Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 18:24 - ಪರಿಶುದ್ದ ಬೈಬಲ್‌

24 ರಾಜನು ತನ್ನ ಹಣವನ್ನು ವಸೂಲಿ ಮಾಡುವುದಕ್ಕೆ ಪ್ರಾರಂಭಿಸಿದನು. ಒಬ್ಬ ಸೇವಕನು ಹತ್ತು ಸಾವಿರ ಬೆಳ್ಳಿಯ ನಾಣ್ಯಗಳನ್ನು ರಾಜನಿಗೆ ಸಾಲ ಕೊಡಬೇಕಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವನು ಲೆಕ್ಕ ತೆಗೆದುಕೊಳ್ಳುವುದಕ್ಕೆ ಪ್ರಾರಂಭಮಾಡಿದಾಗ ಹತ್ತು ಸಾವಿರ ಬಂಗಾರದ ನಾಣ್ಯ ನೀಡಬೇಕಿದ್ದ ಸೇವಕನನ್ನು ಅವನ ಬಳಿಗೆ ಕರತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಲೆಕ್ಕ ತೆಗೆದುಕೊಳ್ಳಲು ಆರಂಭಿಸಿದಾಗ ಹತ್ತು ಸಾವಿರ ‘ಚಿನ್ನದ ನಾಣ್ಯ’ಗಳನ್ನು ಸಾಲವಾಗಿ ತೆರಬೇಕಾಗಿದ್ದ ಒಬ್ಬನನ್ನು ಅವನ ಸಮ್ಮುಖಕ್ಕೆ ಕರೆತರಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವನು ಲೆಕ್ಕಾ ತೆಗೆದುಕೊಳ್ಳುವದಕ್ಕೆ ಪ್ರಾರಂಭಮಾಡಿದಾಗ ಕೋಟ್ಯಾಂತರ ಸಾಲಾ ಮಾಡಿದವನೊಬ್ಬನನ್ನು ಅವನ ಬಳಿಗೆ ಹಿಡತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅವನು ಲೆಕ್ಕ ತೆಗೆದುಕೊಳ್ಳಲು ಪ್ರಾರಂಭಿಸಿದಾಗ, ಹತ್ತು ಕೋಟಿ ಚಿನ್ನದ ನಾಣ್ಯಗಳ ಸಾಲ ಕೊಡಬೇಕಾದವನನ್ನು ಅವನ ಬಳಿಗೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ತೆನಿ ಲೆಕ್ಕ್ ಕರುಕ್ ಚಾಲು ಕರಲ್ಲ್ಯಾ ತನ್ನಾ , ರಿನ್ ದಿತಲ್ಯಾತ್ಲ್ಯಾ ಎಕ್ಲ್ಯಾಕ್ ತೆಚೆಕ್ಡೆ ಘೆವ್ನ್ ಯೆಲ್ಯಾನಿ ತೆನಿ ಕರೊಡಾನಿ ರಿನ್ ಫೆಡ್ತಲೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 18:24
17 ತಿಳಿವುಗಳ ಹೋಲಿಕೆ  

ನಾನು ಅಪರಾಧಿಯಾಗಿದ್ದೇನೆ. ನನ್ನ ಅಪರಾಧಗಳು ನನ್ನ ಭುಜಗಳ ಮೇಲೆ ಭಾರವಾದ ಹೊರೆಯಂತಿವೆ.


“ಆಮೇಲೆ ಆ ಮೇಲ್ವಿಚಾರಕನು, ಯಜಮಾನನ ಸಾಲಗಾರರಲ್ಲಿ ಪ್ರತಿಯೊಬ್ಬನನ್ನು ಕರೆದನು. ಅವನು ಮೊದಲನೆಯವನಿಗೆ, ‘ನೀನು ನನ್ನ ಯಜಮಾನನಿಗೆ ಎಷ್ಟು ಸಾಲ ಕೊಡಬೇಕು?’ ಎಂದು ಕೇಳಿದನು.


ಸಿಲೊವಾ ಎಂಬಲ್ಲಿ ಗೋಪುರ ಕುಸಿದು ಬಿದ್ದಾಗ, ಸತ್ತುಹೋದ ಹದಿನೆಂಟು ಮಂದಿಯ ಕುರಿತು ನಿಮ್ಮ ಅಭಿಪ್ರಾಯವೇನು? ಜೆರುಸಲೇಮಿನಲ್ಲಿ ವಾಸವಾಗಿದ್ದ ಇತರರೆಲ್ಲರಿಗಿಂತಲೂ ಅವರು ಹೆಚ್ಚು ಪಾಪಿಗಳಾಗಿದ್ದರೆಂದು ಭಾವಿಸುತ್ತೀರೋ?


ದುಷ್ಟರು ನನ್ನನ್ನು ಸುತ್ತುಗಟ್ಟಿದ್ದಾರೆ ಅವರು ಅಸಂಖ್ಯಾತರಾಗಿದ್ದಾರೆ. ನನ್ನ ಪಾಪಗಳು ನನ್ನನ್ನು ಹಿಡಿದಿರುವುದರಿಂದ ಅವುಗಳಿಂದ ತಪ್ಪಿಸಿಕೊಳ್ಳಲಾರೆ. ನನ್ನ ತಲೆಯ ಕೂದಲುಗಳಿಗಿಂತಲೂ ನನ್ನ ಪಾಪಗಳು ಹೆಚ್ಚಾಗಿವೆ. ನಾನು ಧೈರ್ಯವನ್ನು ಕಳೆದುಕೊಂಡಿರುವೆ.


ಚಾಚಿ ಹೀಗೆ ಪ್ರಾರ್ಥಿಸಿದೆನು: “ನನ್ನ ದೇವರೇ, ನಿನ್ನ ಕಡೆಗೆ ಮುಖವೆತ್ತಲು ನನಗೆ ನಾಚಿಕೆಯಾಗುತ್ತದೆ; ಯಾಕೆಂದರೆ ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದಿದೆ. ನಮ್ಮ ಅಪರಾಧಗಳ ರಾಶಿಯು ಪರಲೋಕದವರೆಗೂ ಏರಿಹೋಗಿದೆ.


“ಬಳಿಕ ಆ ಮೇಲ್ವಿಚಾರಕನು ಎರಡನೆಯವನಿಗೆ, ‘ನೀನು ನನ್ನ ಯಜಮಾನನಿಗೆ ಎಷ್ಟು ಕೊಡಬೇಕಾಗಿದೆ’ ಎಂದು ಕೇಳಿದನು. ಎರಡನೆಯವನು, ‘ನಾನು ಅವನಿಗೆ ಅರವತ್ತುಸಾವಿರ ಕಿಲೋಗ್ರಾಂ ಗೋಧಿ ಕೊಡಬೇಕು’ ಎಂದು ಉತ್ತರಿಸಿದನು. ಆಗ ಆ ಮೇಲ್ವಿಚಾರಕನು ಅವನಿಗೆ, ‘ನಿನ್ನ ಲೆಕ್ಕಪತ್ರ ಇಲ್ಲಿದೆ. ನೀನು ಅದನ್ನು ಕಡಿಮೆ ಮಾಡು. ಐವತ್ತುಸಾವಿರ ಎಂದು ಬರೆ’ ಅಂದನು.


ದೇವಾಲಯಕ್ಕಾಗಿ ಅವರು ಒಟ್ಟು ನೂರತೊಂಭತ್ತು ಟನ್ ತೂಕದ ಬಂಗಾರ, ಮುನ್ನೂರ ಎಪ್ಪತ್ತೈದು ಟನ್ ತೂಕದ ಬೆಳ್ಳಿ, ಆರನೂರ ಎಪ್ಪತ್ತೈದು ಟನ್ ತೂಕದ ತಾಮ್ರ ಮತ್ತು ಮೂರು ಸಾವಿರದ ಏಳುನೂರೈವತ್ತು ಟನ್ ತೂಕದ ಕಬ್ಬಿಣವನ್ನು ಕೊಟ್ಟರು.


“ಪರಲೋಕರಾಜ್ಯವು ತನ್ನ ಸೇವಕರು ತನಗೆ ಕೊಡಬೇಕಿದ್ದ ಸಾಲದ ಹಣವನ್ನು ವಸೂಲಿ ಮಾಡಲು ತೀರ್ಮಾನಿಸಿದ ಒಬ್ಬ ರಾಜನಿಗೆ ಹೋಲಿಕೆಯಾಗಿದೆ.


ಆ ಸೇವಕನು ತನ್ನ ಯಜಮಾನನಾದ ರಾಜನಿಗೆ ಹಣವನ್ನು ಕೊಡಲು ಸಮರ್ಥನಾಗಿರಲಿಲ್ಲ. ಆದ್ದರಿಂದ ಆ ಸೇವಕನನ್ನು ಮತ್ತು ಅವನಲ್ಲಿದ್ದ ಪ್ರತಿಯೊಂದನ್ನೂ ಅವನ ಹೆಂಡತಿ ಮತ್ತು ಮಕ್ಕಳ ಸಮೇತವಾಗಿ ಮಾರಿ, ಬಂದ ಹಣವನ್ನೆಲ್ಲಾ ಕೊಡಬೇಕಾದ ಸಾಲಕ್ಕೆ ವಜಾ ಮಾಡಬೇಕೆಂದು ರಾಜನು ಆಜ್ಞಾಪಿಸಿದನು.


ಅವನು ಆ ಸೇವಕರ ಸಾಮರ್ಥ್ಯಕ್ಕನುಸಾರವಾಗಿ ಎಷ್ಟೆಷ್ಟು ಜವಾಬ್ದಾರಿಕೆಯನ್ನು ಕೊಡಬೇಕೆಂಬುದನ್ನು ನಿರ್ಧರಿಸಿದನು. ಅವನು ಒಬ್ಬ ಸೇವಕನಿಗೆ ಐದು ತಲಾಂತು ಮತ್ತೊಬ್ಬನಿಗೆ ಎರಡು ತಲಾಂತು ಕೊಟ್ಟನು. ಮೂರನೇ ಸೇವಕನಿಗೆ ಒಂದು ತಲಾಂತು ಕೊಟ್ಟನು. ಬಳಿಕ ಅವನು ಬೇರೆ ಸ್ಥಳಕ್ಕೆ ಹೊರಟುಹೋದನು.


ಐದು ತಲಾಂತು ತೆಗೆದುಕೊಂಡ ಸೇವಕನು ತಕ್ಷಣವೇ ಹೋಗಿ ಆ ಹಣವನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಸಂಪಾದಿಸಿದನು.


ಐದು ತಲಾಂತು ಪಡೆದ ಸೇವಕನು ಇನ್ನೂ ಐದು ತಲಾಂತನ್ನು ತನ್ನ ಯಜಮಾನನ ಬಳಿಗೆ ತಂದು, ‘ಧಣಿಯೇ, ನೀನು ನನ್ನಲ್ಲಿ ಭರವಸೆಯಿಟ್ಟು ಐದು ತಲಾಂತನ್ನು ಕೊಟ್ಟೆ. ನಾನು ಅದನ್ನು ವಿನಿಯೋಗಿಸಿ ಇನ್ನೂ ಐದು ತಲಾಂತು ಸಂಪಾದಿಸಿದ್ದೇನೆ’ ಎಂದನು.


“ಆಮೇಲೆ ಎರಡು ತಲಾಂತು ಹೊಂದಿದ್ದ ಸೇವಕನು ಯಜಮಾನನ ಬಳಿಗೆ ಬಂದು, ‘ಧಣಿಯೇ, ನೀನು ನನಗೆ ಎರಡು ತಲಾಂತು ಕೊಟ್ಟೆ. ನಾನು ಆ ಹಣವನ್ನು ಉಪಯೋಗಿಸಿ ಇನ್ನೂ ಎರಡು ತಲಾಂತು ಸಂಪಾದಿಸಿರುವೆ’ ಅಂದನು.


“ಬಳಿಕ ಒಂದು ತಲಾಂತು ಹೊಂದಿದ್ದ ಸೇವಕನು ಯಜಮಾನನ ಬಳಿಗೆ ಬಂದು, ‘ಧಣಿಯೇ, ನೀನು ಬಹಳ ಕಠಿಣ ಮನುಷ್ಯನು ಎಂದು ನಾನು ಬಲ್ಲೆ. ನೀನು ನೆಡದ ಕಡೆಯಲ್ಲಿ ರಾಶಿ ಮಾಡಿಕೊಳ್ಳುವವನು ಮತ್ತು ಬೀಜ ಬಿತ್ತದ ಕಡೆಯಲ್ಲಿ ಕೊಯ್ಯುವವನು.


ಕನು, “ನೀವು ಹೇಳಿದಂತೆಯೇ ಆಗಲಿ. ಆದರೆ ನಾನು ಅವನನ್ನು ಕೊಲ್ಲುವುದಿಲ್ಲ. ಯಾರಲ್ಲಿ ಬೆಳ್ಳಿಯ ಬಟ್ಟಲು ಸಿಕ್ಕುತ್ತದೊ ಅವನು ನನ್ನ ಗುಲಾಮನಾಗಿರಬೇಕು; ಉಳಿದವರು ಹೋಗಬಹುದು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು