Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 22:8 - ಪರಿಶುದ್ದ ಬೈಬಲ್‌

8 “ಬಳಿಕ ರಾಜನು ತನ್ನ ಸೇವಕರಿಗೆ, ‘ಮದುವೆ ಊಟ ಸಿದ್ಧವಾಗಿದೆ. ನಾನು ಆಹ್ವಾನಿಸಿದ್ದ ಜನರು ಊಟಕ್ಕೆ ಬರುವಷ್ಟು ಒಳ್ಳೆಯವರಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ತನ್ನ ಆಳುಗಳಿಗೆ, ‘ಮದುವೆಯ ಔತಣವು ಸಿದ್ಧವಾಗಿದೆ ಸರಿ, ಆದರೆ ಆಹ್ವಾನಿತರು ಯೋಗ್ಯರಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅನಂತರ ತನ್ನ ಸೇವಕರಿಗೆ, ‘ವಿವಾಹ ಮಹೋತ್ಸವವೇನೋ ಸಿದ್ಧವಾಗಿದೆ; ಆಹ್ವಾನಿತರೋ ಅಯೋಗ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಗ ತನ್ನ ಆಳುಗಳಿಗೆ - ಮದುವೆಗೆ ಸಿದ್ಧವಾಗಿದೆ ಸರಿ, ಆದರೆ ಕರೆಯಲ್ಪಟ್ಟವರು ಯೋಗ್ಯರಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ತರುವಾಯ ಅವನು ತನ್ನ ಸೇವಕರಿಗೆ, ‘ಮದುವೆಯ ಔತಣ ಸಿದ್ಧವಾಗಿದೆ, ಆದರೆ ಆಹ್ವಾನಿತರು ಸಿದ್ಧರಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಮಾನಾ ಅಪ್ನಾಚ್ಯಾ ಆಳಾಕ್ನಿ ಬಲ್ವುಲ್ಯಾನ್ ಅನಿ ತೆಂಕಾ, “ಮಾಜೆ ಲಗ್ನಾಚೆ ಜೆವಾನ್ ತಯಾರ್ ಹಾಯ್, ಖರೆ ಮಿಯಾ ಬಲ್ವಲ್ಲ್ಯಾ ಸೊಯ್ರ್ಯಾಕ್ನಿ ತೆ ನಕ್ಕೊ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 22:8
11 ತಿಳಿವುಗಳ ಹೋಲಿಕೆ  

“ನಿಮ್ಮ ಸಭೆಗೆ ಸೇರಿದ ಸಾರ್ದಿಸಿನ ಕೆಲವರು ಇನ್ನೂ ಪರಿಶುದ್ಧರಾಗಿದ್ದಾರೆ. ಅವರು ತಮ್ಮ ಬಟ್ಟೆಗಳನ್ನು ಕೊಳಕು ಮಾಡಿಕೊಂಡಿಲ್ಲ. ಅವರು ನನ್ನೊಂದಿಗೆ ನಡೆಯುವರು. ಅವರು ಯೋಗ್ಯರಾಗಿರುವುದರಿಂದ ಬಿಳಿವಸ್ತ್ರಗಳನ್ನು ಧರಿಸುತ್ತಾರೆ.


ದೇವರು ನ್ಯಾಯವಾದ ತೀರ್ಪನ್ನು ನೀಡುತ್ತಾನೆಂಬುದಕ್ಕೆ ಅದೇ ಪ್ರಮಾಣವಾಗಿದೆ. ದೇವರ ರಾಜ್ಯಕ್ಕೆ ನೀವು ಯೋಗ್ಯರಾಗಿರಬೇಕೆಂಬುದು ಆತನ ಅಪೇಕ್ಷೆ. ನೀವು ಹಿಂಸೆಪಡುತ್ತಿರುವುದು ಆ ರಾಜ್ಯಕ್ಕೋಸ್ಕರವೇ.


ಆದರೆ ಪೌಲ ಬಾರ್ನಬರು ಬಹು ಧೈರ್ಯದಿಂದ ಮಾತಾಡಿ, “ನಾವು ದೇವರ ಸಂದೇಶವನ್ನು ಯೆಹೂದ್ಯರಾದ ನಿಮಗೆ ಮೊದಲು ಹೇಳಬೇಕು. ಆದರೆ ನೀವು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ಎಣಿಸಿಕೊಂಡು ತಿರಸ್ಕರಿಸುತ್ತಿದ್ದೀರಿ. ಆದ್ದರಿಂದ ನಾವು ಅನ್ಯಧರ್ಮದವರ ಬಳಿಗೆ ಹೋಗುತ್ತೇವೆ!


“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡ ಜನರೇ ಧನ್ಯರು. ಅವರು ಜೀವವೃಕ್ಷದ ಹಣ್ಣನ್ನು ತಿನ್ನಲು ಹಕ್ಕುಳ್ಳವರಾಗಿದ್ದಾರೆ. ಅವರು ಬಾಗಿಲುಗಳ ಮೂಲಕ ನಗರದೊಳಕ್ಕೆ ಹೋಗಬಲ್ಲರು.


ಆದ್ದರಿಂದ ಎಲ್ಲಾ ಸಮಯದಲ್ಲಿಯೂ ಸಿದ್ಧರಾಗಿರಿ. ನಡೆಯಲಿರುವ ಈ ಎಲ್ಲಾ ಸಂಗತಿಗಳನ್ನು ಎದುರಿಸಿ ಸುರಕ್ಷಿತವಾಗಿ ಮುಂದುವರಿಯಲು ಮತ್ತು ಮನುಷ್ಯಕುಮಾರನ ಮುಂದೆ ನಿಲ್ಲಲು ಬೇಕಾದ ಶಕ್ತಿಗಾಗಿ ಪ್ರಾರ್ಥಿಸಿರಿ.”


ಪುನರುತ್ಥಾನಕ್ಕೆ ಯೋಗ್ಯರಾದ ಕೆಲವು ಜನರು ಜೀವಂತವಾಗಿ ಎದ್ದುಬಂದು ಮತ್ತೆ ಜೀವಿಸುತ್ತಾರೆ. ಆ ಹೊಸ ಜೀವನದಲ್ಲಿ ಅವರು ಮದುವೆ ಆಗುವುದಿಲ್ಲ.


ಯೇಸು, “ಮದುವೆ ಸಮಯದಲ್ಲಿ ಮದುಮಗನ ಸಂಗಡವಿರುವ ಅವನ ಸ್ನೇಹಿತರು ದುಃಖಪಡುವುದಿಲ್ಲ. ಆದರೆ ಮದುಮಗನು ಅವರನ್ನು ಬಿಟ್ಟುಹೋಗುವ ಸಮಯ ಬರುತ್ತದೆ. ಆಗ ಅವರು ದುಃಖಪಡುತ್ತಾರೆ ಮತ್ತು ಉಪವಾಸ ಮಾಡುತ್ತಾರೆ.


ಆಗ ರಾಜನು ಬಹು ಕೋಪಗೊಂಡು ತನ್ನ ಸೈನ್ಯವನ್ನು ಕಳುಹಿಸಿ ಆ ಕೊಲೆಗಾರರನ್ನು ಕೊಲ್ಲಿಸಿದನು ಮತ್ತು ಅವರ ಪಟ್ಟಣವನ್ನು ಸುಟ್ಟುಹಾಕಿಸಿದನು.


ಆದ್ದರಿಂದ ಬೀದಿಯ ಮೂಲೆಮೂಲೆಗಳಿಗೆ ಹೋಗಿ ನೀವು ಕಂಡ ಜನರನ್ನೆಲ್ಲ ಔತಣಕ್ಕೆ ಆಹ್ವಾನಿಸಿರಿ’ ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು