Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 2:23 - ಪರಿಶುದ್ದ ಬೈಬಲ್‌

23 ನಜರೇತ್ ಎಂಬ ಊರಲ್ಲಿ ವಾಸಿಸಿದನು. “ಕ್ರಿಸ್ತನನ್ನು ‘ನಜರೇತಿನವನು’ ಎಂದು ಕರೆಯುತ್ತಾರೆ” ಎಂದು ದೇವರು ಪ್ರವಾದಿಗಳ ಮೂಲಕ ಹೇಳಿದ್ದು ಹೀಗೆ ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅಲ್ಲಿರುವ ನಜರೇತೆಂಬ ಊರನ್ನು ಸೇರಿ ವಾಸಮಾಡಿದನು. ಹೀಗೆ, “ಆತನು ನಜರೇತಿನವನೆಂದು ಕರೆಯಲ್ಪಡುವನು” ಎಂಬುದಾಗಿ ಪ್ರವಾದಿಗಳು ಹೇಳಿರುವ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅಲ್ಲಿರುವ ನಜರೇತ್ ಊರನ್ನು ಸೇರಿ ವಾಸಮಾಡಿದನು. ಹೀಗೆ, “ಆತನನ್ನು ನಜರೇತಿನವನೆಂದು ಕರೆಯುವರು” ಎಂಬ ಪ್ರವಚನ ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಮತ್ತು ನಜರೇತೆಂಬ ಊರಿಗೆ ಬಂದು ಅಲ್ಲಿ ಮನೆಮಾಡಿಕೊಂಡು ಇದ್ದನು. ಇದರಿಂದ - ನಜರಾಯನೆಂಬ ಹೆಸರು ಆತನಿಗೆ ಬರುವದು ಎಂಬದಾಗಿ ಪ್ರವಾದಿಗಳಿಂದ ಹೇಳಿಸಿರುವ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅಲ್ಲಿ ನಜರೇತ್ ಎಂಬ ಊರಲ್ಲಿ ವಾಸಮಾಡಿದನು. ಹೀಗೆ, “ನಜರಾಯನೆಂಬ ಹೆಸರು ಯೇಸುವಿಗೆ ಬರುವುದು,” ಎಂದು ಪ್ರವಾದಿಗಳು ಹೇಳಿದ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಅನಿ ಥೈ ನಜರೆತ್ ಮನ್ತಲ್ಯಾ ಗಾಂವಾತ್ ರ್‍ಹಾಲೊ. ಅಶೆ “ತೆಕಾ ನಜರೆತ್‍ಕಾರ್ ಮನುನ್ ಬಲ್ವುತ್ಯಾತ್” ಮನುನ್ ಪ್ರವಾದ್ಯಾನಿ ಜೆಜುಚ್ಯಾ ವಿಶಯಾತ್ ಸಾಂಗಟಲ್ಲೆ ಖರೆ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 2:23
20 ತಿಳಿವುಗಳ ಹೋಲಿಕೆ  

ಏಕೆಂದರೆ ನೀನು ಗರ್ಭವತಿಯಾಗಿರುವೆ ಮತ್ತು ನಿನಗೊಬ್ಬ ಮಗನು ಹುಟ್ಟಲಿದ್ದಾನೆ. ಅವನು ಹುಟ್ಟಿದಂದಿನಿಂದಲೇ ದೇವರಿಗೆ ಪ್ರತಿಷ್ಠಿತನಾಗಿದ್ದಾನೆ. ಆದ್ದರಿಂದ ಅವನ ಕೂದಲನ್ನು ಕತ್ತರಿಸಕೂಡದು. ಅವನು ಇಸ್ರೇಲರನ್ನು ಫಿಲಿಷ್ಟಿಯರ ಹಿಡಿತದಿಂದ ಬಿಡಿಸುವನು” ಎಂದು ಹೇಳಿದನು.


“ನಜರೇತಿನ ಯೇಸುವೇ! ನಮ್ಮಿಂದ ನಿನಗೆ ಏನಾಗಬೇಕಾಗಿದೆ? ನಮ್ಮನ್ನು ನಾಶಗೊಳಿಸಲು ಬಂದಿರುವೆಯಾ? ನೀನು ದೇವರಿಂದ ಬಂದ ಪರಿಶುದ್ಧನೆಂದು ನನಗೆ ಗೊತ್ತಿದೆ!” ಎಂದು ಕೂಗಿಕೊಂಡನು.


ಬಳಿಕ ಪೇತ್ರನು ಅಲ್ಲಿಂದ ಎದ್ದು ಹೆಬ್ಬಾಗಿಲ ಬಳಿಗೆ ಬಂದಾಗ ಮತ್ತೊಬ್ಬ ಸೇವಕಿಯು ಅವನನ್ನು ನೋಡಿ ಅಲ್ಲಿದ್ದ ಜನರಿಗೆ, “ಈ ಮನುಷ್ಯನು ನಜರೇತಿನ ಯೇಸುವಿನೊಂದಿಗಿದ್ದನು” ಎಂದು ಹೇಳಿದಳು.


ಪ್ರವಾದಿಯ ಮೂಲಕ ಪ್ರಭು ತಿಳಿಸಿದ್ದೆಲ್ಲ ನೆರವೇರುವಂತೆ ಇದೆಲ್ಲಾ ನಡೆಯಿತು.


ಈ ಮನುಷ್ಯನು (ಪೌಲನು) ಗಲಭೆ ಮಾಡುತ್ತಿದ್ದಾನೆ. ಯೆಹೂದ್ಯರು ಜಗತ್ತಿನಲ್ಲಿ ಎಲ್ಲೇ ಇರಲಿ, ಅಲ್ಲೆಲ್ಲಾ ಇವನು ಗಲಭೆಯನ್ನು ಎಬ್ಬಿಸುತ್ತಾನೆ. ಇವನು ‘ನಜರೇನ’ ಪಂಗಡದ ನಾಯಕನಾಗಿದ್ದಾನೆ.


“ಯೆಹೂದ್ಯರೇ, ಈ ಮಾತುಗಳನ್ನು ಕೇಳಿರಿ: ನಜರೇತಿನ ಯೇಸು ಬಹು ವಿಶೇಷವಾದ ವ್ಯಕ್ತಿ. ದೇವರು ತಾನು ಯೇಸುವಿನ ಮೂಲಕ ಮಾಡಿದ ಶಕ್ತಿಯುತವಾದ ಮತ್ತು ಅದ್ಭುತವಾದ ಕಾರ್ಯಗಳ ಮೂಲಕ ಇದನ್ನು ಸ್ಪಷ್ಟವಾಗಿ ನಿರೂಪಿಸಿದ್ದಾನೆ. ಈ ಸಂಗತಿಗಳನ್ನು ನೀವೆಲ್ಲರೂ ನೋಡಿದಿರಿ. ಆದ್ದರಿಂದ ಇದು ಸತ್ಯವೆಂದು ನಿಮಗೆ ಗೊತ್ತಿದೆ.


ಪಿಲಾತನು ಒಂದು ಫಲಕವನ್ನು ಬರೆದು ಶಿಲುಬೆಯ ಮೇಲೆ ಹಚ್ಚಿದನು. ಆ ಫಲಕದಲ್ಲಿ, “ನಜರೇತಿನ ಯೇಸು, ಯೆಹೂದ್ಯರ ರಾಜನು” ಎಂದು ಬರೆದಿತ್ತು.


ಯೇಸು ಅವರಿಗೆ ಮತ್ತೆ “ನೀವು ಯಾರನ್ನು ಹುಡುಕುತ್ತಿದ್ದೀರಿ?” ಎಂದು ಕೇಳಿದನು. ಅವರು, “ನಜರೇತಿನ ಯೇಸುವನ್ನು” ಎಂದು ಹೇಳಿದರು.


ಅವರು, “ನಜರೇತಿನ ಯೇಸುವನ್ನು” ಎಂದು ಉತ್ತರಕೊಟ್ಟರು. ಆತನು, “ನಾನೇ ಯೇಸು” ಎಂದನು. (ಯೇಸುವಿಗೆ ದ್ರೋಹ ಬಗೆದ ಯೂದನು ಅವರೊಂದಿಗೆ ಅಲ್ಲೇ ನಿಂತಿದ್ದನು.)


ಪ್ರಭುವಿನ ಧರ್ಮಶಾಸ್ತ್ರದ ಎಲ್ಲ ವಿಧಿಗಳನ್ನು ನೆರವೇರಿಸಿದ ಮೇಲೆ ಯೋಸೇಫ ಮತ್ತು ಮರಿಯಳು ಗಲಿಲಾಯ ಪ್ರಾಂತ್ಯದಲ್ಲಿದ್ದ ತಮ್ಮ ಸ್ವಂತ ಊರಾದ ನಜರೇತಿಗೆ ಹಿಂತಿರುಗಿದರು.


ಎಲಿಜಬೇತಳು ಆರು ತಿಂಗಳ ಗರ್ಭಿಣಿಯಾಗಿದ್ದಾಗ, ದೇವರು ತನ್ನ ದೂತನಾದ ಗಬ್ರಿಯೇಲನನ್ನು ಗಲಿಲೇಯ ಪ್ರಾಂತ್ಯದ ನಜರೇತ್ ಎಂಬ ಊರಿನಲ್ಲಿ ವಾಸಿಸುತ್ತಿದ್ದ ಒಬ್ಬ ಕನ್ಯೆಯ ಬಳಿಗೆ ಕಳುಹಿಸಿದನು. ಆಕೆಗೆ ದಾವೀದನ ಮನೆತನದ ಯೋಸೇಫನೊಂದಿಗೆ ನಿಶ್ಚಿತಾರ್ಥವಾಗಿತ್ತು. ಆಕೆಯ ಹೆಸರು ಮರಿಯಳು.


“ನಾಜೀರನು ತನ್ನ ವ್ರತದ ದಿನಗಳು ಮುಗಿದ ನಂತರ, ಮಾಡಬೇಕಾದ ಕ್ರಮ: ಅವನು ದೇವದರ್ಶನಗುಡಾರದ ಪ್ರವೇಶದ್ವಾರದ ಬಳಿಗೆ ಬಂದು


ಅವಳು ದೇವರಲ್ಲಿ ಒಂದು ವಿಶೇಷ ವಾಗ್ದಾನವನ್ನು ಮಾಡಿದಳು. ಅವಳು, “ಯೆಹೋವನೇ, ಸರ್ವಶಕ್ತನೇ, ನಾನು ಎಷ್ಟು ದುಃಖಿತಳೆಂಬುದನ್ನು ನೋಡು, ನನ್ನನ್ನು ಜ್ಞಾಪಿಸಿಕೊ! ನನ್ನನ್ನು ಮರೆಯದಿರು. ನೀನು ನನಗೊಬ್ಬ ಮಗನನ್ನು ಕರುಣಿಸಿದರೆ, ಅವನು ಜೀವದಿಂದಿರುವ ತನಕ ನಿನ್ನವನಾಗಿರುವಂತೆ ನಿನಗೇ ಪ್ರತಿಷ್ಠಿಸುತ್ತೇನೆ. ಅವನು ನಾಜೀರನಾಗಿರುವನು. ಅವನು ದ್ರಾಕ್ಷಾರಸವನ್ನಾಗಲಿ ಇತರೆ ಮದ್ಯವನ್ನಾಗಲಿ ಸೇವಿಸುವುದಿಲ್ಲ. ಅವನ ತಲೆಕೂದಲನ್ನು ಕ್ಷೌರ ಕತ್ತಿಯಿಂದ ಕತ್ತರಿಸುವುದಿಲ್ಲ” ಎಂದು ಹೇಳಿದಳು


ಯೇಸುವನ್ನು ಹಿಂಬಾಲಿಸುತ್ತಿದ್ದ ಅನೇಕ ಜನರು, “ಈತನೇ ಯೇಸು. ಈತನು ಗಲಿಲಾಯ ಪ್ರಾಂತ್ಯದಲ್ಲಿರುವ ನಜರೇತ್ ಎಂಬ ಊರಿನ ಪ್ರವಾದಿ” ಎಂದು ಉತ್ತರಕೊಟ್ಟರು.


ಆ ದಿನಗಳಲ್ಲಿ ಯೇಸು ಗಲಿಲಾಯದ ನಜರೇತಿನಿಂದ ಯೋಹಾನನಿದ್ದ ಸ್ಥಳಕ್ಕೆ ಬಂದನು. ಯೋಹಾನನು ಯೇಸುವಿಗೆ ಜೋರ್ಡನ್ ನದಿಯಲ್ಲಿ ದೀಕ್ಷಾಸ್ನಾನ ಮಾಡಿಸಿದನು.


ಜನರು ಅವನಿಗೆ, “ನಜರೇತಿನ ಯೇಸು ಬರುತ್ತಿದ್ದಾನೆ” ಎಂದು ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು