Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 22:17 - ಪರಿಶುದ್ದ ಬೈಬಲ್‌

17 ಆದ್ದರಿಂದ ನಿನ್ನ ಅಭಿಪ್ರಾಯವನ್ನು ತಿಳಿಸು. ಸೀಸರನಿಗೆ ತೆರಿಗೆ ಕೊಡುವುದು ಸರಿಯೋ ಅಥವಾ ತಪ್ಪೋ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಹೀಗಿರಲಾಗಿ ಕೈಸರನಿಗೆ ಸುಂಕ ಕೊಡುವುದು ನಿಯಮ ಬದ್ಧವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಹೀಗಿರುವಲ್ಲಿ ರೋಮ್ ಚಕ್ರಾಧಿಪತಿಗೆ ತೆರಿಗೆಕೊಡುವುದು ಧರ್ಮಸಮ್ಮತವೋ ಅಲ್ಲವೋ, ನಿಮ್ಮ ಅಭಿಪ್ರಾಯವನ್ನು ನಮಗೆ ತಿಳಿಸುವಿರಾ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಹೀಗಿರಲಾಗಿ ಕೈಸರನಿಗೆ ತೆರಿಗೆ ಕೊಡುವದು ಸರಿಯೋ ಸರಿಯಲ್ಲವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದ್ದರಿಂದ ಕೈಸರನಿಗೆ ತೆರಿಗೆ ಕೊಡುವುದು ಧರ್ಮಸಮ್ಮತವೋ ಅಲ್ಲವೋ? ನಿಮ್ಮ ಅಭಿಪ್ರಾಯವೇನು? ನಮಗೆ ಹೇಳು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತರ್ ಅಮ್ಕಾ“ಅಮಿ ರೊಮಾಚ್ಯಾ ಚಕ್ರವರ್ತಿಕ್ ತೆರ್‍ಗಿ ದಿತಲೆ ಅಮ್ಚ್ಯಾ ಖಾಯ್ದ್ಯಾ ಪರ್‍ಕಾರ್ ಸಮಾ ಕಾಯ್ ಚುಕ್ ಮನ್ತೆಯ್? ಸಾಂಗ್” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 22:17
18 ತಿಳಿವುಗಳ ಹೋಲಿಕೆ  

ಆ ಕಾಲದಲ್ಲಿ ಚಕ್ರವರ್ತಿ ಅಗಸ್ಟಸ್ ಸೀಸರನು ರೋಮನ್ನರ ಆಳ್ವಿಕೆಗೆ ಒಳಪಟ್ಟಿದ್ದ ಎಲ್ಲಾ ದೇಶಗಳಲ್ಲಿ ಜನಗಣತಿ ಆಗಬೇಕೆಂದು ಆಜ್ಞಾಪಿಸಿದನು.


ಅದಕ್ಕೆ ಪೇತ್ರನು, “ಹೌದು, ಸಲ್ಲಿಸುತ್ತಾನೆ” ಎಂದು ಉತ್ತರಕೊಟ್ಟನು. ಬಳಿಕ ಪೇತ್ರನು ಯೇಸುವಿದ್ದ ಮನೆಯೊಳಕ್ಕೆ ಹೋದನು. ಅವನು ಈ ವಿಷಯವನ್ನು ಹೇಳುವುದಕ್ಕಿಂತ ಮೊದಲೇ ಯೇಸು ಅವನಿಗೆ, “ಭೂಲೋಕದ ರಾಜರುಗಳು ಜನರಿಂದ ಅನೇಕ ಬಗೆಯ ತೆರಿಗೆಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ ತೆರಿಗೆ ಕೊಡುವ ಜನರು ಯಾರು? ರಾಜನ ಮಕ್ಕಳೇ ಅಥವಾ ಬೇರೆ ಜನರೇ? ನಿನ್ನ ಅಭಿಪ್ರಾಯವೇನು?” ಎಂದು ಕೇಳಿದನು.


ಪೌಲನು ಪ್ರತಿವಾದ ಮಾಡುತ್ತಾ, “ನಾನು ಯೆಹೂದ್ಯರ ಧರ್ಮಶಾಸ್ತ್ರಕ್ಕೆ ವಿರುದ್ಧವಾಗಲಿ ದೇವಾಲಯಕ್ಕೆ ವಿರುದ್ಧವಾಗಲಿ ಸೀಸರನಿಗೆ ವಿರುದ್ಧವಾಗಲಿ ಯಾವ ತಪ್ಪನ್ನೂ ಮಾಡಿಲ್ಲ” ಎಂದು ಹೇಳಿದನು.


ಯಾಸೋನನು ಇವರನ್ನು ತನ್ನ ಮನೆಯಲ್ಲಿ ಇರಿಸಿಕೊಂಡಿದ್ದಾನೆ. ಇವರೆಲ್ಲರೂ ಸೀಸರನ ಕಾನೂನುಗಳನ್ನು ಉಲ್ಲಂಘಿಸುತ್ತಾರೆ ಮತ್ತು ‘ಯೇಸು’ ಎಂಬ ಮತ್ತೊಬ್ಬ ರಾಜನಿರುವನೆಂದು ಹೇಳುತ್ತಾರೆ” ಎಂದು ಕೂಗಿ ಹೇಳಿದರು.


ಬಳಿಕ, ಯೂದ ಎಂಬುವನು ಗಲಿಲಾಯದಿಂದ ಬಂದನು. ಅದು ಜನಗಣತಿಯ ಕಾಲವಾಗಿತ್ತು. ಅವನು ಸಹ ಅನುಯಾಯಿಗಳ ಒಂದು ಗುಂಪನ್ನೇ ಕಟ್ಟಿದ. ಅವನು ಸಹ ಕೊಲ್ಲಲ್ಪಟ್ಟನು. ಅವನ ಅನುಯಾಯಿಗಳೆಲ್ಲಾ ಚದರಿ ಓಡಿಹೋದರು.


ಚಕ್ರವರ್ತಿಯಾದ ತಿಬೇರಿಯಸ್ ಸೀಸರನ ಆಳ್ವಿಕೆಯ ಹದಿನೈದನೇ ವರ್ಷ ಅದಾಗಿತ್ತು. ಆಗ, ಪೊಂತ್ಯ ಪಿಲಾತನು ಜುದೇಯ ಪ್ರಾಂತ್ಯಕ್ಕೂ ಹೆರೋದನು ಗಲಿಲಾಯಕ್ಕೂ ಹೆರೋದನ ಸಹೋದರನಾದ ಫಿಲಿಪ್ಪನು ಇತುರೆಯ ಮತ್ತು ತ್ರಕೋನಿತಿ ಪ್ರಾಂತ್ಯಗಳಿಗೂ ಲೂಸನ್ಯನು ಅಬಿಲೇನೆ ಪ್ರಾಂತ್ಯಕ್ಕೂ ಅಧಿಪತಿಯಾಗಿದ್ದರು.


ನೀವು ನಿಮಗೆ ಮರಣವನ್ನು ಬರಮಾಡುವ ತಪ್ಪನ್ನು ಮಾಡುತ್ತಿದ್ದೀರಿ. ನೀವು ನನ್ನನ್ನು ನಿಮ್ಮ ದೇವರಾದ ಯೆಹೋವನಲ್ಲಿಗೆ ಕಳುಹಿಸಿದಿರಿ. ‘ನಮಗಾಗಿ ಯೆಹೋವನಾದ ನಮ್ಮ ದೇವರನ್ನು ಪ್ರಾರ್ಥಿಸು. ದೇವರು ಮಾಡಬೇಕೆಂದು ಹೇಳಿದ್ದೆಲ್ಲವನ್ನು ನಮಗೆ ಹೇಳು, ನಾವು ಯೆಹೋವನ ಆಜ್ಞೆಯನ್ನು ಪಾಲಿಸುತ್ತೇವೆ’ ಎಂದು ನೀವು ಹೇಳಿದ್ದಿರಿ.


ಫಸಲು ಇಲ್ಲಿ ಉತ್ತಮವಾಗಿದೆ. ನಾವು ಪಾಪಮಾಡಿದ್ದರಿಂದ ನಮ್ಮ ಸುಗ್ಗಿಯು ನಮ್ಮನ್ನಾಳುವ ರಾಜರಿಗೆ ಹೋಗಿಬಿಡುತ್ತದೆ. ಆ ರಾಜರುಗಳು ನಮ್ಮನ್ನೂ ನಮ್ಮ ದನಕರುಗಳನ್ನೂ ತಮ್ಮ ಹತೋಟಿಯೊಳಗೆ ಇಟ್ಟಿರುತ್ತಾರೆ. ನಮ್ಮನ್ನು ತಮಗೆ ಇಷ್ಟಬಂದಂತೆ ನಡಿಸುತ್ತಾರೆ. ಆದ್ದರಿಂದ ನಾವು ಬಹಳ ಸಂಕಟದಲ್ಲಿ ಸಿಕ್ಕಿಕೊಂಡಿದ್ದೇವೆ.”


ಇನ್ನೂ ಕೆಲವರು, “ನಮ್ಮ ಹೊಲಗದ್ದೆಗಳ ಮೇಲೆ ಅರಸನಿಗೆ ತೆರಿಗೆ ಕೊಡಬೇಕಾಗಿದೆ. ಆದರೆ ಕೊಡಲು ನಮ್ಮಲ್ಲಿ ಏನೂ ಇಲ್ಲ. ಬೇರೆಯವರಿಂದ ಎರವಲು ಪಡೆದುಕೊಂಡು ಕೊಡಬೇಕಾಗಿದೆ” ಅಂದರು.


ನಾನು ನಿಮಗೆ ತಿಳಿಯಪಡಿಸುವುದೇನೆಂದರೆ: ಯಾಜಕರಿಂದ, ಲೇವಿಯರಿಂದ, ಗಾಯಕರಿಂದ, ದ್ವಾರಪಾಲಕರಿಂದ ಮತ್ತು ದೇವಾಲಯದ ಸೇವಕರಿಂದ ತೆರಿಗೆವಸೂಲಿ ಮಾಡುವುದು ನ್ಯಾಯಬಾಹಿರವಾದದ್ದು. ಅವರು ಯಾವ ರೀತಿಯ ತೆರಿಗೆಯನ್ನಾಗಲಿ ಸುಂಕವನ್ನಾಗಲಿ ಕಪ್ಪಕಾಣಿಕೆಯನ್ನಾಗಲಿ ಅರಸನಿಗೆ ಸಲ್ಲಿಸಬೇಕಿಲ್ಲ.


ಅದೇ ಸಮಯದಲ್ಲಿ ರಾಜರೇ, ನೀವು ತಿಳಿಯಬೇಕಾದ ವಿಷಯವೇನೆಂದರೆ, ಜೆರುಸಲೇಮ್ ಮತ್ತು ಅದರ ಪೌಳಿಗೋಡೆಗಳು ಕಟ್ಟಲ್ಪಟ್ಟಲ್ಲಿ ಅಲ್ಲಿಯ ಪ್ರಜೆಗಳು ತೆರಿಗೆ ಕೊಡುವುದನ್ನು ನಿಲ್ಲಿಸುವರು. ನಿನಗೆ ಕಪ್ಪಕಾಣಿಕೆ ಸಲ್ಲಿಸುವುದನ್ನೂ ಇತರ ತೆರಿಗೆಗಳನ್ನು ಕೊಡುವುದನ್ನೂ ನಿಲ್ಲಿಸುವರು. ಇದರಿಂದಾಗಿ ರಾಜರಿಗೆ ದೊಡ್ಡ ನಷ್ಟವಾಗಲಿದೆ.


ಈ ಜನರ ಕುತಂತ್ರವು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು, “ನೀವು ಕಪಟಿಗಳು! ನನ್ನನ್ನು ತಪ್ಪಿನಲ್ಲಿ ಸಿಕ್ಕಿಸಲು ಏಕೆ ಪ್ರಯತ್ನಿಸುತ್ತೀರಿ?


ಈಗ ಹೇಳು, ನಾವು ಸೀಸರನಿಗೆ ತೆರಿಗೆ ಕೊಡುವುದು ಸರಿಯೋ? ತಪ್ಪೋ?” ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು