Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 19:13 - ಪರಿಶುದ್ದ ಬೈಬಲ್‌

13 ಬಳಿಕ ಜನರು ಯೇಸುವಿನ ಬಳಿಗೆ ಬಂದು ತಮ್ಮ ಚಿಕ್ಕ ಮಕ್ಕಳನ್ನು ತಂದು ಅವರಿಗಾಗಿ ಪ್ರಾರ್ಥಿಸಬೇಕೆಂದು ಆತನನ್ನು ಬೇಡಿಕೊಂಡರು. ಇದನ್ನು ಕಂಡ ಶಿಷ್ಯರು ಚಿಕ್ಕ ಮಕ್ಕಳನ್ನು ಆತನ ಬಳಿಗೆ ತರಕೂಡದೆಂದು ಗದರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಕೆಲವರು ತಮ್ಮ ಚಿಕ್ಕ ಮಕ್ಕಳನ್ನು ಯೇಸುವಿನ ಬಳಿಗೆ ಕರೆತಂದು, ಅವರ ಮೇಲೆ ಆತನು ಕೈಗಳನ್ನಿಟ್ಟು ಪ್ರಾರ್ಥಿಸುವಂತೆ ಕೇಳಿದರು. ಆದರೆ ಶಿಷ್ಯರು ಅವರನ್ನು ಗದರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅನಂತರ ಕೆಲವರು ಚಿಕ್ಕಮಕ್ಕಳನ್ನು ಯೇಸುಸ್ವಾಮಿಯ ಬಳಿಗೆ ತಂದರು. ಅವುಗಳ ಮೇಲೆ ಕೈಯಿಟ್ಟು ಪ್ರಾರ್ಥನೆ ಮಾಡಬೇಕೆಂದು ಕೇಳಿಕೊಂಡರು. ಶಿಷ್ಯರು ಅವರನ್ನು ಗದರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ಕೆಲವರು ತಮ್ಮ ಚಿಕ್ಕ ಮಕ್ಕಳನ್ನು ಯೇಸುವಿನ ಬಳಿಗೆ ತಂದು ಆತನು ಅವುಗಳ ಮೇಲೆ ಕೈಯಿಟ್ಟು ಪ್ರಾರ್ಥನೆ ಮಾಡಬೇಕೆಂದು ಕೇಳಲು ಶಿಷ್ಯರು ಅವರನ್ನು ಗದರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೇಸು ತಮ್ಮ ಕೈಗಳನ್ನಿಟ್ಟು ಪ್ರಾರ್ಥಿಸುವಂತೆ ಕೆಲವು ಜನರು ಚಿಕ್ಕಮಕ್ಕಳನ್ನು ಯೇಸುವಿನ ಬಳಿಗೆ ತಂದರು. ಆದರೆ ಶಿಷ್ಯರು ಅವರನ್ನು ಗದರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಉಲ್ಲ್ಯಾಸ್ಯಾ ಲೊಕಾನಿ ಪೊರಾಂಚ್ಯಾ ವರ್‍ತಿ ಹಾತ್ ಥವ್ನ್ ಮಾಗ್ನಿ ಕರುನ್ ಘೆವ್‍ಸಾಟ್ನಿ ಮನುನ್ ಜೆಜುಕ್ಡೆ ಯೆಲ್ಯಾನಿ. ಖರೆ ಶಿಸಾನಿ ಲೊಕಾಕ್ನಿ ಅಡ್ವುಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 19:13
15 ತಿಳಿವುಗಳ ಹೋಲಿಕೆ  

ಈ ವಾಗ್ದಾನವನ್ನು ನಿಮಗೂ ನಿಮ್ಮ ಮಕ್ಕಳಿಗೂ ಬಹು ದೂರದಲ್ಲಿರುವ ಜನರಿಗೂ ಕೊಡಲಾಗಿದೆ. ನಮ್ಮ ದೇವರಾದ ಪ್ರಭುವು ತನ್ನ ಬಳಿಗೆ ಕರೆಯುವ ಪ್ರತಿಯೊಬ್ಬರಿಗೂ ಈ ವಾಗ್ದಾನವನ್ನು ಕೊಟ್ಟಿದ್ದಾನೆ” ಎಂದು ಹೇಳಿದನು.


ಕ್ರಿಸ್ತ ವಿಶ್ವಾಸಿಯಲ್ಲದ ಗಂಡನು ತನ್ನ ಕ್ರೈಸ್ತ ಹೆಂಡತಿಯ ಮೂಲಕ ಪವಿತ್ರನಾಗುತ್ತಾನೆ. ಅದೇರೀತಿ, ಕ್ರಿಸ್ತ ವಿಶ್ವಾಸಿಯಲ್ಲದ ಹೆಂಡತಿಯು ತನ್ನ ಕ್ರೈಸ್ತ ಗಂಡನ ಮೂಲಕ ಪವಿತ್ರಳಾಗುತ್ತಾಳೆ. ಇದು ಸತ್ಯವಾಗಿಲ್ಲದಿದ್ದರೆ, ನಿಮ್ಮ ಮಕ್ಕಳು ಪವಿತ್ರರಾಗುತ್ತಿರಲಿಲ್ಲ. ಆದರೆ ಈಗ ನಿಮ್ಮ ಮಕ್ಕಳು ಪವಿತ್ರರಾಗಿದ್ದಾರೆ.


ಜನರೆಲ್ಲರೂ ಕುರುಡರನ್ನು ಗದರಿಸಿ, ಸುಮ್ಮನಿರಬೇಕೆಂದು ಹೇಳಿದರು. ಆದರೆ ಆ ಕುರುಡರು, “ಪ್ರಭುವೇ, ದಾವೀದನ ಕುಮಾರನೇ, ದಯಮಾಡಿ ನಮಗೆ ಸಹಾಯ ಮಾಡು!” ಎಂದು ಹೆಚ್ಚುಹೆಚ್ಚು ಕೂಗಿಕೊಂಡರು.


ಆಗ ಪೇತ್ರನು ಯೇಸುವನ್ನು ಸ್ವಲ್ಪ ದೂರದಲ್ಲಿ ಕರೆದೊಯ್ದು, “ದೇವರು ನಿನ್ನನ್ನು ಕಾಪಾಡಲಿ, ನಿನಗೆಂದಿಗೂ ಹಾಗೆ ಸಂಭವಿಸದಿರಲಿ!” ಎಂದು ಪ್ರತಿಭಟಿಸಿದನು.


ಒಂದೇ ಜನಾಂಗವಾಗುವ ಬಯಕೆಯನ್ನು ನಾನು ಅವರಲ್ಲಿ ಉಂಟುಮಾಡುವೆನು. ಅವರು ತಮ್ಮ ಜೀವಮಾನವೆಲ್ಲಾ ನನ್ನನ್ನು ಆರಾಧಿಸಬೇಕೆಂಬ ಬಯಕೆಯನ್ನು ಹೊಂದಿರುವರು. ಹೌದು, ಅವರ ಬಯಕೆಯೂ ಅವರ ಮಕ್ಕಳ ಬಯಕೆಯೂ ಇದೇ ಆಗಿರುವುದು.


ಮಗುವು ಗಟ್ಟಿಯಾದ ಊಟ ಮಾಡುವಂತಾದಾಗ ಹನ್ನಳು ಶೀಲೋವಿನಲ್ಲಿದ್ದ ಯೆಹೋವನ ಆಲಯಕ್ಕೆ ಅವನನ್ನು ಕರೆದುಕೊಂಡು ಹೋದಳು. ಹನ್ನಳು ಮೂರು ವರ್ಷದ ಒಂದು ಹೋರಿಯನ್ನೂ ಮೂವತ್ತು ಸೇರು ಹಿಟ್ಟನ್ನೂ ಒಂದು ಸೀಸೆ ದ್ರಾಕ್ಷಾರಸವನ್ನೂ ತೆಗೆದುಕೊಂಡು ಹೋದಳು.


ಸ್ವಲ್ಪ ಕಾಲದ ನಂತರ, ತಂದೆಯು ಬಹಳ ಅನಾರೋಗ್ಯದಿಂದಿರುವುದು ಯೋಸೇಫನಿಗೆ ತಿಳಿಯಿತು. ಆದ್ದರಿಂದ ಅವನು ತನ್ನ ಇಬ್ಬರು ಗಂಡುಮಕ್ಕಳಾದ ಮನಸ್ಸೆಯನ್ನು ಮತ್ತು ಎಫ್ರಾಯೀಮನನ್ನು ಕರೆದುಕೊಂಡು ತನ್ನ ತಂದೆಯ ಬಳಿಗೆ ಬಂದನು.


ಕೆಲವರು ಮದುವೆ ಆಗದಿರಲು ಬೇರೆಬೇರೆ ಕಾರಣಗಳಿವೆ. ಹುಟ್ಟಿದಂದಿನಿಂದಲೇ ಕೆಲವರು ನಪುಂಸಕರಾಗಿರುತ್ತಾರೆ. ಇನ್ನು ಕೆಲವರು ಬೇರೆಯವರಿಂದ ನಪುಂಸಕರಾಗಿ ಮಾಡಲ್ಪಡುತ್ತಾರೆ. ಬೇರೆ ಕೆಲವರು ಪರಲೋಕರಾಜ್ಯಕ್ಕೋಸ್ಕರ ಮದುವೆಯನ್ನು ತೊರೆದುಬಿಡುತ್ತಾರೆ. ಆದರೆ ಮದುವೆ ಆಗುವಂಥವನು ಮದುವೆ ವಿಷಯವಾದ ಈ ಬೋಧನೆಯನ್ನು ಸ್ವೀಕರಿಸಬೇಕು” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು