Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 17:6 - ಪರಿಶುದ್ದ ಬೈಬಲ್‌

6 ಯೇಸುವಿನ ಸಂಗಡವಿದ್ದ ಶಿಷ್ಯರಿಗೂ ಈ ಧ್ವನಿ ಕೇಳಿಸಿತು. ಅವರು ಬಹಳ ಭಯದಿಂದ ಬೋರಲಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲು ಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಶಿಷ್ಯರು ಈ ವಾಣಿಯನ್ನು ಕೇಳಿ ಭಯಭ್ರಾಂತರಾದರು; ಬೋರಲು ಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲು ಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಹ್ಯೊ ಧನ್ ಆಯ್ಕುನ್ ಶಿಸಾ ವಾಯ್ಟ್ ಭಿಂಯಾಲೆ, ಅನಿ ತೆನಿ ಜಮ್ನಿ ವರ್‍ತಿ ಡಬ್ ಪಡ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 17:6
14 ತಿಳಿವುಗಳ ಹೋಲಿಕೆ  

ನಾವು ಪವಿತ್ರ ಪರ್ವತದ ಮೇಲೆ ಯೇಸುವಿನ ಜೊತೆಯಲ್ಲಿದ್ದಾಗ ಪರಲೋಕದಿಂದ ಬಂದ ಆ ಧ್ವನಿಯನ್ನು ನಾವೂ ಕೇಳಿದೆವು.


ನಾವೆಲ್ಲರೂ ನೆಲಕ್ಕೆ ಬಿದ್ದೆವು. ಆಗ ವಾಣಿಯೊಂದು ಯೆಹೂದ್ಯರ ಭಾಷೆಯಲ್ಲಿ ನನ್ನೊಂದಿಗೆ ಮಾತಾಡುವುದನ್ನು ಕೇಳಿದೆನು. ಆ ವಾಣಿಯು, ‘ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸಿಸುತ್ತಿರುವೆ? ಮುಳ್ಳುಗೋಲನ್ನು ಒದೆಯುವುದು ನಿನಗೆ ಕಷ್ಟ’ ಎಂದು ಹೇಳಿತು.


ನಾನು ನೆಲಕ್ಕೆ ಬಿದ್ದೆನು. ಆಗ ವಾಣಿಯೊಂದು ನನಗೆ, ‘ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸೆ ಪಡಿಸುತ್ತಿರುವೆ?’ ಎಂದು ಹೇಳಿತು.


ಆಗ ಮನುಷ್ಯನಂತಿದ್ದ ಗಬ್ರಿಯೇಲನು ನಾನು ನಿಂತಲ್ಲಿಗೆ ಬಂದನು. ಅವನು ತೀರ ನನ್ನ ಹತ್ತಿರಕ್ಕೆ ಬಂದಾಗ ನನಗೆ ಬಹಳ ಭಯವಾಯಿತು. ನಾನು ನೆಲಕ್ಕೆ ಬಿದ್ದೆ. ಆದರೆ ಗಬ್ರಿಯೇಲನು ನನಗೆ, “ಮನುಷ್ಯನೇ, ಈ ದರ್ಶನ ಅಂತ್ಯಕಾಲದ ಕುರಿತಾಗಿದೆ ಎಂಬುದು ನಿನಗೆ ತಿಳಿದಿರಲಿ” ಎಂದು ಹೇಳಿದನು.


ನಾನು ನೋಡಿದ ದರ್ಶನವು ಕೆಬಾರ್ ಕಾಲುವೆಯ ಬಳಿ ಕಂಡ ದರ್ಶನದಂತಿತ್ತು. ನಾನು ಸಾಷ್ಟಾಂಗವೆರಗಿದೆನು.


ನಾನೆದ್ದು ಬಯಲು ಸೀಮೆಗೆ ಹೋದೆನು. ಕೆಬಾರ್ ನದಿಯ ಪಕ್ಕದಲ್ಲಿ ನಾನು ಕಂಡ ಮಹಿಮೆಯಂತಿದ್ದ ಯೆಹೋವನ ಮಹಿಮೆಯು ಅಲ್ಲಿ ಇತ್ತು. ನಾನು ನನ್ನ ಮುಖವನ್ನು ನೆಲಕ್ಕೆ ತಾಗಿಸಿ ಬಗ್ಗಿ ನಮಸ್ಕರಿಸಿದೆ.


ದಾವೀದನು ಮೇಲಕ್ಕೆ ನೋಡಿದಾಗ ಯೆಹೋವನ ದೂತನು ಭೂಮ್ಯಾಕಾಶಗಳ ನಡುವೆ ನಿಂತಿರುವುದನ್ನು ಕಂಡನು. ದೇವದೂತನು ತನ್ನ ಖಡ್ಗವನ್ನು ಜೆರುಸಲೇಮಿನ ಮೇಲೆ ಚಾಚಿದ್ದನು. ಆಗ ದಾವೀದನೂ ಅವನೊಂದಿಗಿದ್ದ ಹಿರಿಯರೂ ಬಗ್ಗಿ ನೆಲದ ಮೇಲೆ ಮುಖಗಳನ್ನಿಟ್ಟು ನಮಸ್ಕರಿಸಿದರು. ಅವರು ಶೋಕವಸ್ತ್ರಗಳನ್ನು ಧರಿಸಿದ್ದರು.


ನಂತರ ಮಾನೋಹನು ತನ್ನ ಹೆಂಡತಿಗೆ, “ನಾವು ದೇವರನ್ನು ಕಣ್ಣಾರೆ ಕಂಡೆವು, ಆದ್ದರಿಂದ ಖಂಡಿತವಾಗಿ ನಾವು ಸತ್ತುಹೋಗುತ್ತೇವೆ” ಅಂದನು.


ಮಾನೋಹ ಮತ್ತು ಅವನ ಹೆಂಡತಿಯ ಕಣ್ಣೆದುರಿನಲ್ಲಿಯೇ ಯಜ್ಞವೇದಿಕೆಯಿಂದ ಆಕಾಶಕ್ಕೆ ಹೋಗುತ್ತಿರುವ ಅಗ್ನಿಜ್ವಾಲೆಯಲ್ಲಿ ಆ ಯೆಹೋವನ ದೂತನು ಆಕಾಶಕ್ಕೆ ಏರಿ ಹೋದನು. ಮಾನೋಹ ಮತ್ತು ಅವನ ಹೆಂಡತಿ ಅದನ್ನು ಕಂಡು ನೆಲದ ಮೇಲೆ ಅಡ್ಡಬಿದ್ದರು.


ಯೆಹೋವನ ಬಳಿಯಿಂದ ಬೆಂಕಿಯು ಬಂದು ವೇದಿಕೆಯ ಮೇಲಿದ್ದ ಸರ್ವಾಂಗಹೋಮವನ್ನು ಮತ್ತು ಕೊಬ್ಬನ್ನು ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿದಾಗ, ಅವರು ಆನಂದದಿಂದ ಆರ್ಭಟಿಸಿ ಅಡ್ಡಬಿದ್ದು ನಮಸ್ಕರಿಸಿದರು.


ಪೇತ್ರನು ಮಾತಾಡುತ್ತಿರುವಾಗಲೇ ಪ್ರಕಾಶಮಾನವಾದ ಒಂದು ಮೋಡವು ಅವರ ಮೇಲೆ ಕವಿಯಿತು ಮತ್ತು ಆ ಮೋಡದೊಳಗಿಂದ ಒಂದು ಧ್ವನಿಯು, “ಈತನು ನನ್ನ ಪ್ರಿಯ ಮಗನು. ನಾನು ಈತನನ್ನು ಬಹಳ ಮೆಚ್ಚಿಕೊಂಡಿದ್ದೇನೆ. ಈತನಿಗೆ ವಿಧೇಯರಾಗಿರಿ!” ಎಂದು ಹೇಳಿತು.


ಆಗ ಆತನು ಶಿಷ್ಯರ ಬಳಿಗೆ ಬಂದು ಅವರನ್ನು ಮುಟ್ಟಿ, “ಏಳಿ, ಹೆದರಬೇಡಿ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು