Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 17:20 - ಪರಿಶುದ್ದ ಬೈಬಲ್‌

20 ಅದಕ್ಕೆ ಯೇಸು, “ನಿಮ್ಮ ಅಲ್ಪವಿಶ್ವಾಸವೇ ಅದಕ್ಕೆ ಕಾರಣ. ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮ್ಮ ನಂಬಿಕೆಯು ಸಾಸಿವೆ ಕಾಳಿನಷ್ಟಿದ್ದರೂ, ಈ ಪರ್ವತಕ್ಕೆ ‘ಇಲ್ಲಿಂದ ಅಲ್ಲಿಗೆ ಹೋಗು’ ಎಂದು ನೀವು ಹೇಳಿದರೂ ಅದು ಹೋಗುತ್ತದೆ. ನಿಮಗೆ ಅಸಾಧ್ಯವಾಗದ ಕಾರ್ಯಗಳೇ ಇರದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆತನು ಅವರಿಗೆ, “ನಿಮ್ಮ ಅಪನಂಬಿಕೆಯಿಂದಲೇ ಆಗಲಿಲ್ಲ. ಸಾಸಿವೇ ಕಾಳಿನಷ್ಟು ನಂಬಿಕೆ ನಿಮಗೆ ಇರುವುದಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ನಿಮ್ಮ ಅಲ್ಪವಿಶ್ವಾಸವೇ ಅದಕ್ಕೆ ಕಾರಣ. ನಾನು ನಿಶ್ಚಯವಾಗಿ ಹೇಳುತ್ತೇನೆ: ನಿಮಗೆ ಸಾಸಿವೆ ಕಾಳಿನಷ್ಟು ವಿಶ್ವಾಸವಾದರೂ ಇದ್ದಲ್ಲಿ, ಈ ಬೆಟ್ಟಕ್ಕೆ ಇಲ್ಲಿಂದ ಆ ಸ್ಥಳಕ್ಕೆ ಹೋಗು, ಎಂದು ಹೇಳಿದರೆ ಅದು ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಿಮ್ಮ ನಂಬಿಕೆ ಕಡಿಮೆಯಾಗಿರುವದರಿಂದಲೇ ಆಗಲಿಲ್ಲ; ನಿಮಗೆ ಸತ್ಯವಾಗಿ ಹೇಳುತ್ತೇನೆ, ಸಾಸಿವೇಕಾಳಷ್ಟು ನಂಬಿಕೆ ನಿಮಗೆ ಇರುವದಾದರೆ ನೀವು ಈ ಬೆಟ್ಟಕ್ಕೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಯೇಸು ಅವರಿಗೆ, “ನಿಮ್ಮ ಅಪೂರ್ಣನಂಬಿಕೆಯೇ ಇದಕ್ಕೆ ಕಾರಣ. ಸಾಸಿವೆ ಕಾಳಿನಷ್ಟು ನಂಬಿಕೆ ನಿಮಗಿರುವುದಾದರೆ ನೀವು ಈ ಬೆಟ್ಟಕ್ಕೆ, ‘ಇಲ್ಲಿಂದ ಆ ಸ್ಥಳಕ್ಕೆ ಹೋಗು’ ಎಂದು ಹೇಳಿದರೆ ಅದು ಹೋಗುವುದು. ಯಾವುದೂ ನಿಮಗೆ ಅಸಾಧ್ಯವಾಗಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತನ್ನಾ ಜೆಜುನ್, “ವಿಶ್ವಾಸ್ ಕಮಿ ಹೊತ್ತ್ಯಾಕ್ ತುಮ್ಕಾ ಸೊಡ್ಸುಕ್ ಹೊವ್ಕ್ ನಾ. ಮಿಯಾ ತುಮ್ಕಾ ಖರೆಚ್ ಸಾಂಗ್ತಾ, ಎಕ್ ಸಾಸಾವಾಚ್ಯಾ ಭ್ಹಿಂಯಾ ತವ್ಡೊ ವಿಶ್ವಾಸ್ ತುಮ್ಕಾ ರ್‍ಹಾಲ್ಯಾರ್ ತುಮಿ ಹ್ಯಾ ಮಡ್ಡಿಕ್ ಹಿತ್ನಾ-ಥೈ ಜಾವ್ನ್ ರ್‍ಹಾ! ಮನುನ್ ಸಾಂಗಟ್ಲ್ಯಾರ್ ತಿ ಜಾತಾ, ತುಮಿ ಕಾಯ್ ಪಾಜೆ ತೆ ಕರುಕ್ ಹೊತಾ,” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 17:20
19 ತಿಳಿವುಗಳ ಹೋಲಿಕೆ  

ಪ್ರಭುವು ಅವರಿಗೆ ಹೀಗೆಂದನು: “ನಿಮ್ಮ ನಂಬಿಕೆ ಸಾಸಿವೆ ಕಾಳಷ್ಟು ದೊಡ್ಡದಾಗಿದ್ದರೆ, ನೀವು ಈ ಅತ್ತಿಮರಕ್ಕೆ, ‘ಇಲ್ಲಿಂದ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!’ ಎಂದು ಹೇಳಿದರೂ ಅದು ನಿಮಗೆ ವಿಧೇಯವಾಗುತ್ತದೆ.


ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಈ ಬೆಟ್ಟಕ್ಕೆ, ‘ನೀನು ಹೋಗಿ ಸಮುದ್ರದೊಳಗೆ ಬೀಳು’ ಎಂದು ಹೇಳಿ, ಸಂಶಯವನ್ನೇಪಡದೆ, ನೀವು ಹೇಳಿದ್ದು ಖಂಡಿತವಾಗಿ ನೆರವೇರುತ್ತದೆ ಎಂದು ನಂಬಿದರೆ, ದೇವರು ಅದನ್ನು ನಿಮಗಾಗಿ ಮಾಡುತ್ತಾನೆ.


ಯೇಸು ಅವರಿಗೆ, “ಜನರಿಗೆ ಅಸಾಧ್ಯವಾದ ಕಾರ್ಯಗಳನ್ನು ದೇವರು ಮಾಡಬಲ್ಲನು” ಎಂದು ಉತ್ತರಿಸಿದನು.


ದೇವರಿಗೆ ಯಾವುದೂ ಅಸಾಧ್ಯವಲ್ಲ,” ಎಂದು ಹೇಳಿದನು.


ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಸಂಶಯಪಡದೆ ನಂಬಿದರೆ ನಾನು ಈ ಮರಕ್ಕೆ ಮಾಡಿದಂತೆ ನೀವೂ ಮಾಡಲು ಸಾಧ್ಯ. ಅಲ್ಲದೆ ಇನ್ನೂ ಹೆಚ್ಚಾಗಿ ಮಾಡಲು ಸಾಧ್ಯ. ನೀವು ಈ ಬೆಟ್ಟಕ್ಕೆ, ‘ನೀನು ಹೋಗಿ ಸಮುದ್ರದಲ್ಲಿ ಬೀಳು’ ಎಂದು ಪೂರ್ಣ ನಂಬಿಕೆಯಿಂದ ಹೇಳಿದರೆ ಅಂತೆಯೇ ಸಂಭವಿಸುವುದು.


ಅದಕ್ಕೆ ಯೇಸು, “‘ನಿನಗೆ ಸಾಧ್ಯವಿರುವುದಾದರೆ’ ಎಂದು ನೀನು ಹೇಳುವುದೇಕೆ? ನಂಬಿಕೆಯಿಡುವ ವ್ಯಕ್ತಿಗೆ ಎಲ್ಲವೂ ಸಾಧ್ಯ” ಎಂದು ಹೇಳಿದನು.


ಪ್ರವಾದಿಸುವ ವರ ನನಗಿರಬಹುದು; ದೇವರ ರಹಸ್ಯ ಸಂಗತಿಗಳನ್ನೆಲ್ಲಾ ಮತ್ತು ಜ್ಞಾನವನ್ನೆಲ್ಲಾ ನಾನು ಅರ್ಥಮಾಡಿಕೊಂಡಿರಬಹುದು ಮತ್ತು ಬೆಟ್ಟಗಳನ್ನು ಚಲಿಸಬಲ್ಲಂಥ ಮಹಾನಂಬಿಕೆ ನನಗಿರಬಹುದು. ಇವುಗಳೆಲ್ಲಾ ನನ್ನಲ್ಲಿ ಇದ್ದರೂ ಪ್ರೀತಿಯು ಇಲ್ಲದಿದ್ದರೆ, ನಾನು ನಿಷ್ಪ್ರಯೋಜಕನಾಗಿದ್ದೇನೆ.


ನಂತರ ಯೇಸು ಜನರಿಗೆ ಮತ್ತೊಂದು ಸಾಮ್ಯವನ್ನು ಹೇಳಿದನು: “ಪರಲೋಕರಾಜ್ಯ ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬನು ಅದನ್ನು ತನ್ನ ಹೊಲದಲ್ಲಿ ಬಿತ್ತಿದನು.


ಯೇಸು ಮಾರ್ಥಳಿಗೆ, “ನಾನು ನಿನಗೆ ಹೇಳಿದ್ದನ್ನು ಜ್ಞಾಪಿಸಿಕೊಳ್ಳುವಿಯಾ? ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವೆ ಎಂದು ನಾನು ನಿನಗೆ ಹೇಳಿದೆನು” ಎಂದನು.


ದೇವರ ರಾಜ್ಯವು ಸಾಸಿವೆ ಕಾಳಿನಂತಿರುತ್ತದೆ. ನೀವು ಭೂಮಿಯಲ್ಲಿ ಬಿತ್ತುವ ಕಾಳುಗಳಲ್ಲಿ ಸಾಸಿವೆ ಕಾಳು ಅತ್ಯಂತ ಸಣ್ಣದಾಗಿದೆ.


ಆದ್ದರಿಂದ ದೇವರ ವಿಶ್ರಾಂತಿಯಲ್ಲಿ ಪ್ರವೇಶಿಸಲು ಆ ಜನರಿಗೆ ಅವಕಾಶ ದೊರೆಯಲಿಲ್ಲ. ಅವರಲ್ಲಿ ನಂಬಿಕೆ ಇಲ್ಲದಿದ್ದ ಕಾರಣವೇ ಅವರು ಪ್ರವೇಶಿಸಲಿಲ್ಲ.


ಯೇಸು, “ಅಯ್ಯೋ, ವಿಶ್ವಾಸವಿಲ್ಲದ ವಕ್ರಸಂತತಿಯೇ, ಇನ್ನೆಷ್ಟು ಕಾಲ ನಾನು ನಿಮ್ಮೊಂದಿಗಿರಬೇಕು? ಇನ್ನೆಷ್ಟು ಕಾಲ ನಾನು ನಿಮ್ಮನ್ನು ಸಹಿಸಿಕೊಳ್ಳಲಿ? ಆ ಬಾಲಕನನ್ನು ಇಲ್ಲಿಗೆ ಕರೆತನ್ನಿ” ಎಂದು ಉತ್ತರಕೊಟ್ಟನು.


ಒಬ್ಬನಿಗೆ ನಂಬಿಕೆಯನ್ನೂ ಮತ್ತೊಬ್ಬನಿಗೆ ಸ್ವಸ್ಥಪಡಿಸುವ ವರವನ್ನೂ ಕೊಡುತ್ತಾನೆ;


ಬೆಟ್ಟದಿಂದ ಇಳಿದು ಬರುತ್ತಿರುವಾಗ ಯೇಸು ತನ್ನ ಶಿಷ್ಯರಿಗೆ, “ನೀವು ಬೆಟ್ಟದ ಮೇಲೆ ಕಂಡ ದರ್ಶನವನ್ನು ಈಗ ಯಾರಿಗೂ ಹೇಳದೆ ಮನುಷ್ಯಕುಮಾರನು ಸತ್ತು ಜೀವಂತವಾಗಿ ಎದ್ದುಬಂದ ಮೇಲೆ ತಿಳಿಸಿರಿ” ಎಂದು ಆಜ್ಞಾಪಿಸಿದನು.


ಯೇಸು, “ನೀವು ಭಯಪಡುವುದೇಕೆ? ನಿಮ್ಮಲ್ಲಿ ಸಾಕಷ್ಟು ನಂಬಿಕೆಯಿಲ್ಲ” ಎಂದು ಉತ್ತರಿಸಿ ಎದ್ದುನಿಂತುಕೊಂಡು ಆ ದೊಡ್ಡ ಬಿರುಗಾಳಿಗೂ ಅಲೆಗಳಿಗೂ ಆಜ್ಞಾಪಿಸಿದನು. ಆ ಕೂಡಲೇ ಬಿರುಗಾಳಿ ನಿಂತುಹೋಯಿತು. ಸರೋವರ ಪ್ರಶಾಂತವಾಯಿತು.


ಆಗ ಶಿಷ್ಯರು ಪ್ರತ್ಯೇಕವಾಗಿ ಯೇಸುವಿನ ಬಳಿಗೆ ಬಂದು, “ಅವನನ್ನು ದೆವ್ವದಿಂದ ಬಿಡಿಸಲು ನಾವು ಪ್ರಯತ್ನಿಸಿದರೂ ನಮಗೇಕೆ ಸಾಧ್ಯವಾಗಲಿಲ್ಲ?” ಎಂದರು.


ಯೇಸು, “ದೇವರಲ್ಲಿ ನಂಬಿಕೆ ಇಡಿರಿ.


ಯೇಸು, “ಪೇತ್ರನೇ, ಬಾ” ಅಂದನು. ಕೂಡಲೆ ಪೇತ್ರನು ದೋಣಿಯಿಂದ ಇಳಿದು ಯೇಸುವಿನ ಬಳಿಗೆ ನೀರಿನ ಮೇಲೆ ನಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು