Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 23:31 - ಪರಿಶುದ್ದ ಬೈಬಲ್‌

31 ಆ ಪ್ರವಾದಿಗಳನ್ನು ಕೊಂದವರ ಮಕ್ಕಳು (ಸಂತತಿಯವರು) ನೀವೇ ಎಂಬುದಕ್ಕೆ ಇದೇ ಆಧಾರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಹಾಗಾದರೆ ನೀವು ಪ್ರವಾದಿಗಳನ್ನು ಕೊಂದವರ ಮಕ್ಕಳೇ ಹೌದು ಎಂಬುದಕ್ಕೆ ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಹೀಗೆ ಪ್ರವಾದಿಗಳನ್ನು ಕೊಲೆಮಾಡಿದವರ ಪೀಳಿಗೆಗೆ ನೀವು ಸೇರಿದವರು ಎಂದು ನೀವೇ ಸಾಕ್ಷಿಕೊಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಹಾಗಾದರೆ ನೀವು ಪ್ರವಾದಿಗಳನ್ನು ಕೊಂದವರ ಮಕ್ಕಳೇ ಹೌದು ಎಂಬದಕ್ಕೆ ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆದ್ದರಿಂದ ನೀವು ಆ ಪ್ರವಾದಿಗಳನ್ನು ಕೊಂದವರ ಮಕ್ಕಳೇ ಎಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಅಶೆ, ತನ್ನಾ ಪ್ರವಾದ್ಯಾಕ್ನಿ ಜಿವಾನಿ ಮಾರಲ್ಲ್ಯಾಂಚ್ಯಾಚ್ ಘರಾನ್ಯಾಚೆ ತುಮಿ ಮನುನ್ ದಾಕ್ವುನ್ ದಿತ್ಯಾಶಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 23:31
11 ತಿಳಿವುಗಳ ಹೋಲಿಕೆ  

“ಆಗ ಅರಸನು ಆ ಸೇವಕನಿಗೆ, ‘ನೀನು ಕೆಟ್ಟ ಆಳು! ನಿನ್ನ ಸ್ವಂತ ಮಾತುಗಳಿಂದಲೇ ನಿನಗೆ ತೀರ್ಪು ಮಾಡುತ್ತೇನೆ. ನನ್ನನ್ನು ಕಠಿಣ ಮನುಷ್ಯನೆಂದು ನೀನು ಹೇಳಿದೆ. ಸ್ವತಃ ನಾನೇ ಸಂಪಾದನೆ ಮಾಡದ ಹಣವನ್ನು ನಾನು ತೆಗೆದುಕೊಳ್ಳುವುದಾಗಿಯೂ ಸ್ವತಃ ನಾನೇ ಬೆಳೆಯದ ದವಸಧಾನ್ಯಗಳನ್ನು ನಾನು ಸಂಗ್ರಹಿಸುವುದಾಗಿಯೂ ನೀನು ಹೇಳಿದೆ.


ಅದಕ್ಕೆ ಯೆಹೋಶುವನು, “ನೀವು ನಿಮ್ಮನ್ನೂ ನಿಮ್ಮ ಸುತ್ತಲಿರುವ ಜನರನ್ನೂ ನೋಡಿರಿ. ನೀವು ಯೆಹೋವನ ಸೇವೆಯನ್ನೇ ಆರಿಸಿಕೊಂಡಿದ್ದೀರಿ ಎಂಬುದು ನಿಮ್ಮೆಲ್ಲರಿಗೆ ಗೊತ್ತು ಮತ್ತು ಅದಕ್ಕೆ ನೀವು ಒಪ್ಪಿದ್ದೀರಿ. ನೀವೆಲ್ಲರೂ ಇದಕ್ಕೆ ಸಾಕ್ಷಿಯಾಗಿರುವಿರಾ?” ಎಂದು ಕೇಳಿದನು. ಜನರು, “ಹೌದು, ಇದು ನಿಜ! ನಾವೆಲ್ಲರು ಯೆಹೋವನ ಸೇವೆಯನ್ನೇ ಆರಿಸಿಕೊಂಡಿದ್ದೇವೆ” ಎಂದು ಉತ್ತರಿಸಿದರು.


ದುಷ್ಟರು ಬೇರೆಯವರಿಗೆ ಕೇಡುಮಾಡಲು ಆಲೋಚಿಸುವರು. ಆದರೆ ಆ ಕೇಡುಗಳು ಅವರಿಗೇ ಸಂಭವಿಸುವಂತೆ ದೇವರು ಮಾಡುವನು. ಆಗ ಅವರನ್ನು ಕಂಡ ಪ್ರತಿಯೊಬ್ಬನೂ ಆಶ್ಚರ್ಯದಿಂದ ತಲೆಯಾಡಿಸುವನು.


ಜೆರುಸಲೇಮಿನ ಪ್ರವಾದಿಗಳು ಪಾಪ ಮಾಡಿದ್ದರಿಂದಲೇ ಇದು ಸಂಭವಿಸಿತು. ಜೆರುಸಲೇಮಿನ ಯಾಜಕರು ದುಷ್ಕೃತ್ಯಗಳನ್ನು ಮಾಡಿದ್ದದರಿಂದಲೇ ಇದು ಸಂಭವಿಸಿತು. ಆ ಜನರು ಜೆರುಸಲೇಮ್ ಪಟ್ಟಣದಲ್ಲಿ ಒಳ್ಳೆಯ ಜನರ ರಕ್ತವನ್ನು ಸುರಿಸಿದ್ದರು.


‘ನಮ್ಮ ಪಿತೃಗಳ ಕಾಲದಲ್ಲಿ ನಾವು ಇದ್ದಿದ್ದರೆ ಈ ಪ್ರವಾದಿಗಳನ್ನು ಕೊಲ್ಲುವುದಕ್ಕೆ ಅವರಿಗೆ ಸಹಾಯ ಮಾಡುತ್ತಿರಲಿಲ್ಲ’ ಎಂದು ಹೇಳುತ್ತೀರಿ.


ನಿಮ್ಮ ಪಿತೃಗಳು ಪ್ರಾರಂಭಿಸಿದ ಆ ಪಾಪವನ್ನು ನೀವು ಪೂರ್ತಿಮಾಡುವಿರಿ!


ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಉಪದೇಶಕರನ್ನೂ ಕಳುಹಿಸುತ್ತೇನೆ. ನೀವು ಅವರಲ್ಲಿ ಕೆಲವರನ್ನು ಕೊಲ್ಲುವಿರಿ; ಇನ್ನು ಕೆಲವರನ್ನು ಶಿಲುಬೆಗೇರಿಸುವಿರಿ; ಇತರ ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಹೊಡೆಯುವಿರಿ; ನೀವು ಅವರನ್ನು ಊರಿಂದ ಊರಿಗೆ ಅಟ್ಟಿಬಿಡುವಿರಿ.


“ಜೆರುಸಲೇಮೇ, ಜೆರುಸಲೇಮೇ! ಪ್ರವಾದಿಗಳನ್ನು ಕೊಲ್ಲುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿದ ಜನರನ್ನು ಕಲ್ಲುಗಳಿಂದ ಕೊಲ್ಲುವವಳೇ, ಅನೇಕ ಸಲ ನಿನ್ನ ಜನರಿಗೆ ನಾನು ಸಹಾಯ ಮಾಡಬೇಕೆಂದಿದ್ದೆನು. ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಸೇರಿಸಿಕೊಳ್ಳುವ ಹಾಗೆ ನಿನ್ನ ಜನರನ್ನು ಸೇರಿಸಿಕೊಳ್ಳಲು ನನಗೆ ಮನಸ್ಸಿತ್ತು. ಆದರೆ ನೀನು ಒಪ್ಪಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು