Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 16:4 - ಪರಿಶುದ್ದ ಬೈಬಲ್‌

4 ಕೆಟ್ಟವರಾದ ಮತ್ತು ಪಾಪಿಗಳಾದ ಜನರು ಸೂಚನೆಗಾಗಿ ಒಂದು ಅದ್ಭುತಕಾರ್ಯವನ್ನು ಅಪೇಕ್ಷಿಸುತ್ತಾರೆ. ಅವರಿಗೆ ಯೋನನಲ್ಲಾದ ಸೂಚಕಕಾರ್ಯವೊಂದೇ ಹೊರತು ಬೇರೆ ಯಾವ ಸೂಚಕಕಾರ್ಯವೂ ದೊರೆಯುವುದಿಲ್ಲ” ಎಂದು ಉತ್ತರಕೊಟ್ಟನು. ಬಳಿಕ ಯೇಸು ಆ ಸ್ಥಳವನ್ನು ಬಿಟ್ಟು ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ವ್ಯಭಿಚಾರಿಣಿಯಂತಿರುವ ಈ ದುಷ್ಟ ಸಂತತಿಯು ಸೂಚಕಕಾರ್ಯವನ್ನು ನೋಡಬೇಕೆಂದು ಹುಡುಕುತ್ತದೆ. ಆದರೆ ಯೋನನ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಇದಕ್ಕೆ ಸಿಕ್ಕುವುದಿಲ್ಲ” ಎಂದು ಉತ್ತರ ಕೊಟ್ಟನು. ತರುವಾಯ ಆತನು ಅವರನ್ನು ಬಿಟ್ಟು ಹೊರಟು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಈ ದುಷ್ಟ ಹಾಗೂ ಅಧರ್ಮ ಪೀಳಿಗೆ ಅದ್ಭುತಗಳನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವಲ್ಲದೆ ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು,” ಎಂದು ಹೇಳಿ ಅವರನ್ನು ಬಿಟ್ಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ವ್ಯಭಿಚಾರಿಣಿಯಂತಿರುವ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ನೋಡಬೇಕೆಂದು ಅಪೇಕ್ಷಿಸುತ್ತದೆ; ಆದರೆ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವದೂ ಇದಕ್ಕೆ ಸಿಕ್ಕುವದಿಲ್ಲ ಎಂದು ಉತ್ತರಕೊಟ್ಟು ಅವರನ್ನು ಬಿಟ್ಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ವ್ಯಭಿಚಾರಿಯಾದ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ, ಆದರೆ ಪ್ರವಾದಿ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಸಿಕ್ಕುವುದಿಲ್ಲ,” ಎಂದು ಹೇಳಿ, ಯೇಸು ಅವರನ್ನು ಬಿಟ್ಟು ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಹ್ಯಾ ಕಾಲಾಚಿ ದೆವಸ್ಪಾನ್‍ನಸಲ್ಲಿ ಅನಿ ಬುರ್ಶಿ ಲೊಕಾ! ಮಾಜೆಕ್ಡೆ ವಿಚಿತ್ರ್ ಕಾಮ್ ಇಚಾರ್‍ತ್ಯಾತ್? ನಾ, ಹೆ ಕರುನ್ ದಾಕ್ವುಕ್ ಹೊಯ್ನಾ, ತುಮ್ಕಾ ಎಕುಚ್ ಎಕ್ ವಿಚಿತ್ರ್ ದಿಲ್ಲೆ ಹಾಯ್ ತೆ ಜೊನಾಚ್ಯಾ ಜಿವನಾತ್ಲೆ ವಿಚಿತ್ರ್. ಮನುನ್ ಜಬಾಬ್ ದಿಲ್ಯಾನ್, ತೆಚೆಸಾಟ್ನಿ ತೆನಿ ತೆಂಕಾ ಥೈಚ್ ಸೊಡ್ಲ್ಯಾನ್ ಅನಿ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 16:4
15 ತಿಳಿವುಗಳ ಹೋಲಿಕೆ  

ಯೋನನು ಸಮುದ್ರದೊಳಗೆ ಬಿದ್ದಾಗ, ಅವನನ್ನು ನುಂಗಿಬಿಡಲು ಯೆಹೋವನು ಒಂದು ದೊಡ್ಡ ಮೀನಿಗೆ ಆಜ್ಞಾಪಿಸಿದನು. ಯೋನನು ಆ ಮೀನಿನ ಹೊಟ್ಟೆಯೊಳಗೆ ಮೂರು ಹಗಲು ಮೂರು ರಾತ್ರಿ ಇದ್ದನು.


ವ್ಯಭಿಚಾರಿಣಿಯಂತಿರುವ ಈ ಕೆಟ್ಟ ಸಂತತಿಯವರಲ್ಲಿ ಯಾವನಾದರೂ ನನಗೂ ನನ್ನ ಉಪದೇಶಕ್ಕೂ ನಾಚಿಕೊಂಡರೆ, ಮನುಷ್ಯಕುಮಾರನಾದ ನಾನು ನನ್ನ ತಂದೆಯ ಮಹಿಮೆಯೊಂದಿಗೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವ ಸಮಯದಲ್ಲಿ ಅವನ ಬಗ್ಗೆ ನಾಚಿಕೆಪಡುವೆನು” ಎಂದು ಹೇಳಿದನು.


ಆಗ ಯೇಸು ನಿಟ್ಟುಸಿರುಬಿಟ್ಟು ಅವರಿಗೆ, “ನೀವು ಸೂಚಕಕಾರ್ಯವನ್ನು ನೋಡಬಯಸುವುದೇಕೆ? ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮಗೆ ಯಾವ ಸೂಚಕಕಾರ್ಯವನ್ನೂ ತೋರಿಸಲಾಗುವುದಿಲ್ಲ” ಎಂದು ಹೇಳಿದನು.


ಫರಿಸಾಯರಿಂದ ದೂರವಾಗಿರಿ. ಅವರೇ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸಲು ಹೋಗುತ್ತಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಅವರಿಬ್ಬರೂ ಹಳ್ಳದಲ್ಲಿ ಬೀಳುವರು” ಎಂದು ಉತ್ತರಕೊಟ್ಟನು.


ಆದರೆ ಯೆಹೂದ್ಯರು ಪೌಲನ ಉಪದೇಶವನ್ನು ತಿರಸ್ಕರಿಸಿ ದೂಷಣೆ ಮಾಡಿದರು. ಆದ್ದರಿಂದ ಪೌಲನು ತನ್ನ ಬಟ್ಟೆಗಳ ಧೂಳನ್ನು ಝಾಡಿಸಿ ಯೆಹೂದ್ಯರಿಗೆ, “ನೀವು ರಕ್ಷಣೆ ಹೊಂದದಿದ್ದರೆ, ಅದು ನಿಮ್ಮ ಸ್ವಂತ ತಪ್ಪು. ನನ್ನಿಂದ ಸಾಧ್ಯವಾದದ್ದನ್ನೆಲ್ಲ ನಾನು ಮಾಡಿದ್ದೇನೆ. ಇನ್ನು ಮೇಲೆ ನಾನು ಯೆಹೂದ್ಯರಲ್ಲದ ಜನರ ಬಳಿಗೆ ಹೋಗುತ್ತೇನೆ!” ಎಂದು ಹೇಳಿದನು.


ಒಂದುವೇಳೆ ಇಸ್ರೇಲರಿಗೆ ಮಕ್ಕಳು ಹುಟ್ಟಿದರೂ ಪ್ರಯೋಜನವಿಲ್ಲ. ಯಾಕೆಂದರೆ ಆ ಮಕ್ಕಳನ್ನು ಅವರಿಂದ ತೆಗೆದುಬಿಡುವೆನು. ನಾನು ಅವರನ್ನು ತೊರೆದುಬಿಡುವೆನು. ಆಗ ಅವರಿಗೆ ಸಂಕಟದ ಮೇಲೆ ಸಂಕಟವು ಪ್ರಾಪ್ತಿಯಾಗುವದು.”


“ಅವನ ವಿಗ್ರಹಗಳೊಂದಿಗೆ ಎಫ್ರಾಯೀಮು ಸೇರಿರುತ್ತಾನೆ. ಆದ್ದರಿಂದ ಅವನನ್ನು ಸುಮ್ಮನೆ ಬಿಟ್ಟುಬಿಡು.


ಪೇತ್ರನು ಇನ್ನೂ ಅನೇಕ ಮಾತುಗಳಿಂದ ಅವರನ್ನು ಎಚ್ಚರಿಸಿ, “ಈ ದುಷ್ಟ ಸಂತತಿಯಿಂದ ತಪ್ಪಿಸಿಕೊಳ್ಳಿ” ಎಂದು ಬೇಡಿಕೊಂಡನು.


“ಮಾಟಗಾರ್ತಿಯ ಮಕ್ಕಳೇ, ಇಲ್ಲಿಗೆ ಬನ್ನಿರಿ. ನಿಮ್ಮ ತಂದೆಯು ವ್ಯಭಿಚಾರದ ಅಪರಾಧವೆಸಗಿದ್ದಾನೆ. ನಿಮ್ಮ ತಾಯಿಯು ಸೂಳೆಯಾಗಿ ತನ್ನ ದೇಹವನ್ನು ಮಾರುತ್ತಿದ್ದಾಳೆ.


ಆಮಿತ್ತೈಯ ಮಗನಾದ ಯೋನನಿಗೆ ಯೆಹೋವನು ಹೇಳಿದ್ದೇನೆಂದರೆ,


ಯೇಸು ಮತ್ತು ಆತನ ಶಿಷ್ಯರು ಸರೋವರವನ್ನು ದಾಟಿ ಹೋದರು. ಆದರೆ ಶಿಷ್ಯರು ರೊಟ್ಟಿಯನ್ನು ತರಲು ಮರೆತುಬಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು