Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 2:4 - ಪರಿಶುದ್ದ ಬೈಬಲ್‌

4 ಕೂಡಲೇ, ಹೆರೋದನು ಎಲ್ಲಾ ಮಹಾಯಾಜಕರನ್ನೂ ಧರ್ಮೋಪದೇಶಕರನ್ನೂ ಸಭೆ ಸೇರಿಸಿ, “ಕ್ರಿಸ್ತನು ಹುಟ್ಟಬೇಕಾಗಿದ್ದ ಸ್ಥಳ ಯಾವುದು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನು ಯೆಹೂದ್ಯರ ಎಲ್ಲಾ ಮುಖ್ಯಯಾಜಕರನ್ನೂ ಶಾಸ್ತ್ರಿಗಳನ್ನೂ ಕೂಡಿಸಿ, “ಕ್ರಿಸ್ತನು ಹುಟ್ಟಬೇಕಾದದ್ದು ಎಲ್ಲಿ” ಎಂದು ಅವರನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಯೆಹೂದ್ಯರ ಎಲ್ಲ ಮುಖ್ಯ ಯಾಜಕರನ್ನೂ ಧರ್ಮಶಾಸ್ತ್ರಿಗಳನ್ನೂ ಅವನು ಸಭೆಸೇರಿಸಿದನು. “ಕ್ರಿಸ್ತ ಹುಟ್ಟಬೇಕಾದುದು ಎಲ್ಲಿ?” ಎಂದು ಅವರನ್ನು ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನು ಯೆಹೂದ್ಯರ ಎಲ್ಲಾ ಮಹಾಯಾಜಕರನ್ನೂ ಶಾಸ್ತ್ರಿಗಳನ್ನೂ ಕೂಡಿಸಿ - ಕ್ರಿಸ್ತನು ಹುಟ್ಟಬೇಕಾದದ್ದು ಎಲ್ಲಿ ಎಂದು ಅವರನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ರಾಜನು ಯೆಹೂದ್ಯರ ಮುಖ್ಯಯಾಜಕರನ್ನೂ ನಿಯಮ ಬೋಧಕರನ್ನೂ ಕರೆದು, “ಕ್ರಿಸ್ತನು ಹುಟ್ಟಬೇಕಾದದ್ದು ಎಲ್ಲಿ?” ಎಂದು ಅವರನ್ನು ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಹೆರೊದಾನ್ ಸಗ್ಳ್ಯಾ ಮುಖ್ಯ ಯಾಜಕಾಕ್ನಿ ಅನಿ ಮೊಯ್ಜೆಚಿ ಶಾಸ್ತರಾ ಶಿಕ್ವುತಲ್ಯಾಕ್ನಿ ಎಕಾಕ್ಡೆ ಬಲ್ವುಕ್ ಲಾವ್ಲ್ಯಾನ್, ಅನಿ “ಕ್ರಿಸ್ತ್ ಖೈ ಜಲಮ್ತಲೊ ಹಾಯ್?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 2:4
30 ತಿಳಿವುಗಳ ಹೋಲಿಕೆ  

ಈ ಯೆಹೂದ್ಯರೆಲ್ಲರೂ ಹೆಚ್ಚುಹೆಚ್ಚು ಗಟ್ಟಿಯಾಗಿ ಆರ್ಭಟಿಸಿತೊಡಗಿದರು. ಫರಿಸಾಯರ ಗುಂಪಿಗೆ ಸೇರಿದ್ದ ಕೆಲವು ಮಂದಿ ಧರ್ಮೋಪದೇಶಕರು ಎದ್ದುನಿಂತುಕೊಂಡು, “ಈ ಮನುಷ್ಯನಲ್ಲಿ ನಮಗೇನೂ ತಪ್ಪು ಕಂಡುಬರುತ್ತಿಲ್ಲ! ದಮಸ್ಕಕ್ಕೆ ಹೋಗುವ ದಾರಿಯಲ್ಲಿ ದೇವದೂತನಾಗಲಿ ಆತ್ಮವಾಗಲಿ ಅವನೊಂದಿಗೆ ಮಾತಾಡಿದ್ದಿರಬೇಕು!” ಎಂದು ವಾದಿಸಿದರು.


ಹೀಗೆ ಈ ಯೆಹೂದ್ಯರು ಜನರನ್ನೂ ಯೆಹೂದ್ಯರ ಹಿರಿಯನಾಯಕರನ್ನೂ ಧರ್ಮೋಪದೇಶಕರನ್ನೂ ಗಲಿಬಿಲಿಗೊಳಿಸಿದರು. ಅವರು ಬಹು ಸಿಟ್ಟಿನಿಂದ ಬಂದು ಸ್ತೆಫನನನ್ನು ಬಂಧಿಸಿ ಯೆಹೂದ್ಯನಾಯಕರ ಸಭೆಗೆ ಕೊಂಡೊಯ್ದರು.


ಯೇಸು ದೇವಾಲಯಕ್ಕೆ ಹೋದನು. ಯೇಸು ಅಲ್ಲಿ ಉಪದೇಶಿಸುತ್ತಿದ್ದಾಗ, ಮಹಾಯಾಜಕರು ಮತ್ತು ಜನರ ಹಿರಿಯ ನಾಯಕರು ಯೇಸುವಿನ ಬಳಿಗೆ ಬಂದರು. ಅವರು ಯೇಸುವಿಗೆ, “ನೀನು ಇವುಗಳನ್ನು ಯಾವ ಅಧಿಕಾರದಿಂದ ಮಾಡುತ್ತಿರುವೆ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು? ನಮಗೆ ತಿಳಿಸು!” ಎಂದರು.


ಏಕೆಂದರೆ, ಆತನು ಧರ್ಮೋಪದೇಶಕರಂತೆ ಉಪದೇಶಿಸದೆ ಅಧಿಕಾರವಿದ್ದವನಂತೆ ಉಪದೇಶಿಸಿದನು.


ಮರುದಿನ ಯೆಹೂದ್ಯನಾಯಕರು, ಯೆಹೂದ್ಯರ ಹಿರಿಯನಾಯಕರು ಮತ್ತು ಧರ್ಮೋಪದೇಶಕರು ಜೆರುಸಲೇಮಿನಲ್ಲಿ ಸಭೆಸೇರಿದರು.


ಯೂದನು ಸೈನಿಕರ ಗುಂಪೊಂದನ್ನೂ ಮಹಾಯಾಜಕರ ಮತ್ತು ಫರಿಸಾಯರ ಕಾವಲುಗಾರರಲ್ಲಿ ಕೆಲವರನ್ನೂ ಕರೆದುಕೊಂಡು ತೋಟಕ್ಕೆ ಬಂದನು. ಅವರು ದೀವಟಿಗೆ, ಪಂಜು ಮತ್ತು ಆಯುಧಗಳಿಂದ ಸುಸಜ್ಜಿತರಾಗಿದ್ದರು.


ಧರ್ಮೋಪದೇಶಕರು ಮತ್ತು ಫರಿಸಾಯರು ಒಬ್ಬ ಸ್ತ್ರೀಯನ್ನು ಅಲ್ಲಿಗೆ ಕರೆದುಕೊಂಡು ಬಂದರು. ಆ ಸ್ತ್ರೀಯು ವ್ಯಭಿಚಾರ ಮಾಡುವಾಗಲೇ ಸಿಕ್ಕಿಕೊಂಡಿದ್ದಳು. ಅವರು ಆ ಸ್ತ್ರೀಯನ್ನು ಜನರ ಮುಂದೆ ಬಲವಂತವಾಗಿ ನಿಲ್ಲಿಸಿ,


ಯೇಸುವಿನ ಬಗ್ಗೆ ಜನರು ಹೇಳುತ್ತಿದ್ದ ಈ ಸಂಗತಿಗಳನ್ನು ಫರಿಸಾಯರು ಕೇಳಿದರು. ಆದ್ದರಿಂದ ಮಹಾಯಾಜಕರು ಮತ್ತು ಫರಿಸಾಯರು ಯೇಸುವನ್ನು ಬಂಧಿಸುವುದಕ್ಕಾಗಿ ದೇವಾಲಯದ ಸಿಪಾಯಿಗಳಲ್ಲಿ ಕೆಲವರನ್ನು ಕಳುಹಿಸಿದರು.


ಯೇಸು, “ನೀನು ಇಸ್ರೇಲಿನ ಉಪದೇಶಕನಾಗಿರುವೆ. ಆದರೆ ನಿನಗೆ ಈ ಸಂಗತಿಗಳು ಇನ್ನೂ ಅರ್ಥವಾಗುವುದಿಲ್ಲವೇ?


ಮಹಾಯಾಜಕರು ಮತ್ತು ಧರ್ಮೋಪದೇಶಕರು ಅಲ್ಲಿ ನಿಂತುಕೊಂಡಿದ್ದರು. ಅವರು ಯೇಸುವಿಗೆ ವಿರುದ್ಧವಾಗಿ ಕೂಗುತ್ತಿದ್ದರು.


ಯೇಸು ಹೇಳಿದ ಈ ಸಾಮ್ಯವನ್ನು ಯೆಹೂದ್ಯ ನಾಯಕರು ಕೇಳಿದರು. ತಮ್ಮನ್ನು ಕುರಿತಾಗಿಯೇ ಆತನು ಈ ಸಾಮ್ಯವನ್ನು ಹೇಳಿದನೆಂದು ಅವರು ತಿಳಿದುಕೊಂಡರು. ಆದ್ದರಿಂದ ಅವರು ಆಗಲೇ ಯೇಸುವನ್ನು ಬಂಧಿಸಬೇಕೆಂದಿದ್ದರು. ಆದರೆ ಅವರು ಜನರಿಗೆ ಭಯಪಟ್ಟು ಆತನನ್ನು ಬಂಧಿಸಲಿಲ್ಲ.


“‘“ಯೆಹೋವನ ಧರ್ಮಶಾಸ್ತ್ರವು ನಮ್ಮಲ್ಲಿ ಇದೆ. ಆದ್ದರಿಂದ ನಾವು ಜ್ಞಾನಿಗಳು” ಎಂದು ನೀವು ಹೇಳುವಿರಿ. ಆದರೆ ಅದು ನಿಜವಲ್ಲ. ಏಕೆಂದರೆ ಲಿಪಿಗಾರರು ತಮ್ಮ ಲೇಖನಿಯಿಂದ ಸುಳ್ಳು ಬರೆದಿದ್ದಾರೆ.


ನಂತರ ಯೇಸು ತನ್ನ ಶಿಷ್ಯರಿಗೆ ಉಪದೇಶಿಸುತ್ತಾ “ಮನುಷ್ಯಕುಮಾರನು ಅನೇಕ ಕಷ್ಟಗಳನ್ನು ಅನುಭವಿಸಬೇಕಾಗುತ್ತದೆ. ಹಿರಿಯ ಯೆಹೂದ್ಯನಾಯಕರು, ಮಹಾಯಾಜಕರು ಮತ್ತು ಧರ್ಮೋಪದೇಶಕರು ಆತನನ್ನು ತಿರಸ್ಕರಿಸಿ ಕೊಲ್ಲುವರು. ಆದರೆ ಮೂರನೆಯ ದಿನದಲ್ಲಿ ಆತನು ಸತ್ತವರೊಳಗಿಂದ ಜೀವಂತವಾಗಿ ಎದ್ದುಬರುತ್ತಾನೆ” ಎಂದು ಹೇಳಿದನು.


ಮರುದಿನ ಮುಂಜಾನೆ, ಮಹಾಯಾಜಕರೆಲ್ಲರೂ ಮತ್ತು ಹಿರಿಯ ನಾಯಕರೆಲ್ಲರೂ ಯೇಸುವನ್ನು ಕೊಲ್ಲಲು ತೀರ್ಮಾನಿಸಿದರು.


ಯೇಸು ಮಾತಾಡುತ್ತಿರವಷ್ಟರಲ್ಲೇ ಯೂದನು ಅಲ್ಲಿಗೆ ಬಂದನು. ಯೂದನು ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾಗಿದ್ದನು. ಮಹಾಯಾಜಕರು ಮತ್ತು ಹಿರಿಯ ನಾಯಕರು ಕಳುಹಿಸಿದ್ದ ಅನೇಕ ಜನರು ಅವನೊಂದಿಗಿದ್ದರು. ಅವರು ಕತ್ತಿ ಮತ್ತು ದೊಣ್ಣೆಗಳನ್ನು ಹಿಡಿದುಕೊಂಡಿದ್ದರು.


ಇತ್ತ ಮಹಾಯಾಜಕರು ಮತ್ತು ಹಿರಿಯ ಯೆಹೂದ್ಯ ನಾಯಕರು, ಪ್ರಧಾನಯಾಜಕನ ಭವನದಲ್ಲಿ ಸಭೆ ಸೇರಿದರು. ಪ್ರಧಾನಯಾಜಕನ ಹೆಸರು ಕಾಯಫ.


ಮಹಾಯಾಜಕರು ಮತ್ತು ಧರ್ಮೋಪದೇಶಕರು ಇದನ್ನು ನೋಡಿದರು. ಯೇಸು ಮಹತ್ಕಾರ್ಯಗಳನ್ನು ಮಾಡುತ್ತಿರುವುದನ್ನು ಮತ್ತು ದೇವಾಲಯದಲ್ಲಿ ಚಿಕ್ಕಮಕ್ಕಳು ಯೇಸುವನ್ನು ಕೊಂಡಾಡುತ್ತಿರುವುದನ್ನು ಅವರು ಗಮನಿಸಿದರು. ಚಿಕ್ಕ ಮಕ್ಕಳು, “ದಾವೀದನ ಕುಮಾರನಿಗೆ ಸ್ತೋತ್ರವಾಗಲಿ” ಎಂದು ಕೂಗುತ್ತಿದ್ದರು. ಇವುಗಳಿಂದಾಗಿ ಯಾಜಕರು ಮತ್ತು ಧರ್ಮೋಪದೇಶಕರು ಕೋಪಗೊಂಡರು.


ಆಗ ಯೇಸು ತನ್ನ ಶಿಷ್ಯರಿಗೆ, “ಹೀಗಿರಲಾಗಿ ಪರಲೋಕರಾಜ್ಯದ ವಿಷಯವಾಗಿ ಬೋಧಿಸಿದಂಥ ಪ್ರತಿಯೊಬ್ಬ ಧರ್ಮೋಪದೇಶಕನು ಒಂದು ಮನೆಯ ಯಜಮಾನನಂತಿದ್ದಾನೆ. ಆ ಮನುಷ್ಯನು ಹೊಸ ವಸ್ತುಗಳನ್ನೂ ಹಳೆಯ ವಸ್ತುಗಳನ್ನೂ ಆ ಮನೆಯಲ್ಲಿ ಶೇಖರಿಸಿಕೊಂಡು ಅವುಗಳನ್ನು ಹೊರಗೆ ತರುವನು” ಎಂದನು.


ಒಬ್ಬ ಯಾಜಕನು ಯೆಹೋವನ ಬೋಧನೆಯನ್ನು ಚೆನ್ನಾಗಿ ಅರಿತಿರಬೇಕು. ಜನರು ಯಾಜಕನ ಬಳಿಗೆ ಹೋಗಿ ದೇವರ ಬೋಧನೆಯನ್ನು ಕೇಳಿ ತಿಳಿದುಕೊಳ್ಳಬೇಕು. ಯಾಜಕನು ದೇವರ ಸಂದೇಶವನ್ನು ಜನರಿಗೆ ತಲುಪಿಸುವವನಾಗಿರಬೇಕು.


ಅವುಗಳ ರಾಜರುಗಳೂ ನಾಯಕರುಗಳೂ ಯೆಹೋವನಿಗೂ ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರೋಧವಾಗಿ ಕೂಡಿಬಂದಿದ್ದಾರೆ.


ಸಲ್ಲೂ, ಅಮೋಕ್, ಹಿಲ್ಕೀಯ ಮತ್ತು ಯೆದಾಯ. ಇವರೆಲ್ಲಾ ಯಾಜಕರ ನಾಯಕರು. ಇವರು ಯೇಷೂವನ ಕಾಲದಲ್ಲಿದ್ದವರು.


ಎಜ್ರನು ಎದ್ದುನಿಂತು ಮಹಾಯಾಜಕರೂ, ಲೇವಿಯರೂ ಮತ್ತು ಇಸ್ರೇಲಿನ ಜನರೂ ಅವನು ಹೇಳಿದ ಪ್ರಕಾರ ಮಾಡುತ್ತೇವೆ ಎಂಬ ಪ್ರತಿಜ್ಞೆಯನ್ನು ಅವರಿಂದ ತೆಗೆದುಕೊಂಡನು.


ಎಜ್ರನು ಬಾಬಿಲೋನಿನಿಂದ ಜೆರುಸಲೇಮಿಗೆ ಬಂದನು. ಅವನು ವಿದ್ವಾಂಸನಾಗಿದ್ದನು. ಇಸ್ರೇಲರ ದೇವರಾದ ಯೆಹೋವನು ಮೋಶೆಗೆ ಕೊಟ್ಟಿದ್ದ ಧರ್ಮಶಾಸ್ತ್ರವನ್ನು ಅವನು ಚೆನ್ನಾಗಿ ಬಲ್ಲವನಾಗಿದ್ದನು. ಯೆಹೋವನು ಎಜ್ರನೊಂದಿಗಿದ್ದುದರಿಂದ ಅವನು ಕೇಳಿದ್ದೆಲ್ಲವನ್ನು ಅರ್ತಷಸ್ತ ರಾಜನು ಅವನಿಗೆ ಕೊಟ್ಟನು.


ಅವನು ಮಾತ್ರವಲ್ಲದೆ ಎಲ್ಲಾ ಯಾಜಕರು, ಯೆಹೂದದ ಜನನಾಯಕರು ಬಹಳ ಪಾಪಗಳನ್ನು ಮಾಡಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟುಹೋಗಿದ್ದರು. ಅವರು ಬೇರೆ ದೇಶಗಳ ನಡವಳಿಕೆಯನ್ನು ಅನುಸರಿಸಿದರು. ಆ ನಾಯಕರುಗಳು ದೇವಾಲಯವನ್ನು ಹಾಳುಮಾಡಿದರು. ಜೆರುಸಲೇಮಿನಲ್ಲಿದ್ದ ಆ ಆಲಯವನ್ನು ಯೆಹೋವನು ತನಗಾಗಿ ಪ್ರತಿಷ್ಠಿಸಿಕೊಂಡಿದ್ದನು.


ಕಾರ್ಯದರ್ಶಿಯಾದ ಶಾಫಾನನಿಗೆ, “ದೇವಾಲಯದಲ್ಲಿ ನನಗೆ ಯೆಹೋವನ ಧರ್ಮಶಾಸ್ತ್ರವು ಸಿಕ್ಕಿತು” ಎಂದು ಹೇಳಿ ಅದನ್ನು ಕೊಟ್ಟನು.


ಯೆಹೂದ್ಯರ ಈ ಹೊಸ ರಾಜನ ವಿಷಯ ತಿಳಿದಾಗ ಹೆರೋದನು ಮತ್ತು ಜೆರುಸಲೇಮಿನ ಜನರೆಲ್ಲರೂ ಗಲಿಬಿಲಿಗೊಂಡರು.


ಅವರು, “ಜುದೇಯದ ಬೆತ್ಲೆಹೇಮ್ ಎಂಬ ಊರಲ್ಲಿ ಹುಟ್ಟುವನು. ಏಕೆಂದರೆ ಪ್ರವಾದಿಯು ಪವಿತ್ರ ಗ್ರಂಥದಲ್ಲಿ ಹೀಗೆಂದು ಬರೆದಿದ್ದಾನೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು