Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 2:2 - ಪರಿಶುದ್ದ ಬೈಬಲ್‌

2 ಆ ಜ್ಞಾನಿಗಳು ಜನರಿಗೆ, “ಯೆಹೂದ್ಯರ ರಾಜನು ಹುಟ್ಟಿದ್ದಾನಲ್ಲವೇ? ಆತನೆಲ್ಲಿ? ಆತನು ಹುಟ್ಟಿದನೆಂದು ಸೂಚಿಸುವ ನಕ್ಷತ್ರ ಪೂರ್ವದಲ್ಲಿ ಉದಯಿಸಿದ್ದನ್ನು ಕಂಡು ಆತನನ್ನು ಆರಾಧಿಸಲು ಬಂದೆವು” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಯೆಹೂದ್ಯರ ಅರಸನಾಗಿ ಹುಟ್ಟಿದಾತನು ಎಲ್ಲಿದ್ದಾನೆ? ಆತನನ್ನು ಸೂಚಿಸುವ ನಕ್ಷತ್ರವನ್ನು ನಾವು ಪೂರ್ವದಿಕ್ಕಿನಲ್ಲಿ ಕಂಡು ಆತನಿಗೆ ಅಡ್ಡಬಿದ್ದು ನಮಸ್ಕರಿಸುವುದಕ್ಕಾಗಿ ಬಂದೆವು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಯೆಹೂದ್ಯರ ಅರಸ ಹುಟ್ಟಿದ್ದಾರಲ್ಲವೇ, ಅವರೆಲ್ಲಿ?” ಎಂದು ವಿಚಾರಿಸಿದರು; “ಅವರನ್ನು ಸೂಚಿಸುವ ನಕ್ಷತ್ರ ಪೂರ್ವದಲ್ಲಿ ಉದಯಿಸಿದ್ದನ್ನು ಕಂಡು ಅವರನ್ನು ಆರಾಧಿಸಲು ಇಲ್ಲಿಗೆ ಬಂದಿದ್ದೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆಹೂದ್ಯರ ಅರಸನಾಗಿ ಹುಟ್ಟಿದವನು ಎಲ್ಲಿದ್ದಾನೆ? ಆತನನ್ನು ಸೂಚಿಸುವ ನಕ್ಷತ್ರವನ್ನು ನಾವು ಮೂಡಣದೇಶದಲ್ಲಿ ಕಂಡು ಆತನಿಗೆ ಅಡ್ಡಬೀಳುವದಕ್ಕೆ ಬಂದೆವು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಯೆಹೂದ್ಯರ ಅರಸರಾಗಿ ಹುಟ್ಟಿದವರು ಎಲ್ಲಿ? ನಾವು ಅವರನ್ನು ಸೂಚಿಸುವ ನಕ್ಷತ್ರವನ್ನು ಪೂರ್ವದೇಶದಲ್ಲಿ ಕಂಡು ಅವರನ್ನು ಆರಾಧಿಸಲು ಬಂದಿದ್ದೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಅನಿ “ಜುದೆವ್ ಲೊಕಾಂಚೊ ರಾಜಾ ಹೊವ್ಕ್ ಮನುನ್ ಜಲಮಲ್ಲೊ ಪೊರ್ ಖೈ ಹಾಯ್? ದಿಸ್ ಉಗಾವ್ತಲ್ಯಾ ದಿಕ್ಕಾಕ್ ತೆಚೆ ಚಿಕ್ಕಿ ವೈರ್ ಯೆಲ್ಲೆ ಅಮಿ ಬಗಟ್ಲಾವ್, ಅನಿ ತೆಕಾ ಮಾನ್ ಕರುಕ್ ಮನುನ್ ಅಮಿ ಯೆಲಾವ್.” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 2:2
28 ತಿಳಿವುಗಳ ಹೋಲಿಕೆ  

“ಬರುತ್ತಿರುವ ಒಬ್ಬನನ್ನು ನೋಡುತ್ತಿದ್ದೇನೆ. ಆದರೆ ಈಗಲ್ಲ. ಬರುತ್ತಿರುವ ಒಬ್ಬನನ್ನು ನೋಡುತ್ತಿದ್ದೇನೆ, ಆದರೆ ಬೇಗನೆ ಅಲ್ಲ. ಯಾಕೋಬನ ವಂಶದಿಂದ ನಕ್ಷತ್ರವೊಂದು ಬರುವುದು. ಇಸ್ರೇಲರಿಂದ ಅರಸನೊಬ್ಬನು ಬರುವನು. ಅವನು ಮೋವಾಬ್ಯರ ತಲೆಯನ್ನು ಜಜ್ಜುವನು. ಆ ಅರಸನು ಶೇತನ ಪುತ್ರರೆಲ್ಲರ ತಲೆಗಳನ್ನು ಜಜ್ಜುವನು.


ಇದು ಯೆಹೋವನ ಸಂದೇಶ: “ನಾನು ಒಳ್ಳೆಯ ‘ಸಸಿಯನ್ನು’ ಚಿಗುರಿಸುವ ಕಾಲ ಬಂದಿದೆ. ಅವನು ಬುದ್ಧಿವಂತಿಕೆಯಿಂದ ಆಳುವ ರಾಜನಾಗಿರುವನು. ಅವನು ದೇಶದಲ್ಲಿ ನೀತಿ ಮತ್ತು ನ್ಯಾಯಬದ್ಧವಾದದ್ದನ್ನು ಮಾಡುವನು.


“ಯೇಸುವೆಂಬ ನಾನೇ, ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ಬಗ್ಗೆ ಸಾಕ್ಷಿ ನೀಡಲೆಂದು ನನ್ನ ದೂತನನ್ನು ಕಳುಹಿಸಿದೆನು. ದಾವೀದನ ವಂಶದಲ್ಲಿ ಹುಟ್ಟಿದವನೂ ಪ್ರಕಾಶಮಾನವಾದ ಉದಯನಕ್ಷತ್ರವೂ ಆಗಿದ್ದಾನೆ.”


ಚೀಯೋನ್ ನಗರಿಯೇ, ಹರ್ಷಿಸು! ಜೆರುಸಲೇಮ್ ಜನರೇ, ಸಂತೋಷದಿಂದ ಆರ್ಭಟಿಸಿರಿ. ನಿಮ್ಮ ಅರಸನು ನಿಮ್ಮ ಬಳಿಗೆ ಬರುತ್ತಿದ್ದಾನೆ! ಆತನು ವಿಜಯಶಾಲಿಯಾದ ನೀತಿವಂತನಾಗಿದ್ದಾನೆ. ಆದರೆ ದೀನನಂತೆ ಕತ್ತೆಯ ಮೇಲೆ, ಹೌದು, ಕತ್ತೆಯ ಮರಿಯ ಮೇಲೆ ಸವಾರಿ ಮಾಡಿಕೊಂಡು ಬರುವನು.


ಜನಾಂಗಗಳು ನಿನ್ನ ಬೆಳಕಿನ ಕಡೆಗೆ ಬರುವರು. ಅರಸರುಗಳು ನಿನ್ನ ಪ್ರಕಾಶಮಾನವಾದ ಬೆಳಕಿನತ್ತ ಬರುವರು.


ಪಿಲಾತನು, “ಹಾಗಾದರೆ ನೀನು ರಾಜ!” ಎಂದನು. ಯೇಸು, “ನೀನೇ ನನ್ನನ್ನು ರಾಜನೆಂದು ಹೇಳುತ್ತಿರುವೆ. ಅದು ಸತ್ಯ. ನಾನು ಜನರಿಗೆ ಸತ್ಯದ ಬಗ್ಗೆ ಹೇಳುವುದಕ್ಕಾಗಿಯೇ ಹುಟ್ಟಿದೆನು. ಆದಕಾರಣವೇ ನಾನು ಈ ಲೋಕಕ್ಕೆ ಬಂದೆನು. ಸತ್ಯಕ್ಕೆ ಸೇರಿದ ಪ್ರತಿಯೊಬ್ಬನೂ ನನಗೆ ಕಿವಿಗೊಡುತ್ತಾನೆ” ಎಂದು ಉತ್ತರಕೊಟ್ಟನು.


ದೇವರು ತನ್ನ ಚೊಚ್ಚಲ ಮಗನನ್ನು ಈ ಲೋಕಕ್ಕೆ ಬರಮಾಡುವಾಗ, ಆತನು ಹೇಳುವುದೇನೆಂದರೆ, “ದೇವದೂತರೆಲ್ಲರೂ ಆತನನ್ನು ಆರಾಧಿಸಲಿ.”


(ಶಿಲುಬೆಯ ಮೇಲ್ಭಾಗದಲ್ಲಿ, “ಈತನು ಯೆಹೂದ್ಯರ ಅರಸನು” ಎಂದು ಬರೆಯಲಾಗಿತ್ತು.)


ಪಿಲಾತನು ಯೇಸುವನ್ನು, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು. ಯೇಸು, “ನೀನೇ ಹೇಳಿರುವೆ!” ಎಂದು ಉತ್ತರಿಸಿದನು.


ಜನರು ತಂದೆಯನ್ನು ಗೌರವಿಸುವಂತೆ ಮಗನನ್ನು ಗೌರವಿಸಬೇಕೆಂದು ದೇವರು ಹೀಗೆ ಮಾಡಿದನು. ಮಗನನ್ನು ಸನ್ಮಾನಿಸದವನು ಆತನನ್ನು ಕಳುಹಿಸಿರುವ ತಂದೆಯನ್ನೂ ಸನ್ಮಾನಿಸದವನಾಗಿದ್ದಾನೆ.


ಆಗ ನತಾನಿಯೇಲನು ಯೇಸುವಿಗೆ, “ಗುರುವೇ, ನೀನೇ ದೇವರ ಮಗನು. ನೀನೇ ಇಸ್ರೇಲರ ರಾಜ” ಎಂದು ಹೇಳಿದನು.


ಅವರು, “‘ಪ್ರಭುವಿನ ಹೆಸರಿನಲ್ಲಿ ಬರುವ ಅರಸನಿಗೆ ಆಶೀರ್ವಾದವಾಗಲಿ!’ ಪರಲೋಕದಲ್ಲಿ ಸಮಾಧಾನವಾಗಲಿ; ದೇವರಿಗೆ ಮಹಿಮೆಯಾಗಲಿ” ಎಂದು ಆರ್ಭಟಿಸಿದರು.


ಈ ದಿನ ನಿಮಗೋಸ್ಕರ ದಾವೀದನ ಊರಿನಲ್ಲಿ ರಕ್ಷಕನು ಜನಿಸಿದ್ದಾನೆ. ಆತನೇ ಪ್ರಭುವಾದ ಕ್ರಿಸ್ತನು.


ಇಸ್ರೇಲರು ಮತ್ತು ಯೆಹೂದ್ಯರು ಪರದೇಶಿಯರ ಸೇವೆಮಾಡುವುದಿಲ್ಲ. ಅವರು ತಮ್ಮ ದೇವರಾದ ಯೆಹೋವನ ಸೇವೆಯನ್ನೇ ಮಾಡುವರು, ಅವರು ತಮ್ಮ ರಾಜನಾದ ದಾವೀದನ ಸೇವೆಮಾಡುವರು, ನಾನು ಆ ರಾಜನನ್ನು ಕಳುಹಿಸುವೆನು.”


ಆಗ ರಾಜನು ನಿನ್ನ ಸೌಂದರ್ಯವನ್ನು ಮೆಚ್ಚಿಕೊಳ್ಳುವನು. ಅವನು ನಿನಗೆ ಹೊಸ ಯಜಮಾನನಾಗಿರುವನು. ಆದ್ದರಿಂದ ನೀನು ಅವನನ್ನು ಗೌರವಿಸಬೇಕು.


ಆ ಮನುಷ್ಯನು, “ಹೌದು ಪ್ರಭುವೇ, ನಾನು ನಂಬುತ್ತೇನೆ!” ಎಂದು ಉತ್ತರಕೊಟ್ಟನು. ಬಳಿಕ ಅವನು ಯೇಸುವಿಗೆ ಅಡ್ಡಬಿದ್ದು ಆರಾಧಿಸಿದನು.


ಪಿಲಾತನು ಒಂದು ಫಲಕವನ್ನು ಬರೆದು ಶಿಲುಬೆಯ ಮೇಲೆ ಹಚ್ಚಿದನು. ಆ ಫಲಕದಲ್ಲಿ, “ನಜರೇತಿನ ಯೇಸು, ಯೆಹೂದ್ಯರ ರಾಜನು” ಎಂದು ಬರೆದಿತ್ತು.


ಜನರು ಖರ್ಜೂರದ ಗರಿಗಳನ್ನು ತೆಗೆದುಕೊಂಡು ಯೇಸುವನ್ನು ಎದುರುಗೊಳ್ಳಲು ಹೋದರು. “ಆತನಿಗೆ ಸ್ತೋತ್ರವಾಗಲಿ! ‘ಪ್ರಭುವಿನ ಹೆಸರಿನಲ್ಲಿ ಬರುವಾತನಿಗೆ ದೇವರಾಶೀರ್ವಾದವಾಗಲಿ!’ ಇಸ್ರೇಲ್ ರಾಜನಿಗೆ ದೇವರಾಶೀರ್ವಾದವಾಗಲಿ!” ಎಂದು ಜನರು ಕೂಗಿದರು.


ಯೇಸುವನ್ನು ರಾಜ್ಯಪಾಲ ಪಿಲಾತನ ಎದುರಿನಲ್ಲಿ ನಿಲ್ಲಿಸಿದರು. ಪಿಲಾತನು ಆತನಿಗೆ, “ನೀನು ಯೆಹೂದ್ಯರ ರಾಜನೇ?” ಎಂದು ಕೇಳಿದನು. ಯೇಸು, “ಹೌದು, ನೀನು ಹೇಳಿದಂತೆ ಆತನೇ ನಾನು” ಎಂದು ಉತ್ತರಕೊಟ್ಟನು.


ತೋಮನು ಯೇಸುವಿಗೆ, “ನನ್ನ ಪ್ರಭುವೇ, ನನ್ನ ದೇವರೇ!” ಎಂದು ಹೇಳಿದನು.


“ಸೀಯೋನ್ ನಗರಿಗೆ ಹೇಳಿರಿ, ‘ನಿನ್ನ ರಾಜನು ಈಗ ನಿನ್ನ ಬಳಿಗೆ ಬರುತ್ತಿದ್ದಾನೆ. ದೀನತೆಯಿಂದ ಕತ್ತೆಯ ಮೇಲೆ ಬರುತ್ತಿದ್ದಾನೆ. ಹೌದು, ಪ್ರಾಯದ ಕತ್ತೆಮರಿಯ ಮೇಲೆ ಬರುತ್ತಿದ್ದಾನೆ.’”


ಯೆಹೂದ್ಯರ ಈ ಹೊಸ ರಾಜನ ವಿಷಯ ತಿಳಿದಾಗ ಹೆರೋದನು ಮತ್ತು ಜೆರುಸಲೇಮಿನ ಜನರೆಲ್ಲರೂ ಗಲಿಬಿಲಿಗೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು