ನೀವು ಇದರಿಂದ ಪಾಠ ಕಲಿಯಬೇಕೆಂದು ಇದನ್ನೆಲ್ಲಾ ಹೇಳುತ್ತಿದ್ದೇನೆ. ನೀವು ನನ್ನನ್ನು ಗೌರವಿಸಿ ನನಗೆ ಭಯಪಡಬೇಕೆಂದು ನಾನು ಈ ವಿಷಯಗಳನ್ನು ತಿಳಿಸುತ್ತಿದ್ದೇನೆ. ನೀವು ಹೀಗೆ ಮಾಡುವುದಾದರೆ ನಿನ್ನ ಮನೆಯು ನಾಶವಾಗದು. ನೀವು ನನ್ನ ನಿಯಮಗಳನ್ನು ಅನುಸರಿಸುವದಾದರೆ ನಾನು ಆಲೋಚಿಸಿರುವ ಪ್ರಕಾರ ನಿಮ್ಮನ್ನು ಶಿಕ್ಷಿಸುವದಿಲ್ಲ.” ಆದರೆ ಆ ದುಷ್ಟ ಜನರು ತಮ್ಮ ಮಾರ್ಗವನ್ನು ಬಿಡದೆ ದುಷ್ಟತನದಲ್ಲಿಯೇ ಮುಂದುವರಿಯುತ್ತಿದ್ದಾರೆ.
“ಆ ಯಜಮಾನನಿಗೆ ರೈತರ ಬಳಿಗೆ ಕಳುಹಿಸಲು ಪ್ರಿಯ ಮಗನೊಬ್ಬನೇ ಉಳಿದಿದ್ದನು. ಅವನು ಕಳುಹಿಸಬಹುದಾದ ಕೊನೆಯ ವ್ಯಕ್ತಿ ಅವನ ಸ್ವಂತ ಮಗನಾಗಿದ್ದನು. ‘ರೈತರು ನನ್ನ ಮಗನಿಗೆ ಗೌರವ ಕೊಡುತ್ತಾರೆ’ ಎಂದುಕೊಂಡು ಯಜಮಾನನು ಅವನನ್ನೇ ಕಳುಹಿಸಿದನು.
ನನ್ನ ದ್ರಾಕ್ಷಿತೋಟಕ್ಕೆ ನಾನು ಇನ್ನೇನು ಮಾಡಬೇಕಿತ್ತು. ನಾನು ಮಾಡಬೇಕಿದ್ದನ್ನೆಲ್ಲಾ ಮಾಡಿದೆನು. ಒಳ್ಳೆಯ ದ್ರಾಕ್ಷಿಹಣ್ಣು ಬಿಡುವುದೆಂದು ಆಶಿಸಿದ್ದೆನು. ಆದರೆ ಅದು ಹೊಲಸು ದ್ರಾಕ್ಷಿಗಳನ್ನೇ ಬಿಟ್ಟಿತು. ಹೀಗೆ ಆದದ್ದೇಕೆ?
ನಾನು ಮಾಡಬೇಕೆಂದು ಯೋಚಿಸಿರುವುದನ್ನು ಯೆಹೂದ ಕುಲದವರು ಕೇಳಿಸಿಕೊಳ್ಳಬಹುದು. ಅವರು ಮಾಡುತ್ತಿರುವ ದುಷ್ಕೃತ್ಯಗಳನ್ನು ನಿಲ್ಲಿಸಬಹುದು. ಅವರು ಹಾಗೆ ಮಾಡಿದರೆ ಅವರು ಮಾಡಿದ ಪಾಪಗಳನ್ನು ನಾನು ಕ್ಷಮಿಸುವೆನು.”