Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 18:15 - ಪರಿಶುದ್ದ ಬೈಬಲ್‌

15 “ನಿನ್ನ ಸಹೋದರನಾಗಲಿ ಸಹೋದರಿಯಾಗಲಿ ನಿನಗೆ ಯಾವುದಾದರೂ ತಪ್ಪು ಮಾಡಿದರೆ, ನೀನು ಹೋಗಿ ಅವನೊಬ್ಬನೇ ಇರುವಾಗ ಅವನ ತಪ್ಪನ್ನು ತಿಳಿಸು. ಅವನು ನಿನ್ನ ಮಾತಿಗೆ ಕಿವಿಗೊಟ್ಟರೆ, ಮತ್ತೆ ನಿನ್ನ ಸಹೋದರನಾಗಿರಲು ನೀನೇ ಅವನಿಗೆ ಸಹಾಯ ಮಾಡಿದಂತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ನಿನ್ನ ಸಹೋದರನು ನಿನ್ನ ವಿರುದ್ಧ ತಪ್ಪು ಮಾಡಿದರೆ, ನೀನು ಹೋಗಿ ಅವನು ಒಬ್ಬನೇ ಇರುವಾಗ ಅವನ ತಪ್ಪನ್ನು ಅವನಿಗೆ ಅರಿವಾಗುವಂತೆ ತಿಳಿಸು. ಅವನು ನಿನ್ನ ಮಾತನ್ನು ಕೇಳಿದರೆ ನಿನ್ನ ಸಹೋದರನನ್ನು ನೀನು ಸಂಪಾದಿಸಿಕೊಂಡಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ನಿನ್ನ ಸೋದರನು ನಿನಗೆ ಅಪರಾಧಮಾಡಿದರೆ, ನೀನು ಹೋಗಿ ನೀವಿಬ್ಬರೇ ಇರುವಾಗ, ಅವನ ತಪ್ಪನ್ನು ಮನಗಾಣಿಸು. ಅವನು ನಿನಗೆ ಕಿವಿಗೊಟ್ಟರೆ ಅವನ ಸೋದರತ್ವವನ್ನು ನೀನು ಮತ್ತೆ ಗಳಿಸಿಕೊಂಡಂತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇದಲ್ಲದೆ ನಿನ್ನ ಸಹೋದರನು ತಪ್ಪುಮಾಡಿದರೆ ನೀನು ಹೋಗಿ ನೀನೂ ಅವನೂ ಇಬ್ಬರೇ ಇರುವಾಗ ಅವನ ತಪ್ಪನ್ನು ಅವನಿಗೆ ತಿಳಿಸು. ಅವನು ನಿನ್ನ ಮಾತನ್ನು ಕೇಳಿದರೆ ನಿನ್ನ ಸಹೋದರನನ್ನು ಸಂಪಾದಿಸಿಕೊಂಡಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ನಿನ್ನ ಸಹೋದರ ಅಥವಾ ಸಹೋದರಿ ಪಾಪಮಾಡಿದರೆ, ನೀವಿಬ್ಬರೇ ಇರುವಾಗ ಹೋಗಿ ಅವರನ್ನು ಖಂಡಿಸು. ಅವರು ನಿನಗೆ ಕಿವಿಗೊಟ್ಟರೆ ನೀನು ನಿನ್ನ ಸಹೋದರ ಅಥವಾ ಸಹೋದರಿಯನ್ನು ಗೆದ್ದುಕೊಂಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಜರ್ ತರ್ ಎಕ್ ಭಾವಾನ್, ತುಮ್ಚ್ಯಾ ವಿರೊದ್ ಜಾವ್ನ್ ಪಾಪ್ ಕರ್ಲ್ಯಾರ್, ತೆಕಾ ಕಡೆಕ್ ಬಲ್ವುನ್ ಘೆವ್ನ್ ತೆಚಿ ಚುಕ್ ತೆಕಾ ದಾಕ್ವುನ್ ದಿವಾ, ತೆನಿ ತುಮಿ ಸಾಂಗಲ್ಲೆ ಆಯಿಕ್ಲ್ಯಾನ್ ತರ್ ತಿಯಾ ತುಜ್ಯಾ ಭಾವಾಕ್ ಜಿಕ್ಲ್ಯಾ ಸರ್ಕೆ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 18:15
21 ತಿಳಿವುಗಳ ಹೋಲಿಕೆ  

“ನೀವು ನಿಮ್ಮ ಸಹೋದರನನ್ನು ಮನಸ್ಸಿನಲ್ಲಿ ದ್ವೇಷಿಸಬಾರದು. ನಿಮ್ಮ ಸಹೋದರನು ಏನಾದರೂ ತಪ್ಪುಮಾಡಿದರೆ, ಅವನೊಡನೆ ಅದರ ಕುರಿತು ಮಾತಾಡು. ಅವನ ಅಪರಾಧದಲ್ಲಿ ನೀವು ಪಾಲುಹೊಂದದಂತೆ ನೇರವಾಗಿ ಗದರಿಸಿ. ಆಗ ನೀವು ಅವನನ್ನು ಕ್ಷಮಿಸಬಹುದು.


ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ. ಬೇರೆಯವರ ಮೇಲೆ ಹೇಳುವಂಥ ದೂರುಗಳು ನಿಮ್ಮಲ್ಲಿದ್ದರೂ ಕ್ಷಮಿಸಿಬಿಡಿರಿ. ಪ್ರಭುವು ನಿಮ್ಮನ್ನು ಕ್ಷಮಿಸಿದ್ದರಿಂದ ನೀವೂ ಇತರರನ್ನು ಕ್ಷಮಿಸಿರಿ.


ಸಹೋದರ ಸಹೋದರಿಯರೇ, ನಿಮ್ಮ ಸಭೆಯಲ್ಲಿ ಯಾವನಾದರೂ ತಪ್ಪು ಮಾಡಿದರೆ, ಆತ್ಮಿಕರಾದ ನೀವು ಅವನ ಬಳಿಗೆ ಹೋಗಿ ಸೌಮ್ಯತೆಯಿಂದ ಅವನನ್ನು ತಿದ್ದಿ ಸರಿಪಡಿಸಬೇಕು. ಆದರೆ ಎಚ್ಚರಿಕೆಯಿಂದಿರಿ! ನೀವು ಸಹ ಶೋಧನೆಗೊಳಗಾಗಿ ಪಾಪಕ್ಕೆ ಬೀಳುವ ಸಾಧ್ಯವಿದೆ.


ಆದರೆ ಅವನನ್ನು ವೈರಿಯೆಂದು ಎಣಿಸದೆ ಸಹೋದರನೆಂದು ಎಣಿಸಿಕೊಂಡು ಬುದ್ಧಿ ಹೇಳಿರಿ.


“ಪರಲೋಕದ ನನ್ನ ತಂದೆಯು ನಿಮಗೆ ಮಾಡುವಂತೆಯೇ ಈ ರಾಜನು ಮಾಡಿದನು. ನೀವು ನಿಮ್ಮ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ನಿಜವಾಗಿಯೂ ಕ್ಷಮಿಸಬೇಕು. ಇಲ್ಲದಿದ್ದರೆ ಪರಲೋಕದ ನನ್ನ ತಂದೆಯೂ ನಿಮ್ಮನ್ನು ಕ್ಷಮಿಸುವುದಿಲ್ಲ” ಎಂದು ಹೇಳಿದನು.


ನೀತಿವಂತನು ನನ್ನನ್ನು ಸರಿಪಡಿಸಿದರೆ ಅದು ನನಗೇ ಒಳ್ಳೆಯದು. ನಿನ್ನ ಭಕ್ತರು ನನ್ನನ್ನು ಗದರಿಸಿದರೆ ಅದು ನನಗೇ ಒಳ್ಳೆಯದು. ಆದರೆ ಕೆಟ್ಟವರ ಕೆಟ್ಟಕೃತ್ಯಗಳ ವಿರೋಧವಾಗಿ ನಾನು ಯಾವಾಗಲೂ ಪ್ರಾರ್ಥಿಸುತ್ತೇನೆ.


ಕೆಟ್ಟತನವು ನಿಮ್ಮನ್ನು ಸೋಲಿಸುವುದಕ್ಕೆ ಅವಕಾಶಕೊಡದೆ ಒಳ್ಳೆಯದನ್ನು ಮಾಡುವುದರ ಮೂಲಕವಾಗಿ ಕೆಟ್ಟತನವನ್ನು ಸೋಲಿಸಿರಿ.


ಸ್ತ್ರೀಯರೇ, ಇದೇ ರೀತಿಯಲ್ಲಿ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ. ಅವರಲ್ಲಿ ಕೆಲವರು ದೇವರ ವಾಕ್ಯಕ್ಕೆ ಅವಿಧೇಯರಾಗಿದ್ದರೂ


ಹೀಗೆ ನಿಮ್ಮ ಸಹೋದರ ಸಹೋದರಿಯರಿಗೆ ವಿರೋಧವಾಗಿ ಪಾಪ ಮಾಡುವಾಗ ಮತ್ತು ಅವರು ತಪ್ಪೆಂದು ಭಾವಿಸುವ ಕಾರ್ಯಗಳನ್ನು ಮಾಡುವಂತೆ ಅವರನ್ನು ಪ್ರೋತ್ಸಾಹಿಸಿ ಅವರಿಗೆ ಕೇಡನ್ನು ಉಂಟುಮಾಡುವಾಗ ನೀವು ಕ್ರಿಸ್ತನಿಗೆ ವಿರೋಧವಾಗಿಯೂ ಪಾಪ ಮಾಡುವವರಾಗಿದ್ದೀರಿ.


ನೀತಿವಂತನ ಕಾರ್ಯಗಳು ಜೀವವುಳ್ಳ ಮರಗಳಂತಿವೆ. ಜ್ಞಾನಿಯು ಆತ್ಮಗಳನ್ನು ಗೆದ್ದುಕೊಳ್ಳುವನು.


ನಾನು ಆ ಪತ್ರವನ್ನು ಬರೆದದ್ದು ತಪ್ಪು ಮಾಡಿದವನಿಗೋಸ್ಕರವಲ್ಲ, ಆ ತಪ್ಪಿನಿಂದ ದುಃಖಕ್ಕೆ ಒಳಗಾದವನಿಗೋಸ್ಕರವೂ ಅಲ್ಲ. ಆದರೆ ನಮ್ಮ ವಿಷಯದಲ್ಲಿ ನಿಮಗಿರುವ ಮಹಾಚಿಂತೆಯನ್ನು ನೀವು ದೇವರ ಎದುರಿನಲ್ಲಿ ನೋಡುವಂತಾಗಬೇಕೆಂದು ಆ ಪತ್ರವನ್ನು ಬರೆದೆನು.


ಈ ವಿಷಯದಲ್ಲಿ ನಿಮ್ಮಲ್ಲಿ ಯಾರೂ ಕ್ರಿಸ್ತನಲ್ಲಿ ಸಹೋದರನಾದವನನ್ನು ವಂಚಿಸಿ ಕೇಡುಮಾಡಬಾರದು. ನಾವು ಈಗಾಗಲೇ ನಿಮಗೆ ಹೇಳಿದಂತೆ ಮತ್ತು ಎಚ್ಚರಿಕೆ ನೀಡಿದಂತೆ ಇವೆಲ್ಲವುಗಳ ವಿಷಯದಲ್ಲಿ ದೇವರು ದಂಡಿಸುತ್ತಾನೆ.


ಅದೇ ರೀತಿ ಈ ಚಿಕ್ಕ ಮಕ್ಕಳಲ್ಲಿ ಒಬ್ಬರಾದರೂ ತಪ್ಪಿಸಿಕೊಳ್ಳಬಾರದೆಂಬುದೇ ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಾಗಿದೆ.


ಆಗ ಪೇತ್ರನು ಯೇಸುವಿನ ಬಳಿಗೆ ಬಂದು, “ಪ್ರಭುವೇ, ನನ್ನ ಸಹೋದರನು ನನಗೆ ಯಾವುದಾದರೂ ತಪ್ಪು ಮಾಡುತ್ತಲೇ ಇದ್ದರೆ ನಾನು ಎಷ್ಟು ಸಲ ಅವನನ್ನು ಕ್ಷಮಿಸಬೇಕು? ನಾನು ಅವನನ್ನು ಏಳು ಸಲ ಕ್ಷಮಿಸಬೇಕೋ?” ಎಂದು ಕೇಳಿದನು.


ಯಾವನಾದರೂ ಭೇದ ಹುಟ್ಟಿಸುತ್ತಿದ್ದರೆ, ಅವನಿಗೆ ಎಚ್ಚರಿಕೆ ನೀಡು. ಅವನಿನ್ನೂ ಮುಂದುವರಿಸಿದರೆ ಮತ್ತೊಮ್ಮೆ ಎಚ್ಚರಿಕೆ ನೀಡು. ಆದರೂ ಅವನು ಕೇಳದೆಹೋದರೆ ಅವನ ಸಹವಾಸವನ್ನು ತೊರೆದುಬಿಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು