Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 20:24 - ಪರಿಶುದ್ದ ಬೈಬಲ್‌

24 ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿದಾಗ ಆ ಇಬ್ಬರು ಶಿಷ್ಯರ ಮೇಲೆ ಕೋಪಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿ ಆ ಇಬ್ಬರು ಸಹೋದರರ ಮೇಲೆ ಸಿಟ್ಟುಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಉಳಿದ ಹತ್ತುಮಂದಿ ಶಿಷ್ಯರು ಇದನ್ನು ಕೇಳಿದಾಗ ಆ ಇಬ್ಬರು ಸಹೋದರರ ಮೇಲೆ ಸಿಟ್ಟುಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿ ಆ ಇಬ್ಬರು ಅಣ್ಣತಮ್ಮಂದಿರ ಮೇಲೆ ಸಿಟ್ಟುಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಬೇರೆ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿದಾಗ, ಆ ಇಬ್ಬರು ಸಹೋದರರ ಮೇಲೆ ಸಿಟ್ಟುಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಹುರಲ್ಲ್ಯಾ ಧಾ ಶಿಸಾನಿ ಹೆ ಆಯಿಕ್ಲ್ಯಾನಿ. ತನ್ನಾ ತೆಕಾ ಹ್ಯಾ ದೊನ್ ಭಾವಾಂಚ್ಯಾ ವರ್‍ತಿ ರಾಗ್ ಯೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 20:24
13 ತಿಳಿವುಗಳ ಹೋಲಿಕೆ  

ಯುವಕರೇ, ನಾನು ನಿಮಗೂ ಕೆಲವು ಮಾತುಗಳನ್ನು ಹೇಳಬೇಕಾಗಿದೆ. ನೀವು ಹಿರಿಯರಿಗೆ ಅಧೀನರಾಗಿರಬೇಕು. ನೀವೆಲ್ಲರೂ ಒಬ್ಬರಿಗೊಬ್ಬರು ನಮ್ರತೆಯಿಂದ ನಡೆದುಕೊಳ್ಳಬೇಕು. “ದೇವರು ಅಹಂಕಾರಿಗಳಿಗೆ ವಿರುದ್ಧನಾಗಿದ್ದಾನೆ. ಆದರೆ ಆತನು ನಮ್ರತೆಯಿಂದ ಇರುವ ಜನರಿಗೆ ಕೃಪೆಯನ್ನು ದಯಪಾಲಿಸುವನು.”


ನೀವು ಸ್ವಾರ್ಥಿಗಳೂ ತೀಕ್ಷ್ಣವಾದ ಮತ್ಸರವನ್ನು ಹೃದಯದಲ್ಲಿ ಹೊಂದಿರುವವರೂ ಆಗಿದ್ದರೆ, ನೀವು ಕೊಚ್ಚಿಕೊಳ್ಳುವುದರಲ್ಲಿ ಅರ್ಥವೇ ಇಲ್ಲ. ಏಕೆಂದರೆ ಅದು ಕೇವಲ ಸುಳ್ಳಷ್ಟೇ.


ನೀವು ಯಾವುದನ್ನೇ ಮಾಡುವಾಗ, ಸ್ವಾರ್ಥವಾಗಲಿ ಅಹಂಕಾರವಾಗಲಿ ನಿಮಗೆ ಮಾರ್ಗದರ್ಶಕವಾಗದಂತೆ ನೋಡಿಕೊಳ್ಳಿರಿ. ದೀನಭಾವವುಳ್ಳವರಾಗಿದ್ದು ನಿಮಗಿಂತಲೂ ಹೆಚ್ಚಾಗಿ ಬೇರೆಯವರಿಗೆ ಗೌರವವನ್ನು ಕೊಡಿರಿ.


ಪ್ರೀತಿಯು ತಾಳ್ಮೆಯುಳ್ಳದ್ದು, ದಯೆಯುಳ್ಳದ್ದು. ಪ್ರೀತಿಯು ಅಸೂಯೆಪಡುವುದಿಲ್ಲ; ಹೊಗಳಿಕೊಳ್ಳುವುದಿಲ್ಲ; ಗರ್ವಪಡುವುದಿಲ್ಲ.


ಉಳಿದ ಹತ್ತು ಜನ ಶಿಷ್ಯರು ಇದನ್ನು ಕೇಳಿ ಯಾಕೋಬ ಮತ್ತು ಯೋಹಾನರ ಮೇಲೆ ಕೋಪಗೊಂಡರು.


ದುರಾಭಿಮಾನವು ಕೇವಲ ಜಗಳಕ್ಕೆ ಕಾರಣ. ಬುದ್ಧಿವಾದವನ್ನು ಕೇಳುವವರು ವಿವೇಕಿಗಳಾಗಿದ್ದಾರೆ.


ಯೇಸು ಅವರಿಗೆ, “ನಾನು ಅನುಭವಿಸಲಿರುವ ಸಂಕಟಗಳನ್ನು ನೀವು ನಿಜವಾಗಿಯೂ ಅನುಭವಿಸುವಿರಿ. ಆದರೆ ನನ್ನ ಬಲಗಡೆಯಲ್ಲಾಗಲಿ ಎಡಗಡೆಯಲ್ಲಾಗಲಿ ಕುಳಿತುಕೊಳ್ಳುವವನನ್ನು ಆಯ್ಕೆಮಾಡುವವನು ನಾನಲ್ಲ. ನನ್ನ ತಂದೆಯು ಆ ಸ್ಥಳಗಳನ್ನು ಯಾರಿಗಾಗಿ ಕಾಯ್ದಿರಿಸಿದ್ದಾನೋ ಅವರಿಗೇ ಆ ಅವಕಾಶವನ್ನು ಕೊಡುತ್ತಾನೆ” ಎಂದನು.


ಯೇಸು ಶಿಷ್ಯರನ್ನೆಲ್ಲ ಒಟ್ಟಿಗೆ ಕರೆದು, “ಯೆಹೂದ್ಯರಲ್ಲದ ಅಧಿಪತಿಗಳು ಜನರ ಮೇಲೆ ತಮ್ಮ ಅಧಿಕಾರ ತೋರಿಸಲು ಇಷ್ಟಪಡುತ್ತಾರೆ ಎಂಬುದು ನಿಮಗೆ ಗೊತ್ತಿದೆ. ಮತ್ತು ಅವರ ಪ್ರಮುಖ ನಾಯಕರು ಜನರ ಮೇಲೆ ತಮ್ಮ ಅಧಿಕಾರವನ್ನೆಲ್ಲಾ ಚಲಾಯಿಸಲು ಇಷ್ಟಪಡುತ್ತಾರೆ.


ಇದನ್ನು ಕಂಡ ಯೇಸು ಕೋಪಗೊಂಡು ಅವರಿಗೆ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಗೊಡಿಸಿರಿ. ಅವರನ್ನು ತಡೆಯಬೇಡಿ, ಏಕೆಂದರೆ ದೇವರ ರಾಜ್ಯವು ಇಂಥವರದೇ.


ಯೇಸು ಸಬ್ಬತ್‌ದಿನದಲ್ಲಿ ವಾಸಿಮಾಡಿದ್ದರಿಂದ ಸಭಾಮಂದಿರದ ಅಧಿಕಾರಿ ಕೋಪಗೊಂಡು ಜನರಿಗೆ, “ಕೆಲಸಕ್ಕಾಗಿ ವಾರದಲ್ಲಿ ಆರು ದಿನಗಳಿವೆ. ಆ ದಿನಗಳಲ್ಲಿ ಬಂದು ವಾಸಿಮಾಡಿಸಿಕೊಳ್ಳಿರಿ. ಸಬ್ಬತ್‌ದಿನದಲ್ಲಿ ವಾಸಿಮಾಡಿಸಿಕೊಳ್ಳಬಾರದು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು