Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:21 - ಪರಿಶುದ್ದ ಬೈಬಲ್‌

21 ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಸಂಶಯಪಡದೆ ನಂಬಿದರೆ ನಾನು ಈ ಮರಕ್ಕೆ ಮಾಡಿದಂತೆ ನೀವೂ ಮಾಡಲು ಸಾಧ್ಯ. ಅಲ್ಲದೆ ಇನ್ನೂ ಹೆಚ್ಚಾಗಿ ಮಾಡಲು ಸಾಧ್ಯ. ನೀವು ಈ ಬೆಟ್ಟಕ್ಕೆ, ‘ನೀನು ಹೋಗಿ ಸಮುದ್ರದಲ್ಲಿ ಬೀಳು’ ಎಂದು ಪೂರ್ಣ ನಂಬಿಕೆಯಿಂದ ಹೇಳಿದರೆ ಅಂತೆಯೇ ಸಂಭವಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ ನೀವು ಸಂಶಯಪಡದೆ ನಂಬಿದರೆ ಈ ಅಂಜೂರದ ಮರಕ್ಕೆ ಮಾಡಿದಂಥದನ್ನು ನೀವು ಮಾಡುವಿರಿ ಮಾತ್ರವಲ್ಲದೆ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು’ ಎಂದು ಹೇಳಿದರೆ ಅದೂ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ನಾನು ನಿಮಗೆ ಖಂಡಿತವಾಗಿ ಹೇಳುತ್ತೇನೆ: ನೀವು ಸಂಶಯಪಡದೆ ವಿಶ್ವಾಸಿಸಿದರೆ ಈ ಅಂಜೂರದ ಮರಕ್ಕೆ ನಾನು ಏನು ಮಾಡಿದೆನೋ ನೀವೂ ಅಂತೆಯೇ ಮಾಡುವಿರಿ; ಅದು ಮಾತ್ರವಲ್ಲ, ಈ ಬೆಟ್ಟಕ್ಕೆ, ‘ನೀನು ಇಲ್ಲಿಂದ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು,’ ಎಂದು ನೀವು ಹೇಳಿದರೆ, ಅದು ಹಾಗೆಯೇ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅದಕ್ಕೆ ಯೇಸು - ನಿಮಗೆ ಸತ್ಯವಾಗಿ ಹೇಳುತ್ತೇನೆ ನೀವು ಸಂಶಯಪಡದೆ ನಂಬಿದರೆ ನಾನು ಅಂಜೂರದ ಮರಕ್ಕೆ ಮಾಡಿದಂಥದನ್ನು ನೀವು ಮಾಡುವಿರಿ. ಇದು ಮಾತ್ರವಲ್ಲದೆ ಈ ಬೆಟ್ಟಕ್ಕೆ - ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು ಎಂದು ಹೇಳಿದರೆ ಅದೂ ಆಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಯೇಸು ಉತ್ತರವಾಗಿ ಅವರಿಗೆ, “ನಾನು ನಿಮಗೆ ನಿಜವಾಗಿ ಹೇಳುತ್ತೇನೆ: ಸಂದೇಹ ಪಡದೆ ನಂಬಿದರೆ, ನಾನು ಈ ಅಂಜೂರದ ಮರಕ್ಕೆ ಮಾಡಿದಂತೆಯೇ ನೀವೂ ಮಾಡುವಿರಿ. ಇದಲ್ಲದೆ ನೀವು ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು’ ಎಂದು ಹೇಳಿದರೂ ಅದು ಹಾಗೆಯೇ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಜೆಜುನ್ ತೆಂಕಾ,“ ಮಿಯಾ ತುಮ್ಕಾ ಖರೆಚ್ ಸಾಂಗ್ತಾ. ಮನಾತ್ ಸಂಶೆವ್ ಕರಿನಸ್ತಾನಾ ತುಮಿ ವಿಶ್ವಾಸ್ ಕರ್ಲ್ಯಾರ್, ಮಿಯಾ ಹ್ಯಾ ಅಂಜುರಾಚ್ಯಾ ಝಾಡಾಕ್ ಕರ್ಲ್ಯಾ ಸರ್ಕೆ ತುಮಿಬಿ ಕರುಕ್ ಹೊತಾ. ಅನಿ ಎವ್ಡೆಚ್ ನ್ಹಯ್ ತುಮಿ ಎಕ್ ಮಡ್ಡಿಕ್ ಉಟ್ ಅನಿ ಸಮುಂದರಾತ್ ಜಾವ್ನ್ ಪಡ್. ಮನುನ್ ಸಾಂಗ್ಲ್ಯಾರ್ ತುಮಿ ಸಾಂಗಲ್ಲ್ಯಾ ಸರ್ಕೆಚ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:21
9 ತಿಳಿವುಗಳ ಹೋಲಿಕೆ  

ಆದರೆ ನೀವು ದೇವರನ್ನು ಕೇಳಿಕೊಳ್ಳುವಾಗ ಆತನಲ್ಲಿ ನಿಮಗೆ ನಂಬಿಕೆಯಿರಬೇಕು. ದೇವರ ಬಗ್ಗೆ ಸಂದೇಹಪಡದಿರಿ. ಸಂದೇಹಪಡುವವನು ಸಾಗರದಲ್ಲಿನ ಅಲೆಯಂತಿದ್ದಾನೆ. ಗಾಳಿಯು ಬೀಸಿದಾಗ ಅಲೆಯು ಮೇಲೆದ್ದು ಬೀಳುತ್ತದೆ. ಸಂದೇಹಪಡುವವನು ಆ ಅಲೆಯಂತಿರುವನು.


ಅದಕ್ಕೆ ಯೇಸು, “ನಿಮ್ಮ ಅಲ್ಪವಿಶ್ವಾಸವೇ ಅದಕ್ಕೆ ಕಾರಣ. ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮ್ಮ ನಂಬಿಕೆಯು ಸಾಸಿವೆ ಕಾಳಿನಷ್ಟಿದ್ದರೂ, ಈ ಪರ್ವತಕ್ಕೆ ‘ಇಲ್ಲಿಂದ ಅಲ್ಲಿಗೆ ಹೋಗು’ ಎಂದು ನೀವು ಹೇಳಿದರೂ ಅದು ಹೋಗುತ್ತದೆ. ನಿಮಗೆ ಅಸಾಧ್ಯವಾಗದ ಕಾರ್ಯಗಳೇ ಇರದು” ಎಂದನು.


ಪ್ರವಾದಿಸುವ ವರ ನನಗಿರಬಹುದು; ದೇವರ ರಹಸ್ಯ ಸಂಗತಿಗಳನ್ನೆಲ್ಲಾ ಮತ್ತು ಜ್ಞಾನವನ್ನೆಲ್ಲಾ ನಾನು ಅರ್ಥಮಾಡಿಕೊಂಡಿರಬಹುದು ಮತ್ತು ಬೆಟ್ಟಗಳನ್ನು ಚಲಿಸಬಲ್ಲಂಥ ಮಹಾನಂಬಿಕೆ ನನಗಿರಬಹುದು. ಇವುಗಳೆಲ್ಲಾ ನನ್ನಲ್ಲಿ ಇದ್ದರೂ ಪ್ರೀತಿಯು ಇಲ್ಲದಿದ್ದರೆ, ನಾನು ನಿಷ್ಪ್ರಯೋಜಕನಾಗಿದ್ದೇನೆ.


ಪರಲೋಕರಾಜ್ಯವನ್ನು ಹೊಂದತಕ್ಕವರು ಹೊರಗೆ ಕತ್ತಲೆಗೆ ಎಸೆಯಲ್ಪಡುವರು. ಅಲ್ಲಿ ಅವರು ಗೋಳಾಡುವರು ಮತ್ತು ನೋವಿನಿಂದ ಹಲ್ಲುಗಳನ್ನು ಕಡಿಯುವರು” ಎಂದನು.


ಶಿಷ್ಯರು ಇದನ್ನು ನೋಡಿ ಬಹಳ ಆಶ್ಚರ್ಯಪಟ್ಟು, “ಈ ಅಂಜೂರದ ಮರವು ಅಷ್ಟು ಬೇಗನೆ ಹೇಗೆ ಒಣಗಿ ಹೋಯಿತು?” ಎಂದು ಕೇಳಿದರು.


ಯೇಸು, “ಪೇತ್ರನೇ, ಬಾ” ಅಂದನು. ಕೂಡಲೆ ಪೇತ್ರನು ದೋಣಿಯಿಂದ ಇಳಿದು ಯೇಸುವಿನ ಬಳಿಗೆ ನೀರಿನ ಮೇಲೆ ನಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು