Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 16:28 - ಪರಿಶುದ್ದ ಬೈಬಲ್‌

28 ನಾನು ನಿಮಗೆ ಸತ್ಯವನ್ನೇ ಹೇಳುತ್ತೇನೆ. ಈಗ ಇಲ್ಲಿ ನಿಂತಿರುವ ಕೆಲವರು, ಮನುಷ್ಯಕುಮಾರನು ತನ್ನ ರಾಜ್ಯದೊಡನೆ ಬರುವುದನ್ನು ನೋಡುವ ತನಕ ಸಾಯುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 “ನಿಮಗೆ ನಿಜವಾಗಿ ಹೇಳುತ್ತೇನೆ ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಇಲ್ಲಿರುವವರಲ್ಲಿ ಕೆಲವರು ನರಪುತ್ರನು ತನ್ನ ಸಾಮ್ರಾಜ್ಯದಲ್ಲಿ ಪ್ರತ್ಯಕ್ಷನಾಗುವುದನ್ನು ಕಾಣುವುದಕ್ಕೆ ಮುನ್ನ ಸಾವನ್ನು ಸವಿಯುವುದಿಲ್ಲ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನಿಮಗೆ ನಿಜವಾಗಿ ಹೇಳುತ್ತೇನೆ, ಇಲ್ಲಿ ನಿಂತವರೊಳಗೆ ಕೆಲವರು, ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವ ತನಕ ಮರಣಹೊಂದುವದಿಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 “ನಿಮಗೆ ನಿಜವಾಗಿ ಹೇಳುತ್ತೇನೆ: ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಪುತ್ರನಾದ ನಾನು ನನ್ನ ರಾಜ್ಯದಲ್ಲಿ ಬರುವುದನ್ನು ಕಾಣುವವರೆಗೆ ಮರಣವನ್ನು ಹೊಂದುವುದೇ ಇಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಮಿಯಾ ತುಮ್ಕಾ ಖರೆಚ್ ಸಾಂಗ್ತಾ, ಹಿತ್ತೆ ಹೊತ್ತೆ ಉಲ್ಲೆ ಜಾನಾ ಮಾನ್ಸಾಚೊ ಲೆಕ್ ಸಗ್ಳ್ಯಾಂಚೊ ರಾಜಾ ಹೊವ್ನ್ ಯೆತಲೆ ಬಗಟ್ಲ್ಯಾ ಶಿವಾಯ್ ಮರಿನ್ಯಾತ್. ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 16:28
25 ತಿಳಿವುಗಳ ಹೋಲಿಕೆ  

ನಾನು ಸತ್ಯವನ್ನು ಹೇಳುತ್ತೇನೆ. ಇಲ್ಲಿ ನಿಂತಿರುವ ಕೆಲವರು ತಾವು ಸಾಯುವುದಕ್ಕಿಂತ ಮೊದಲು ದೇವರ ರಾಜ್ಯವನ್ನು ನೋಡುವರು” ಎಂದು ಹೇಳಿದನು.


ಆಮೇಲೆ ಯೇಸು ಜನರಿಗೆ, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಇಲ್ಲಿ ನಿಂತಿರುವ ನಿಮ್ಮಲ್ಲಿ ಕೆಲವು ಜನರು ತಾವು ಸಾಯುವುದಕ್ಕೆ ಮುಂಚೆ ದೇವರ ರಾಜ್ಯವು ಅಧಿಕಾರದೊಡನೆ ಬರುವುದನ್ನು ನೋಡುತ್ತಾರೆ” ಎಂದು ಹೇಳಿದನು.


ಯೆಹೂದ್ಯರು ಆತನಿಗೆ, “ನಿನ್ನೊಳಗೆ ದೆವ್ವವಿದೆ ಎಂದು ಈಗ ನಮಗೆ ತಿಳಿಯಿತು! ಅಬ್ರಹಾಮನು ಮತ್ತು ಪ್ರವಾದಿಗಳು ಸಹ ಸತ್ತುಹೋದರು. ಆದರೆ ‘ನನ್ನ ಉಪದೇಶಕ್ಕೆ ವಿಧೇಯನಾಗುವವನು ಎಂದಿಗೂ ಸಾಯುವುದಿಲ್ಲ’ ಎಂದು ನೀನು ಹೇಳುತ್ತಿರುವೆ.


ಯೇಸು, “ಹೌದು, ನೀನು ಹೇಳಿದಂತೆ ಆತನೇ ನಾನು. ಆದರೆ ನಿನಗೆ ಹೇಳುವುದೇನೆಂದರೆ, ಇನ್ನು ಮೇಲೆ ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ಕುಳಿತಿರುವುದನ್ನೂ ಆಕಾಶದ ಮೋಡಗಳ ಮೇಲೆ ಕುಳಿತು ಬರುವುದನ್ನೂ ನೀವು ಕಾಣುವಿರಿ” ಎಂದು ಹೇಳಿದನು.


ಒಂದು ಊರಿನಲ್ಲಿ ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಊರಿಗೆ ಹೋಗಿ. ಮನುಷ್ಯಕುಮಾರನು ಪುನಃ ಬರುವುದಕ್ಕಿಂತ ಮುಂಚೆ ನೀವು ಇಸ್ರೇಲರ ಊರುಗಳಿಗೆಲ್ಲಾ ಹೋಗುವುದನ್ನು ಮುಗಿಸಿರುವುದಿಲ್ಲ ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಪ್ರಭುವು ಕಳುಹಿಸುವ ಕ್ರಿಸ್ತನನ್ನು ನೋಡುವ ತನಕ ನೀನು ಸಾಯುವುದಿಲ್ಲ ಎಂದು ಪವಿತ್ರಾತ್ಮನು ಸಿಮೆಯೋನನಿಗೆ ತಿಳಿಸಿದ್ದನು.


“ಆಗ ಮನುಷ್ಯಕುಮಾರನು ಅಧಿಕಾರದಿಂದಲೂ ಮಹಾಮಹಿಮೆಯೊಡನೆಯೂ ಮೇಘಗಳಲ್ಲಿ ಬರುವುದನ್ನು ಜನರು ನೋಡುತ್ತಾರೆ.


ಕೇವಲ ಸ್ವಲ್ಪಕಾಲದವರೆಗೆ ಯೇಸುವು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಮಾಡಲ್ಪಟ್ಟನು. ಆದರೆ ನಾವೀಗ ವೈಭವ, ಗೌರವಗಳೆಂಬ ಕಿರೀಟ ಧರಿಸಿರುವ ಆತನನ್ನು ನೋಡುತ್ತೇವೆ. ಏಕೆಂದರೆ ದೇವರ ಕೃಪೆಯ ನಿಮಿತ್ತ ಆತನು ಎಲ್ಲರಿಗೋಸ್ಕರ ಸಂಕಟ ಅನುಭವಿಸಿ ಮರಣಹೊಂದಿದನು.


ಬಳಿಕ ಯೇಸು ಆಲಿವ್ ಗುಡ್ಡದ ಮೇಲೆ ಕುಳಿತುಕೊಂಡಿದ್ದಾಗ, ಶಿಷ್ಯರು ಪ್ರತ್ಯೇಕವಾಗಿ ಯೇಸುವಿನ ಬಳಿಗೆ ಬಂದು, “ಇವುಗಳೆಲ್ಲಾ ಯಾವಾಗ ಸಂಭವಿಸುತ್ತವೆ! ನೀನು ಈ ಲೋಕಕ್ಕೆ ಮತ್ತೊಮ್ಮೆ ಬರುವಾಗ ಮತ್ತು ಲೋಕದ ಸಮಾಪ್ತಿಯ ಸಮಯ ಬಂದಾಗ ಸೂಚನೆಗಾಗಿ ಏನು ಸಂಭವಿಸುವುದು? ನಮಗೆ ತಿಳಿಸು!” ಎಂದು ಕೇಳಿದರು.


ದೇವಕುಮಾರನು ಪರಲೋಕದಿಂದ ಬರುವುದನ್ನು ಎದುರುನೋಡುವುದಕ್ಕಾಗಿ ನೀವು ಹಾಗೆ ಮಾಡಿದಿರಿ. ದೇವರೇ ಆ ಕುಮಾರನನ್ನು ಸತ್ತವರೊಳಗಿಂದ ಜೀವಂತವಾಗಿ ಮೇಲಕ್ಕೆಬ್ಬಿಸಿದನು. ಆತನೇ ಯೇಸು. ಮುಂದೆ ಬರುವ ದೇವರ ಕೋಪದ ತೀರ್ಪಿನಿಂದ ನಮ್ಮನ್ನು ರಕ್ಷಿಸುವವನು ಆತನೇ.


“ಆದ್ದರಿಂದ ಯಾವಾಗಲೂ ಸಿದ್ಧವಾಗಿರಿ. ನಿಮ್ಮ ಪ್ರಭು ಬರುವ ದಿನ ನಿಮಗೆ ತಿಳಿಯದು.


ದೇವರು ತನ್ನ ಜನರಿಗೆ ಬೇಗನೆ ಸಹಾಯ ಮಾಡುತ್ತಾನೆ ಎಂದು ನಾನು ನಿಮಗೆ ಹೇಳುತ್ತೇನೆ. ಆದರೆ ಮನುಷ್ಯಕುಮಾರನು ಮತ್ತೆ ಬಂದಾಗ, ಜಗತ್ತಿನಲ್ಲಿ ನಂಬಿಕೆಯನ್ನು ಕಾಣುವನೋ?” ಎಂದನು.


ಯೇಸು ಅವನಿಗೆ, “ನರಿಗಳಿಗೆ ಗುಹೆಗಳಿವೆ, ಪಕ್ಷಿಗಳಿಗೆ ಗೂಡುಗಳಿವೆ. ಆದರೆ ಮನುಷ್ಯಕುಮಾರನಿಗೆ ತಲೆ ಇಡುವಷ್ಟು ಸ್ಥಳವೂ ಇಲ್ಲ” ಅಂದನು.


ಯೇಸು ಫಿಲಿಪ್ಪನ ಸೆಜರೇಯ ಎಂಬ ಪ್ರಾಂತ್ಯಕ್ಕೆ ಹೋದನು. ಯೇಸು ತನ್ನ ಶಿಷ್ಯರಿಗೆ, “ಮನುಷ್ಯಕುಮಾರನಾದ ನನ್ನನ್ನು ಜನರು ಯಾರೆಂದು ಹೇಳುತ್ತಾರೆ?” ಎಂದು ಕೇಳಿದನು.


ಇಂದಿನ ಜನರು ಇನ್ನೂ ಜೀವಿಸಿರುವಾಗಲೇ ಈ ಎಲ್ಲಾ ಸಂಗತಿಗಳು ಸಂಭವಿಸುತ್ತವೆ!


ವ್ಯಭಿಚಾರಿಣಿಯಂತಿರುವ ಈ ಕೆಟ್ಟ ಸಂತತಿಯವರಲ್ಲಿ ಯಾವನಾದರೂ ನನಗೂ ನನ್ನ ಉಪದೇಶಕ್ಕೂ ನಾಚಿಕೊಂಡರೆ, ಮನುಷ್ಯಕುಮಾರನಾದ ನಾನು ನನ್ನ ತಂದೆಯ ಮಹಿಮೆಯೊಂದಿಗೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವ ಸಮಯದಲ್ಲಿ ಅವನ ಬಗ್ಗೆ ನಾಚಿಕೆಪಡುವೆನು” ಎಂದು ಹೇಳಿದನು.


ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನ್ನ ವಾಕ್ಯಕ್ಕೆ ವಿಧೇಯನಾಗುವವನು ಎಂದಿಗೂ ಸಾಯುವುದಿಲ್ಲ” ಎಂದು ಉತ್ತರಕೊಟ್ಟನು.


ಯೇಸು, “ನಾನು ಬರುವ ತನಕ ಅವನು ಜೀವದಿಂದ ಇರಬೇಕೆಂಬುದು ನನ್ನ ಇಷ್ಟವಾಗಿದ್ದರೆ ಅದರಿಂದ ನಿನಗೇನು? ನೀನು ನನ್ನನ್ನು ಹಿಂಬಾಲಿಸು!” ಎಂದು ಉತ್ತರಕೊಟ್ಟನು.


“ಗಲಿಲಾಯದವರೇ, ಏಕೆ ಆಕಾಶವನ್ನೇ ನೋಡುತ್ತಾ ನಿಂತುಕೊಂಡಿದ್ದೀರಿ? ಯೇಸು ನಿಮ್ಮ ಕಣ್ಣೆದುರಿನಲ್ಲಿ ಪರಲೋಕಕ್ಕೆ ಹೇಗೆ ಏರಿ ಹೋದನೋ ಅದೇ ರೀತಿಯಲ್ಲಿ ಹಿಂತಿರುಗಿ ಬರುತ್ತಾನೆ” ಎಂದು ಹೇಳಿದರು.


ಆದರೆ ಪ್ರತಿಯೊಬ್ಬನು ಕ್ರಮಬದ್ಧ ರೀತಿಯಲ್ಲಿ ಜೀವಂತವಾಗಿ ಎದ್ದುಬರುವನು. ಮೊಟ್ಟಮೊದಲನೆಯದಾಗಿ ಕ್ರಿಸ್ತನೇ ಎದ್ದುಬಂದನು. ಕ್ರಿಸ್ತನು ಮತ್ತೆ ಬರುವಾಗ ಕ್ರಿಸ್ತನಿಗೆ ಸೇರಿದ ಜನರು ಜೀವಂತವಾಗಿ ಎದ್ದುಬರುವರು.


ಸಹೋದರ ಸಹೋದರಿಯರೇ, ತಾಳ್ಮೆಯಿಂದಿರಿ, ಪ್ರಭುವಾದ ಯೇಸು ಪ್ರತ್ಯಕ್ಷನಾಗುತ್ತಾನೆ. ಆದ್ದರಿಂದ ಅಲ್ಲಿಯವರೆಗೆ ತಾಳ್ಮೆಯಿಂದಿರಿ. ತನ್ನ ಅಮೂಲ್ಯ ಬೆಳೆಯು ಭೂಮಿಯಿಂದ ಬರುವ ತನಕ ರೈತನು ತಾಳ್ಮೆಯಿಂದ ಕಾಯುತ್ತಾನೆ. ಮೊದಲ ಹಾಗೂ ಕೊನೆಯ ಮಳೆಯು ತನ್ನ ಬೆಳೆಯ ಮೇಲೆ ಸುರಿಯುವ ತನಕ ರೈತನು ತಾಳ್ಮೆಯಿಂದ ಕಾದಿರುತ್ತಾನೆ.


ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಶಕ್ತಿಯ ಕುರಿತಾಗಿ ಮತ್ತು ಆತನ ಬರುವಿಕೆಯ ಕುರಿತಾಗಿ ನಿಮಗೆ ತಿಳಿಸಿದ್ದೇವೆ. ಆ ಸಂಗತಿಗಳು ಜನರಿಂದ ಕಲ್ಪಿತವಾದ ಜಾಣ್ಮೆಯ ಕಥೆಗಳಲ್ಲ. ಯೇಸುವಿನ ಮಹಿಮೆಯನ್ನು ನಾವು ಕಣ್ಣಾರೆ ಕಂಡಿದ್ದೇವೆ.


ಹೌದು, ನನ್ನ ಪ್ರಿಯ ಮಕ್ಕಳೇ, ಆತನಲ್ಲಿಯೇ ನೆಲೆಗೊಂಡಿರೋಣ. ನಾವು ಹೀಗೆ ಮಾಡಿದರೆ, ಕ್ರಿಸ್ತನು ಮರಳಿ ಬರುವ ದಿನದಂದು ನಾವು ಭಯಪಡಬೇಕಾಗಿಲ್ಲ; ಅಡಗಿಕೊಳ್ಳುವ ಅಗತ್ಯವಿರುವುದಿಲ್ಲ; ನಾಚಿಕೆಪಡುವ ಅಗತ್ಯವೂ ಇರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು