Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 20:11 - ಪರಿಶುದ್ದ ಬೈಬಲ್‌

11 ಅವರು ತಮ್ಮ ಬೆಳ್ಳಿನಾಣ್ಯವನ್ನು ತೆಗೆದುಕೊಂಡಾಗ ತೋಟದ ಯಜಮಾನನ ಬಗ್ಗೆ ಗೊಣಗುಟ್ಟುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರು ಅದನ್ನು ತೆಗೆದುಕೊಂಡು ತೋಟದ ಯಜಮಾನನಿಗೆ ವಿರುದ್ಧವಾಗಿ ಗುಣಗುಟ್ಟಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅದನ್ನು ತೆಗೆದುಕೊಂಡಾಗ ಅವರು ದಣಿಯ ವಿರುದ್ಧ ಗೊಣಗಲಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅದನ್ನು ತೆಗೆದುಕೊಂಡು ಮನೆಯ ಯಜಮಾನನ ಮೇಲೆ ಗುಣುಗುಟ್ಟಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವರು ಅದನ್ನು ತೆಗೆದುಕೊಂಡಾಗ, ಯಜಮಾನನ ವಿರೋಧವಾಗಿ ಗೊಣುಗುಟ್ಟುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತೆನಿ ತೆ ಘೆಟ್ಲ್ಯಾನಿ ಅನಿ ಮಾಲ್ಕಾಚ್ಯಾ ವರ್‍ತಿ ಪುರ್‍ವುರುಕ್‍ಲಾಗ್ಲ್ಯಾನಿ.ಅನಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 20:11
14 ತಿಳಿವುಗಳ ಹೋಲಿಕೆ  

ಹೌದು, ಯೆಹೂದ್ಯರಲ್ಲದವರಿಗೆ ರಕ್ಷಣೆ ನೀಡುವ ಸುವಾರ್ತೆಯನ್ನು ನಾವು ಉಪದೇಶಿಸದಂತೆ ನಮ್ಮನ್ನು ತಡೆಯಲು ಅವರು ಪ್ರಯತ್ನಿಸುತ್ತಿದ್ದಾರೆ. ಹೀಗೆ ಅವರು ತಮ್ಮ ಪಾಪಗಳಿಗೆ ಮತ್ತಷ್ಟು ಪಾಪಗಳನ್ನು ಕೂಡಿಸುತ್ತಿದ್ದಾರೆ. ಕೊನೆಗೆ, ದೇವರ ಕೋಪವು ಅವರ ಮೇಲೆ ಬರುತ್ತದೆ.


ಜನರೆಲ್ಲರೂ ಇದನ್ನು ನೋಡಿ, “ಯೇಸು ಎಂಥವನ ಮನೆಯಲ್ಲಿ ಇಳಿದುಕೊಳ್ಳುತ್ತಾನೆ. ಜಕ್ಕಾಯನು ಪಾಪಿ!” ಎಂದು ಆಕ್ಷೇಪಣೆ ಮಾಡತೊಡಗಿದರು.


ಈ ದುರ್ಬೋಧಕರಾದರೋ ಗುಣುಗುಟ್ಟುವವರೂ ತಪ್ಪು ಹುಡುಕುವವರೂ ದುರಾಶೆಗಳಿಗೆ ಬಲಿಯಾದವರೂ ಬಡಾಯಿಕೊಚ್ಚುವವರೂ ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುವವರೂ ಆಗಿದ್ದಾರೆ.


ಇದನ್ನು ಕಂಡ ಯೆಹೂದ್ಯರಿಗೆ ಬಹಳ ಅಸೂಯೆಯಾಯಿತು. ಅವರು ಪೌಲನ ಮಾತುಗಳನ್ನು ಕಟುವಾಗಿ ದೂಷಿಸಿ ಅವುಗಳಿಗೆ ವಿರೋಧವಾಗಿ ವಾದಿಸಿದರು.


ಆಗ ಫರಿಸಾಯರು ಮತ್ತು ಧರ್ಮೋಪದೇಶಕರು, “ನೋಡಿರಿ! ಈ ಮನುಷ್ಯನು (ಯೇಸು) ಪಾಪಿಗಳನ್ನು ಬರಮಾಡಿಕೊಳ್ಳುತ್ತಾನೆ; ಅವರ ಜೊತೆಯಲ್ಲಿ ಊಟಮಾಡುತ್ತಾನೆ!” ಎಂದು ದೂರು ಹೇಳತೊಡಗಿದರು.


ಆದರೆ ಫರಿಸಾಯರು ಮತ್ತು ಧರ್ಮೋಪದೇಶಕರು ಯೇಸುವಿನ ಶಿಷ್ಯರಿಗೆ, “ನೀವು ಸುಂಕದವರೊಡನೆ ಮತ್ತು ಇತರ ಕೆಟ್ಟ ಜನರೊಂದಿಗೆ ಏಕೆ ಊಟಮಾಡುತ್ತೀರಿ ಮತ್ತು ಕುಡಿಯುತ್ತೀರಿ?” ಎಂದು ಆಕ್ಷೇಪಿಸಿದರು.


ನಂತರ ಮೊಟ್ಟಮೊದಲು ಗೊತ್ತುಮಾಡಲ್ಪಟ್ಟಿದ್ದವರು ತಮ್ಮ ಕೂಲಿಯನ್ನು ತೆಗೆದುಕೊಳ್ಳಲು ಬಂದರು. ಬೇರೆ ಆಳುಗಳಿಗಿಂತ ತಮಗೆ ಹೆಚ್ಚು ಸಿಕ್ಕುವುದೆಂದು ಅವರು ಆಲೋಚಿಸಿಕೊಂಡಿದ್ದರು. ಆದರೆ ಅವರಿಗೂ ಸಹ ಒಂದೊಂದು ಬೆಳ್ಳಿನಾಣ್ಯ ಸಿಕ್ಕಿತು.


‘ಕೊನೆಗೆ ಗೊತ್ತುಮಾಡಲ್ಪಟ್ಟ ಆಳುಗಳು ಒಂದು ಗಂಟೆ ಮಾತ್ರ ಕೆಲಸ ಮಾಡಿದ್ದಾರೆ. ಆದರೆ ಇವನು ಅವರಿಗೂ ನಮ್ಮಷ್ಟೇ ಕೊಟ್ಟಿದ್ದಾನೆ. ನಾವಾದರೋ ದಿನವೆಲ್ಲಾ ಬಿಸಿಲಿನಲ್ಲಿ ಕಷ್ಟಪಟ್ಟು ಕೆಲಸ ಮಾಡಿದ್ದೇವೆ’ ಎಂದರು.


ಅದು ಒಂದು ವರ್ಷದ ಸಂಪಾದನೆಗಿಂತ ಹೆಚ್ಚು ಬೆಲೆಬಾಳುತ್ತಿತ್ತು. ಅದನ್ನು ಮಾರಿ ಬಂದ ಹಣವನ್ನು ಬಡಜನರಿಗೆ ಕೊಡಬಹುದಾಗಿತ್ತು” ಎಂದು ಹೇಳಿ ಆ ಸ್ತ್ರೀಯನ್ನು ಕಟುವಾಗಿ ಟೀಕಿಸಿದರು.


ಯೆಹೂದ್ಯರು ಯೇಸುವಿನ ಬಗ್ಗೆ ಗುಣುಗುಟ್ಟಿದರು. “ಪರಲೋಕದಿಂದ ಇಳಿದುಬರುವ ರೊಟ್ಟಿಯೇ ನಾನು” ಎಂದು ಆತನು ಹೇಳಿದ್ದರಿಂದ ಅವರು ಆಕ್ಷೇಪಿಸಿದರು.


ತನ್ನ ಶಿಷ್ಯರು ಆಕ್ಷೇಪಿಸುತ್ತಿರುವುದನ್ನು ತಿಳಿದಿದ್ದ ಯೇಸು, “ಈ ಉಪದೇಶದಿಂದ ನಿಮಗೆ ಬೇಸರವಾಯಿತೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು