Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 20:21 - ಪರಿಶುದ್ದ ಬೈಬಲ್‌

21 ಯೇಸು, “ನಿನ್ನ ಕೋರಿಕೆ ಏನು?” ಎಂದನು. ಅವಳು, “ನಿನ್ನ ರಾಜ್ಯದಲ್ಲಿ, ನನ್ನ ಗಂಡುಮಕ್ಕಳಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲಿಯೂ ಮತ್ತೊಬ್ಬನು ನಿನ್ನ ಎಡಗಡೆಯಲ್ಲಿಯೂ ಕುಳಿತುಕೊಳ್ಳುವಂತೆ ವಾಗ್ದಾನಮಾಡು” ಎಂದು ಕೇಳಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆತನು ಆಕೆಯನ್ನು, “ನಿನ್ನ ಅಪೇಕ್ಷೆ ಏನು?” ಎಂದು ಕೇಳಲು ಆಕೆ ಆತನಿಗೆ, “ನಿನ್ನ ರಾಜ್ಯದಲ್ಲಿ ನನ್ನ ಈ ಇಬ್ಬರು ಮಕ್ಕಳಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲೂ ಮತ್ತೊಬ್ಬನು ಎಡಗಡೆಯಲ್ಲೂ ಕುಳಿತುಕೊಳ್ಳುವಂತೆ ಅನುಗ್ರಹ ಮಾಡಬೇಕು” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 “ನಿನ್ನ ಕೋರಿಕೆ ಏನು?” ಎಂದರು ಯೇಸು. ಅದಕ್ಕೆ ಅವಳು, “ತಮ್ಮ ಸಾಮ್ರಾಜ್ಯದಲ್ಲಿ, ನನ್ನ ಈ ಇಬ್ಬರು ಮಕ್ಕಳಲ್ಲಿ ಒಬ್ಬನು ತಮ್ಮ ಬಲಗಡೆಯಲ್ಲೂ ಇನ್ನೊಬ್ಬನು ತಮ್ಮ ಎಡಗಡೆಯಲ್ಲೂ ಆಸೀನರಾಗುವಂತೆ ಅಪ್ಪಣೆಯಾಗಬೇಕು,” ಎಂದು ಕೋರಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆತನು ಆಕೆಯನ್ನು - ನಿನಗೇನು ಬೇಕಮ್ಮಾ ಎಂದು ಕೇಳಲು ಆಕೆ - ನಿನ್ನ ರಾಜ್ಯದಲ್ಲಿ ನನ್ನ ಈ ಇಬ್ಬರು ಮಕ್ಕಳಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲೂ ಮತ್ತೊಬ್ಬನು ಎಡಗಡೆಯಲ್ಲೂ ಕೂತುಕೊಳ್ಳುವದಕ್ಕೆ ಅಪ್ಪಣೆಯಾಗಬೇಕು ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಯೇಸು, “ನಿನ್ನ ಬೇಡಿಕೆ ಏನು?” ಎಂದು ಕೇಳಿದರು. “ನಿಮ್ಮ ರಾಜ್ಯದಲ್ಲಿ ಈ ನನ್ನ ಇಬ್ಬರು ಪುತ್ರರಲ್ಲಿ ಒಬ್ಬನು ನಿಮ್ಮ ಬಲಗಡೆಯಲ್ಲೂ ಇನ್ನೊಬ್ಬನು ನಿಮ್ಮ ಎಡಗಡೆಯಲ್ಲೂ ಕುಳಿತುಕೊಳ್ಳುವಂತೆ ಅನುಗ್ರಹಿಸಬೇಕು,” ಎಂದು ಬೇಡಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತನ್ನಾ ಜೆಜುನ್ ತಿಕಾ “ಕಾಯ್ ತೆ?” ಮನುನ್ ಇಚಾರ್‍ಲ್ಯಾನ್. ತನ್ನಾ ತೆನಿ ಜೆಜುಕ್,“ತಿಯಾ ರಾಜಾ ಹೊಲ್ಲ್ಯಾ ತನ್ನಾ ಹ್ಯಾ ಮಾಜ್ಯಾ ದೊನಿಬಿ ಲೆಕಾಕ್ನಿ ಎಕ್ಲ್ಯಾಕ್ ತುಜ್ಯಾ ಉಜ್ವ್ಯಾ ಬಾಜುಕ್ ಅನಿ ಎಕ್ಲ್ಯಾಕ್ ಡಾವ್ಯಾ ಬಾಜುಕ್ ಬಸ್ವುತಾ ಮನುನ್ ಮಾಕಾ ಗೊಸ್ಟ್ ದಿ.” ಮಟ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 20:21
24 ತಿಳಿವುಗಳ ಹೋಲಿಕೆ  

ಯೇಸು ಶಿಷ್ಯರಿಗೆ ಹೀಗೆಂದನು: “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಹೊಸ ಲೋಕವು ಸೃಷ್ಟಿಸಲ್ಪಟ್ಟಾಗ ಮನುಷ್ಯಕುಮಾರನು ತನ್ನ ಮಹಾಸಿಂಹಾಸನದ ಮೇಲೆ ಕುಳಿತುಕೊಳ್ಳುವನು. ನನ್ನನ್ನು ಹಿಂಬಾಲಿಸಿದ ನೀವೆಲ್ಲರೂ ಸಿಂಹಾಸನಗಳ ಮೇಲೆ ಕುಳಿತು ಇಸ್ರೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.


“ಎಸ್ತೇರ್ ರಾಣಿಯೇ, ಯಾವುದು ನಿನ್ನ ಮನಸ್ಸನ್ನು ಭಾದಿಸುತ್ತದೆ? ನನ್ನನ್ನು ಏನು ಕೇಳಲು ಬಂದಿರುವಿ? ಕೇಳು, ನಾನು ನಿನಗೆ ಅರ್ಧ ರಾಜ್ಯವನ್ನು ಕೇಳಿದರೂ ಕೊಡುವೆನು” ಎಂದು ರಾಜನು ಅಂದನು.


ಆ ಸಮಯದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ಪರಲೋಕರಾಜ್ಯದಲ್ಲಿ ಯಾರಿಗೆ ಅತ್ಯುತ್ತಮ ಸ್ಥಾನ ದೊರೆಯುತ್ತದೆ” ಎಂದು ಕೇಳಿದರು.


ಯೆಹೋವನು ನನ್ನ ಒಡೆಯನಿಗೆ, “ನಾನು ನಿನ್ನ ಶತ್ರುಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ಹೇಳಿದನು.


ಅಪೊಸ್ತಲರು ಒಟ್ಟಾಗಿ ಸೇರಿದ್ದಾಗ, ಅವರು ಯೇಸುವಿಗೆ, “ಪ್ರಭುವೇ, ನೀನು ಯೆಹೂದ್ಯರಿಗೆ ಮತ್ತೆ ಅವರ ರಾಜ್ಯವನ್ನು ಕೊಡುವಂಥದ್ದು ಈ ಕಾಲದಲ್ಲೋ?” ಎಂದು ಕೇಳಿದರು.


ಹೆರೋದ್ಯಳ ಮಗಳು ಈ ಔತಣಕೂಟಕ್ಕೆ ಬಂದು ನರ್ತಿಸಿದಳು. ಹೆರೋದನಿಗೂ ಮತ್ತು ಅವನ ಜೊತೆಯಲ್ಲಿ ಊಟಮಾಡುತ್ತಿದ್ದವರಿಗೂ ಬಹಳ ಸಂತೋಷವಾಯಿತು. ಆಗ ರಾಜ ಹೆರೋದನು ಆ ಹುಡುಗಿಗೆ, “ನಿನಗೆ ಏನು ಬೇಕಾದರೂ ಕೇಳಿಕೊ, ನಾನು ನಿನಗೆ ಕೊಡುತ್ತೇನೆ.


ಯೇಸು ನಿಂತು, ಆ ಕುರುಡರಿಗೆ “ನಾನು ನಿಮಗೆ ಏನು ಮಾಡಬೇಕೆಂದು ಆಶಿಸುತ್ತೀರಿ?” ಎಂದನು.


ಸೊಲೊಮೋನನು ಗಿಬ್ಯೋನಿನಲ್ಲಿದ್ದಾಗ, ಯೆಹೋವನು ರಾತ್ರಿ ಕನಸಿನಲ್ಲಿ ಅವನಿಗೆ ದರ್ಶನವನ್ನು ನೀಡಿ, “ನೀನು ಏನುಬೇಕಾದರೂ ಕೇಳು. ನಾನು ಅದನ್ನು ನಿನಗೆ ಕೊಡುತ್ತೇನೆ” ಎಂದು ಹೇಳಿದನು.


ನೀವು ಕ್ರಿಸ್ತನ ಜೊತೆಯಲ್ಲಿ ಜೀವಂತವಾಗಿ ಎದ್ದುಬಂದಿರುವುದರಿಂದ ಪರಲೋಕದವುಗಳನ್ನು ಪಡೆಯಲು ಪ್ರಯತ್ನಿಸಿರಿ. ಕ್ರಿಸ್ತ ಯೇಸು ಪರಲೋಕದಲ್ಲಿ ದೇವರ ಬಲಗಡೆ ಆಸನಾರೂಢನಾಗಿದ್ದಾನೆ.


ಸಹೋದರ ಸಹೋದರಿಯರೆಂಬ ಅನ್ಯೋನ್ಯಭಾವದಿಂದ ಒಬ್ಬರನ್ನೊಬ್ಬರು ಪ್ರೀತಿಸಿರಿ. ನೀವು ನಿಮಗೋಸ್ಕರ ಬಯಸುವ ಮರ್ಯಾದೆಗಿಂತಲೂ ಹೆಚ್ಚು ಮರ್ಯಾದೆಯನ್ನು ನಿಮ್ಮ ಸಹೋದರ ಸಹೋದರಿಯರಿಗೆ ಕೊಡಿರಿ.


ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ಏನು ಬೇಕಾದರೂ ಕೇಳಿಕೊಳ್ಳಿರಿ, ಅದು ನಿಮಗೆ ದೊರೆಯುವುದು.


ಬಳಿಕ ಅಪೊಸ್ತಲರು ತಮ್ಮಲ್ಲಿ ಯಾರು ಅತಿ ಶ್ರೇಷ್ಠರೆಂದು ವಾದ ಮಾಡತೊಡಗಿದರು.


ಯೇಸು ಪ್ರಯಾಣ ಮಾಡುತ್ತಾ ಜೆರುಸಲೇಮಿನ ಸಮೀಪಕ್ಕೆ ಬಂದನು. ಕೆಲವು ಜನರು ದೇವರ ರಾಜ್ಯವು ಬೇಗನೆ ಬರಲಿದೆ ಎಂದುಕೊಂಡರು.


“ನಾನು ನಿನಗಾಗಿ ಏನು ಮಾಡಬೇಕು?” ಎಂದು ಕೇಳಿದನು. ಕುರುಡನು, “ಪ್ರಭುವೇ, ನನಗೆ ಮತ್ತೆ ಕಣ್ಣು ಕಾಣುವಂತೆ ಮಾಡು” ಅಂದನು.


ಯೇಸು, “ನನ್ನಿಂದ ನಿನಗೆ ಏನಾಗಬೇಕು?” ಎಂದು ಅವನನ್ನು ಕೇಳಿದನು. ಆ ಕುರುಡನು, “ಗುರುವೇ, ನನಗೆ ಕಣ್ಣು ಕಾಣುವಂತೆ ಮಾಡು” ಎಂದು ಉತ್ತರಿಸಿದನು.


ಬಾರೂಕನೇ, ನೀನು ದೊಡ್ಡ ಪದವಿಯನ್ನು ನಿರೀಕ್ಷಿಸುತ್ತಿರುವೆ. ಆದರೆ ನೀನು ಅದನ್ನು ನಿರೀಕ್ಷಿಸಬೇಡ. ಏಕೆಂದರೆ ನಾನು ಎಲ್ಲರಿಗೆ ಭಯಂಕರವಾದ ಸಂಗತಿಗಳನ್ನು ಬರಮಾಡುವೆನು.”’ ಯೆಹೋವನು ಹೀಗೆ ಹೇಳಿದನು, ‘ನೀನು ಅನೇಕ ಸ್ಥಳಗಳಿಗೆ ಹೋಗಬೇಕಾಗಬಹುದು. ಅದರೆ ನೀನು ಎಲ್ಲಿ ಹೋದರೂ ಪ್ರಾಣ ಉಳಿಸಿಕೊಂಡು ಪಾರಾಗುವಂತೆ ನಾನು ಮಾಡುತ್ತೇನೆ.’”


ನಿನ್ನ ಸ್ತ್ರೀಪರಿವಾರದಲ್ಲಿರುವವರು ರಾಜಕುಮಾರಿಯರೇ, ನಿನ್ನ ಪಟ್ಟದರಾಣಿಯು ಓಫೀರ್ ದೇಶದ ಬಂಗಾರದಿಂದ ಮಾಡಿದ ಕಿರೀಟವನ್ನು ಧರಿಸಿಕೊಂಡು ನಿನ್ನ ಬಲಗಡೆಯಲ್ಲಿ ನಿಂತಿರುವಳು.


ದೇವಜನರು ದೋಷಿಗಳೆಂದು ಯಾರು ಹೇಳಬಲ್ಲರು? ಯಾರು ಇಲ್ಲ! ಕ್ರಿಸ್ತ ಯೇಸು ನಮಗೋಸ್ಕರ ಪ್ರಾಣಕೊಟ್ಟನು. ಅಷ್ಟೇ ಅಲ್ಲ, ಆತನು ಸತ್ತವರೊಳಗಿಂದ ಜೀವಂತನಾಗಿ ಎದ್ದುಬಂದನು. ಈಗ ಆತನು ದೇವರ ಬಲಗಡೆಯಲ್ಲಿದ್ದಾನೆ ಮತ್ತು ನಮಗೋಸ್ಕರ ದೇವರನ್ನು ಬೇಡಿಕೊಳ್ಳುತ್ತಿದ್ದಾನೆ.


ಬತ್ಷೆಬೆಳು ರಾಜನಾದ ಸೊಲೊಮೋನನೊಂದಿಗೆ ಮಾತನಾಡಲು ಹೋದಳು. ಸೊಲೊಮೋನನು ಆಕೆಯನ್ನು ಕಂಡು ಎದ್ದುನಿಂತು ಅವಳಿಗೆ ಬಾಗಿ ನಮಸ್ಕರಿಸಿ, ಸಿಂಹಾಸನದ ಮೇಲೆ ಕುಳಿತನು. ಅವನು ತನ್ನ ತಾಯಿಗಾಗಿ ಮತ್ತೊಂದು ಸಿಂಹಾಸನವನ್ನು ತರಲು ಕೆಲವು ಸೇವಕರಿಗೆ ಹೇಳಿದನು. ನಂತರ ಅವಳು ಅವನ ಬಲಗಡೆಯಲ್ಲಿ ಕುಳಿತಳು.


ಪ್ರಭುವಾದ ಯೇಸು ಈ ಸಂಗತಿಗಳನ್ನು ಶಿಷ್ಯರಿಗೆ ಹೇಳಿದ ಮೇಲೆ, ಸ್ವರ್ಗದೊಳಗೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಕುಳಿತುಕೊಂಡನು.


ಯೇಸು ಅವಳ ಮಕ್ಕಳಿಗೆ, “ನೀವು ಏನು ಕೇಳಿಕೊಳ್ಳುತ್ತಿದ್ದೀರೆಂಬುದೇ ನಿಮಗೆ ಗೊತ್ತಿಲ. ನಾನು ಅನುಭವಿಸಬೇಕಾಗಿರುವ ಸಂಕಟವನ್ನು ಅನುಭವಿಸಲು ನಿಮಗೆ ಸಾಧ್ಯವೋ?” ಎಂದು ಕೇಳಿದನು. ಅದಕ್ಕೆ ಅವರು, “ಹೌದು, ನಮಗೆ ಸಾಧ್ಯ” ಎಂದು ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು