Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 18:17 - ಪರಿಶುದ್ದ ಬೈಬಲ್‌

17 ಅವನು ಅವರ ಮಾತನ್ನೂ ಕೇಳದಿದ್ದರೆ, ಸಭೆಗೆ ತಿಳಿಸು. ಅವನು ಸಭೆಯ ಮಾತನ್ನೂ ಕೇಳದಿದ್ದರೆ ಅವನನ್ನು ದೇವರಲ್ಲಿ ನಂಬಿಕೆ ಇಡದ ಮನುಷ್ಯನಂತಾಗಲಿ ಸುಂಕವಸೂಲಿಗಾರನಂತಾಗಲಿ ಪರಿಗಣಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವನು ಅವರ ಮಾತನ್ನು ಕೇಳದೆ ಹೋದರೆ ಅದನ್ನು ಸಭೆಗೆ ಹೇಳು. ಅವನು ಸಭೆಯ ಮಾತನ್ನು ಕೇಳದೆ ಹೋದರೆ ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅವರಿಗೂ ಅವನು ಕಿವಿಗೊಡದೆಹೋದಲ್ಲಿ ಧರ್ಮಸಭೆಗೆ ತಿಳಿಸು. ಧರ್ಮಸಭೆಗೂ ಅವನು ಕಿವಿಗೊಡದೆಹೋದರೆ ಅವನನ್ನು ಧರ್ಮಭ್ರಷ್ಟನೆಂದು ಹಾಗೂ ಬಹಿಷ್ಕೃತನೆಂದು ಪರಿಗಣಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವನು ಅವರ ಮಾತನ್ನು ಕೇಳದೆ ಹೋದರೆ ಸಭೆಗೆ ಹೇಳು; ಆದರೆ ಸಭೆಯ ಮಾತನ್ನೂ ಕೇಳದೆಹೋದರೆ ಅವನು ನಿನಗೆ ಅಜ್ಞಾನಿಯಂತೆಯೂ ಭ್ರಷ್ಟನಂತೆಯೂ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವರು ಅವರಿಗೂ ಕಿವಿಗೊಡದೆ ಹೋದರೆ ಅದನ್ನು ಸಭೆಗೆ ತಿಳಿಸು. ಅವರು ಸಭೆಗೂ ಕಿವಿಗೊಡದೆ ಹೋದರೆ, ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತೆಕಾಬಿ ತೊ ಅಯ್ಕಿನಸ್ಲ್ಯಾರ್ ಹೊಲ್ಲೆ ಸಗ್ಳೆ ವಿಶಯ್, ತುಮ್ಚ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾತ್ಲ್ಯಾ ಸಗ್ಳ್ಯಾ ಲೊಕಾಕ್ನಿ ಸಾಂಗಾ. ಆಕ್ರಿಕ್ ತೊ ತುಮ್ಚ್ಯಾ ದೆವಾಚ್ಯಾ ಲೊಕಾಂಚ್ಯಾ ಸಗ್ಳ್ಯಾ ಲೊಕಾಕ್ನಿಬಿ ಅಯ್ಕಿನಸ್ಲ್ಯಾರ್, ಎಕ್ ತೆರ್‍ಗಿ ವಸುಲಿ ಕರ್‍ತಲೊ ಮಾನುಸ್, ನಾಹೊಲ್ಯಾರ್ ಎಕ್ ದೆವಾ ವರ್‍ತಿ ವಿಶ್ವಾಸ್ ಥೈ ನಸಲ್ಲೊ ಮಾನುಸ್ ಮನುನ್ ಯವ್ಜುನ್, ತೆಕಾ ಸೊಡುನ್ ಸೊಡಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 18:17
27 ತಿಳಿವುಗಳ ಹೋಲಿಕೆ  

ಸಹೋದರ ಸಹೋದರಿಯರೇ, ಕೆಲಸ ಮಾಡದ ವಿಶ್ವಾಸಿಯಿಂದ ನೀವು ದೂರವಿರಬೇಕೆಂದು ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಅಧಿಕಾರದಿಂದ ನಿಮಗೆ ಆಜ್ಞಾಪಿಸುತ್ತಿದ್ದೇವೆ. ನಾವು ನೀಡಿದ ಉಪದೇಶವನ್ನು ಅವರು ಅನುಸರಿಸುವುದಿಲ್ಲ.


ಲೈಂಗಿಕ ಪಾಪ ಮಾಡುವ ಜನರ ಸಹವಾಸ ಮಾಡಕೂಡದೆಂದು ನಾನು ನನ್ನ ಪತ್ರದಲ್ಲಿ ನಿಮಗೆ ಬರೆದಿದ್ದೆ.


ಆಗ ನಾನು ಯೆಹೋವನು ಎಂದು ನೀವು ತಿಳಿಯುವಿರಿ. ನನ್ನ ಆಜ್ಞೆಗೆ ನೀವು ಅವಿಧೇಯರಾದಿರಿ. ನನ್ನ ಕಟ್ಟಳೆಗಳಿಗೆ ನೀವು ವಿಧೇಯರಾಗಲಿಲ್ಲ. ನಿಮ್ಮ ಸುತ್ತಲೂ ಇರುವ ಜನಾಂಗಗಳಂತೆ ಇರಲು ನೀವು ನಿರ್ಧರಿಸಿರುತ್ತೀರಿ.”


ಸೆರೆಯಿಂದ ಹಿಂತಿರುಗಿ ಬಂದಿದ್ದ ಇಸ್ರೇಲರೆಲ್ಲರೂ ಪಸ್ಕದ ಊಟವನ್ನು ಮಾಡಿದರು. ಉಳಿದವರು ಅನ್ಯರ ಜೊತೆಯಲ್ಲಿ ವಾಸಿಸುವುದರಿಂದ ತಮ್ಮನ್ನು ಶುದ್ಧಪಡಿಸಿಕೊಂಡವರೆಲ್ಲರೂ ಪಸ್ಕದ ಊಟದಲ್ಲಿ ಪಾಲು ತೆಗೆದುಕೊಂಡರು. ಇಸ್ರೇಲರ ದೇವರಾದ ಯೆಹೋವನ ಬಳಿಗೆ ಸಹಾಯಕ್ಕಾಗಿ ಹೋಗಲು ಸಾಧ್ಯವಾಗುವಂತೆ ಅವರು ಹೀಗೆ ಮಾಡಿದರು.


ಇದಲ್ಲದೆ ಕೆಡುಕರಲ್ಲಿ ವಾದವಿವಾದಗಳು ಹುಟ್ಟುತ್ತವೆ. ಆ ಜನರು ಸತ್ಯವನ್ನು ತೊರೆದವರಾಗಿದ್ದಾರೆ. ದೇವರ ಸೇವೆಯು ಐಶ್ವರ್ಯವನ್ನು ಗಳಿಸುವ ಮಾರ್ಗವೆಂಬುದು ಅವರ ಆಲೋಚನೆ.


ಅನೇಕ ಸುಂಕವಸೂಲಿಗಾರರು ಮತ್ತು ಪಾಪಿಗಳು ಯೇಸುವಿನ ಉಪದೇಶವನ್ನು ಕೇಳಲು ಬಂದಿದ್ದರು.


ಮನುಷ್ಯಕುಮಾರನು ಬಂದನು. ಆತನು ಬೇರೆ ಜನರಂತೆ ಊಟಮಾಡುತ್ತಾನೆ; ದ್ರಾಕ್ಷಾರಸವನ್ನು ಕುಡಿಯುತ್ತಾನೆ. ಆದರೆ ಜನರು, ‘ನೋಡಿರಿ! ಅವನು ಹೊಟ್ಟೆಬಾಕ, ಅವನು ಕುಡುಕ, ಸುಂಕವಸೂಲಿಗಾರರು ಮತ್ತು ಕೆಟ್ಟ ಜನರು ಅವನ ಸ್ನೇಹಿತರಾಗಿದ್ದಾರೆ’ ಎಂದು ಹೇಳುತ್ತಾರೆ. ಆದರೆ ಜ್ಞಾನವು ತನ್ನ ಕ್ರಿಯೆಗಳಿಂದಲೇ ತನ್ನ ಯೋಗ್ಯತೆಯನ್ನು ತೋರ್ಪಡಿಸುತ್ತದೆ.”


ಫರಿಸಾಯನು ಸುಂಕವಸೂಲಿಗಾರನನ್ನು ಕಂಡು ದೂರದಲ್ಲಿ ನಿಂತುಕೊಂಡು ಹೀಗೆ ಪ್ರಾರ್ಥಿಸಿದನು: ‘ದೇವರೇ, ನಾನು ಬೇರೆಯವರಂತೆ ಸುಲಿಗೆಗಾರನಲ್ಲ, ಮೋಸಗಾರನಲ್ಲ, ಅಥವಾ ವ್ಯಭಿಚಾರಿಯಲ್ಲ. ನಾನು ಈ ಸುಂಕವಸೂಲಿಗಾರನಂತೆಯೂ ಅಲ್ಲ. ಇದಕ್ಕಾಗಿ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ.


ನಿಮ್ಮನ್ನು ಪ್ರೀತಿಸುವ ಜನರನ್ನೇ ನೀವು ಪ್ರೀತಿಸಿದರೆ, ಅದರಿಂದ ನಿಮಗೇನು ಪ್ರತಿಫಲ ದೊರೆಯುವುದು? ಸುಂಕದವರು ಸಹ ಹಾಗೆ ಮಾಡುತ್ತಾರೆ.


“ನೀವು ಪ್ರಾರ್ಥಿಸುವಾಗ ದೇವರನ್ನು ತಿಳಿದಿಲ್ಲದ ಜನರಂತೆ ಪ್ರಾರ್ಥಿಸಬೇಡಿ. ಅವರು ಅರ್ಥವಿಲ್ಲದ ಸಂಗತಿಗಳನ್ನು ಹೇಳುತ್ತಲೇ ಇರುತ್ತಾರೆ. ಆ ರೀತಿ ಪ್ರಾರ್ಥಿಸಬೇಡಿ. ತಾವು ಅನೇಕ ವಿಷಯಗಳನ್ನು ಹೇಳುವುದರಿಂದ ದೇವರು ತಮ್ಮ ಪ್ರಾರ್ಥನೆಯನ್ನು ಕೇಳುತ್ತಾನೆಂಬುದು ಅವರ ಆಲೋಚನೆ.


ಫಿಲಿಪ್ಪ ಮತ್ತು ಬಾರ್ತೊಲೊಮಾಯ, ತೋಮ, ಸುಂಕವಸೂಲಿಗಾರನಾಗಿದ್ದ ಮತ್ತಾಯ, ಅಲ್ಛಾಯನ ಮಗನಾದ ಯಾಕೋಬ, ತದ್ದಾಯ,


ನಿಮ್ಮಲ್ಲಿ ಯಾವನಿಗಾದರೂ ಮತ್ತೊಬ್ಬನ ಮೇಲೆ ವಿರೋಧವಿದ್ದರೆ, ನೀವು ನ್ಯಾಯಾಲಯಗಳಿಗೆ ಹೋಗುವುದೇಕೆ? ಅವರು ನೀತಿವಂತರಲ್ಲ. ಹೀಗಿರಲು ನಿಮಗೆ ನ್ಯಾಯತೀರ್ಪು ಮಾಡಲು ಅವರಿಗೆ ನೀವು ಅವಕಾಶ ಮಾಡಿಕೊಡುವುದೇಕೆ? ನಿಮಗೆ ನಾಚಿಕೆಯಾಗಬೇಕು. ನಿಮಗೆ ನ್ಯಾಯತೀರ್ಪು ನೀಡಲು ನೀವು ದೇವಜನರಿಗೆ ಏಕೆ ಅವಕಾಶ ಕೊಡಬಾರದು?


ಈ ಹತ್ತು ಮಂದಿ ಗಿಲ್ಯಾದಿಗೆ ಹೋಗಿ ರೂಬೇನ್ಯರ, ಗಾದ್ಯರ ಮತ್ತು ಮನಸ್ಸೆಕುಲದ ಅರ್ಧಜನರ ಜೊತೆಗೆ ಮಾತನಾಡಿ ಹೀಗೆಂದರು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು