Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 18:7 - ಪರಿಶುದ್ದ ಬೈಬಲ್‌

7 ಜನರನ್ನು ಪಾಪಕ್ಕೆ ನಡೆಸುವ ಸಂಗತಿಗಳ ನಿಮಿತ್ತ ನಾನು ಈ ಲೋಕದ ವಿಷಯದಲ್ಲಿ ದುಃಖಪಡುತ್ತೇನೆ. ಅವು ಯಾವಾಗಲೂ ಇರುತ್ತವೆ. ಆದರೆ ಅವುಗಳಿಗೆ ಕಾರಣವಾಗುವ ವ್ಯಕ್ತಿಗೆ ಬಹಳ ಕೇಡಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “ತೊಡಕುಗಳ ನಿಮಿತ್ತ ಲೋಕಕ್ಕೆ ಅಯ್ಯೋ, ತೊಡಕುಗಳು ಬರುವುದು ಅನಿವಾರ್ಯ, ಆದಾಗ್ಯೂ ಯಾವ ಮನುಷ್ಯನಿಂದ ತೊಡಕು ಬರುತ್ತದೋ ಅವನಿಗೆ ಅಯ್ಯೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಪಾಪಕ್ಕೆ ಪ್ರಚೋದಿಸುವ ಲೋಕಕ್ಕೆ ಧಿಕ್ಕಾರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ತೊಡಕುಗಳು ಬರುವದರಿಂದ ಲೋಕಕ್ಕೆ ಎಷ್ಟೋ ಕೇಡು! ತೊಡಕುಗಳು ಹೇಗಾದರೂ ಬರುವವು. ಆದಾಗ್ಯೂ ಯಾವ ಮನುಷ್ಯನಿಂದ ತೊಡಕು ಬರುತ್ತದೋ, ಅವನ ಗತಿಯನ್ನು ಏನು ಹೇಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಪಾಪಕ್ಕೆ ಕಾರಣವಾಗಿರುವ ಜಗತ್ತಿಗೆ ಕಷ್ಟ! ಇಂಥ ವಿಷಯಗಳು ಅನಿವಾರ್ಯ. ಆದರೆ ಪಾಪಕ್ಕೆ ಕಾರಣವಾಗಿರುವವರ ಗತಿಯನ್ನು ಏನೆಂದು ಹೇಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಹ್ಯಾ ಜಗಾಚಿ ಗತ್ ಕಾಯ್ ಸಾಂಗು! ಲೊಕಾನಿ ಅಪ್ನಾಚೊ ವಿಶ್ವಾಸ್ ಕಳ್ದುನ್ ಘೆವ್ಕ್ ಕಾರನ್ ಹೊತಲ್ಯಾ ಹ್ಯಾ ಸಂಗ್ತಿಯಾ ಕನ್ನಾಬಿ ಹೊವ್ನ್‌ಗೆತುಚ್ ರ್‍ಹಾತ್ಯಾತ್. ಖರೆ ತ್ಯಾ ಸಂಗ್ತಿಯಾ ಹೊಯ್ ಸರ್ಕೆ ಕರುಕ್ ಕಾರನ್ ಹೊತಲ್ಯಾಂಚಿ ಗತ್ ಕಾಯ್ ಸಾಂಗು!”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 18:7
30 ತಿಳಿವುಗಳ ಹೋಲಿಕೆ  

ಯೇಸು ತನ್ನ ಶಿಷ್ಯರಿಗೆ, “ಜನರನ್ನು ಪಾಪಕ್ಕೆ ನಡೆಸುವಂಥ ಸಂಗತಿಗಳು ಖಂಡಿತವಾಗಿ ಬರುತ್ತವೆ. ಆದರೆ ಅವುಗಳನ್ನು ಬರಮಾಡುವವನ ಗತಿಯನ್ನು ಏನು ಹೇಳಲಿ!


(ನಿಮ್ಮಲ್ಲಿ ಭಿನ್ನಾಭಿಪ್ರಾಯಗಳಿರುವುದು ಸಹಜ. ನಿಮ್ಮಲ್ಲಿ ಯಾರು ನಿಜವಾಗಿಯೂ ಒಳ್ಳೆಯದನ್ನು ಮಾಡುತ್ತಿದ್ದಾರೆ ಎಂಬುದನ್ನು ಇದು ಸ್ಪಷ್ಟಪಡಿಸುತ್ತದೆ.)


ಪವಿತ್ರ ಗ್ರಂಥದಲ್ಲಿ ಬರೆದಿರುವ ಪ್ರಕಾರ ಮನುಷ್ಯಕುಮಾರನು ಹೊರಟುಹೋಗಿ ಮರಣ ಹೊಂದುತ್ತಾನೆ. ಆದರೆ ಆತನನ್ನು ಕೊಲ್ಲಲು ಒಪ್ಪಿಸುವವನಿಗೆ ಬಹಳ ಕೇಡಾಗುತ್ತದೆ. ಅವನು ಹುಟ್ಟದೆ ಇದ್ದಿದ್ದರೆ ಎಷ್ಟೋ ಚೆನ್ನಾಗಿತ್ತು!” ಎಂದು ಹೇಳಿದನು.


ಕೆಲವು ಜನರು ರಹಸ್ಯವಾಗಿ ನಿಮ್ಮ ಸಭೆಯಲ್ಲಿ ಪ್ರವೇಶಿಸಿದ್ದಾರೆ. ಇವರಿಗಾಗುವ ದಂಡನೆಯ ಕುರಿತು ಬಹುಕಾಲದ ಹಿಂದೆಯೇ ಪ್ರವಾದಿಗಳು ಬರೆದಿದ್ದಾರೆ. ಈ ಜನರು ದೇವರಿಗೆ ವಿರುದ್ಧವಾಗಿದ್ದಾರೆ. ಅವರು ಪಾಪಕೃತ್ಯಗಳನ್ನು ಮಾಡುವುದಕ್ಕಾಗಿ ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ಅವರು ನಮ್ಮ ಒಬ್ಬನೇ ಒಡೆಯನಾದ ಮತ್ತು ಪ್ರಭುವಾದ ಯೇಸು ಕ್ರಿಸ್ತನನ್ನು ಹಿಂಬಾಲಿಸದವರಾಗಿದ್ದಾರೆ.


ನೀನು ಸತ್ಯವನ್ನೇ ಮಾತನಾಡು. ಆಗ ನಿನ್ನನ್ನು ಟೀಕಿಸಲು ಸಾಧ್ಯವಿಲ್ಲದೆ ನಿನ್ನ ವಿರೋಧಿಗಳು ಅಪಮಾನಕ್ಕೆ ಗುರಿಯಾಗುವರು.


ಜ್ಞಾನವುಳ್ಳವರಾಗಿರಿ, ಪರಿಶುದ್ಧರಾಗಿರಿ, ನಿಮ್ಮ ಮನೆಕೆಲಸವನ್ನು ನೋಡಿಕೊಳ್ಳಿರಿ, ದಯೆಯುಳ್ಳವರಾಗಿರಿ, ನಿಮ್ಮ ಗಂಡಂದಿರಿಗೆ ವಿಧೇಯರಾಗಿರಿ” ಎಂದು ಉಪದೇಶಿಸಬೇಕು. ಆಗ ದೇವರು ನಮಗೆ ದಯಪಾಲಿಸಿದ ಬೋಧನೆಯನ್ನು ಟೀಕಿಸಲು ಯಾರಿಗೂ ಸಾಧ್ಯವಾಗುವುದಿಲ್ಲ.


ಗುಲಾಮರು ತಮ್ಮ ಯಜಮಾನರಿಗೆ ಸಂಪೂರ್ಣ ಗೌರವ ಕೊಡಬೇಕು. ಆಗ ದೇವರ ಹೆಸರಾಗಲಿ ನಮ್ಮ ಉಪದೇಶವಾಗಲಿ ಟೀಕೆಗೆ ಗುರಿಯಾಗುವುದಿಲ್ಲ.


“ಸಹೋದರರೇ, ಪವಿತ್ರಾತ್ಮನು ದಾವೀದನ ಮೂಲಕವಾಗಿ ಪವಿತ್ರ ಗ್ರಂಥದಲ್ಲಿ ಮುಂತಿಳಿಸಿದ್ದ ಸಂಗತಿ ನೆರವೇರಬೇಕಿತ್ತು. ನಮ್ಮ ಸ್ವಂತ ಗುಂಪಿನವರಲ್ಲಿ ಒಬ್ಬನಾದ ಯೂದನ ಬಗ್ಗೆ ದಾವೀದನು ಹೇಳಿದ್ದಾನೆ. ಯೂದನು ನಮ್ಮೊಂದಿಗೆ ಸೇವೆ ಮಾಡಿದನು. ಯೇಸುವನ್ನು ಬಂಧಿಸುವವರಿಗೆ ಯೂದನು ಮಾರ್ಗದರ್ಶಕನಾಗುತ್ತಾನೆಂದು ಪವಿತ್ರಾತ್ಮನು ತಿಳಿಸಿದ್ದನು.”


ನಾನು ಇವರೊಂದಿಗೆ ಇದ್ದಾಗ, ನಿನ್ನ ಹೆಸರಿನ ಶಕ್ತಿಯಿಂದ ಇವರನ್ನು ಕಾಯ್ದು ಕಾಪಾಡಿದೆನು. ಪವಿತ್ರ ಗ್ರಂಥದ ಹೇಳಿಕೆಯು ನೆರವೇರುವಂತೆ ಕಳೆದುಹೋಗುವುದಕ್ಕಾಗಿಯೇ ಆರಿಸಲ್ಪಟ್ಟಿದ್ದ (ಯೂದನೆಂಬ) ಒಬ್ಬನೇ ಒಬ್ಬನು ಇವರಲ್ಲಿ ನಾಶವಾದನು.


ಸಮೀಪದಲ್ಲಿ ನಡೆಯುತ್ತಿರುವ ಯುದ್ಧಗಳ ಶಬ್ಧವನ್ನೂ ಬಹುದೂರದಲ್ಲಿ ನಡೆಯುತ್ತಿರುವ ಯುದ್ಧಗಳ ಬಗ್ಗೆ ಸುದ್ದಿಯನ್ನೂ ನೀವು ಕೇಳುವಿರಿ. ಆದರೆ ಭಯಪಡಬೇಡಿ. ಅಂತ್ಯಕಾಲ ಬರುವುದಕ್ಕಿಂತ ಮುಂಚೆ ಈ ಸಂಗತಿಗಳು ನಡೆಯಲೇಬೇಕು.


ನೀನು ನಿನ್ನ ಪಾಪಕೃತ್ಯಗಳಿಂದ ಯೆಹೋವನ ವೈರಿಗಳು ಯೆಹೋವನನ್ನು ಹೆಚ್ಚು ದ್ವೇಷಿಸುವಂತೆ ಮಾಡಿದೆ. ನಿನಗೆ ಹುಟ್ಟಿದ ಗಂಡುಮಗು ಈ ಕಾರಣಕ್ಕಾಗಿ ಸತ್ತುಹೋಗುವುದು” ಎಂದು ಹೇಳಿದನು.


ಯೆಹೋವನಿಗೆ ಅರ್ಪಿಸುವ ಯಜ್ಞವನ್ನು ಹೊಫ್ನಿ ಮತ್ತು ಫೀನೆಹಾಸರು ತುಚ್ಛೀಕರಿಸುತ್ತಿದ್ದರು. ಇದು ಯೆಹೋವನಿಗೆ ವಿರೋಧವಾದ ಮಹಾ ಪಾಪವಾಗಿತ್ತು.


ಅಬ್ರಾಮನ ಮಂದೆಕಾಯುವವರು ಮತ್ತು ಲೋಟನ ಮಂದೆಕಾಯುವವರು ವಾದ ಮಾಡಲಾರಂಭಿಸಿದರು. ಆ ಕಾಲದಲ್ಲಿ ಕಾನಾನ್ಯರು ಮತ್ತು ಪೆರಿಜೀಯರು ಸಹ ಆ ಸ್ಥಳದಲ್ಲಿ ವಾಸವಾಗಿದ್ದರು.


ಆಗ ಯೇಸು ಪೇತ್ರನಿಗೆ, “ಸೈತಾನನೇ, ಇಲ್ಲಿಂದ ತೊಲಗು! ನೀನು ನನಗೆ ಅಡ್ಡಿಯಾಗಿರುವೆ! ನಿನ್ನ ಯೋಚನೆ ಮನುಷ್ಯರ ಯೋಚನೆಯೇ ಹೊರತು ದೇವರದಲ್ಲ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು