Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 17:23 - ಪರಿಶುದ್ದ ಬೈಬಲ್‌

23 ಅವರು ಆತನನ್ನು ಕೊಲ್ಲುವರು. ಆದರೆ ಮೂರನೆಯ ದಿನದಲ್ಲಿ ಆತನು ಮರಣದಿಂದ ಮೇಲೆದ್ದು ಬರುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವರು ಆತನನ್ನು ಕೊಲ್ಲುವರು, ಆದರೆ ಸತ್ತು ಮೂರನೆಯ ದಿನದಲ್ಲಿ ಆತನು ಜೀವಿತನಾಗಿ ಎಬ್ಬಿಸಲ್ಪಡುವನು” ಎಂದು ಹೇಳಿದನು. ಅದನ್ನು ಕೇಳಿ ಅವರು ಬಹಳ ದುಃಖಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅವರು ಆತನನ್ನು ಕೊಲ್ಲುವರು. ಆದರೆ ಮೂರನೆಯ ದಿನ ಆತನನ್ನು ಪುನರುತ್ಥಾನಗೊಳಿಸಲಾಗುವುದು,” ಎಂದರು. ಇದನ್ನು ಕೇಳಿ ಶಿಷ್ಯರು ತುಂಬ ವ್ಯಥೆಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವರು ಆತನನ್ನು ಕೊಲ್ಲುವರು; ಸತ್ತ ಮೂರನೆಯ ದಿನದಲ್ಲಿ ಆತನು ಜೀವಿತನಾಗಿ ಎಬ್ಬಿಸಲ್ಪಡುವನು ಎಂದು ಹೇಳಿದನು. ಅದನ್ನು ಕೇಳಿ ಅವರು ಬಹಳ ದುಃಖಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವರು ನನ್ನನ್ನು ಕೊಲ್ಲುವರು, ಆದರೆ ಮೂರನೆಯ ದಿನದಲ್ಲಿ ನಾನು ತಿರುಗಿ ಜೀವಿತನಾಗಿ ಎದ್ದು ಬರುವೆನು,” ಎಂದು ಹೇಳಿದರು. ಅದಕ್ಕೆ ಶಿಷ್ಯರು ಬಹಳ ದುಃಖಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ತೆನಿ ತೆಕಾ ಜಿವಾನಿ ಮಾರ್‍ತ್ಯಾತ್, ಖರೆ ತಿನ್ ದಿಸಾ ಹೊಲ್ಲ್ಯಾ ಮಾನಾ ತೊ ಝಿತ್ತೊ ಹೊವ್ನ್ ಉಟುನ್ ಯೆತಾ.” ಮನುನ್ ಸಾಂಗಟ್ಲ್ಯಾನ್. ತನ್ನಾ ಶಿಸಾಕ್ನಿ ಲೈ ಬೆಜಾರ್ ಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 17:23
18 ತಿಳಿವುಗಳ ಹೋಲಿಕೆ  

ಆ ಸಮಯದಲ್ಲಿ ಯೇಸು ತಾನು ಜೆರುಸಲೇಮಿಗೆ ಹೋಗಬೇಕೆಂದು ಮತ್ತು ಅಲ್ಲಿ ಯೆಹೂದ್ಯರ ಹಿರಿಯ ನಾಯಕರಿಂದಲೂ ಮಹಾಯಾಜಕರಿಂದಲೂ ಮತ್ತು ಧರ್ಮೋಪದೇಶಕರಿಂದಲೂ ತಾನು ಅನೇಕ ಕಷ್ಟಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಸತ್ತವರೊಳಗಿಂದ ಜೀವಂತವಾಗಿ ಎದ್ದುಬರಬೇಕಾಗಿದೆ ಎಂದು ತನ್ನ ಶಿಷ್ಯರಿಗೆ ವಿವರಿಸಿ ಹೇಳಿದನು.


ನಂತರ ಯೇಸು ತನ್ನ ಶಿಷ್ಯರಿಗೆ ಉಪದೇಶಿಸುತ್ತಾ “ಮನುಷ್ಯಕುಮಾರನು ಅನೇಕ ಕಷ್ಟಗಳನ್ನು ಅನುಭವಿಸಬೇಕಾಗುತ್ತದೆ. ಹಿರಿಯ ಯೆಹೂದ್ಯನಾಯಕರು, ಮಹಾಯಾಜಕರು ಮತ್ತು ಧರ್ಮೋಪದೇಶಕರು ಆತನನ್ನು ತಿರಸ್ಕರಿಸಿ ಕೊಲ್ಲುವರು. ಆದರೆ ಮೂರನೆಯ ದಿನದಲ್ಲಿ ಆತನು ಸತ್ತವರೊಳಗಿಂದ ಜೀವಂತವಾಗಿ ಎದ್ದುಬರುತ್ತಾನೆ” ಎಂದು ಹೇಳಿದನು.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ: “ಖಡ್ಗವೇ, ಕುರುಬನನ್ನು ಹೊಡೆ. ನನ್ನ ಸ್ನೇಹಿತನಿಗೆ ಹೊಡೆ. ಕುರುಬನನ್ನು ಹೊಡೆ. ಆಗ ಕುರಿಗಳು ಚದರಿಹೋಗುವವು. ಮತ್ತು ನಾನು ಆ ಚಿಕ್ಕವುಗಳನ್ನು ಶಿಕ್ಷಿಸುವೆನು.


ನಾನು ನಿಮಗೆ ಈ ಸಂಗತಿಗಳನ್ನೆಲ್ಲಾ ಹೇಳಿದ್ದರಿಂದ ನಿಮ್ಮ ಹೃದಯಗಳು ದುಃಖದಿಂದ ತುಂಬಿಹೋಗಿವೆ.


ಯೇಸು, “ಈ ದೇವಾಲಯವನ್ನು ಕೆಡವಿರಿ, ಮೂರು ದಿನಗಳಲ್ಲಿ ಅದನ್ನು ಮತ್ತೆ ಕಟ್ಟುತ್ತೇನೆ” ಎಂದು ಉತ್ತರಕೊಟ್ಟನು.


ಅರವತ್ತೆರಡು ವಾರಗಳ ತರುವಾಯ ಅಭಿಷಿಕ್ತನ ಕೊಲೆಯಾಗುವುದು. ಅವನು ಇಲ್ಲವಾಗುವನು. ಭವಿಷ್ಯತ್ತಿನ ನಾಯಕನ ಜನರು ನಗರವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು. ಆ ಅಂತ್ಯವು ಒಂದು ಪ್ರವಾಹದಂತೆ ಬರುವುದು. ಕೊನೆಯವರೆಗೂ ಯುದ್ಧ ನಡೆಯುವುದು. ಆ ಸ್ಥಳವನ್ನು ಸಂಪೂರ್ಣವಾಗಿ ನಾಶಮಾಡಬೇಕೆಂದು ದೇವರು ಆಜ್ಞಾಪಿಸಿದ್ದಾನೆ.


ಆತನು ಬಾಧೆಯನ್ನೂ ಹಿಂಸೆಯನ್ನೂ ಅನುಭವಿಸಿದನು. ಆದರೂ ಆತನು ಪ್ರತಿಭಟಿಸಲಿಲ್ಲ. ಕೊಯ್ಯಲು ಕೊಂಡೊಯ್ಯುವ ಕುರಿಮರಿಯಂತೆಯೂ ಉಣ್ಣೆಯನ್ನು ಕತ್ತರಿಸುವಾಗ ಮೌನವಾಗಿರುವ ಕುರಿಮರಿಯಂತೆಯೂ ಆತನು ಮೌನವಾಗಿದ್ದನು.


ನನ್ನ ಶಕ್ತಿಯು ಒಡೆದುಹೋದ ಮಡಿಕೆಯ ಒಣ ತುಂಡಿನಂತಿದೆ. ನನ್ನ ನಾಲಿಗೆಯು ಬಾಯಿ ಮೇಲ್ಭಾಗಕ್ಕೆ ಅಂಟಿಕೊಳ್ಳುತ್ತಿದೆ. ನೀನು ನನ್ನನ್ನು ಮಣ್ಣಿಗೆ ಸೇರಿಸಿರುವೆ.


ಯಾಕೆಂದರೆ, ನೀನು ನನ್ನ ಆತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ. ನಿನ್ನ ಪವಿತ್ರನನ್ನು ಸಮಾಧಿಯಲ್ಲಿ ಕೊಳೆಯಲು ಬಿಡುವುದಿಲ್ಲ.


ಬೆಟ್ಟದಿಂದ ಇಳಿದು ಬರುತ್ತಿರುವಾಗ ಯೇಸು ತನ್ನ ಶಿಷ್ಯರಿಗೆ, “ನೀವು ಬೆಟ್ಟದ ಮೇಲೆ ಕಂಡ ದರ್ಶನವನ್ನು ಈಗ ಯಾರಿಗೂ ಹೇಳದೆ ಮನುಷ್ಯಕುಮಾರನು ಸತ್ತು ಜೀವಂತವಾಗಿ ಎದ್ದುಬಂದ ಮೇಲೆ ತಿಳಿಸಿರಿ” ಎಂದು ಆಜ್ಞಾಪಿಸಿದನು.


ಅವರು ಮನುಷ್ಯಕುಮಾರನನ್ನು ಅಪಹಾಸ್ಯ ಮಾಡಿ, ಕೊರಡೆಗಳಿಂದ ಹೊಡೆದು, ಶಿಲುಬೆಗೇರಿಸುವರು. ಆದರೆ ಆತನು ಮರಣ ಹೊಂದಿದ ನಂತರ ಮೂರನೆಯ ದಿನದಂದು ಮತ್ತೆ ಜೀವಂತನಾಗಿ ಎದ್ದುಬರುವನು” ಎಂದು ಹೇಳಿದನು.


“ಸ್ವಾಮೀ, ಆ ಸುಳ್ಳುಗಾರನು ಬದುಕಿದ್ದಾಗ, ‘ಮೂರು ದಿನಗಳ ಬಳಿಕ ನಾನು ಪುನರುತ್ಥಾನ ಹೊಂದುತ್ತೇನೆ’ ಎಂದು ಹೇಳಿದ್ದು ನಮಗಿನ್ನೂ ನೆನಪಿದೆ.


ನಂತರ ಯೇಸು ಮತ್ತು ಆತನ ಶಿಷ್ಯರು ಆ ಸ್ಥಳದಿಂದ ಹೊರಟು ಗಲಿಲಾಯದ ಮೂಲಕ ಪ್ರಯಾಣ ಮಾಡಿದರು. ತಾವು ಎಲ್ಲಿದ್ದೇವೆಂಬುದು ಜನರಿಗೆ ತಿಳಿಯಬಾರದೆಂಬುದು ಯೇಸುವಿನ ಉದ್ದೇಶವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು