Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 18:16 - ಪರಿಶುದ್ದ ಬೈಬಲ್‌

16 ಆದರೆ ಅವನು ನಿನ್ನ ಮಾತನ್ನು ಕೇಳದಿದ್ದರೆ, ನಿನ್ನೊಂದಿಗೆ ಒಬ್ಬಿಬ್ಬರನ್ನು ಕರೆದುಕೊಂಡು ಮತ್ತೆ ಅವನ ಬಳಿಗೆ ಹೋಗು. ಆಗ ಪ್ರತಿಯೊಂದು ದೂರಿನ ವಿಷಯದಲ್ಲೂ ಇಬ್ಬರು ಅಥವಾ ಮೂವರು ಸಾಕ್ಷಿಗಳಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದರೆ ಅವನು ನಿನ್ನ ಮಾತು ಕೇಳದೇ ಹೋದರೆ ಎರಡು ಮೂರು ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತು ಸ್ಥಿರಪಡುವ ಹಾಗೆ ಒಬ್ಬನನ್ನು ಅಥವಾ ಇಬ್ಬರನ್ನು ನಿನ್ನ ಸಂಗಡ ಕರೆದುಕೊಂಡು ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಒಂದು ವೇಳೆ, ಅವನು ನಿನಗೆ ಕಿವಿಗೊಡದೆಹೋದರೆ ಒಬ್ಬಿಬ್ಬರನ್ನು ನಿನ್ನ ಸಂಗಡ ಕರೆದುಕೊಂಡು ಹೋಗು; ಹೀಗೆ ಇಬ್ಬರು ಅಥವಾ ಮೂವರು ಸಾಕ್ಷಿಗಳ ಸಮ್ಮುಖದಲ್ಲಿ ಪ್ರತಿಯೊಂದು ಮಾತೂ ಇತ್ಯರ್ಥವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವನು ಕೇಳದೆಹೋದರೆ ಎರಡು ಮೂರು ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತು ಸ್ಥಾಪನೆಯಾಗುವ ಹಾಗೆ ಇನ್ನೂ ಒಬ್ಬಿಬ್ಬರನ್ನು ನಿನ್ನ ಸಂಗಡ ಕರಕೊಂಡು ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದರೆ ಅವರು ನಿನಗೆ ಕಿವಿಗೊಡದೆ ಹೋದರೆ, ನಿನ್ನೊಂದಿಗೆ ಇಬ್ಬರನ್ನು ಕರೆದುಕೊಂಡು ಹೋಗು. ಹೀಗೆ, ‘ಇಬ್ಬರ ಇಲ್ಲವೆ ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತು ಸ್ಥಾಪಿತವಾಗಲಿ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಜರ್ ತೊ ತುಮಿ ಸಾಂಗಟಲ್ಲ್ಯಾ ಗೊಸ್ಟಿಕ್ ಆಯ್ಕಿನಸ್ಲ್ಯಾರ್ ತರ್ ಎಕ್ ದೊಗೆ ಜಾನಾಕ್ನಿ ತುಮ್ಚ್ಯಾ ವಾಂಗ್ಡಾ ಬಲ್ವುನ್ ಘೆವ್ನ್ ಜಾಂವಾ, ಅನಿ ತೆಕಾ ಸಾಂಗಾ, ಕಶ್ಯಾಕ್ ಮಟ್ಲ್ಯಾರ್, ಖಲ್ಯಾಬಿ ಚುಕೆಕ್ ದೊಗೆ ಜಾನಾ ಸಾಕ್ಷಿ ರ್‍ಹಾಲ್ಯಾರ್ ತಿ ಚುಕ್ ಖರಿ ಮನುನ್ ಮಾನುನ್ ಘೆವ್ಕ್ ಹೊತಾ. ಮನುನ್ ಪವಿತ್ರ್ ಪುಸ್ತಕ್ ಸಾಂಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 18:16
10 ತಿಳಿವುಗಳ ಹೋಲಿಕೆ  

“ಒಬ್ಬನು ಕಟ್ಟಳೆಗಳಿಗೆ ವಿರುದ್ಧವಾಗಿ ನಡೆದುಕೊಂಡು ಅಪಾದಿಸಲ್ಪಟ್ಟದ್ದಲ್ಲಿ ಒಬ್ಬನ ಸಾಕ್ಷಿಯಿಂದ ಅವನು ತಪ್ಪಿತಸ್ಥನೆಂದು ತೀರ್ಮಾನಿಸಬಾರದು. ಅವನು ತಪ್ಪಿತಸ್ಥನೆಂದು ತೋರಿಸಲು ಎರಡು ಅಥವಾ ಮೂರು ಸಾಕ್ಷಿಗಳಿರಬೇಕು.


ನಾನು ಮತ್ತೆ ನಿಮ್ಮ ಬಳಿಗೆ ಮೂರನೆ ಸಾರಿ ಬರುತ್ತೇನೆ. ನೆನಪಿಟ್ಟುಕೊಳ್ಳಿರಿ, “ಪ್ರತಿಯೊಂದು ದೂರಿಗೂ ಇಬ್ಬರಾಗಲಿ ಮೂವರಾಗಲಿ ಸಾಕ್ಷಿಗಳಿದ್ದು ತಮಗೆ ಗೊತ್ತಿರುವುದಾಗಿ ಮತ್ತು ಅದು ಸತ್ಯವೆಂದು” ಹೇಳಬೇಕು.


ಸಭೆಯ ಹಿರಿಯರನ್ನು ಕುರಿತು ಯಾವನಾದರೂ ದೂರು ಹೇಳಿದರೆ ಇಬ್ಬರು ಅಥವಾ ಮೂವರು ಸಾಕ್ಷಿಗಳಿಲ್ಲದ ಹೊರತು ಅವನ ಮಾತುಗಳಿಗೆ ಕಿವಿಗೊಡಬೇಡ.


ಇಬ್ಬರ ಸಾಕ್ಷಿ ಒಂದೇ ಆಗಿದ್ದರೆ ಅವರ ಹೇಳಿಕೆಯನ್ನು ಸ್ವೀಕರಿಸಿಕೊಳ್ಳಬೇಕೆಂದು ನಿಮ್ಮ ಧರ್ಮಶಾಸ್ತ್ರವೇ ತಿಳಿಸುತ್ತದೆ.


ಮೋಶೆಯ ನಿಯಮಗಳಿಗೆ ಅವಿಧೇಯನಾದ ವ್ಯಕ್ತಿಯು ಇಬ್ಬರು ಅಥವಾ ಮೂವರು ಸಾಕ್ಷಿಗಳಿಂದ ತಪ್ಪಿತಸ್ಥನೆಂದು ನಿರ್ಧರಿಸಲ್ಪಟ್ಟರೆ, ಅವನಿಗೆ ಕ್ಷಮೆ ದೊರೆಯುತ್ತಿರಲಿಲ್ಲ. ಅವನನ್ನು ಕೊಂದುಹಾಕುತ್ತಿದ್ದರು.


ಅವರು ವಿಗ್ರಹಾರಾಧನೆ ಮಾಡಿದ್ದಕ್ಕೆ ಒಂದೇ ಸಾಕ್ಷಿ ಇರುವುದಾದರೆ ಅವರಿಗೆ ಮರಣಶಿಕ್ಷೆಯಾಗಬಾರದು. ಆದರೆ ಇಬ್ಬರು ಅಥವಾ ಮೂವರು ಸಾಕ್ಷಿಗಳು ಅವರು ವಿಗ್ರಹಾರಾಧನೆ ಮಾಡಿದ್ದು ಸತ್ಯವೆಂದು ಹೇಳಿದರೆ ಮಾತ್ರ ಅವರನ್ನು ಸಾಯಿಸಬೇಕು.


“ಯಾವನಾದರೂ ಮತ್ತೊಬ್ಬನನ್ನು ಕೊಂದರೆ, ಸಾಕ್ಷ್ಯಾಧಾರಗಳು ಇದ್ದರೆ ಮಾತ್ರ ಕೊಂದವನು ಕೊಲ್ಲಲ್ಪಡಬೇಕು.


ನಾಬೋತನು ದೇವರ ವಿರುದ್ಧವಾಗಿಯೂ ರಾಜನ ವಿರುದ್ಧವಾಗಿಯೂ ಮಾತನಾಡಿದ್ದನ್ನು ತಾವು ಕೇಳಿರುವುದಾಗಿ ಇಬ್ಬರು ಅಲ್ಲಿನ ಜನರಿಗೆ ಹೇಳಿದರು. ಜನರು ನಾಬೋತನನ್ನು ನಗರದ ಹೊರಕ್ಕೆ ಕರೆದೊಯ್ದು ಅವನನ್ನು ಕಲ್ಲೆಸೆದು ಕೊಂದರು.


ನಾನು ನನ್ನ ಇಬ್ಬರು ಸಾಕ್ಷಿಗಳಿಗೆ ಅಧಿಕಾರವನ್ನು ಕೊಡುತ್ತೇನೆ. ಅವರು ಸಾವಿರದ ಇನ್ನೂರ ಅರವತ್ತು ದಿನಗಳ ಕಾಲ ಪ್ರವಾದನೆ ಮಾಡುತ್ತಾರೆ. ಅವರು ಗೋಣಿತಟ್ಟುಗಳನ್ನು ಧರಿಸಿಕೊಂಡಿರುತ್ತಾರೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು