Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 18:20 - ಪರಿಶುದ್ದ ಬೈಬಲ್‌

20 ಇದು ಸತ್ಯ. ಏಕೆಂದರೆ ಎಲ್ಲಿ ಇಬ್ಬರಾಗಲಿ ಮೂವರಾಗಲಿ ನನ್ನಲ್ಲಿ ನಂಬಿಕೆಯನ್ನಿಟ್ಟು ಒಟ್ಟಾಗಿ ಸೇರಿಬಂದಿರುತ್ತಾರೋ ಅವರ ಮಧ್ಯದಲ್ಲಿ ನಾನಿರುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಏಕೆಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿ ಬರುತ್ತಾರೋ ಅಲ್ಲಿ ಅವರ ಮಧ್ಯದಲ್ಲಿ ನಾನು ಇದ್ದೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಎಲ್ಲಿ ಇಬ್ಬರು, ಮೂವರು ನನ್ನ ನಾಮದಲ್ಲಿ ಸೇರಿರುತ್ತಾರೋ, ಅಲ್ಲಿ ನಾನು ಅವರ ಮಧ್ಯೆ ಇರುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯಾಕಂದರೆ ಇಬ್ಬರು ಮೂವರು ನನ್ನ ಹೆಸರಿನಲ್ಲಿ ಎಲ್ಲಿ ಕೂಡಿ ಬಂದಿರುತ್ತಾರೋ ಅಲ್ಲಿ ಅವರ ನಡುವೆ ನಾನು ಇದ್ದೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಏಕೆಂದರೆ ಇಬ್ಬರಾಗಲಿ ಮೂವರಾಗಲಿ ನನ್ನ ಹೆಸರಿನಲ್ಲಿ ಎಲ್ಲಿ ಸೇರಿ ಬರುತ್ತಾರೋ ಅವರ ಮಧ್ಯದಲ್ಲಿ ನಾನು ಇದ್ದೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಜೆ ಖೈ ದೊಗೆ ಜಾನಾ ನಾಜಾಲ್ಯಾರ್ ತಿಗೆಜಾನಾ ಮಾಜ್ಯಾ ನಾವಾನ್ ಗೊಳಾ ಹೊತ್ಯಾತ್, ಥೈ ತೆಂಚ್ಯಾ ವಾಂಗ್ಡಾ ಮಿಯಾಚ್ ಹಾಜರ್ ರ್‍ಹಾತಾ.” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 18:20
15 ತಿಳಿವುಗಳ ಹೋಲಿಕೆ  

ನಮ್ಮ ಪ್ರಭುವಾದ ಯೇಸುವಿನ ಹೆಸರಿನಲ್ಲಿ ಒಟ್ಟಾಗಿ ಸೇರಿಬನ್ನಿ. ನಾನು ಆತ್ಮದಲ್ಲಿ ನಿಮ್ಮೊಂದಿಗಿರುವೆನು. ನಮ್ಮ ಪ್ರಭುವಾದ ಯೇಸುವಿನ ಶಕ್ತಿಯೂ ನಿಮ್ಮೊಂದಿಗೆ ಇರುವುದು.


ಸಿಂಹಾಸನದಿಂದ ಒಂದು ಗಟ್ಟಿಯಾದ ಧ್ವನಿಯನ್ನು ನಾನು ಕೇಳಿದೆನು. ಆ ಧ್ವನಿಯು, “ಈಗ ದೇವರ ಮನೆಯು ಜನರ ಸಂಗಡವಿದೆ. ಆತನು ಅವರೊಂದಿಗೆ ನೆಲೆಸುತ್ತಾನೆ. ಅವರು ಆತನವರಾಗಿರುತ್ತಾರೆ. ದೇವರು ತಾನೇ ಅವರೊಂದಿಗೆ ಇರುತ್ತಾನೆ ಮತ್ತು ಅವರ ದೇವರಾಗಿರುತ್ತಾನೆ.


ನಾನು ನಿಮಗೆ ಆಜ್ಞಾಪಿಸಿದವುಗಳಿಗೆಲ್ಲಾ ವಿಧೇಯರಾಗುವಂತೆ ಜನರಿಗೆ ಉಪದೇಶಿಸಿ, ಲೋಕಾಂತ್ಯದವರೆಗೂ ಸದಾಕಾಲ ನಾನು ನಿಮ್ಮೊಂದಿಗಿರುತ್ತೇನೆ” ಎಂದು ಹೇಳಿದನು.


ಯೆಹೋವನು ಹೇಳುವುದೇನೆಂದರೆ, ‘ನಾನು ಆಕೆಯ ಸುತ್ತಲೂ ಆಕೆಯನ್ನು ಸಂರಕ್ಷಿಸುವ ಬೆಂಕಿಯ ಗೋಡೆಯಂತಿರುವೆನು. ಮತ್ತು ನಾನು ಅಲ್ಲಿಯೇ ವಾಸಿಸುವದರಿಂದ ಆ ನಗರಕ್ಕೆ ಮಹಿಮೆಯನ್ನು ತರುವೆನು.’”


ಒಂದು ವಾರದ ನಂತರ ಶಿಷ್ಯರು ಮನೆಯೊಂದರಲ್ಲಿ ಒಟ್ಟಾಗಿ ಸೇರಿದ್ದರು. ತೋಮನು ಅವರೊಂದಿಗೆ ಇದ್ದನು. ಬಾಗಿಲುಗಳನ್ನು ಮುಚ್ಚಲಾಗಿತ್ತು. ಆಗ ಯೇಸು ಬಂದು ಅವರ ಮಧ್ಯದಲ್ಲಿ ನಿಂತುಕೊಂಡು ಅವರಿಗೆ, “ಶಾಂತಿಯು ನಿಮ್ಮೊಂದಿಗಿರಲಿ!” ಎಂದು ಹೇಳಿದನು.


ಅಂದು ಭಾನುವಾರ, ಅದೇ ಸಾಯಂಕಾಲ ಶಿಷ್ಯರು ಒಟ್ಟಾಗಿ ಸೇರಿದ್ದರು. ಅವರು ಯೆಹೂದ್ಯರಿಗೆ ಹೆದರಿ ಬಾಗಿಲುಗಳನ್ನು ಮುಚ್ಚಿಕೊಂಡು ಒಳಗೇ ಇದ್ದರು. ಆಗ ಯೇಸು ಬಂದು ಅವರ ಮಧ್ಯದಲ್ಲಿ ನಿಂತುಕೊಂಡು ಅವರಿಗೆ, “ಶಾಂತಿಯು ನಿಮ್ಮೊಂದಿಗಿರಲಿ!” ಎಂದು ಹೇಳಿದನು.


“ಎಫೆಸದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ತನ್ನ ಬಲಗೈಯಲ್ಲಿ ಏಳು ನಕ್ಷತ್ರಗಳನ್ನು ಹಿಡಿದಿರುವಾತನು ಮತ್ತು ಏಳು ದೀಪಸ್ತಂಭಗಳ ನಡುವೆ ತಿರುಗಾಡುವಾತನು ನಿನಗೆ ಇವುಗಳನ್ನು ಹೇಳುತ್ತಾನೆ.


“ಒಂದು ವಿಶೇಷ ಯಜ್ಞವೇದಿಕೆಯನ್ನು ನನಗೋಸ್ಕರ ಮಣ್ಣಿನಿಂದ ಕಟ್ಟಿರಿ. ಈ ಯಜ್ಞವೇದಿಕೆಯ ಮೇಲೆ ಕುರಿದನಗಳನ್ನು ನನಗೆ ಸರ್ವಾಂಗಹೋಮಗಳನ್ನಾಗಿಯೂ ಸಮಾಧಾನಯಜ್ಞಗಳನ್ನಾಗಿಯೂ ಸಮರ್ಪಿಸಿರಿ. ನಾನು ನಿಮಗೆ ಹೇಳುವ ಪ್ರತಿಯೊಂದು ಸ್ಥಳದಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಳ್ಳಲು ಹೀಗೆಯೇ ಮಾಡಿರಿ. ಆಗ ನಾನು ಬಂದು ನಿಮ್ಮನ್ನು ಆಶೀರ್ವದಿಸುವೆನು.


ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಯೆಹೂದನು ರಾಜದಂಡವನ್ನು ಹಿಡಿದುಕೊಳ್ಳುವನು. ಅವನ ಸಂತತಿಯವರು ಶಾಶ್ವತವಾಗಿ ಆಳುವರು; ಅನ್ಯಜನಾಂಗಗಳು ಅವನಿಗೆ ಕಪ್ಪಕಾಣಿಕೆಗಳನ್ನು ತಂದು ಅವನಿಗೆ ವಿಧೇಯರಾಗಿರುವರು.


ಸಹೋದರಿಯಾದ ಅಪ್ಫಿಯಳಿಗೆ, ನಮ್ಮ ಜೊತೆಸೈನಿಕನಾದ ಅರ್ಖಿಪ್ಪನಿಗೆ ಮತ್ತು ಫಿಲೆಮೋನನ ಮನೆಯಲ್ಲಿ ಸೇರಿಬರುವ ಸಭೆಯವರೆಲ್ಲರಿಗೆ ಬರೆಯುವ ಪತ್ರ.


ತಂದೆಯಾದ ದೇವರಲ್ಲಿಯೂ ಮತ್ತು ಪ್ರಭುವಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ, ಸಿಲ್ವಾನ ಮತ್ತು ತಿಮೊಥೆ ಬರೆಯುವ ಪತ್ರ. ದೇವರ ಕೃಪೆಯೂ ಶಾಂತಿಯೂ ನಿಮಗಿರಲಿ.


ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಅಬ್ರಹಾಮನು ಹುಟ್ಟುವುದಕ್ಕಿಂತ ಮೊದಲಿಂದಲೂ ನಾನು ಇದ್ದೇನೆ!” ಎಂದು ಉತ್ತರಿಸಿದನು.


ಆಗ ಪೇತ್ರನು ಯೇಸುವಿನ ಬಳಿಗೆ ಬಂದು, “ಪ್ರಭುವೇ, ನನ್ನ ಸಹೋದರನು ನನಗೆ ಯಾವುದಾದರೂ ತಪ್ಪು ಮಾಡುತ್ತಲೇ ಇದ್ದರೆ ನಾನು ಎಷ್ಟು ಸಲ ಅವನನ್ನು ಕ್ಷಮಿಸಬೇಕು? ನಾನು ಅವನನ್ನು ಏಳು ಸಲ ಕ್ಷಮಿಸಬೇಕೋ?” ಎಂದು ಕೇಳಿದನು.


ರಾಜನು ತನ್ನ ಜನರೊಂದಿಗೆ ಇರಬೇಕು. ಜನರು ಒಳಗೆ ಪ್ರವೇಶ ಮಾಡುವಾಗ ಅವನೂ ಅವರ ಜೊತೆಯಲ್ಲಿರಬೇಕು. ಅವರು ಹೊರಗೆ ಹೋಗುವಾಗಲೂ ಅವನು ಅವರ ಜೊತೆಯಲ್ಲಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು