Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 22:3 - ಪರಿಶುದ್ದ ಬೈಬಲ್‌

3 ಆ ರಾಜನು ಕೆಲವು ಜನರನ್ನು ಔತಣಕ್ಕೆ ಆಹ್ವಾನಿಸಿದನು. ಅಡಿಗೆ ಸಿದ್ಧವಾದ ಬಳಿಕ ರಾಜನು ತನ್ನ ಸೇವಕರ ಮೂಲಕ ಆ ಜನರಿಗೆ ತಿಳಿಸಿದನು. ಆದರೆ ಅವರು ಔತಣಕ್ಕೆ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನು ಮದುವೆಗೆ ಆಹ್ವಾನಿತರಾಗಿದ್ದವರನ್ನು ಕರೆಯುವುದಕ್ಕೆ ತನ್ನ ಆಳುಗಳನ್ನು ಕಳುಹಿಸಿದನು, ಆದರೆ ಬರುವುದಕ್ಕೆ ಅವರಿಗೆ ಮನಸ್ಸಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅದಕ್ಕೆ ಆಹ್ವಾನಿತರಾಗಿದ್ದವರನ್ನು ಕರೆಯಲು ಸೇವಕರನ್ನು ಕಳುಹಿಸಿದ. ಆದರೆ ಅವರು ಬರಲು ಒಪ್ಪಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವನು ಮದುವೆಗೆ ಹೇಳಿಸಿಕೊಂಡವರನ್ನು ಕರೆಯುವದಕ್ಕೆ ತನ್ನ ಆಳುಗಳನ್ನು ಕಳುಹಿಸಲು ಬರುವದಕ್ಕೆ ಅವರಿಗೆ ಮನಸ್ಸಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವನು ಮದುವೆಗೆ ಆಹ್ವಾನಿತರಾಗಿದ್ದವರನ್ನು ಕರೆಯುವುದಕ್ಕೆ ತನ್ನ ಸೇವಕರನ್ನು ಕಳುಹಿಸಿದನು. ಆದರೆ ಅವರು ಬರಲು ಒಪ್ಪಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಅನಿ ಮಾನಾ ಅಪ್ನಾಚ್ಯಾ ಸೈರ್‍ಯಾಕ್ನಿ ಲಗ್ನಾಚ್ಯಾ ಕಾರೆವಾಕ್ ಯೆವಾ ಮನುನ್ ಬಲ್ವುಕ್ ಅಪ್ನಾಚ್ಯಾ ಆಳಾಕ್ ಧಾಡುನ್ ದಿಲ್ಯಾನ್. ಖರೆ ತ್ಯಾ ಸೈರ್‍ಯಾಕ್ನಿ ತ್ಯಾ ಲಗ್ನಾಕ್ ಯೆವ್ಕ್ ಮನುಚ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 22:3
30 ತಿಳಿವುಗಳ ಹೋಲಿಕೆ  

ಆತ್ಮನೂ ಮದುಮಗಳೂ, “ಬಾ!” ಎನ್ನುತ್ತಾರೆ. ಇದನ್ನು ಕೇಳುವ ಪ್ರತಿಯೊಬ್ಬ ವ್ಯಕ್ತಿಯೂ, “ಬಾ!” ಎಂದು ಹೇಳಬೇಕು. ಬಾಯಾರಿದವನು ನನ್ನ ಬಳಿಗೆ ಬರಲಿ; ಅವನಿಗೆ ಇಷ್ಟವಿದ್ದರೆ ಜೀವಜಲವನ್ನು ಉಚಿತವಾಗಿ ಪಡೆದುಕೊಳ್ಳಲಿ.


ಆದರೆ ಇಸ್ರೇಲಿನ ಜನರ ಬಗ್ಗೆ ದೇವರು: “ನಾನು ಆ ಜನರಿಗಾಗಿ ದಿನವೆಲ್ಲಾ ಕಾದುಕೊಂಡಿದ್ದೆನು, ಆದರೆ ಅವರು ವಿಧೇಯರಾಗಲಿಲ್ಲ; ನನ್ನನ್ನು ಹಿಂಬಾಲಿಸಲಿಲ್ಲ” ಎನ್ನುತ್ತಾನೆ.


ಆದರೆ ನೀವು ಬಯಸುವ ಆ ಜೀವವನ್ನು ನನ್ನ ಬಳಿಗೆ ಬಂದು ಹೊಂದಿಕೊಳ್ಳಲು ನಿಮಗೆ ಇಷ್ಟವಿಲ್ಲ.


ಇದನ್ನು ಕಂಡ ಯೆಹೂದ್ಯರಿಗೆ ಬಹಳ ಅಸೂಯೆಯಾಯಿತು. ಅವರು ಪೌಲನ ಮಾತುಗಳನ್ನು ಕಟುವಾಗಿ ದೂಷಿಸಿ ಅವುಗಳಿಗೆ ವಿರೋಧವಾಗಿ ವಾದಿಸಿದರು.


ಈಗ ನನ್ನ ವೈರಿಗಳೆಲ್ಲಿ? ನಾನು ಅರಸನಾಗುವುದನ್ನು ವಿರೋಧಿಸಿದ ಜನರೆಲ್ಲಿ? ನನ್ನ ವೈರಿಗಳನ್ನು ಇಲ್ಲಿಗೆ ಕರೆದುಕೊಂಡು ಬಂದು ನನ್ನ ಕಣ್ಣೆದುರಿನಲ್ಲಿಯೇ ಕೊಲ್ಲಿರಿ!’ ಎಂದು ಹೇಳಿದನು.”


“ಆಗ ಹಿರಿಯ ಮಗನು ಕೋಪಗೊಂಡು ಔತಣಕೂಟಕ್ಕೆ ಹೋಗಲಿಲ್ಲ. ಆಗ ಅವನ ತಂದೆ ಹೊರಗೆ ಬಂದು ಅವನನ್ನು ಒಳಗೆ ಕರೆದನು.


“ಜೆರುಸಲೇಮೇ, ಜೆರುಸಲೇಮೇ! ನೀನು ಪ್ರವಾದಿಗಳನ್ನು ಕೊಲ್ಲುವವಳು. ದೇವರು ನಿನ್ನ ಬಳಿಗೆ ಕಳುಹಿಸಿದ ಜನರನ್ನು ನೀನು ಕಲ್ಲೆಸೆದು ಕೊಲ್ಲುವೆ. ಕೋಳಿ ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸಿಕೊಳ್ಳುವಂತೆ ನಾನು ನಿನ್ನ ಜನರಿಗೆ ಸಹಾಯ ಮಾಡಲು ಎಷ್ಟೋ ಸಲ ಅಪೇಕ್ಷಿಸಿದೆ. ಆದರೆ ನೀನು ನನಗೆ ಆಸ್ಪದವನ್ನು ಕೊಡಲಿಲ್ಲ.


“ಜೆರುಸಲೇಮೇ, ಜೆರುಸಲೇಮೇ! ಪ್ರವಾದಿಗಳನ್ನು ಕೊಲ್ಲುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿದ ಜನರನ್ನು ಕಲ್ಲುಗಳಿಂದ ಕೊಲ್ಲುವವಳೇ, ಅನೇಕ ಸಲ ನಿನ್ನ ಜನರಿಗೆ ನಾನು ಸಹಾಯ ಮಾಡಬೇಕೆಂದಿದ್ದೆನು. ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಸೇರಿಸಿಕೊಳ್ಳುವ ಹಾಗೆ ನಿನ್ನ ಜನರನ್ನು ಸೇರಿಸಿಕೊಳ್ಳಲು ನನಗೆ ಮನಸ್ಸಿತ್ತು. ಆದರೆ ನೀನು ಒಪ್ಪಲಿಲ್ಲ.


“ಪರಲೋಕರಾಜ್ಯವು ಸಮೀಪಿಸಿತು. ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ” ಎಂದು ಅವನು ಬೋಧಿಸಿದನು.


ದೇವರಾದ ಯೆಹೋವನ ಸನ್ನಿಧಿಯಲ್ಲಿ ಮೌನವಾಗಿರಿ. ಯಾಕೆಂದರೆ ಯೆಹೋವನು ಜನರಿಗೆ ನ್ಯಾಯತೀರಿಸುವ ದಿನವು ಹತ್ತಿರವಾಯಿತು. ಯೆಹೋವನು ತನ್ನ ಯಜ್ಞವನ್ನು ತಯಾರು ಮಾಡಿ ತನ್ನ ಆಮಂತ್ರಿತರನ್ನು ಸಿದ್ಧವಾಗಿರಲು ಹೇಳಿದ್ದಾನೆ.


“ನಾನು ಹಿಂದಿರುಗುವೆನೆಂದು ನನ್ನ ಜನರು ಎದುರು ನೋಡುತ್ತಿದ್ದಾರೆ. ಅವರು ಉನ್ನತದಲ್ಲಿರುವ ದೇವರಿಗೆ ಮೊರೆಯಿಡುತ್ತಿದ್ದಾರೆ. ಆದರೆ ದೇವರು ಅವರಿಗೆ ಸಹಾಯ ಮಾಡುವದಿಲ್ಲ.”


ಎಷ್ಟು ಹೆಚ್ಚಾಗಿ ನಾನು ಇಸ್ರೇಲರನ್ನು ಕರೆದೆನೋ ಅಷ್ಟೇ ಹೆಚ್ಚಾಗಿ ಅವರು ನನ್ನನ್ನು ತೊರೆದರು. ಇಸ್ರೇಲರು ಬಾಳನ ವಿಗ್ರಹಗಳಿಗೆ ಯಜ್ಞವನ್ನರ್ಪಿಸಿದರು. ವಿಗ್ರಹಗಳಿಗೆ ಧೂಪ ಹಾಕಿದರು.


ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಇಸ್ರೇಲಿಗೆ ಮತ್ತು ಯೆಹೂದಕ್ಕೆ ಕಳುಹಿಸಿಕೊಟ್ಟೆ. ನಾನು ಅವರನ್ನು ನಿಮ್ಮಲ್ಲಿಗೆ ಪುನಃಪುನಃ ಕಳುಹಿಸಿಕೊಟ್ಟೆ. ಆ ಪ್ರವಾದಿಗಳು, “ಇಸ್ರೇಲಿನ ಮತ್ತು ಯೆಹೂದದ ಪ್ರತಿಯೊಬ್ಬರೂ ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಬೇಕು. ನೀವು ಒಳ್ಳೆಯವರಾಗಿರಬೇಕು. ಬೇರೆ ದೇವರುಗಳನ್ನು ಅನುಸರಿಸಬಾರದು. ಅವುಗಳನ್ನು ಪೂಜಿಸಬಾರದು. ಅವುಗಳ ಸೇವೆಮಾಡಬಾರದು ಎಂದು ಹೇಳಿದರು. ನನ್ನ ಆಜ್ಞೆಯನ್ನು ಪಾಲಿಸಿದರೆ ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಪ್ರದೇಶದಲ್ಲಿ ನೀವು ವಾಸಿಸಬಹುದು” ಎಂದು ಹೇಳಿದ್ದೆ. ಆದರೆ ನೀವು ನನ್ನ ಸಂದೇಶದ ಕಡೆಗೆ ಗಮನ ಕೊಡಲಿಲ್ಲ.


ಯೆಹೋವನು ತನ್ನ ಸೇವಕರಾದ ಪ್ರವಾದಿಗಳನ್ನು ಮತ್ತೆಮತ್ತೆ ನಿಮ್ಮಲ್ಲಿಗೆ ಕಳುಹಿಸಿದ್ದಾನೆ. ಆದರೆ ನೀವು ಅವರ ಮಾತುಗಳನ್ನು ಕಿವಿಗೆ ಹಾಕಿಕೊಂಡಿಲ್ಲ. ನೀವು ಅವರ ಕಡೆಗೆ ಸ್ವಲ್ಪವೂ ಗಮನಕೊಟ್ಟಿಲ್ಲ.


ನನ್ನ ಒಡೆಯನೂ ದೇವರೂ ಇಸ್ರೇಲಿನ ಪರಿಶುದ್ಧನೂ ಹೇಳುವುದೇನೆಂದರೆ, “ನೀವು ನನ್ನ ಕಡೆಗೆ ತಿರುಗಿಕೊಳ್ಳುವುದಾದರೆ ನೀವು ರಕ್ಷಿಸಲ್ಪಡುವಿರಿ. ನೀವು ತಾಳ್ಮೆಯಿಂದ ನನ್ನ ಮೇಲೆ ಭರವಸೆಯಿಟ್ಟರೆ, ನೀವು ಬಲವನ್ನು ಹೊಂದುವಿರಿ.” ಆದರೆ ಹಾಗೆ ಮಾಡಲು ನಿಮಗೆ ಇಷ್ಟವಿಲ್ಲ.


ದೇವರು ಆಜ್ಞಾಪಿಸಲು ಅನೇಕರು ಈ ಸುವಾರ್ತೆಯನ್ನು ಸಾರಲು ಹೋದರು:


ನೀವು ಪಟ್ಟಣದೊಳಕ್ಕೆ ಹೋದರೆ ಅವನನ್ನು ಕಾಣಬಹುದು. ನೀವು ಬೇಗನೆ ನೋಡಬೇಕೆಂದಿದ್ದರೆ, ಅವನು ಊಟ ಮಾಡುವುದಕ್ಕಾಗಿ ಆರಾಧನೆಯ ಸ್ಥಳಕ್ಕೆ ಹೋಗುವುದಕ್ಕಿಂತ ಮೊದಲೇ ಅವನನ್ನು ಕಾಣಬೇಕು. ದರ್ಶಿಯು ಯಜ್ಞವನ್ನು ಆಶೀರ್ವದಿಸಬೇಕಾಗಿರುವುದರಿಂದ ಅವನು ಅಲ್ಲಿಗೆ ಹೋಗುವವರೆಗೆ ಜನರು ಊಟಮಾಡುವುದಿಲ್ಲ. ಆದ್ದರಿಂದ ನೀವು ಬೇಗನೆ ಹೋದರೆ ಅವನನ್ನು ಕಾಣಬಹುದು” ಎಂದು ಹೇಳಿದರು.


ದೇವರು ಮಾತನಾಡುವಾಗ ಆಲಿಸದೆ ಇರಬೇಡಿ. ಆತನು ಇಸ್ರೇಲರಿಗೆ ಈ ಲೋಕದಲ್ಲಿ ಎಚ್ಚರಿಕೆ ನೀಡಿದಾಗ, ಅವರು ಆತನ ಮಾತನ್ನು ಕೇಳಲಿಲ್ಲ. ಆದರೆ ಅವರು ತಪ್ಪಿಸಿಕೊಳ್ಳಲಾಗಲಿಲ್ಲ. ಈಗ ದೇವರು ಪರಲೋಕದಿಂದ ಮಾತಾಡುತ್ತಿದ್ದಾನೆ. ಆತನ ಮಾತನ್ನು ಆಲಿಸದ ಜನರು ಹೇಗೆ ತಪ್ಪಿಸಿಕೊಳ್ಳಲಾದೀತು?


ದ್ರಾಕ್ಷಿಹಣ್ಣನ್ನು ಕೀಳುವ ಸಮಯ ಬಂದಾಗ ತನ್ನ ಪಾಲನ್ನು ತೆಗೆದುಕೊಂಡು ಬರಲು ಸೇವಕರನ್ನು ರೈತರ ಬಳಿಗೆ ಕಳುಹಿಸಿದನು.


ಯೇಸು, “ಮದುವೆ ಸಮಯದಲ್ಲಿ ಮದುಮಗನ ಸಂಗಡವಿರುವ ಅವನ ಸ್ನೇಹಿತರು ದುಃಖಪಡುವುದಿಲ್ಲ. ಆದರೆ ಮದುಮಗನು ಅವರನ್ನು ಬಿಟ್ಟುಹೋಗುವ ಸಮಯ ಬರುತ್ತದೆ. ಆಗ ಅವರು ದುಃಖಪಡುತ್ತಾರೆ ಮತ್ತು ಉಪವಾಸ ಮಾಡುತ್ತಾರೆ.


ದೇವರಿಂದ ಕರೆಯಲ್ಪಟ್ಟ ಜನರು ದೇವರ ವಾಗ್ದಾನಗಳನ್ನು ಹೊಂದಿಕೊಳ್ಳಲೆಂದು ಕ್ರಿಸ್ತನು ಈ ಹೊಸ ಒಡಂಬಡಿಕೆಯನ್ನು ದೇವರಿಂದ ತಂದನು. ದೇವರ ಜನರು ಅವುಗಳನ್ನು ಶಾಶ್ವತವಾಗಿ ಹೊಂದಿಕೊಳ್ಳಲು ಸಾಧ್ಯ. ಏಕೆಂದರೆ ಮೊದಲನೆ ಒಡಂಬಡಿಕೆಯ ಕಾಲದಲ್ಲಿ ಮಾಡಿದ ಪಾಪಗಳಿಂದ ಜನರನ್ನು ಬಿಡುಗಡೆಗೊಳಿಸುವುದಕ್ಕಾಗಿ ಕ್ರಿಸ್ತನು ಮರಣ ಹೊಂದಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು