Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 23:16 - ಪರಿಶುದ್ದ ಬೈಬಲ್‌

16 “ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಜನರಿಗೆ ಮಾರ್ಗದರ್ಶನ ಮಾಡುತ್ತೀರಿ. ಆದರೆ ನೀವೇ ಕುರುಡರು. ಒಬ್ಬನು ದೇವಾಲಯದ ಹೆಸರಿನ ಮೇಲೆ ವಾಗ್ದಾನ ಮಾಡಿದರೆ ಅದಕ್ಕೇನೂ ಬೆಲೆಯಿಲ್ಲ ಎನ್ನುತ್ತೀರಿ. ಆದರೆ ಒಬ್ಬನು ದೇವಾಲಯದಲ್ಲಿರುವ ಚಿನ್ನದ ಮೇಲೆ ವಾಗ್ದಾನ ಮಾಡಿದರೆ, ಅವನು ಅದನ್ನು ಈಡೇರಿಸಬೇಕು ಎಂದು ಹೇಳುತ್ತೀರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 “ಅಯ್ಯೋ, ಕುರುಡು ಮಾರ್ಗದರ್ಶಿಗಳೇ, ‘ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ ಅನ್ನುತ್ತೀರಿ. ಆದರೆ ಒಬ್ಬನು ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು’ ಎಂದು ಹೇಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ಕುರುಡ ಮಾರ್ಗದರ್ಶಕರೇ, ನಿಮಗೆ ಧಿಕ್ಕಾರ! ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟರೆ ಅವನು ಅದಕ್ಕೇನೂ ಬದ್ಧನಲ್ಲ. ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೋ, ಅವನು ಅದನ್ನು ನಡೆಸಿಯೇ ತೀರಬೇಕು ಎನ್ನುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅಯ್ಯೋ, ದಾರಿತೋರಿಸುವ ಕುರುಡರೇ, ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ. ಆದರೆ ಒಬ್ಬನು ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು ಎಂದು ನೀವು ಹೇಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ಕುರುಡರಾದ ಮಾರ್ಗದರ್ಶಕರೇ! ನಿಮಗೆ ಕಷ್ಟ, ‘ಯಾವನಾದರೂ ದೇವಾಲಯದ ಮೇಲೆ ಆಣೆಯಿಟ್ಟರೆ ಅದು ಏನೂ ಅಲ್ಲ ಎನ್ನುತ್ತೀರಿ. ಆದರೆ ಯಾವನಾದರೂ ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೆ ಅವನು ಅದನ್ನು ಕೊಟ್ಟುಬಿಡಬೇಕು,’ ಎನ್ನುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 “ಲೊಕಾಕ್ನಿ ವಾಟ್ ದಾಕ್ವುತಲ್ಯಾ ಕುಡ್ಡ್ಯಾನು ತುಮ್ಚಿ ಗತ್ ಕಾಯ್ ಸಾಂಗು! ಕೊನ್ ತರ್ ದೆವಾಚ್ಯಾ ಗುಡಿ ವರ್‍ತಿ ಆನ್ ಘಾಲುನ್ ಮಾಗುನ್ ಘೆಟ್ಲ್ಯಾರ್ ತೆನಿ ತಿ ಮಾಗ್ನಿ ಪುರಾ ಕರುಚಿ ಮನುನ್ ನಾ, ಖರೆ ದೆವಾಚ್ಯಾ ಗುಡಿತ್ಲ್ಯಾ ಸೊನ್ಯಾಚ್ಯಾ ವರ್‍ತಿ ಆನ್ ಘಾಲುನ್ ಮಾಗುನ್ ಘೆಟಲ್ಲೆ ರ್‍ಹಾಲ್ಯಾರ್ ತೆನಿ ತಿ ಮಾಗ್ನಿ ಪುರಾ ಕರುಚಿಚ್ ಮನುನ್ ತುಮಿ ಶಿಕ್ವುತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 23:16
14 ತಿಳಿವುಗಳ ಹೋಲಿಕೆ  

ಫರಿಸಾಯರಿಂದ ದೂರವಾಗಿರಿ. ಅವರೇ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸಲು ಹೋಗುತ್ತಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಅವರಿಬ್ಬರೂ ಹಳ್ಳದಲ್ಲಿ ಬೀಳುವರು” ಎಂದು ಉತ್ತರಕೊಟ್ಟನು.


ನೀವು ಜನರಿಗೆ ಮಾರ್ಗದರ್ಶನ ಮಾಡುತ್ತೀರಿ. ಆದರೆ ನೀವೇ ಕುರುಡರು! ಒಬ್ಬನು ತಾನು ಕುಡಿಯುವ ಪಾನೀಯದೊಳಗಿಂದ ಸಣ್ಣ ಸೊಳ್ಳೆಯನ್ನು ತೆಗೆದುಹಾಕಿ ಆಮೇಲೆ ಒಂಟೆಯನ್ನು ನುಂಗುವವನಂತೆ ನೀವಿದ್ದೀರಿ.


ನೀವು ಕುರುಡರಾದ ಮೂರ್ಖರು! ಯಾವುದು ಹೆಚ್ಚಿನದು? ಚಿನ್ನವೋ ಅಥವಾ ದೇವಾಲಯವೋ? ಆ ಚಿನ್ನವು ಪರಿಶುದ್ಧಗೊಂಡದ್ದು ದೇವಾಲಯದಿಂದಲೇ. ಆದ್ದರಿಂದ ದೇವಾಲಯವೇ ಹೆಚ್ಚಿನದು.


ನನ್ನ ಸಹೋದರ ಸಹೋದರಿಯರೇ, ನೀವು ವಾಗ್ದಾನ ಮಾಡುವಾಗ ಆಣೆ ಇಡಬೇಡಿರಿ. ಇದು ಬಹಳ ಮುಖ್ಯವಾದದ್ದು. ನಿಮ್ಮ ಹೇಳಿಕೆಯನ್ನು ನಿರೂಪಿಸಲು ಪರಲೋಕದ, ಭೂಲೋಕದ ಮತ್ತು ಬೇರಾವುದರ ಹೆಸರನ್ನೂ ಬಳಸಬೇಡಿ. ಹೌದಾಗಿದ್ದರೆ, “ಹೌದು” ಎನ್ನಿರಿ. ಇಲ್ಲವಾಗಿದ್ದರೆ, “ಇಲ್ಲ” ಎನ್ನಿರಿ. ನೀವು ಹೀಗೆ ಮಾಡಿದರೆ, ನಿಮಗೆ ದೋಷಿಗಳೆಂಬ ತೀರ್ಪಾಗುವುದಿಲ್ಲ.


ಫರಿಸಾಯರೇ, ನೀವು ಕುರುಡರು! ಮೊದಲು ಬಟ್ಟಲಿನ ಒಳಭಾಗವನ್ನು ಚೆನ್ನಾಗಿ ಶುಚಿಮಾಡಿರಿ. ಆಗ ಬಟ್ಟಲಿನ ಹೊರಭಾಗವು ನಿಜವಾಗಿಯೂ ಶುಚಿಯಾಗಿರುವುದು.


ನೀವು ಕುರುಡರು. ನಿಮಗೇನೂ ಅರ್ಥವಾಗುವುದಿಲ್ಲ. ಯಾವುದು ಹೆಚ್ಚಿನದು? ಕಾಣಿಕೆಯೋ ಅಥವಾ ಯಜ್ಞವೇದಿಕೆಯೋ? ಕಾಣಿಕೆ ಪರಿಶುದ್ಧಗೊಂಡದ್ದು ಯಜ್ಞವೇದಿಕೆಯಿಂದಲೇ. ಆದ್ದರಿಂದ ಯಜ್ಞವೇದಿಕೆಯೇ ಹೆಚ್ಚಿನದು.


ಮತ್ತೆ ನಾನು ಪ್ರತಿಯೊಬ್ಬನನ್ನೂ ಎಚ್ಚರಿಸುತ್ತೇನೆ. ನೀವು ಸುನ್ನತಿ ಮಾಡಿಸಿಕೊಂಡರೆ, ಧರ್ಮಶಾಸ್ತ್ರವನ್ನೆಲ್ಲಾ ಅನುಸರಿಸಬೇಕು.


ಜನರಿಗೆ ಮಾರ್ಗದರ್ಶನ ಮಾಡುವ ನಾಯಕರು ಜನರನ್ನು ತಪ್ಪುದಾರಿಯಲ್ಲಿ ನಡಿಸುತ್ತಿದ್ದಾರೆ. ಅವರನ್ನು ಹಿಂಬಾಲಿಸುವ ಜನರು ನಾಶವಾಗುವರು.


“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ಜನರು ಪರಲೋಕರಾಜ್ಯಕ್ಕೆ ಪ್ರವೇಶಿಸುವ ದಾರಿಯನ್ನು ನೀವು ಮುಚ್ಚಿಬಿಡುತ್ತೀರಿ. ನೀವೂ ಪ್ರವೇಶಿಸುವುದಿಲ್ಲ ಮತ್ತು ಪ್ರವೇಶಿಸುವುದಕ್ಕೆ ಪ್ರಯತ್ನಿಸುವ ಜನರಿಗೂ ಬಿಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು