Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 18:31 - ಪರಿಶುದ್ದ ಬೈಬಲ್‌

31 ಇದನ್ನು ಕಂಡ ಇತರ ಸೇವಕರೆಲ್ಲರೂ ಬಹಳವಾಗಿ ದುಃಖಪಟ್ಟು ನಡೆದ ಸಂಗತಿಯನ್ನೆಲ್ಲಾ ಯಜಮಾನನಿಗೆ ತಿಳಿಸಿದರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅವನ ಜೊತೆ ಸೇವಕರು ನಡೆದ ಸಂಗತಿಯನ್ನು ನೋಡಿ ಬಹಳವಾಗಿ ದುಃಖಪಟ್ಟು ತಮ್ಮ ಒಡೆಯನ ಬಳಿಗೆ ಬಂದು ನಡೆದದ್ದನ್ನೆಲ್ಲಾ ಆತನಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಇದೆಲ್ಲವನ್ನು ಕಂಡ ಇತರ ಸೇವಕರು ಬಹಳವಾಗಿ ನೊಂದುಕೊಂಡರು. ರಾಜನ ಬಳಿಗೆ ಹೋಗಿ ನಡೆದುದೆಲ್ಲವನ್ನೂ ವರದಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಅವನ ಜೊತೇ ಸೇವಕರು ನಡೆದ ಸಂಗತಿಯನ್ನು ನೋಡಿ ಬಹಳವಾಗಿ ದುಃಖಪಟ್ಟು ಒಡೆಯನ ಬಳಿಗೆ ಬಂದು ನಡೆದದ್ದನ್ನೆಲ್ಲಾ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅವನ ಜೊತೆಯ ಸೇವಕರು ನಡೆದದ್ದನ್ನು ನೋಡಿ, ಬಹಳ ವ್ಯಥೆಪಟ್ಟು ಹೋಗಿ ತಮ್ಮ ಅರಸನಿಗೆ ನಡೆದದ್ದೆಲ್ಲವನ್ನು ವರದಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಹೆ ಬಗುನ್ ಹುರಲ್ಲ್ಯಾ ಆಳಾಕ್ನಿ ಲೈ ವಾಯ್ಟ್ ದಿಸ್ಲೆ. ತೆನಿ ಜಾವ್ನ್ ಹೆ ರಾಜಾಕ್ ಸಾಂಗಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 18:31
16 ತಿಳಿವುಗಳ ಹೋಲಿಕೆ  

ಸಂತೋಷಪಡುವವರ ಸಂಗಡ ಸಂತೋಷಪಡಿರಿ. ದುಃಖಪಡುವವರೊಂದಿಗೆ ದುಃಖಪಡಿರಿ.


ಸೆರೆಮನೆಯಲ್ಲಿರುವ ಜನರನ್ನು ಮರೆಯದಿರಿ. ನೀವೂ ಅವರ ಜೊತೆಯಲ್ಲಿ ಸೆರೆಮನೆಯಲ್ಲಿದ್ದೀರೋ ಎಂಬಂತೆ ನೆನಪುಮಾಡಿಕೊಳ್ಳಿ ಮತ್ತು ಸಂಕಟಕ್ಕೊಳಗಾಗಿರುವ ಜನರನ್ನು ಮರೆಯದಿರಿ. ನೀವೂ ಅವರ ಜೊತೆಯಲ್ಲಿ ಸಂಕಟಪಡುತ್ತಿರುವಿರೋ ಎಂಬಂತೆ ನೆನಪು ಮಾಡಿಕೊಳ್ಳಿ.


ಯೇಸು ಕೋಪಗೊಂಡು ಜನರ ಕಡೆಗೆ ನೋಡಿದನು. ಅವರ ಮೊಂಡುತನವನ್ನು ಕಂಡು ಆತನಿಗೆ ದುಃಖವಾಯಿತು. ಯೇಸು ಆ ಮನುಷ್ಯನಿಗೆ, “ನಿನ್ನ ಕೈ ಚಾಚು” ಎಂದು ಹೇಳಿದನು. ಅವನು ತನ್ನ ಕೈಯನ್ನು ಯೇಸುವಿನತ್ತ ಚಾಚಿದನು. ಕೂಡಲೇ ಅವನ ಕೈ ವಾಸಿಯಾಯಿತು.


ಯೇಸು ಜೆರುಸಲೇಮಿನ ಸಮೀಪಕ್ಕೆ ಬಂದಾಗ ಆ ಪಟ್ಟಣವನ್ನು ನೋಡಿ ಅದರ ವಿಷಯದಲ್ಲಿ ಕಣ್ಣೀರಿಟ್ಟು


“ಆದ್ದರಿಂದ ಆ ಸೇವಕನು ಹಿಂತಿರುಗಿ ಹೋಗಿ ಅವರು ಹೇಳಿದ್ದನ್ನೆಲ್ಲ ತನ್ನ ಯಜಮಾನನಿಗೆ ತಿಳಿಸಿದನು. ಆಗ ಯಜಮಾನನು ಬಹಳ ಕೋಪಗೊಂಡು ಆ ಸೇವಕನಿಗೆ, ‘ಈ ಊರಿನ ಬೀದಿಗಳಿಗೂ ಸಂದಿಗಳಿಗೂ ಬೇಗನೆ ಹೋಗಿ ಬಡವರನ್ನೂ ಅಂಗವಿಕಲರನ್ನೂ ಕುರುಡರನ್ನೂ ಕುಂಟರನ್ನೂ ಇಲ್ಲಿಗೆ ಕರೆದುಕೊಂಡು ಬಾ’ ಎಂದು ಹೇಳಿದನು.


ನನ್ನ ತಲೆಯಲ್ಲೆಲ್ಲ ನೀರು ತುಂಬಿಕೊಂಡಿದ್ದು, ನನ್ನ ಕಣ್ಣುಗಳು ನೀರಿನ ಬುಗ್ಗೆಗಳಾಗಿದ್ದರೆ, ನಾಶಮಾಡಲ್ಪಟ್ಟ ನನ್ನ ಜನರಿಗಾಗಿ ಹಗಲಿರುಳು ಗೋಳಾಡುತ್ತಿದ್ದೆ.


ಜನರು ನಿನ್ನ ಉಪದೇಶಗಳಿಗೆ ವಿಧೇಯರಾಗದಿರುವುದರಿಂದ ನನ್ನ ಕಣ್ಣೀರು ಗೋಳಾಟದಿಂದ ನದಿಯಾಗಿ ಹರಿಯುತ್ತಿದೆ.


ಯಾಕೋಬನ ಕುಟುಂಬದ ಚರಿತ್ರೆಯಿದು: ಯೋಸೇಫನು ಹದಿನೇಳು ವರ್ಷದ ಯೌವನಸ್ಥನಾಗಿದ್ದನು. ಆಡುಕುರಿಗಳನ್ನು ಸಾಕುವುದು ಅವನ ಕಸುಬಾಗಿತ್ತು. ತನ್ನ ಅಣ್ಣಂದಿರೊಡನೆ ಅಂದರೆ ಬಿಲ್ಹಾ ಮತ್ತು ಜಿಲ್ಪಾ ಎಂಬ ತನ್ನ ಮಲತಾಯಿಗಳ ಮಕ್ಕಳೊಡನೆ ಯೋಸೇಫನು ಆಡುಕುರಿಗಳನ್ನು ಮೇಯಿಸುತ್ತಿದ್ದನು. ಅವರೇನಾದರೂ ಕೆಟ್ಟದ್ದನ್ನು ಮಾಡಿದರೆ ಯೋಸೇಫನು ತಂದೆಗೆ ತಿಳಿಸುತ್ತಿದ್ದನು.


ನಿಮ್ಮ ಸಭಾನಾಯಕರಿಗೆ ವಿಧೇಯರಾಗಿರಿ ಮತ್ತು ಅವರ ಅಧಿಕಾರದ ಅಧೀನದಲ್ಲಿರಿ. ಅವರೇ ನಿಮಗೆ ಜವಾಬ್ದಾರರು. ಅವರು ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ಈ ಕಾರ್ಯವನ್ನು ವ್ಯಸನದಿಂದ ಮಾಡದೆ ಸಂತೋಷದಿಂದ ಮಾಡಲು ಸಾಧ್ಯವಾಗುವಂತೆ ಅವರಿಗೆ ವಿಧೇಯರಾಗಿರಿ. ಅವರ ಕಾರ್ಯವನ್ನು ಕಷ್ಟಕರವನ್ನಾಗಿ ಮಾಡುವುದರಿಂದ ನಿಮಗೇನೂ ಪ್ರಯೋಜನವಿಲ್ಲ.


ನಿನ್ನ ವಾಕ್ಯಕ್ಕೆ ವಿಧೇಯರಾಗದ ಆ ದ್ರೋಹಿಗಳನ್ನು ನೋಡಿದರೆ ನನಗೆ ಅಸಹ್ಯವಾಗುತ್ತದೆ.


ಇದನ್ನು ಹೇಳುವುದಕ್ಕೇ ನಾಚಿಕೆಯಾಗುತ್ತದೆ. ಆದರೆ, ನಿಮ್ಮೊಂದಿಗೆ ಆ ರೀತಿ ನಡೆದುಕೊಳ್ಳುವಷ್ಟು “ಬಲ” ನಮಗಿರಲಿಲ್ಲ! ಆದರೆ ಹೊಗಳಿಕೊಳ್ಳಲು ಯಾರಿಗಾದರೂ ಸಾಕಷ್ಟು ಧೈರ್ಯವಿದ್ದರೆ ನಾನು ಸಹ ಧೈರ್ಯದಿಂದ ಹೊಗಳಿಕೊಳ್ಳುತ್ತೇನೆ. (ನಾನು ಬದ್ಧಿಹೀನನಂತೆ ಮಾತಾಡುತ್ತಿದ್ದೇನೆ.)


ರಾಜ ಹೆರೋದನು ಬಹಳವಾಗಿ ದುಃಖಪಟ್ಟನು. ಆದರೆ ಏನು ಕೇಳಿದರೂ ಕೊಡುತ್ತೇನೆಂದು ಅವನು ಅವಳಿಗೆ ವಾಗ್ದಾನ ಮಾಡಿದ್ದನು. ಹೆರೋದನ ಪಂಕ್ತಿಯಲ್ಲಿ ಊಟ ಮಾಡುತ್ತಿದ್ದವರು ಸಹ ಆ ವಾಗ್ದಾನವನ್ನು ಕೇಳಿಸಿಕೊಂಡಿದ್ದರು. ಆದ್ದರಿಂದ ಅವಳು ಕೇಳಿದ್ದನ್ನು ಕೊಡುವುದಕ್ಕೆ ಹೆರೋದನು ಅಪ್ಪಣೆಕೊಟ್ಟನು.


“ತರುವಾಯ, ಅದೇ ಸೇವಕನು ತನಗೆ ನೂರು ಬೆಳ್ಳಿಯ ನಾಣ್ಯಗಳನ್ನು ಕೊಡಬೇಕಾಗಿದ್ದ ಬೇರೊಬ್ಬ ಸೇವಕನನ್ನು ಕಂಡು ಅವನ ಕುತ್ತಿಗೆ ಹಿಡಿದು, ‘ನೀನು ನನಗೆ ಕೊಡಬೇಕಾಗಿರುವ ಹಣವನ್ನು ಕೊಡು’ ಎಂದನು.


“ಆದರೆ ಮೊದಲನೇ ಸೇವಕನು ತಾಳಿಕೊಳ್ಳಲಿಲ್ಲ. ತನಗೆ ಸಾಲ ಕೊಡಬೇಕಾಗಿದ್ದ ಸೇವಕನ ವಿಷಯದಲ್ಲಿ ನ್ಯಾಯಾಧಿಪತಿಗೆ ದೂರುಕೊಟ್ಟು ಅವನನ್ನು ಸೆರೆಮನೆಗೆ ಹಾಕಿಸಿದನು. ಆ ಸೇವಕನು ಸಾಲ ತೀರಿಸುವವರೆಗೂ ಸೆರೆಮನೆಯಲ್ಲಿ ಇರಬೇಕಾಯಿತು.


“ಆಗ ಯಜಮಾನನು ತನ್ನ ಸೇವಕನನ್ನು ಒಳಗೆ ಕರೆದು, ‘ನೀನು ದುಷ್ಟ ಸೇವಕನು. ನೀನು ನನಗೆ ಹೆಚ್ಚು ಹಣ ಕೊಡಬೇಕಾಗಿತ್ತು. ಆದರೆ ನೀನು ನನ್ನನ್ನು ಬೇಡಿಕೊಂಡದ್ದರಿಂದ ನಿನ್ನ ಸಾಲವನ್ನೆಲ್ಲ ನಾನು ಮನ್ನಿಸಿಬಿಟ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು