Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 2:22 - ಪರಿಶುದ್ದ ಬೈಬಲ್‌

22 ಆದರೆ ಹೆರೋದನು ಸತ್ತನಂತರ ಅವನ ಮಗನಾದ ಅರ್ಖೆಲಾಯನು ಜುದೇಯದ ರಾಜನಾಗಿದ್ದಾನೆ ಎಂಬುದನ್ನು ಕೇಳಿ ಅಲ್ಲಿಗೆ ಹೋಗಲು ಭಯಪಟ್ಟನು. ಕನಸಿನಲ್ಲಿ ತನಗೆ ಕೊಟ್ಟ ಎಚ್ಚರಿಕೆಯಂತೆ ಅವನು ಆ ಸ್ಥಳವನ್ನು ಬಿಟ್ಟು ಗಲಿಲಾಯ ಪ್ರದೇಶಕ್ಕೆ ಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆದರೆ ಅರ್ಖೆಲಾಯನು ತನ್ನ ತಂದೆಯಾದ ಹೆರೋದನಿಗೆ ಬದಲಾಗಿ ಯೂದಾಯವನ್ನು ಆಳುತ್ತಿದ್ದಾನೆ ಎಂದು ಕೇಳಿ ಅಲ್ಲಿಗೆ ಹೋಗುವುದಕ್ಕೆ ಅಂಜಿದನು. ಆಗ ಅವನು ಕನಸಿನಲ್ಲಿ ದೇವರ ಅಪ್ಪಣೆಯನ್ನು ಹೊಂದಿ ಗಲಿಲಾಯ ಸೀಮೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆದರೆ ಹೆರೋದನ ಮಗ ಅರ್ಖೆಲಾಯನು ತಂದೆಯ ಬದಲಿಗೆ ಜುದೇಯ ಪ್ರಾಂತ್ಯವನ್ನು ಆಳುತ್ತಿದ್ದಾನೆಂದು ಕೇಳಿ ಜೋಸೆಫನು ಅಲ್ಲಿಗೆ ಹೋಗಲು ಅಂಜಿದನು. ಕನಸಿನಲ್ಲಿ ತಾನು ಪಡೆದ ಆದೇಶದ ಪ್ರಕಾರ ಗಲಿಲೇಯ ಪ್ರಾಂತ್ಯಕ್ಕೆ ತೆರಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆದರೆ ಅರ್ಖೆಲಾಯನು ತನ್ನ ತಂದೆಯಾದ ಹೆರೋದನಿಗೆ ಬದಲಾಗಿ ಯೂದಾಯವನ್ನು ಆಳುತ್ತಾನೆಂದು ಕೇಳಿ ಅಲ್ಲಿಗೆ ಹೋಗುವದಕ್ಕೆ ಅಂಜಿದನು. ಆಗ ಅವನು ಕನಸಿನಲ್ಲಿ ದೇವರ ಅಪ್ಪಣೆಯನ್ನು ಹೊಂದಿ ಗಲಿಲಾಯ ಸೀಮೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆದರೆ ಹೆರೋದನ ಮಗ ಅರ್ಖೆಲಾಯನು, ತಂದೆಯ ಬದಲಾಗಿ ಯೂದಾಯ ಪ್ರಾಂತವನ್ನು ಆಳುತ್ತಿದ್ದಾನೆಂದು ಕೇಳಿ, ಅಲ್ಲಿಗೆ ಹೋಗಲು ಭಯಪಟ್ಟನು. ಆಗ ಕನಸಿನಲ್ಲಿ ಹೊಂದಿದ ಎಚ್ಚರಿಕೆಯ ಪ್ರಕಾರ ಯೋಸೇಫನು ಗಲಿಲಾಯ ಪ್ರಾಂತಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಖರೆ ಹೆರೊದಾಚ್ಯಾ ಜಾಗ್ಯಾರ್ ತೆಚೊ ಲೆಕ್ ಅರ್‍ಖೆಲಾವ್ ಜುದೆಯಾಚೊ ರಾಜಾ ಹೊಲಾ ಮನುನ್ ಆಯ್ಕುನ್ ಜುಜೆ ಬೆತ್ಲೆಹೆಮಾಕ್ ಜಾವ್ಕ್ ಭಿಂಯಾಲೊ, ಅನಿ ಸಪ್ನಾತ್ ತೆಕಾ ಸಾಂಗಲ್ಲ್ಯಾ ಸರ್ಕೆ ಗಾಲಿಲಿಯಾ ಪ್ರಾಂತ್ಯಾಕ್ ತೊ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 2:22
18 ತಿಳಿವುಗಳ ಹೋಲಿಕೆ  

ಪ್ರಭುವಿನ ಧರ್ಮಶಾಸ್ತ್ರದ ಎಲ್ಲ ವಿಧಿಗಳನ್ನು ನೆರವೇರಿಸಿದ ಮೇಲೆ ಯೋಸೇಫ ಮತ್ತು ಮರಿಯಳು ಗಲಿಲಾಯ ಪ್ರಾಂತ್ಯದಲ್ಲಿದ್ದ ತಮ್ಮ ಸ್ವಂತ ಊರಾದ ನಜರೇತಿಗೆ ಹಿಂತಿರುಗಿದರು.


ಯೆಹೂದ್ಯನಾಯಕರು, “ನೀನೂ ಗಲಿಲಾಯದವನೋ? ಪವಿತ್ರ ಗ್ರಂಥವನ್ನು ಅಧ್ಯಯನಮಾಡು. ಗಲಿಲಾಯದಿಂದ ಯಾವ ಪ್ರವಾದಿಯೂ ಬರುವುದಿಲ್ಲವೆಂಬುದು ಆಗ ನಿನಗೆ ತಿಳಿಯುತ್ತದೆ” ಎಂದು ಉತ್ತರಕೊಟ್ಟರು.


ಆ ಸಮಯದಲ್ಲಿ ಯೋಹಾನನಿಂದ ಯೇಸು ದೀಕ್ಷಾಸ್ನಾನ ಮಾಡಿಸಿಕೊಳ್ಳಲು ಗಲಿಲಾಯದಿಂದ ಜೋರ್ಡನ್ ನದಿಗೆ ಬಂದನು.


ಹೆರೋದನು ಸತ್ತನಂತರ, ಪ್ರಭುವಿನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡನು. ಯೋಸೇಫನು ಈಜಿಪ್ಟಿನಲ್ಲಿ ಇರುವಾಗಲೇ ಇದು ಸಂಭವಿಸಿತು.


ಯೋಸೇಫನು ಹೀಗೆ ಆಲೋಚಿಸಿಕೊಂಡನಂತರ, ಪ್ರಭುವಿನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡನು. ಆ ದೂತನು, “ದಾವೀದನ ಮಗನಾದ ಯೋಸೇಫನೇ, ಮರಿಯಳನ್ನು ನಿನ್ನ ಹೆಂಡತಿಯಾಗಿ ಸ್ವೀಕರಿಸಲು ಭಯಪಡಬೇಡ. ಆಕೆ ಪವಿತ್ರಾತ್ಮನ ಪ್ರಭಾವದಿಂದ ಗರ್ಭಿಣಿಯಾಗಿದ್ದಾಳೆ.


ಆದರೆ ನೀವು ತಪ್ಪು ಕಾರ್ಯಮಾಡಿದರೆ, ದುಷ್ಟತ್ವದಲ್ಲಿ ಜೀವಿಸಿದರೆ ನಿಮ್ಮ ಹಿಂದಿನಿಂದ ಒಂದು ಸ್ವರ, “ಇದು ಸರಿಯಾದ ಮಾರ್ಗ. ಈ ಮಾರ್ಗದಲ್ಲಿ ಮುಂದುವರಿಯಿರಿ” ಎಂದು ಹೇಳುವುದು ಕೇಳಿಸುವದು.


ನೀನು ಹೋಗುವಾಗಲೂ ಬರುವಾಗಲೂ ಯೆಹೋವನು ನಿನಗೆ ಸಹಾಯಮಾಡುವನು. ಆತನು ನಿನ್ನನ್ನು ಸದಾಕಾಲ ಕಾಪಾಡುವನು.


ನನಗೆ ಉಪದೇಶಿಸುತ್ತಾ ನನ್ನನ್ನು ಮುನ್ನಡೆಸು. ಬಳಿಕ ನಿನ್ನ ಮಹಿಮೆಗೆ ನನ್ನನ್ನು ಸೇರಿಸಿಕೊ.


ಈ ದೇವರೇ ಎಂದೆಂದಿಗೂ ನಮ್ಮ ದೇವರು! ನಮ್ಮನ್ನು ಶಾಶ್ವತವಾಗಿ ನಡೆಸುವಾತನು ಆತನೇ!


ಅದಕ್ಕೆ ಸಮುವೇಲನು, “ನಾನು ಹೊರಟರೆ ಸೌಲನಿಗೆ ಈ ಸುದ್ದಿಯು ತಿಳಿಯುತ್ತದೆ. ಆಗ ಅವನು ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಾನೆ” ಎಂದನು. ಯೆಹೋವನು, “ಬೆತ್ಲೆಹೇಮಿಗೆ ಹೋಗು. ನಿನ್ನೊಡನೆ ಒಂದು ಎಳೆಕರುವನ್ನು ತೆಗೆದುಕೊಂಡು ಹೋಗು. ‘ನಾನು ಯೆಹೋವನಿಗೆ ಯಜ್ಞವನ್ನರ್ಪಿಸಲು ಬಂದಿದ್ದೇನೆ’ ಎಂದು ಹೇಳು.


ಹೆರೋದನು ರಾಜನಾಗಿದ್ದ ಕಾಲದಲ್ಲಿ ಯೇಸು ಜುದೇಯದ ಬೆತ್ಲೆಹೇಮ್ ಎಂಬ ಊರಲ್ಲಿ ಹುಟ್ಟಿದನು. ಯೇಸು ಹುಟ್ಟಿದ ಮೇಲೆ, ಪೂರ್ವದೇಶದ ಕೆಲವು ಜ್ಞಾನಿಗಳು ಜೆರುಸಲೇಮಿಗೆ ಬಂದರು.


ಆದ್ದರಿಂದ ಯೋಸೇಫನು ಮಗುವನ್ನು ಮತ್ತು ಮಗುವಿನ ತಾಯಿಯನ್ನು ಕರೆದುಕೊಂಡು ಇಸ್ರೇಲಿಗೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು