Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 20:1 - ಪರಿಶುದ್ದ ಬೈಬಲ್‌

1 “ಪರಲೋಕರಾಜ್ಯವು ಒಬ್ಬ ದ್ರಾಕ್ಷಿತೋಟದ ಯಜಮಾನನಿಗೆ ಹೋಲಿಕೆಯಾಗಿದೆ. ಒಂದು ಮುಂಜಾನೆ ಅವನು ತನ್ನ ತೋಟದಲ್ಲಿ ಕೆಲಸ ಮಾಡಲು ಬೇರೆ ಕೂಲಿಯಾಳುಗಳನ್ನು ಕರೆಯುವುದಕ್ಕೆ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ಪರಲೋಕ ರಾಜ್ಯವು ತನ್ನ ದ್ರಾಕ್ಷಾತೋಟಕ್ಕೆ ಕೂಲಿಯಾಳುಗಳನ್ನು ಗೊತ್ತುಮಾಡಲು ಬೆಳಗ್ಗೆ ಹೊರಟ ಒಬ್ಬ ತೋಟದ ಯಜಮಾನನಿಗೆ ಹೋಲಿಕೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಸ್ವರ್ಗಸಾಮ್ರಾಜ್ಯವು ಹೀಗಿದೆ: ಒಬ್ಬ ಯಜಮಾನನಿಗೆ ಒಂದು ದ್ರಾಕ್ಷಿತೋಟವಿತ್ತು. ಅದರಲ್ಲಿ ಕೆಲಸ ಮಾಡುವುದಕ್ಕೆ ಕೂಲಿಗಾರರನ್ನು ಗೊತ್ತುಮಾಡಲು ಅವನು ಬೆಳಗಿನ ಜಾವದಲ್ಲೇ ಹೊರಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅದು ಹೇಗಂದರೆ - ಪರಲೋಕರಾಜ್ಯವು ಒಬ್ಬ ಮನೆಯ ಯಜಮಾನನಿಗೆ ಹೋಲಿಕೆಯಾಗಿದೆ. ಅವನು ತನ್ನ ದ್ರಾಕ್ಷೇತೋಟಕ್ಕೆ ಕೂಲೀ ಆಳುಗಳನ್ನು ಕರೆಯುವದಕ್ಕೆ ಬೆಳಿಗ್ಗೆ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಪರಲೋಕ ರಾಜ್ಯವನ್ನು ತನ್ನ ದ್ರಾಕ್ಷಿಯ ತೋಟಕ್ಕೆ ಕೂಲಿಯಾಳುಗಳನ್ನು ಕರೆಯುವುದಕ್ಕಾಗಿ ಬೆಳಿಗ್ಗೆ ಹೊರಟ ಒಬ್ಬ ಯಜಮಾನನಿಗೆ ಹೋಲಿಸಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತನ್ನಾ ಜೆಜುನ್, ಸರ್ಗಾಚೊ ರಾಜ್ ಮಟ್ಲ್ಯಾರ್ ಅಶೆ. ಎಗ್ದಾ ಎಕ್ ಮಾನುಸ್ ಸಕ್ಕಾಳಿ ಫಿಡೆ ಅಪ್ನಾಚ್ಯಾ ದರಾಕ್ಷಿಚ್ಯಾ ಮಳ್ಯಾತ್ ಕಾಮಾಕ್ ಯೆತಲಿ ಆಳಾ ಹುಡ್ಕುಕ್ ಮನುನ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 20:1
22 ತಿಳಿವುಗಳ ಹೋಲಿಕೆ  

“ಪರಲೋಕರಾಜ್ಯವು ಸರೋವರದೊಳಗೆ ಬೀಸಿದ ಬಲೆಯಂತಿದೆ. ಆ ಬಲೆಗೆ ಅನೇಕ ಜಾತಿಯ ಮೀನುಗಳು ಸಿಕ್ಕಿಕೊಂಡವು.


ಬಳಿಕ ಯೇಸು ಅವರಿಗೆ ಇನ್ನೊಂದು ಸಾಮ್ಯದ ಮೂಲಕ ಬೋಧಿಸಿದನು. ಅದೇನೆಂದರೆ: “ಪರಲೋಕರಾಜ್ಯ ಒಳ್ಳೆಯ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ ಒಬ್ಬ ರೈತನಂತಿದೆ.


ಆದ್ದರಿಂದ, ನನ್ನ ಪ್ರಿಯ ಸಹೋದರ ಸಹೋದರಿಯರೇ, ದೃಢವಾಗಿರಿ, ನಿಶ್ಚಲರಾಗಿರಿ. ಪ್ರಭುವಿನ ಸೇವೆಗಾಗಿ ನಿಮ್ಮನ್ನು ಯಾವಾಗಲೂ ಸಂಪೂರ್ಣವಾಗಿ ಪ್ರತಿಷ್ಠಿಸಿಕೊಳ್ಳಿರಿ. ನೀವು ಪ್ರಭುವಿಗಾಗಿ ಪಡುವ ಪ್ರಯಾಸವು ಎಂದಿಗೂ ವ್ಯರ್ಥವಾಗುವುದಿಲ್ಲ.


“ನಾನು ನಿಜವಾದ ದ್ರಾಕ್ಷಿಬಳ್ಳಿ. ನನ್ನ ತಂದೆ ತೋಟಗಾರನು.


“ಆ ದಿನಗಳಲ್ಲಿ ಪರಲೋಕರಾಜ್ಯವು ಹೇಗಿರುತ್ತದೆ ಎನ್ನುವುದಕ್ಕೆ ಈ ಸಾಮ್ಯವು ಉದಾಹರಣೆಯಾಗಿದೆ. ಹತ್ತು ಮಂದಿ ಕನ್ನಿಕೆಯರು ತಮ್ಮ ದೀಪಗಳನ್ನು ತೆಗೆದುಕೊಂಡು ಮದುಮಗನನ್ನು ಎದುರುಗೊಳ್ಳಲು ಹೊರಟರು.


“ಪರಲೋಕರಾಜ್ಯವು ತನ್ನ ಮಗನ ಮದುವೆಯನ್ನು ಸಿದ್ಧಪಡಿಸಿದ ಒಬ್ಬ ರಾಜನಿಗೆ ಹೋಲಿಕೆಯಾಗಿದೆ.


ಬಳಿಕ ಯೇಸು ಜನರಿಗೆ ಇನ್ನೊಂದು ಸಾಮ್ಯವನ್ನು ಹೇಳಿದನು: “ಪರಲೋಕರಾಜ್ಯವು ಒಬ್ಬ ಸ್ತ್ರೀ ರೊಟ್ಟಿ ಮಾಡುವುದಕ್ಕೆ ಒಂದು ದೊಡ್ಡ ಬೋಗುಣಿಯ ಹಿಟ್ಟಿಗೆ ಬೆರೆಸಿದ ಹುಳಿಗೆ ಹೋಲಿಕೆಯಾಗಿದೆ. ಆ ಹುಳಿಯು ನಾದಿದ ಹಿಟ್ಟನ್ನೆಲ್ಲಾ ಉಬ್ಬಿಸಿತು.”


ನಂತರ ಯೇಸು ಜನರಿಗೆ ಮತ್ತೊಂದು ಸಾಮ್ಯವನ್ನು ಹೇಳಿದನು: “ಪರಲೋಕರಾಜ್ಯ ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬನು ಅದನ್ನು ತನ್ನ ಹೊಲದಲ್ಲಿ ಬಿತ್ತಿದನು.


“ಪರಲೋಕರಾಜ್ಯವು, ತನ್ನ ಮನೆಯನ್ನು ಬಿಟ್ಟು ಬೇರೆ ಸ್ಥಳವನ್ನು ಸಂದರ್ಶಿಸುವುದಕ್ಕೆ ಪ್ರಯಾಣ ಮಾಡಿದ ಒಬ್ಬ ಮನುಷ್ಯನಿಗೆ ಹೋಲಿಕೆಯಾಗಿದೆ. ಆ ಮನುಷ್ಯನು ತಾನು ಹೊರಡುವುದಕ್ಕೆ ಮುಂಚೆ ತನ್ನ ಸೇವಕರೊಂದಿಗೆ ಮಾತನಾಡಿ, ತನ್ನ ಆಸ್ತಿಯನ್ನು ನೋಡಿಕೊಳ್ಳಲು ಅವರಿಗೆ ಹೇಳಿದನು.


“ತನ್ನ ಮನೆಯನ್ನು ಬಿಟ್ಟು ಪ್ರವಾಸಕ್ಕಾಗಿ ಹೋದ ಮನುಷ್ಯನಿಗೆ ಇದು ಹೋಲಿಕೆಯಾಗಿದೆ. ಅವನು ತನ್ನ ಮನೆಯನ್ನು ನೋಡಿಕೊಳ್ಳುವುದಕ್ಕಾಗಿ ಸೇವಕರಿಗೆ ಒಪ್ಪಿಸಿಕೊಟ್ಟನು. ಅವನು ಪ್ರತಿಯೊಬ್ಬ ಸೇವಕನಿಗೂ ಒಂದೊಂದು ವಿಶೇಷ ಕೆಲಸವನ್ನು ಕೊಟ್ಟು ದ್ವಾರಪಾಲಕನಿಗೆ, ‘ನೀನು ಯಾವಾಗಲೂ ಸಿದ್ಧವಾಗಿರು’ ಎಂದು ಹೇಳಿದನು. ಅಂತೆಯೇ ನಾನೂ ನಿಮಗೆ ಹೇಳುವುದೇನೆಂದರೆ,


“ಪರಲೋಕರಾಜ್ಯವು ಸಮೀಪಿಸಿತು. ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ” ಎಂದು ಅವನು ಬೋಧಿಸಿದನು.


“ಜೆರುಸಲೇಮೇ, ಜೆರುಸಲೇಮೇ! ಪ್ರವಾದಿಗಳನ್ನು ಕೊಲ್ಲುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿದ ಜನರನ್ನು ಕಲ್ಲುಗಳಿಂದ ಕೊಲ್ಲುವವಳೇ, ಅನೇಕ ಸಲ ನಿನ್ನ ಜನರಿಗೆ ನಾನು ಸಹಾಯ ಮಾಡಬೇಕೆಂದಿದ್ದೆನು. ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಸೇರಿಸಿಕೊಳ್ಳುವ ಹಾಗೆ ನಿನ್ನ ಜನರನ್ನು ಸೇರಿಸಿಕೊಳ್ಳಲು ನನಗೆ ಮನಸ್ಸಿತ್ತು. ಆದರೆ ನೀನು ಒಪ್ಪಲಿಲ್ಲ.


“ಒಬ್ಬ ಮನುಷ್ಯನಿಗೆ ಇಬ್ಬರು ಗಂಡುಮಕ್ಕಳಿದ್ದರು. ಆ ಮನುಷ್ಯನು ಮೊದಲನೆಯ ಮಗನ ಬಳಿಗೆ ಹೋಗಿ, ‘ಮಗನೇ ಈ ದಿನ ನೀನು ಹೋಗಿ, ನನ್ನ ದ್ರಾಕ್ಷಿತೋಟದಲ್ಲಿ ಕೆಲಸ ಮಾಡು’ ಎಂದು ಹೇಳಿದನು.


ಒಂದು ದಿನಕ್ಕೆ ಒಬ್ಬ ಕೆಲಸಗಾರನಿಗೆ ಒಂದು ಬೆಳ್ಳಿನಾಣ್ಯವನ್ನು ಕೊಡುವುದಾಗಿ ಹೇಳಿ ಆ ಕೆಲಸಗಾರರನ್ನು ಅವನು ತೋಟಕ್ಕೆ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು