Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:25 - ಪರಿಶುದ್ದ ಬೈಬಲ್‌

25 ದೀಕ್ಷಾಸ್ನಾನ ಕೊಡುವ ಅಧಿಕಾರ ಯೋಹಾನನಿಗೆ ದೇವರಿಂದ ಬಂದಿತೋ ಇಲ್ಲವೆ ಮನುಷ್ಯನಿಂದ ಬಂದಿತೋ? ನನಗೆ ಹೇಳಿ!” ಎಂದು ಉತ್ತರ ಕೊಟ್ಟನು. ಯಾಜಕರು ಮತ್ತು ಯೆಹೂದ್ಯ ನಾಯಕರು ಯೇಸುವಿನ ಪ್ರಶ್ನೆಯನ್ನು ಕುರಿತು ತಮ್ಮೊಳಗೆ, “‘ಯೋಹಾನನು ಕೊಟ್ಟ ದೀಕ್ಷಾಸ್ನಾನವು ದೇವರಿಂದ ಬಂದಿತು’ ಎಂದರೆ, ‘ಹಾಗಾದರೆ ಯೋಹಾನನನ್ನು ನೀವು ಏಕೆ ನಂಬಲಿಲ್ಲ?’ ಎಂದು ಕೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಎಲ್ಲಿಂದ ಬಂದಿತು ಪರಲೋಕದಿಂದಲೋ ಅಥವಾ ಮನುಷ್ಯರಿಂದಲೋ?” ಅಂದನು. ಆಗ ಅವರು, “‘ಪರಲೋಕದಿಂದ ಬಂದಿತೆಂದು’ ನಾವು ಹೇಳಿದರೆ, ‘ಹಾಗಾದರೆ ನೀವು ಅವನನ್ನು ಏಕೆ ನಂಬಲಿಲ್ಲ’ ಎಂದು ನಮಗೆ ಕೇಳಿಯಾನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 'ಸ್ನಾನದೀಕ್ಷೆ ಕೊಡುವ ಅಧಿಕಾರ ಯೊವಾನ್ನನಿಗೆ ಎಲ್ಲಿಂದ ಬಂದಿತು? ದೇವರಿಂದಲೋ, ಮನುಷ್ಯರಿಂದಲೋ?’ “ ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಎಲ್ಲಿಂದ ಬಂತು? ಪರಲೋಕದಿಂದಲೋ? ಮನುಷ್ಯರಿಂದಲೋ ಅಂದನು. ಆಗ ಅವರು - ಪರಲೋಕದಿಂದ ಬಂತೆಂದು ನಾವು ಹೇಳಿದರೆ ಹಾಗಾದರೆ ನೀವು ಅವನನ್ನು ಯಾಕೆ ನಂಬಲಿಲ್ಲ ಎಂದು ನಮಗೆ ಹೇಳಾನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ದೀಕ್ಷಾಸ್ನಾನ ಕೊಡುವ ಅಧಿಕಾರವು ಯೋಹಾನನಿಗೆ ಎಲ್ಲಿಂದ ಬಂತು? ಪರಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ?” ಎಂದು ಕೇಳಿದ್ದಕ್ಕೆ, ಅವರು ತಮ್ಮತಮ್ಮೊಳಗೆ ತರ್ಕಿಸುತ್ತಾ, “ಪರಲೋಕದಿಂದ ಎಂದು ನಾವು ಹೇಳಿದರೆ, ‘ನೀವು ಏಕೆ ಅವನನ್ನು ನಂಬಲಿಲ್ಲ?’ ಎಂದು ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 “ಜುವಾಂವ್ ಬಾವ್ತಿಸಾಕ್ ಬಾಲ್ತಿಮ್ ದಿತಲೊ ಹಕ್ಕ್ ಖೈತ್ನಾ ದಿಲ್ಲೊ ಹೊತ್ತೊ ಮಾನ್ಸಾಕ್ನಾ ಕಾಯ್ ಸರ್ಗಾತ್ನಾ?” ಮನುನ್ ಇಚಾರ್‍ಲ್ಯಾನ್. ತನ್ನಾ ತೆನಿ ಎಕಾಮೆಕಾತ್ನಿ ಬೊಲುನ್ ಘೆವ್ನ್, “ಅಮಿ ಕಾಯ್ ಸಾಂಗುವಾ? ದೆವಾಕ್ನಾ ಮಟ್ಲ್ಯಾರ್, ‘ತುಮಿ ಜುವಾಂವಾ ವರ್‍ತಿ ಕಶ್ಯಾಕ್ ವಿಶ್ವಾಸ್ ಕರುಕ್‍ನ್ಯಾಶಿ?’ ಮನುನ್ ತೊ ಇಚಾರ್ತಾ?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:25
24 ತಿಳಿವುಗಳ ಹೋಲಿಕೆ  

ದೇವರ ಮಗನಲ್ಲಿ ನಂಬಿಕೆ ಇಡುವವನಿಗೆ ತೀರ್ಪಾಗುವುದಿಲ್ಲ. ಆದರೆ ನಂಬದವನಿಗೆ ಆಗಲೇ ತೀರ್ಪಾಗಿದೆ. ಏಕೆಂದರೆ ಅವನು ದೇವರ ಒಬ್ಬನೇ ಮಗನಲ್ಲಿ ನಂಬಿಕೆ ಇಡಲಿಲ್ಲ.


ಯೋಹಾನನು ಆತನ ಬಗ್ಗೆ ಜನರಿಗೆ ತಿಳಿಸುತ್ತಾ, “‘ನನ್ನ ನಂತರ ಬರುವ ಒಬ್ಬನು ನನಗಿಂತಲೂ ಶ್ರೇಷ್ಠನಾಗಿದ್ದಾನೆ. ಆತನು ನನಗಿಂತ ಮೊದಲೇ ಜೀವಿಸುತ್ತಿದ್ದನು’ ಎಂದು ನಾನು ಹೇಳಿದಾಗ ಈತನ ಬಗ್ಗೆಯೇ ಮಾತಾಡುತ್ತಿದ್ದೆನು” ಎಂದು ಗಟ್ಟಿಯಾಗಿ ಕೂಗಿ ಹೇಳಿದನು.


ಅವರೆಲ್ಲರೂ ಇದರ ಬಗ್ಗೆ ಒಟ್ಟಾಗಿ ಚರ್ಚಿಸಿ ಒಬ್ಬರಿಗೊಬ್ಬರು, “‘ದೀಕ್ಷಾಸ್ನಾನ ಮಾಡಿಸುವ ಅಧಿಕಾರ ಯೋಹಾನನಿಗೆ ದೇವರಿಂದ ಬಂದಿತು’ ಎಂದು ಉತ್ತರಕೊಟ್ಟರೆ, ‘ಹಾಗಾದರೆ ನೀವು ಯೋಹಾನನನ್ನು ಏಕೆ ನಂಬಲಿಲ್ಲ?’ ಎಂದು ಆತನು ಕೇಳುವನು.


ಯೋಹಾನ ಎಂಬ ಒಬ್ಬ ಮನುಷ್ಯನನ್ನು ದೇವರು ಕಳುಹಿಸಿದನು.


ಶಿಷ್ಯರು ಇದರ ಅರ್ಥವನ್ನು ಚರ್ಚಿಸಿದರು. ಅವರು, “ನಾವು ರೊಟ್ಟಿ ತರಲು ಮರೆತುಬಿಟ್ಟದ್ದಕ್ಕಾಗಿ ಯೇಸು ಹೀಗೆ ಹೇಳಿರಬಹುದೆ?” ಎಂದು ಮಾತಾಡಿಕೊಂಡರು.


ಯೇಸು, “ನಾನೂ ನಿಮಗೊಂದು ಪ್ರಶ್ನೆಯನ್ನು ಕೇಳುತ್ತೇನೆ. ನೀವು ನನಗೆ ಉತ್ತರ ಕೊಟ್ಟರೆ, ಇವುಗಳನ್ನು ಯಾವ ಅಧಿಕಾರದಿಂದ ಮಾಡುತ್ತಿದ್ದೇನೆಂದು ನಿಮಗೆ ತಿಳಿಸುತ್ತೇನೆ.


‘ಅದು ಮನುಷ್ಯನಿಂದ ಬಂದಿತು’ ಎಂದರೆ ಜನರೆಲ್ಲರೂ ನಮ್ಮ ಮೇಲೆ ಕೋಪಗೊಳ್ಳುವರು. ಅವರೆಲ್ಲರೂ ಯೋಹಾನನನ್ನು ಒಬ್ಬ ಪ್ರವಾದಿ ಎಂದು ನಂಬಿರುವುದರಿಂದ ನಾವು ಅವರಿಗೆ ಹೆದರಬೇಕಾಗಿದೆ” ಎಂದು ಮಾತಾಡಿಕೊಂಡರು.


ಅವರು ಉತ್ತರಕೊಡಲಿಲ್ಲ. ಆಗ ಯೇಸು ಆ ಮನುಷ್ಯನ ಕೈಮುಟ್ಟಿ ವಾಸಿಮಾಡಿ ಅವನನ್ನು ಕಳುಹಿಸಿಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು