Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 20:13 - ಪರಿಶುದ್ದ ಬೈಬಲ್‌

13 “ತೋಟದ ಯಜಮಾನನು ಆ ಆಳುಗಳಲ್ಲಿ ಒಬ್ಬನಿಗೆ, ‘ಸ್ನೇಹಿತನೇ, ನಾನು ನಿನಗೆ ಅನ್ಯಾಯ ಮಾಡಲಿಲ್ಲ. ನೀನು ಒಂದು ಬೆಳ್ಳಿನಾಣ್ಯಕ್ಕಾಗಿ ಕೆಲಸ ಮಾಡಲು ಒಪ್ಪಿಕೊಂಡೆಯಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದಕ್ಕೆ ಯಜಮಾನನು ಅವರಲ್ಲಿ ಒಬ್ಬನಿಗೆ, ‘ಸ್ನೇಹಿತನೇ ನಾನು ನಿನಗೆ ಅನ್ಯಾಯ ಮಾಡಲಿಲ್ಲ. ನೀನು ನನ್ನ ಸಂಗಡ ಒಂದು ಬೆಳ್ಳಿಯ ನಾಣ್ಯಕ್ಕೆ ಒಪ್ಪಂದ ಮಾಡಿಕೊಳ್ಳಲಿಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅದಕ್ಕೆ ಯಜಮಾನ ಅವರಲ್ಲಿ ಒಬ್ಬನಿಗೆ, ‘ಅಯ್ಯಾ, ನಿನಗೆ ನಾನು ಅನ್ಯಾಯಮಾಡಿಲ್ಲ. ದಿನಕ್ಕೊಂದು ಬೆಳ್ಳಿನಾಣ್ಯದಂತೆ ನೀನು ನನ್ನೊಡನೆ ಒಪ್ಪಂದಮಾಡಿಕೊಳ್ಳಲಿಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅದಕ್ಕೆ ಅವನು ಅವರಲ್ಲಿ ಒಬ್ಬನಿಗೆ - ಏನಪ್ಪಾ, ನಾನು ನಿನಗೆ ಅನ್ಯಾಯ ಮಾಡಲಿಲ್ಲ; ನೀನು ನನ್ನ ಸಂಗಡ ಒಂದು ಪಾವಲಿಗೆ ಒಡಂಬಟ್ಟಿಯಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ಆದರೆ ಯಜಮಾನನು ಅವರಲ್ಲಿ ಒಬ್ಬನಿಗೆ ಉತ್ತರವಾಗಿ, ‘ಸ್ನೇಹಿತನೇ, ನಾನು ನಿನಗೆ ಅನ್ಯಾಯ ಮಾಡಲಿಲ್ಲ. ಒಂದು ಬೆಳ್ಳಿ ನಾಣ್ಯಕ್ಕೆ ನೀನು ನನ್ನೊಂದಿಗೆ ಒಪ್ಪಂದ ಮಾಡಿಕೊಳ್ಳಲಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತನ್ನಾ ತ್ಯಾ ಮಾಲ್ಕಾನ್, ತೆಂಚ್ಯಾತ್ಲ್ಯಾ ಎಕ್ಲ್ಯಾಕ್, ಮಾಜ್ಯಾ ದೊಸ್ತಾ, ಮಿಯಾ ತುಕಾ ಅನ್ನ್ಯಾಯ್ ಕರುಕ್ ನಾ. ಎಕ್ ದಿಸಾಚಿ ಮಜುರಿ ಎಕ್ ಚಾಂದಿಚೊ ಪೈಸೊ ಮನುನ್ ಮಿಯಾ ತುಕಾ ಸಾಂಗಟಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 20:13
11 ತಿಳಿವುಗಳ ಹೋಲಿಕೆ  

ಆಗ ಯೇಸು, “ಸ್ನೇಹಿತನೇ, ನೀನು ಮಾಡಲು ಬಂದ ಕೆಲಸ ಇದೆಯೋ?” ಎಂದನು. ಕೂಡಲೇ ಆ ಜನರು ಬಂದು ಯೇಸುವನ್ನು ಹಿಡಿದು, ಬಂಧಿಸಿದರು.


‘ಸ್ನೇಹಿತನೇ, ನೀನು ಒಳಗೆ ಹೇಗೆ ಬಂದೆ? ನೀನು ಮದುವೆಗೆ ಯೋಗ್ಯವಾದ ಬಟ್ಟೆಯನ್ನು ಧರಿಸಿಕೊಂಡಿಲ್ಲವಲ್ಲಾ’ ಅಂದನು. ಆದರೆ ಅವನು ಉತ್ತರ ನೀಡಲಿಲ್ಲ.


ಹಾಗೆ ಕೇಳಬೇಡಿ. ನೀವು ಕೇವಲ ಮನುಷ್ಯರು. ದೇವರನ್ನು ಪ್ರಶ್ನಿಸಲು ಮನುಷ್ಯರಿಗೆ ಯಾವ ಹಕ್ಕೂ ಇಲ್ಲ. ಮಡಕೆಯು ತನ್ನನ್ನು ತಯಾರಿಸಿದವನಿಗೆ, “ನೀನು ನನ್ನನ್ನು ಈ ರೀತಿ ತಯಾರಿಸಿದ್ದೇಕೆ” ಎಂದು ಕೇಳುವುದುಂಟೇ?


“ಯೋಬನೇ, ನನ್ನ ನೀತಿಯನ್ನು ಖಂಡಿಸುವಿಯಾ? ನಿನ್ನನ್ನು ನಿರಪರಾಧಿಯೆಂದು ನಿರೂಪಿಸಲು ನನ್ನನ್ನು ದೋಷಿಯೆಂದು ಪರಿಗಣಿಸುವೆಯಾ?


“ಯೋಬನೇ, ‘ನಾನು ದೇವರಿಗಿಂತ ನೀತಿವಂತನೆಂದು’ ನೀನು ಹೇಳುವುದು ನ್ಯಾಯವಲ್ಲ.


ಖಂಡಿತವಾಗಿಯೂ ನೀನು ಆ ಪಟ್ಟಣವನ್ನು ನಾಶಮಾಡುವುದಿಲ್ಲ. ಕೆಟ್ಟವರನ್ನು ಕೊಲ್ಲುವುದಕ್ಕಾಗಿ ನೀನು ಐವತ್ತು ಮಂದಿ ನೀತಿವಂತರನ್ನು ಕೊಲ್ಲುವುದಿಲ್ಲ. ಒಂದುವೇಳೆ ನೀನು ಕೊಂದರೆ, ಒಳ್ಳೆಯವರೂ ಕೆಟ್ಟವರೂ ಸರಿಸಮಾನರಾಗುವರು. ಅವರಿಬ್ಬರೂ ದಂಡನೆಗೆ ಗುರಿಯಾಗುವರು. ನೀನು ಲೋಕದವರಿಗೆಲ್ಲ ನ್ಯಾಯಾಧಿಪತಿ. ನೀನು ನ್ಯಾಯವಾದದ್ದನ್ನೇ ಮಾಡುವೆ ಎಂದು ನನಗೆ ಗೊತ್ತಿದೆ” ಎಂದು ಹೇಳಿದನು.


ಒಂದು ದಿನಕ್ಕೆ ಒಬ್ಬ ಕೆಲಸಗಾರನಿಗೆ ಒಂದು ಬೆಳ್ಳಿನಾಣ್ಯವನ್ನು ಕೊಡುವುದಾಗಿ ಹೇಳಿ ಆ ಕೆಲಸಗಾರರನ್ನು ಅವನು ತೋಟಕ್ಕೆ ಕಳುಹಿಸಿದನು.


ಆದ್ದರಿಂದ ನೀನು ನಿನ್ನ ಕೂಲಿಯನ್ನು ತೆಗೆದುಕೊಂಡು ಹೋಗು. ನಾನು ನಿನಗೆ ಎಷ್ಟು ಕೂಲಿ ಕೊಟ್ಟೆನೋ ಅಷ್ಟೇ ಕೂಲಿಯನ್ನು ಕೊನೆಗೆ ಗೊತ್ತುಮಾಡಲ್ಪಟ್ಟವನಿಗೂ ಕೊಡಲು ಇಷ್ಟಪಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು