Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 16:20 - ಪರಿಶುದ್ದ ಬೈಬಲ್‌

20 ಬಳಿಕ ಯೇಸು ತನ್ನ ಶಿಷ್ಯರಿಗೆ, ತಾನು ಕ್ರಿಸ್ತನೆಂಬುದನ್ನು ಯಾರಿಗೂ ಹೇಳಕೂಡದೆಂದು ಎಚ್ಚರಿಕೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಗ ಆತನು, ನಾನು ಕ್ರಿಸ್ತನಾಗಿದ್ದೆನೆಂಬುದನ್ನು ಯಾರಿಗೂ ಖಂಡಿತವಾಗಿ ಹೇಳಬೇಡಿರಿ ಎಂದು ತನ್ನ ಶಿಷ್ಯರಿಗೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅನಂತರ ಯೇಸು ತಮ್ಮ ಶಿಷ್ಯರಿಗೆ ತಾವು ‘ಅಭಿಷಿಕ್ತರಾದ ಲೋಕೋದ್ಧಾರಕ’ ಎಂಬುದನ್ನು ಯಾರಿಗೂ ಹೇಳಕೂಡದೆಂದು ಕಟ್ಟಪ್ಪಣೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆಗ ಆತನು - ನಾನು ಕ್ರಿಸ್ತನಾಗಿದ್ದೇನೆಂಬದನ್ನು ಯಾರಿಗೂ ಹೇಳಬೇಡಿರಿ ಎಂದು ಶಿಷ್ಯರಿಗೆ ಖಂಡಿತವಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ತರುವಾಯ ಯೇಸು, ತಾನೇ ಕ್ರಿಸ್ತ ಎಂಬುದನ್ನು ಯಾರಿಗೂ ಹೇಳಬಾರದೆಂದು ತಮ್ಮ ಶಿಷ್ಯರಿಗೆ ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಮಾನಾ ಜೆಜುನ್ ಅಪ್ನಾಚ್ಯಾ ಶಿಸಾಕ್ನಿ ಮಿಯಾಚ್ ಕ್ರಿಸ್ತ್ ಮನುನ್ ಕೊನಾಕ್‍ಬಿ ಸಾಂಗುನಕಾಸಿ ಮನುನ್ ತಾಕಿತ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 16:20
16 ತಿಳಿವುಗಳ ಹೋಲಿಕೆ  

ಯೇಸು ತನ್ನ ಶಿಷ್ಯರಿಗೆ, “ನಾನು ಯಾರೆಂಬುದನ್ನು ಯಾರಿಗೂ ಹೇಳಬೇಡಿ” ಎಂದು ಹೇಳಿದನು.


ಈ ವಿಷಯವನ್ನು ಯಾರಿಗೂ ಹೇಳಬಾರದೆಂದು ಯೇಸು ಅವರನ್ನು ಎಚ್ಚರಿಸಿದನು.


ಮೊದಲನೆಯದಾಗಿ, ಅವನು ತನ್ನ ಅಣ್ಣನಾದ ಸೀಮೋನನನ್ನು ಕಾಣಲು ಹೋಗಿ ಅವನಿಗೆ, “ನಾವು ಮೆಸ್ಸೀಯನನ್ನು ಕಂಡುಕೊಂಡೆವು” ಎಂದು ಹೇಳಿದನು. (“ಮೆಸ್ಸೀಯ” ಅಂದರೆ “ಕ್ರಿಸ್ತನು” ಎಂದರ್ಥ.)


ಬೆಟ್ಟದಿಂದ ಇಳಿದು ಬರುತ್ತಿರುವಾಗ ಯೇಸು ತನ್ನ ಶಿಷ್ಯರಿಗೆ, “ನೀವು ಬೆಟ್ಟದ ಮೇಲೆ ಕಂಡ ದರ್ಶನವನ್ನು ಈಗ ಯಾರಿಗೂ ಹೇಳದೆ ಮನುಷ್ಯಕುಮಾರನು ಸತ್ತು ಜೀವಂತವಾಗಿ ಎದ್ದುಬಂದ ಮೇಲೆ ತಿಳಿಸಿರಿ” ಎಂದು ಆಜ್ಞಾಪಿಸಿದನು.


ಆ ವಾಣಿ ಆದಮೇಲೆ ಅವರು ಯೇಸುವನ್ನು ಮಾತ್ರ ಕಂಡರು. ಪೇತ್ರ, ಯಾಕೋಬ, ಯೋಹಾನರು ತಾವು ಕಂಡ ಈ ಸಂಗತಿಗಳಲ್ಲಿ ಒಂದನ್ನಾದರೂ ಆ ದಿವಸಗಳಲ್ಲಿ ಯಾರಿಗೂ ತಿಳಿಸದೆ ಮೌನವಾಗಿದ್ದರು.


ಯೇಸು ಅವನಿಗೆ, “ಇದು ಹೇಗಾಯಿತೆಂಬುದನ್ನು ಯಾರಿಗೂ ಹೇಳಬೇಡ. ಈಗ ನೀನು ಹೋಗಿ ಯಾಜಕನಿಗೆ ನಿನ್ನ ಮೈಯನ್ನು ತೋರಿಸು. ಗುಣಹೊಂದಿದವರು ಮೋಶೆಯ ಆಜ್ಞೆಗನುಸಾರವಾಗಿ ಕೊಡತಕ್ಕ ಕಾಣಿಕೆಯನ್ನು ಅರ್ಪಿಸು. ನೀನು ಗುಣವಾದದ್ದಕ್ಕೆ ಅದು ಸಾಕ್ಷಿಯಾಗಿರುವುದು” ಎಂದು ಹೇಳಿದನು.


ಯೇಸುವೇ ಕ್ರಿಸ್ತನೆಂದು ನಂಬುವವರು ದೇವರ ಮಕ್ಕಳಾಗಿದ್ದಾರೆ. ತಂದೆಯನ್ನು (ದೇವರನ್ನು) ಪ್ರೀತಿಸುವವನು ತಂದೆಯ ಮಕ್ಕಳನ್ನೂ ಪ್ರೀತಿಸುತ್ತಾನೆ.


ಆದ್ದರಿಂದ ಸುಳ್ಳು ಹೇಳುವವನು ಯಾರು? ಯೇಸುವನ್ನು ಕ್ರಿಸ್ತನಲ್ಲವೆಂದು ಹೇಳುವವನೇ ಸುಳ್ಳುಗಾರ. ಅವನು ಕ್ರಿಸ್ತನ ವೈರಿಯಾಗಿದ್ದಾನೆ. ಅವನು ತಂದೆಯನ್ನಾಗಲಿ (ದೇವರು), ಆತನ ಮಗನನ್ನಾಗಲಿ (ಕ್ರಿಸ್ತನು) ನಂಬುವುದಿಲ್ಲ.


“ಆದ್ದರಿಂದ ಯೆಹೂದ್ಯರೆಲ್ಲರೂ ಇದನ್ನು ನಿಜವಾಗಿಯೂ ತಿಳಿದುಕೊಳ್ಳಬೇಕು. ದೇವರು ಯೇಸುವನ್ನು ಪ್ರಭುವನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆ. ನೀವು ಶಿಲುಬೆಗೇರಿಸಿದ ವ್ಯಕ್ತಿಯೇ ಆತನು!”


ಆದರೆ ಆತನೇ ಕ್ರಿಸ್ತನೆಂದೂ ದೇವರ ಮಗನೆಂದೂ ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕವಾಗಿ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದದೆ.


ಫಿಲಿಪ್ಪನು ನತಾನಿಯೇಲನನ್ನು ಕಂಡು ಅವನಿಗೆ, “ಯಾವನ ವಿಷಯದಲ್ಲಿ ಮೋಶೆಯು ಧರ್ಮಶಾಸ್ತ್ರದಲ್ಲಿ ಬರೆದನೋ ಮತ್ತು ಪ್ರವಾದಿಗಳು ಬರೆದರೋ, ಆತನನ್ನು ನಾವು ಕಂಡುಕೊಂಡೆವು. ಆತನ ಹೆಸರು ಯೇಸು. ಆತನು ಯೋಸೇಫನ ಮಗನು. ಆತನು ನಜರೇತಿನವನು” ಎಂದು ಹೇಳಿದನು.


ಯೇಸು ಮತ್ತು ಆ ಶಿಷ್ಯರು ಹಿಂತಿರುಗಿ ಬೆಟ್ಟದಿಂದ ಕೆಳಗಿಳಿದು ಬರುತ್ತಿರುವಾಗ, ಆತನು ಅವರಿಗೆ, “ನೀವು ಬೆಟ್ಟದ ಮೇಲೆ ನೋಡಿದ ಸಂಗತಿಗಳ ಬಗ್ಗೆ ಯಾರಿಗೂ ಹೇಳಬೇಡಿ. ಮನುಷ್ಯಕುಮಾರನು ಸತ್ತು ಜೀವಂತವಾಗಿ ಎದ್ದುಬರುವವರೆಗೆ ಕಾದುಕೊಂಡಿರಿ” ಎಂದು ಆಜ್ಞಾಪಿಸಿದನು.


ಯಾಕೋಬನು ಯೋಸೇಫನ ತಂದೆ. ಯೋಸೇಫನು ಮರಿಯಳ ಗಂಡ. ಮರಿಯಳು ಯೇಸುವಿನ ತಾಯಿ. ಯೇಸುವನ್ನು ಕ್ರಿಸ್ತ ನೆಂದು ಕರೆಯುತ್ತಿದ್ದರು.


ಸೀಮೋನ್ ಪೇತ್ರನು, “ನೀನೇ ಬರಬೇಕಾಗಿರುವ ಕ್ರಿಸ್ತನು. ನೀನೇ ಜೀವಸ್ವರೂಪನಾದ ದೇವರ ಮಗನು” ಎಂದು ಉತ್ತರಕೊಟ್ಟನು.


ಈ ದಿನ ನಿಮಗೋಸ್ಕರ ದಾವೀದನ ಊರಿನಲ್ಲಿ ರಕ್ಷಕನು ಜನಿಸಿದ್ದಾನೆ. ಆತನೇ ಪ್ರಭುವಾದ ಕ್ರಿಸ್ತನು.


ಮಾರ್ಥಳು, “ಹೌದು ಪ್ರಭುವೇ, ನೀನು ದೇವರ ಮಗನಾದ ಕ್ರಿಸ್ತನೆಂದು ನಾನು ನಂಬುವೆ. ಈ ಲೋಕಕ್ಕೆ ಬರಬೇಕಾಗಿದ್ದವನು ನೀನೇ” ಎಂದು ಉತ್ತರಕೊಟ್ಟಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು