Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 22:7 - ಪರಿಶುದ್ದ ಬೈಬಲ್‌

7 ಆಗ ರಾಜನು ಬಹು ಕೋಪಗೊಂಡು ತನ್ನ ಸೈನ್ಯವನ್ನು ಕಳುಹಿಸಿ ಆ ಕೊಲೆಗಾರರನ್ನು ಕೊಲ್ಲಿಸಿದನು ಮತ್ತು ಅವರ ಪಟ್ಟಣವನ್ನು ಸುಟ್ಟುಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅರಸನು ಅದನ್ನು ಕೇಳಿ, ಸಿಟ್ಟುಗೊಂಡು, ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ರಾಜನಿಗೆ ಕಡುಗೋಪ ಬಂದಿತು. ತನ್ನ ಸೈನಿಕರನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿದ. ಅವರ ಊರನ್ನು ಸುಟ್ಟುಹಾಕಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅರಸನು ಸಿಟ್ಟುಗೊಂಡು ತನ್ನ ದಂಡುಗಳನ್ನು ಕಳುಹಿಸಿ ಆ ಕೊಲೆಗಾರರನ್ನು ನಾಶಮಾಡಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದರೆ ಅರಸನು ಅದನ್ನು ಕೇಳಿ ಬಹುಕೋಪಗೊಂಡು ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತನ್ನಾ ರಾಜಾಕ್ ಲೈ ರಾಗ್ ಯೆಲೊ; ತಸೆಮನುನ್ ರಾಜಾನ್ ಅಪ್ನಾಚ್ಯಾ ಸೈನಿಕಾಕ್ನಿ ಧಾಡುನ್ ತ್ಯಾ ಖುನಿಗಾರಾಕ್ನಿ ಜಿವಾನಿ ಮಾರುಕ್ ಲಾವುನ್ ತೆಂಚೆ ಶಾರುಚ್ ಜಾಳ್ವುನ್ ಟಾಕ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 22:7
18 ತಿಳಿವುಗಳ ಹೋಲಿಕೆ  

ಈಗ ನನ್ನ ವೈರಿಗಳೆಲ್ಲಿ? ನಾನು ಅರಸನಾಗುವುದನ್ನು ವಿರೋಧಿಸಿದ ಜನರೆಲ್ಲಿ? ನನ್ನ ವೈರಿಗಳನ್ನು ಇಲ್ಲಿಗೆ ಕರೆದುಕೊಂಡು ಬಂದು ನನ್ನ ಕಣ್ಣೆದುರಿನಲ್ಲಿಯೇ ಕೊಲ್ಲಿರಿ!’ ಎಂದು ಹೇಳಿದನು.”


ಇವರಲ್ಲಿ ಕೆಲವರು ಸೈನಿಕರಿಂದ ಕೊಲ್ಲಲ್ಪಡುವರು. ಇನ್ನು ಕೆಲವರು ಬಂಧಿತರಾಗಿ ಪರದೇಶಕ್ಕೆ ಒಯ್ಯಲ್ಪಡುವರು. ಅನ್ಯದೇಶೀಯರು ತಮ್ಮ ಕಾಲ ಮುಗಿಯುವ ತನಕ ಪರಿಶುದ್ಧ ಪಟ್ಟಣವಾದ ಜೆರುಸಲೇಮಿನಲ್ಲಿ ನಡೆದಾಡುವರು.


ಹೌದು, ಯೆಹೂದ್ಯರಲ್ಲದವರಿಗೆ ರಕ್ಷಣೆ ನೀಡುವ ಸುವಾರ್ತೆಯನ್ನು ನಾವು ಉಪದೇಶಿಸದಂತೆ ನಮ್ಮನ್ನು ತಡೆಯಲು ಅವರು ಪ್ರಯತ್ನಿಸುತ್ತಿದ್ದಾರೆ. ಹೀಗೆ ಅವರು ತಮ್ಮ ಪಾಪಗಳಿಗೆ ಮತ್ತಷ್ಟು ಪಾಪಗಳನ್ನು ಕೂಡಿಸುತ್ತಿದ್ದಾರೆ. ಕೊನೆಗೆ, ದೇವರ ಕೋಪವು ಅವರ ಮೇಲೆ ಬರುತ್ತದೆ.


ಆ ಕಾಲದಲ್ಲಿ ಜುದೇಯದಲ್ಲಿರುವ ಜನರು ಬೆಟ್ಟಗಳಿಗೆ ಓಡಿಹೋಗಲಿ. ಜೆರುಸಲೇಮಿನಲ್ಲಿರುವ ಜನರು ಬೇಗನೆ ಅಲ್ಲಿಂದ ಪಲಾಯನ ಮಾಡಲಿ. ನೀವು ಪಟ್ಟಣದ ಹತ್ತಿರವಿದ್ದರೂ ಅದರೊಳಗೆ ಹೋಗದಿರಿ!


ಮತ್ತು ಎಲ್ಲಾ ಜನಾಂಗಗಳನ್ನು ನಾನು ಒಟ್ಟುಗೂಡಿಸುವೆನು. ಆ ದೇಶಗಳನ್ನು ಯೆಹೋಷಾಫಾಟ್ ತಗ್ಗಿಗೆ ಕರೆತರುವೆನು. ಅಲ್ಲಿ ಅವರಿಗೆ ನ್ಯಾಯತೀರಿಸುವೆನು. ಆ ದೇಶಗಳವರು ನನ್ನ ಜನರಾದ ಇಸ್ರೇಲರನ್ನು ಚದರಿಸಿದ್ದರು. ಅವರನ್ನು ಪರದೇಶಗಳಲ್ಲಿ ವಾಸಿಸುವಂತೆ ಮಾಡಿದರು. ಆದ್ದರಿಂದ ಆ ದೇಶಗಳವರನ್ನು ನಾನು ಶಿಕ್ಷಿಸುವೆನು. ಆ ದೇಶದವರು ನನ್ನ ದೇಶವನ್ನು ವಿಭಜಿಸಿದರು.


“ಯೆಹೋವನಾದ ನಾನು ನಿಮಗೆ ವಿರುದ್ಧವಾಗಿ ನನ್ನ ಸೈನ್ಯವನ್ನು ಕಳುಹಿಸಿದೆನು. ಮಿಡತೆಗಳ ಗುಂಪು, ದೊಡ್ಡ ಮಿಡತೆ, ನಾಶಮಾಡುವ ಮಿಡತೆ, ಹಾರುವ ಮಿಡತೆ, ಚೂರಿ ಮಿಡತೆಗಳು ಬಂದು ನಿಮಗಿದ್ದದ್ದನ್ನೆಲ್ಲಾ ತಿಂದುಬಿಟ್ಟವು. ಆದರೆ ಯೆಹೋವನಾದ ನಾನು ನಿಮ್ಮ ಸಂಕಟಕಾಲಕ್ಕೆ ಬದಲಾಗಿ ಸುಭಿಕ್ಷ ಕಾಲವನ್ನು ದಯಪಾಲಿಸುವೆನು.


ಯೆಹೋವನು ತನ್ನ ಸೈನ್ಯವನ್ನು ಮಹಾಧ್ವನಿಯಿಂದ ಕರೆಯುತ್ತಾನೆ. ಆತನ ಶಿಬಿರವು ದೊಡ್ಡದಾಗಿದೆ. ಆ ಸೈನ್ಯವು ಆತನ ಆಜ್ಞೆಯನ್ನು ಪಾಲಿಸುತ್ತದೆ; ಆ ಸೈನ್ಯವು ಮಹಾ ಬಲಿಷ್ಠವಾಗಿದೆ. ಯೆಹೋವನ ಮಹಾದಿನವು ಮಹಾ ಭಯಂಕರವಾದ ದಿನವಾಗಿದೆ. ಅದನ್ನು ಸಹಿಸಲು ಯಾರಿಗೂ ಸಾಧ್ಯವಿಲ್ಲ.


ಅರವತ್ತೆರಡು ವಾರಗಳ ತರುವಾಯ ಅಭಿಷಿಕ್ತನ ಕೊಲೆಯಾಗುವುದು. ಅವನು ಇಲ್ಲವಾಗುವನು. ಭವಿಷ್ಯತ್ತಿನ ನಾಯಕನ ಜನರು ನಗರವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು. ಆ ಅಂತ್ಯವು ಒಂದು ಪ್ರವಾಹದಂತೆ ಬರುವುದು. ಕೊನೆಯವರೆಗೂ ಯುದ್ಧ ನಡೆಯುವುದು. ಆ ಸ್ಥಳವನ್ನು ಸಂಪೂರ್ಣವಾಗಿ ನಾಶಮಾಡಬೇಕೆಂದು ದೇವರು ಆಜ್ಞಾಪಿಸಿದ್ದಾನೆ.


ಇನ್ನು ಕೆಲವರು ಆ ಸೇವಕರನ್ನು ಹಿಡಿದು, ಹೊಡೆದು ಕೊಂದುಹಾಕಿದರು.


“ಬಳಿಕ ರಾಜನು ತನ್ನ ಸೇವಕರಿಗೆ, ‘ಮದುವೆ ಊಟ ಸಿದ್ಧವಾಗಿದೆ. ನಾನು ಆಹ್ವಾನಿಸಿದ್ದ ಜನರು ಊಟಕ್ಕೆ ಬರುವಷ್ಟು ಒಳ್ಳೆಯವರಾಗಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು