Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 19:22 - ಪರಿಶುದ್ದ ಬೈಬಲ್‌

22 ಇದನ್ನು ಕೇಳಿದಾಗ ಅವನು ಬಹಳ ದುಃಖದಿಂದ ಹೊರಟುಹೋದನು. ಏಕೆಂದರೆ ಅವನು ದೊಡ್ಡ ಐಶ್ವರ್ಯವಂತನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆದರೆ ಆ ಯೌವನಸ್ಥನು ಬಹಳ ಆಸ್ತಿಯುಳ್ಳವನಾಗಿದ್ದುದರಿಂದ ಈ ಮಾತನ್ನು ಕೇಳಿ ದುಃಖದಿಂದ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಇದನ್ನು ಕೇಳಿದ್ದೇ ಆ ಯುವಕ ಖಿನ್ನಮನಸ್ಕನಾಗಿ ಅಲ್ಲಿಂದ ಹೊರಟೇಹೋದ. ಏಕೆಂದರೆ ಅವನಿಗೆ ಅಪಾರ ಆಸ್ತಿಪಾಸ್ತಿಯಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆ ಯೌವನಸ್ಥನು ಬಹಳ ಆಸ್ತಿಯುಳ್ಳವನಾಗಿದ್ದದರಿಂದ ಈ ಮಾತನ್ನು ಕೇಳಿ ದುಃಖದಿಂದ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆದರೆ ಆ ಯುವಕನು ಯೇಸು ಹೇಳಿದ್ದನ್ನು ಕೇಳಿ, ದುಃಖದಿಂದ ಹೊರಟುಹೋದನು. ಏಕೆಂದರೆ ಅವನಿಗೆ ಬಹಳ ಆಸ್ತಿ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಹೆ ಆಯ್ಕುನ್ ತ್ಯಾ ದಾಂಡ್ಗ್ಯಾ ಮಾನ್ಸಾಕ್ ಲೈ ಬೆಜಾರ್ ಹೊಲೊ ಕಶ್ಯಾಕ್ ಮಟ್ಲ್ಯಾರ್ ತೊ ಲೈ ಸಾವ್ಕಾರ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 19:22
17 ತಿಳಿವುಗಳ ಹೋಲಿಕೆ  

“ಯಾವನೂ ಇಬ್ಬರು ಯಜಮಾನರಿಗೆ ಒಂದೇ ಸಮಯದಲ್ಲಿ ಸೇವೆ ಮಾಡಲಾರನು. ಅವನು ಒಬ್ಬ ಯಜಮಾನನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುತ್ತಾನೆ ಅಥವಾ ಒಬ್ಬ ಯಜಮಾನನನ್ನು ಹಿಂಬಾಲಿಸಿ ಮತ್ತೊಬ್ಬನನ್ನು ತಾತ್ಸಾರ ಮಾಡುತ್ತಾನೆ. ಆದ್ದರಿಂದ ನೀನು ದೇವರಿಗೆ ಮತ್ತು ಹಣಕ್ಕೆ ಒಂದೇ ಸಮಯದಲ್ಲಿ ಸೇವೆ ಮಾಡಲಾರೆ.


ಎಂದು ಹೇಳುತ್ತಾ ನಿನ್ನ ಬಳಿಗೆ ನನ್ನ ಜನರಂತೆ ಬರುವರು. ನನ್ನ ಜನರಂತೆ ನಿನ್ನ ಎದುರಿನಲ್ಲಿ ಬಂದು ಕುಳಿತುಕೊಳ್ಳುವರು. ನಿನ್ನ ಮಾತುಗಳನ್ನು ಅವರು ಕೇಳಿದರೂ ಅವುಗಳಿಗೆ ವಿಧೇಯರಾಗದೆ ಇಷ್ಟಪಡುವದನ್ನೆ ಮಾಡುವರು. ಇತರರಿಗೆ ಮೋಸ ಮಾಡಿ ಹಣಗಳಿಸುವದೇ ಅವರ ಕೆಲಸ.


“ಮುಳ್ಳುಗಿಡಗಳ ನಡುವೆ ಬಿದ್ದ ಬೀಜ ಅಂದರೇನು? ಬೋಧನೆಯನ್ನು ಕೇಳಿದರೂ ಜೀವನದ ಚಿಂತೆಗಳಿಂದ ಮತ್ತು ಹಣದ ಮೇಲಿನ ಪ್ರೀತಿಯಿಂದ ಬೋಧನೆಯನ್ನು ತನ್ನಲ್ಲಿ ಬೆಳೆಯದಂತೆ ಮಾಡುವವನೇ ಬೀಜ ಬಿದ್ದ ಮುಳ್ಳುಗಿಡಗಳ ನೆಲವಾಗಿರವನು. ಆದ್ದರಿಂದ ಬೋಧನೆಯು ಆ ಮನುಷ್ಯನ ಜೀವಿತದಲ್ಲಿ ಫಲ ಕೊಡುವುದಿಲ್ಲ.


ಆದ್ದರಿಂದ ದುಷ್ಕೃತ್ಯಗಳಾದ ಲೈಂಗಿಕ ಪಾಪ, ದುರಾಚಾರ, ಕಾಮಾಭಿಲಾಷೆ, ದುರಾಶೆ ಮತ್ತು ಸ್ವಾರ್ಥತೆಗಳನ್ನು ನಿಮ್ಮ ಜೀವಿತದಿಂದ ತೆಗೆದುಹಾಕಿರಿ. ಸ್ವಾರ್ಥವು ವಿಗ್ರಹಾರಾಧನೆಗೆ ಸಮವಾಗಿದೆ.


ಇದು ನಿಮಗೆ ಚೆನ್ನಾಗಿ ತಿಳಿದಿರಲಿ: ಲೈಂಗಿಕ ಪಾಪಮಾಡುವವರಿಗೆ, ದುಷ್ಕೃತ್ಯಗಳನ್ನು ಮಾಡುವವರಿಗೆ, ಸ್ವಾರ್ಥಿಗಳಿಗೆ, ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಸ್ಥಳವೇ ಇಲ್ಲ. ಸ್ವಾರ್ಥತೆಯು ವಿಗ್ರಹಾರಾಧನೆಗೆ ಸಮಾನವಾಗಿದೆ.


ಯೇಸುವಿನ ಈ ಮಾತನ್ನು ಕೇಳಿ ಅವನು ನಿರಾಶೆಯಿಂದ ದುಃಖಗೊಂಡು ಹೊರಟುಹೋದನು. ಬಹಳ ಧನವಂತನಾಗಿದ್ದ ಅವನು ತನ್ನ ಅಪಾರ ಆಸ್ತಿಯನ್ನು ಮಾರಲು ಇಷ್ಟಪಡಲಿಲ್ಲ.


ಒಬ್ಬನು ಪ್ರಪಂಚವನ್ನೆಲ್ಲಾ ಗಳಿಸಿಕೊಂಡು ತನ್ನ ಆತ್ಮವನ್ನೇ ಕಳೆದುಕೊಂಡರೆ ಅದರಿಂದ ಅವನಿಗೇನು ಪ್ರಯೋಜನ? ಮನುಷ್ಯನು ತನ್ನ ಆತ್ಮವನ್ನು ಕೊಂಡುಕೊಳ್ಳಲು ಏನನ್ನು ತಾನೇ ಕೊಡಬಲ್ಲನು?


ಯೇಸುವಿನ ಈ ಮಾತುಗಳನ್ನು ಕೇಳಿದಾಗ ಅವನಿಗೆ ಬಹಳ ದುಃಖವಾಯಿತು. ಏಕೆಂದರೆ ಅವನು ಬಹಳ ಐಶ್ವರ್ಯವಂತನಾಗಿದ್ದನು.


ರಾಜ ಹೆರೋದನು ಬಹಳವಾಗಿ ದುಃಖಪಟ್ಟನು. ಆದರೆ ಏನು ಕೇಳಿದರೂ ಕೊಡುತ್ತೇನೆಂದು ಅವನು ಅವಳಿಗೆ ವಾಗ್ದಾನ ಮಾಡಿದ್ದನು. ಹೆರೋದನ ಪಂಕ್ತಿಯಲ್ಲಿ ಊಟ ಮಾಡುತ್ತಿದ್ದವರು ಸಹ ಆ ವಾಗ್ದಾನವನ್ನು ಕೇಳಿಸಿಕೊಂಡಿದ್ದರು. ಆದ್ದರಿಂದ ಅವಳು ಕೇಳಿದ್ದನ್ನು ಕೊಡುವುದಕ್ಕೆ ಹೆರೋದನು ಅಪ್ಪಣೆಕೊಟ್ಟನು.


ರಾಜ ಹೆರೋದನು ಬಹಳ ವ್ಯಸನಗೊಂಡನು. ಆದರೆ ಅವನು ಆ ಹುಡುಗಿಗೆ ಏನು ಬೇಕಾದರೂ ಕೊಡುವೆನೆಂದು ಪ್ರಮಾಣ ಮಾಡಿದ್ದನು. ಅಲ್ಲಿ ಹೆರೋದನ ಸಂಗಡ ಊಟಮಾಡುತ್ತಿದ್ದ ಜನರು ಆ ಪ್ರಮಾಣವನ್ನು ಕೇಳಿಸಿಕೊಂಡಿದ್ದರು. ಆದ್ದರಿಂದ ಅವಳು ಕೇಳಿದ್ದನ್ನು ನಿರಾಕರಿಸಲು ಹೆರೋದನು ಇಚ್ಛಿಸಲಿಲ್ಲ.


ಯೆಹೋವನೇ, ಈ ಲೋಕಕ್ಕಾಗಿಯೇ ಜೀವಿಸುವ ಜನರಿಂದ ನನ್ನನ್ನು ತಪ್ಪಿಸಿ ಕಾಪಾಡು. ನಿನ್ನ ಸಹಾಯಕ್ಕಾಗಿ ಮೊರೆಯಿಡುವ ಅನೇಕರು ಕೊರತೆಯಲ್ಲಿದ್ದಾರೆ. ಅವರಿಗೆ ಆಹಾರವನ್ನು ಹೇರಳವಾಗಿ ದಯಪಾಲಿಸು. ಅವರ ಮಕ್ಕಳಿಗೂ ಮೊಮ್ಮಕ್ಕಳಿಗೂ ಬೇಕಾದದ್ದನ್ನೆಲ್ಲಾ ಒದಗಿಸಿಕೊಡು.


ಯೇಸು, “ನೀನು ಸಂಪೂರ್ಣನಾಗಬೇಕೆಂದಿದ್ದರೆ ಹೋಗಿ ನಿನ್ನ ಆಸ್ತಿಯನ್ನೆಲ್ಲಾ ಮಾರಿ, ಬಂದ ಹಣವನ್ನು ಬಡವರಿಗೆ ಕೊಡು. ಆಗ ನಿನಗೆ ಪರಲೋಕದಲ್ಲಿ ದೊಡ್ಡ ಭಂಡಾರ ಇರುವುದು. ನಂತರ ಬಂದು ನನ್ನನ್ನು ಹಿಂಬಾಲಿಸು!” ಎಂದು ಉತ್ತರಕೊಟ್ಟನು.


ಆಗ ಯೇಸು ತನ್ನ ಶಿಷ್ಯರಿಗೆ, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಐಶ್ವರ್ಯವಂತನು ಪರಲೋಕರಾಜ್ಯಕ್ಕೆ ಪ್ರವೇಶಿಸುವುದು ಬಹಳ ಕಷ್ಟಕರ.


ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಅಳುವಿರಿ, ದುಃಖಪಡುವಿರಿ. ಆದರೆ ಲೋಕವು ಸಂತೋಷಪಡುವುದು. ನೀವು ದುಃಖಪಡುವಿರಿ, ಆದರೆ ನಿಮ್ಮ ದುಃಖವು ಆನಂದವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು