Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 23:12 - ಪರಿಶುದ್ದ ಬೈಬಲ್‌

12 ತಾನು ಬೇರೆಯವರಿಗಿಂತ ಉತ್ತಮನೆಂದು ತನ್ನನ್ನು ಭಾವಿಸಿಕೊಳ್ಳುವವನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಉನ್ನತಿಗೇರಿಸಲ್ಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ತನ್ನನ್ನು ಹೆಚ್ಚಿಸಿಕೊಳ್ಳುವವನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ತನ್ನನ್ನು ತಾನೇ ತಗ್ಗಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ತನ್ನನ್ನು ಹೆಚ್ಚಿಸಿಕೊಳ್ಳುವವನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ತಮ್ಮನ್ನು ತಾವೇ ಹೆಚ್ಚಿಸಿಕೊಳ್ಳುವವರು ತಗ್ಗಿನ ಅನುಭವ ಹೊಂದುವರು. ತಮ್ಮನ್ನು ತಾವೇ ತಗ್ಗಿಸಿಕೊಳ್ಳುವವರು ಉನ್ನತ ಅನುಭವ ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಜೊ ಕೊನ್ ಅಪ್ನಾಕುಚ್ ಖಾಲ್ತಿ ಕರ್‍ತಾ ತೆಕಾ ವರ್‍ತಿ ಕರುನ್ ಹೊತಾ. ಜೊ ಕೊನ್ ಅಪ್ನಾಕುಚ್ ವರ್‍ತಿ ಕರ್‍ತಾ ತೆಕಾ ಖಾಲ್ತಿ ಕರುನ್ ಹೊತಾ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 23:12
15 ತಿಳಿವುಗಳ ಹೋಲಿಕೆ  

ಯುವಕರೇ, ನಾನು ನಿಮಗೂ ಕೆಲವು ಮಾತುಗಳನ್ನು ಹೇಳಬೇಕಾಗಿದೆ. ನೀವು ಹಿರಿಯರಿಗೆ ಅಧೀನರಾಗಿರಬೇಕು. ನೀವೆಲ್ಲರೂ ಒಬ್ಬರಿಗೊಬ್ಬರು ನಮ್ರತೆಯಿಂದ ನಡೆದುಕೊಳ್ಳಬೇಕು. “ದೇವರು ಅಹಂಕಾರಿಗಳಿಗೆ ವಿರುದ್ಧನಾಗಿದ್ದಾನೆ. ಆದರೆ ಆತನು ನಮ್ರತೆಯಿಂದ ಇರುವ ಜನರಿಗೆ ಕೃಪೆಯನ್ನು ದಯಪಾಲಿಸುವನು.”


ಆದರೆ ದೇವರು ದಯಪಾಲಿಸಿದ ಕೃಪೆಯು ಅದಕ್ಕಿಂತಲೂ ಹೆಚ್ಚಿನದು. ಪವಿತ್ರ ಗ್ರಂಥವು ಹೇಳುವಂತೆ, “ದೇವರು ಅಹಂಕಾರಿಗಳಿಗೆ ವಿರುದ್ಧವಾಗಿರುತ್ತಾನೆ, ದೀನರಿಗಾದರೆ ಕೃಪೆಯನ್ನು ದಯಪಾಲಿಸುತ್ತಾನೆ.”


ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನೂ ತಗ್ಗಿಸಲ್ಪಡುವನು. ತನ್ನನ್ನು ತಗ್ಗಿಸಿಕೊಳ್ಳುವ ಪ್ರತಿಯೊಬ್ಬನೂ ಹೆಚ್ಚಿಸಲ್ಪಡುವನು.”


ದುರಾಭಿಮಾನಿಯನ್ನು ಅವನ ದುರಾಭಿಮಾನವೇ ನಾಶಪಡಿಸುವುದು. ಆದರೆ ದೀನನನ್ನು ಬೇರೆ ಜನರು ಗೌರವಿಸುವರು.


ಅವನು ಪ್ರಾರ್ಥಿಸಿದ ಬಳಿಕ ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ಮನೆಗೆ ಹೋದನು ಎಂದು ನಾನು ನಿಮಗೆ ಹೇಳುತ್ತೇನೆ. ಆದರೆ ಆ ಫರಿಸಾಯನು ನೀತಿವಂತನೆಂದು ನಿರ್ಣಯಿಸಲ್ಪಡಲಿಲ್ಲ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನೂ ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವ ಪ್ರತಿಯೊಬ್ಬನೂ ಹೆಚ್ಚಿಸಲ್ಪಡುವನು.”


ಈ ಚಿಕ್ಕ ಮಗುವಿನಂತೆ ತನ್ನನ್ನು ತಗ್ಗಿಸಿಕೊಳ್ಳುವವನೇ ಪರಲೋಕರಾಜ್ಯದಲ್ಲಿ ಅತ್ಯುತ್ತಮ ಸ್ಥಾನ ಪಡೆಯುತ್ತಾನೆ.


ಯೆಹೋವನಲ್ಲಿ ಭಯಭಕ್ತಿಯುಳ್ಳವನು ಜ್ಞಾನಿಯಾಗುತ್ತಿದ್ದಾನೆ. ಸನ್ಮಾನ ಹೊಂದಬೇಕೆನ್ನುವವನು ಮೊದಲು ದೀನನಾಗಿರಬೇಕು.


“ಆತ್ಮಿಕತೆಯಲ್ಲಿ ಬಡವರಾಗಿರುವವರು ಧನ್ಯರು. ಪರಲೋಕರಾಜ್ಯ ಅವರದು.


ಅರಸ ನೆಬೂಕದ್ನೆಚ್ಚರನಾದ ನಾನು ಈಗ ಪರಲೋಕದ ರಾಜನನ್ನು ಘನಪಡಿಸುತ್ತೇನೆ, ಮಹಿಮೆಪಡಿಸುತ್ತೇನೆ. ಆತನು ಮಾಡುವದೆಲ್ಲ ಸರಿ. ಆತನು ಯಾವಾಗಲೂ ನ್ಯಾಯವಂತನಾಗಿದ್ದಾನೆ. ಆತನು ಗರ್ವಿಷ್ಠರನ್ನು ದೀನರನ್ನಾಗಿ ಮಾಡಬಲ್ಲನು.


ದೇವರು ಅಹಂಕಾರಿಗಳನ್ನು ನಾಚಿಕೆಗೀಡುಮಾಡುವನು, ದೀನರಿಗಾದರೋ ಸಹಾಯಮಾಡುವನು.


ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.


ಯೆಹೋವನೇ ಮಹೋನ್ನತನು. ಆದರೂ ಆತನು ದೀನರಿಗೋಸ್ಕರ ಚಿಂತಿಸುವನು. ಗರ್ವಿಷ್ಠರ ಕಾರ್ಯಗಳು ಆತನಿಗೆ ಗೊತ್ತಿವೆ. ಆದರೆ ಆತನು ಅವರಿಗೆ ದೂರವಾಗಿಯೇ ಇರುತ್ತಾನೆ.


ಆದ್ದರಿಂದ ದೇವರ ಶಕ್ತಿಯುತವಾದ ಹಸ್ತದ ಕೆಳಗೆ ನಮ್ರತೆಯಿಂದಿರಿ. ಯೋಗ್ಯಕಾಲವು ಸಮೀಪಿಸಿದಾಗ ಆತನು ನಿಮ್ಮನ್ನು ಮೇಲೆತ್ತುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು