತನ್ನ ಜನರಿಗೆ, “ನೀವು ಉತ್ತಮವೆಂದು ಯೋಚಿಸಿದ ಕಾರ್ಯವನ್ನು ನಾನು ಮಾಡುತ್ತೇನೆ” ಎಂದು ಹೇಳಿದನು. ಆಗ ರಾಜನು ಊರಬಾಗಿಲಿನ ಪಕ್ಕದಲ್ಲಿ ನಿಂತುಕೊಂಡನು. ಸೈನ್ಯವು ಹೊರಗೆ ಹೋಯಿತು. ಅವರು ನೂರು ಮತ್ತು ಒಂದು ಸಾವಿರ ಮಂದಿಯ ಗುಂಪುಗಳಾಗಿ ಹೋದರು. “ಯುವಕನಾದ ಅಬ್ಷಾಲೋಮನಿಗೆ ಕರುಣೆ ತೋರಿಸಿರಿ!”


ತನ್ನ ಬತ್ತಳಿಕೆಯಲ್ಲಿ ಗಂಡುಮಕ್ಕಳನ್ನು ತುಂಬುವವನು ಭಾಗ್ಯವಂತನಾಗಿದ್ದಾನೆ. ಅವನಿಗೆ ಸೋಲೇ ಇಲ್ಲ. ಅವನ ಗಂಡುಮಕ್ಕಳು ಅವನ ಪರವಾಗಿಯೂ ಅವನ ಶತ್ರುಗಳ ವಿರೋಧವಾಗಿಯೂ ನ್ಯಾಯಸ್ಥ್ಥಾನಗಳಲ್ಲಿ ವಾದಿಸುವರು.


ನನ್ನ ಜೀವಮಾನವೆಲ್ಲಾ ನನಗೆ ಅನೇಕ ಶತ್ರುಗಳಿದ್ದರು. ಆದರೆ ಅವರೆಂದೂ ಗೆಲ್ಲಲಿಲ್ಲ.


ನಾನು ಸಮುದ್ರದ ತಳದಲ್ಲಿದ್ದೆನು. ಅಲ್ಲಿಂದ ಪರ್ವತಗಳು ಉಗಮವಾಗುತ್ತವೆ. ‘ನಾನು ಈ ಸೆರೆಮನೆಯಲ್ಲಿ ಎಂದೆಂದಿಗೂ ಬಂಧಿತನಾದೆನು’ ಎಂದು ನೆನಸಿದೆನು. ಆದರೆ ನನ್ನ ದೇವರಾದ ಯೆಹೋವನು ಸಮಾಧಿಯಿಂದ ನನ್ನನ್ನು ಹೊರತಂದನು. ಯೆಹೋವನೇ ನೀನು ಪುನಃ ನನಗೆ ಜೀವ ಕೊಟ್ಟೆ.


ಗಲಿಲಾಯ ಸರೋವರದ ತೀರದಲ್ಲಿ ಯೇಸು ತಿರುಗಾಡುತ್ತಾ ಇದ್ದನು. ಆತನು ಸೀಮೋನ (ಈತನನ್ನೇ ಪೇತ್ರ ಎಂದು ಕರೆಯಲಾಯಿತು.) ಮತ್ತು ಸೀಮೋನನ ಸಹೋದರನಾದ ಅಂದ್ರೆಯ ಎಂಬ ಇಬ್ಬರು ಸಹೋದರರನ್ನು ಕಂಡನು. ಬೆಸ್ತರಾಗಿದ್ದ ಇವರಿಬ್ಬರು ಅಂದು ಸರೋವರದ ತೀರದಲ್ಲಿ ಬಲೆ ಹಾಕಿ ಮೀನು ಹಿಡಿಯುತ್ತಿದ್ದರು.


“ನನ್ನ ಈ ಮಾತುಗಳನ್ನು ಕೇಳಿ ಅವುಗಳಿಗೆ ವಿಧೇಯನಾಗಿರುವ ಪ್ರತಿಯೊಬ್ಬನೂ ತನ್ನ ಮನೆಯನ್ನು ಬಂಡೆಯ ಮೇಲೆ ಕಟ್ಟಿದ ಬುದ್ಧಿವಂತನಿಗೆ ಹೋಲಿಕೆಯಾಗಿದ್ದಾನೆ.


ಆದ್ದರಿಂದ ನಿಮ್ಮ ವಿಷಯದಲ್ಲಿಯೂ ಪವಿತ್ರಾತ್ಮನು ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿಯೂ ಎಚ್ಚರಿಕೆಯಿಂದಿರಿ. ದೇವರು ತನ್ನ ಸ್ವಂತ ರಕ್ತದಿಂದ ಕೊಂಡುಕೊಂಡಿರುವ ಸಭೆಗೆ ನೀವು ಕುರುಬರಾಗಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು