Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 17:24 - ಪರಿಶುದ್ದ ಬೈಬಲ್‌

24 ಯೇಸು ಮತ್ತು ಆತನ ಶಿಷ್ಯರು ಕಪೆರ್ನೌಮಿಗೆ ಹೋದರು. ದೇವಾಲಯಕ್ಕೆ ಯೆಹೂದ್ಯರಿಂದ ವಾರ್ಷಿಕ ತೆರಿಗೆ ವಸೂಲಿ ಮಾಡುವ ಕೆಲವರು ಪೇತ್ರನ ಬಳಿಗೆ ಬಂದು, “ನಿಮ್ಮ ಬೋಧಕನು ದೇವಾಲಯದ ವಾರ್ಷಿಕ ತೆರಿಗೆಯನ್ನು ಸಲ್ಲಿಸುವುದಿಲ್ಲವೋ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವರು ಕಪೆರ್ನೌಮಿಗೆ ಬಂದಾಗ ದೇವಾಲಯಕ್ಕಾಗಿ ತೆರಿಗೆಯನ್ನು ಸಂಗ್ರಹಿಸುವವರು ಪೇತ್ರನ ಬಳಿಗೆ ಬಂದು, “ನಿಮ್ಮ ಗುರುವು ದೇವಾಲಯದ ತೆರಿಗೆಯನ್ನು ಕಟ್ಟುವುದಿಲ್ಲವೇ” ಎಂದು ಕೇಳಲು, “ಹೌದು ಕಟ್ಟುವನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಯೇಸು ಮತ್ತು ಶಿಷ್ಯರು ಕಫೆರ್ನವುಮಿಗೆ ಹೋದರು. ದೇವಾಲಯದ ತೆರಿಗೆಯನ್ನು ವಸೂಲಿಮಾಡುತ್ತಿದ್ದವರು ಪೇತ್ರನ ಬಳಿಗೆ ಬಂದು, “ನಿಮ್ಮ ಗುರು ತೆರಿಗೆ ಕಟ್ಟುವುದಿಲ್ಲವೇ?” ಎಂದು ವಿಚಾರಿಸಿದರು. ಅದಕ್ಕೆ ಪೇತ್ರನು, “ಹೌದು, ಕಟ್ಟುತ್ತಾರೆ,” ಎಂದು ಉತ್ತರವಿತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವರು ಕಪೆರ್ನೌವಿುಗೆ ಬಂದಾಗ ದೇವಾಲಯಕ್ಕಾಗಿ ತೆರಿಗೆಯನ್ನು ಎತ್ತುವವರು ಪೇತ್ರನ ಬಳಿಗೆ ಬಂದು - ನಿಮ್ಮ ಬೋಧಕನು ದೇವಾಲಯದ ತೆರಿಗೆಯನ್ನು ಸಲ್ಲಿಸುವದಿಲ್ಲವೇ ಎಂದು ಕೇಳಲು - ಹೌದು, ಸಲ್ಲಿಸುವನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ತರುವಾಯ ಯೇಸು ಕಪೆರ್ನೌಮಿಗೆ ಬಂದಾಗ, ದೇವಾಲಯದ ತೆರಿಗೆಗಾಗಿ ಎರಡು ಬೆಳ್ಳಿ ನಾಣ್ಯಗಳನ್ನು ವಸೂಲಿಮಾಡುವವರು ಪೇತ್ರನ ಬಳಿಗೆ ಬಂದರು. ಅವರು ಪೇತ್ರನಿಗೆ, “ನಿಮ್ಮ ಬೋಧಕನು ತೆರಿಗೆ ಕಟ್ಟುವುದಿಲ್ಲವೋ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಜೆಜು ಅನಿ ತೆಚಿ ಶಿಸಾ ಕಪರ್‍ನವ್ ಮನ್ತಲ್ಯಾ ಗಾವಾಕ್ ಯೆಲ್ಲ್ಯಾ ತನ್ನಾ, ದೆವಾಚ್ಯಾ ಗುಡಿಚಿ ತೆರ್‍ಗಿ ವಸುಲ್ ಕರ್‍ತಲೆ ಪೆದ್ರುಕ್ಡೆ ಯೆಲೆ. ಅನಿ, ಗುರುಜಿ. ದೆವಾಚ್ಯಾ ಗುಡಿಚಿ ತೆರ್‍ಗಿ ಭರಿನಾ ಮನಿ ಕಾಯ್ ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 17:24
5 ತಿಳಿವುಗಳ ಹೋಲಿಕೆ  

ಇಪ್ಪತ್ತು ವರ್ಷ ಮತ್ತು ಅದಕ್ಕೆ ಮೇಲ್ಪಟ್ಟ ಎಲ್ಲಾ ಗಂಡಸರನ್ನು ಲೆಕ್ಕಿಸಲಾಯಿತು. ಅಲ್ಲಿ ಆರು ಲಕ್ಷದ ಮೂರು ಸಾವಿರದ ಐನೂರೈವತ್ತು ಮಂದಿ ಗಂಡಸರಿದ್ದರು ಮತ್ತು ಪ್ರತಿಯೊಬ್ಬನು ತಲಾ ಒಂದು ಬೆಕಾ ಬೆಳ್ಳಿಯನ್ನು ತೆರಿಗೆಯಾಗಿ ಕೊಡಬೇಕಾಯಿತು. (ಅಧಿಕೃತ ಅಳತೆಯ ಪ್ರಕಾರ ಒಂದು ಬೆಕಾ ಅಂದರೆ ಅರ್ಧ ಶೆಕೆಲ್.)


ಲೆಕ್ಕಿಸಲ್ಪಟ್ಟ ಪ್ರತಿಯೊಬ್ಬನು ಅಧಿಕೃತ ಅಳತೆಗನುಸಾರವಾಗಿರುವ ಅರ್ಧಶೆಕೆಲ್ ಕಪ್ಪಕಾಣಿಕೆಯನ್ನು ಕೊಡಬೇಕು. ಈ ಅರ್ಧಶೆಕೆಲ್ ಯೆಹೋವನಿಗೆ ಕಾಣಿಕೆಯಾಗಿರುತ್ತದೆ.


ಯೇಸು ಮತ್ತು ಆತನ ಶಿಷ್ಯರು ಕಪೆರ್ನೌಮಿಗೆ ಹೋದರು. ಅವರು ಒಂದು ಮನೆಯೊಳಗಿದ್ದಾಗ ಆತನು ತನ್ನ ಶಿಷ್ಯರಿಗೆ, “ಈ ದಿನ ನೀವು ದಾರಿಯಲ್ಲಿ ವಾದಮಾಡುತ್ತಿದ್ದುದ್ದನ್ನು ಕೇಳಿಸಿಕೊಂಡೆ. ನೀವು ಯಾವುದರ ಬಗ್ಗೆ ವಾದಮಾಡುತ್ತಿದ್ದಿರಿ?” ಎಂದನು.


“ದೇವಾಲಯವನ್ನು ನಡಿಸುವ ಖರ್ಚಿನ ಜವಾಬ್ದಾರಿಕೆಯನ್ನು ನಾವು ಹೊರುತ್ತೇವೆ. ನಾವು ಒಂದು ಬೆಳ್ಳಿನಾಣ್ಯವನ್ನು ಪ್ರತಿವರ್ಷ ನಮ್ಮ ದೇವರಿಗೆ ಕಾಣಿಕೆ ಕೊಡುತ್ತೇವೆ. ಇದು ದೇವಾಲಯದ ಕೆಲಸಕಾರ್ಯಗಳಿಗೆ ಉಪಯೋಗಿಲ್ಪಡಬೇಕು.


ನಿಮ್ಮನ್ನು ಪ್ರೀತಿಸುವ ಜನರನ್ನೇ ನೀವು ಪ್ರೀತಿಸಿದರೆ, ಅದರಿಂದ ನಿಮಗೇನು ಪ್ರತಿಫಲ ದೊರೆಯುವುದು? ಸುಂಕದವರು ಸಹ ಹಾಗೆ ಮಾಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು