Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 23:4 - ಪರಿಶುದ್ದ ಬೈಬಲ್‌

4 ಅವರು ಬೇರೆಯವರಿಗೆ ಕಷ್ಟಕರವಾದ ನಿಯಮಗಳನ್ನು ಕೊಟ್ಟು ಅವುಗಳಿಗೆ ವಿಧೇಯರಾಗಬೇಕೆಂದು ಒತ್ತಾಯ ಮಾಡುತ್ತಾರೆ. ತಾವಾದರೋ ಆ ನಿಯಮಗಳಲ್ಲಿ ಯಾವದನ್ನಾದರೂ ಅನುಸರಿಸಲು ಪ್ರಯತ್ನಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರು ಭಾರವಾದ ಹೊರೆಗಳನ್ನು ಕಟ್ಟಿ ಜನರ ಹೆಗಲಿನ ಮೇಲೆ ಹೊರಿಸುತ್ತಾರೆ; ಆದರೆ ತಾವಾದರೋ ಬೆರಳಿನಿಂದಲಾದರೂ ಅವುಗಳನ್ನು ಮುಟ್ಟಲೊಲ್ಲರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಭಾರವಾದ ಹಾಗೂ ಹೊರಲಾಗದ ಹೊರೆಗಳನ್ನು ಕಟ್ಟಿ ಮಾನವರ ಹೆಗಲ ಮೇಲೆ ಹೇರುತ್ತಾರೆ. ತಾವಾದರೋ ಅವನ್ನು ಕಿರುಬೆರಳಿನಿಂದಲೂ ಮುಟ್ಟಲೊಲ್ಲರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವರು ಭಾರವಾದ ಹೊರೆಗಳನ್ನು ಕಟ್ಟಿ ಜನರ ಹೆಗಲಿನ ಮೇಲೆ ಹೊರಿಸುತ್ತಾರೆ; ತಾವಾದರೋ ಬೆರಳಿನಿಂದಲಾದರೂ ಅವುಗಳನ್ನು ಮುಟ್ಟಲೊಲ್ಲರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಹೊರುವುದಕ್ಕೆ ಭಾರವಾದ ಮತ್ತು ಹೊರಲಾಗದ ಹೊರೆಗಳನ್ನು ಕಟ್ಟಿ ಜನರ ಹೆಗಲುಗಳ ಮೇಲೆ ಅವರು ಹೊರಿಸುತ್ತಾರೆ. ತಾವಾದರೋ ತಮ್ಮ ಬೆರಳಿನಿಂದಲೂ ಅವುಗಳನ್ನು ಮುಟ್ಟುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಲೊಕಾಕ್ನಿ ಡುಬ್ರಿರ್ ವಾವುನ್ ಘೆವ್ಕ್ ತರಾಸ್ ಹೊತಾ ತಸ್ಲಿ ವಜ್ಜಿ ತೆನಿ ಭಾಂದ್ತ್ಯಾತ್, ಖರೆ ತೆ ವಜ್ಜೆ ವಾವುಕ್ ಮಜತ್ ಕರುಕ್ ಮನುನ್ ಎಕ್ ಬೊಟ್ ಸೈತ್ ಲಾವುಕ್ ತೆನಿ ಮನ್ ಕರಿನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 23:4
10 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, “ಧರ್ಮೋಪದೇಶಕರೇ, ನಿಮ್ಮ ಗತಿಯನ್ನು ಏನು ಹೇಳಲಿ! ಜನರು ಅನುಸರಿಸಲಾಗದ ನಿಯಮಗಳನ್ನು ನೀವು ಮಾಡುತ್ತೀರಿ. ಆ ನಿಯಮಗಳಿಗೆ ವಿಧೇಯರಾಗುವಂತೆ ಬೇರೆಯವರಿಗೆ ಬಲವಂತ ಮಾಡುತ್ತೀರಿ. ಆದರೆ ಆ ನಿಯಮಗಳಲ್ಲಿ ಒಂದನ್ನಾದರೂ ಪಾಲಿಸಲು ನೀವು ಪ್ರಯತ್ನಿಸುವುದಿಲ್ಲ.


ಹೀಗಿರಲಾಗಿ, ಯೆಹೂದ್ಯರಲ್ಲದ ಸಹೋದರರ ಹೆಗಲ ಮೇಲೆ ಭಾರವಾದ ಹೊರೆಯನ್ನು ಯಾಕೆ ಹೊರಿಸುತ್ತೀರಿ? ನೀವು ದೇವರನ್ನು ಸಿಟ್ಟಿಗೆಬ್ಬಿಸಲು ಪ್ರಯತ್ನಿಸುತ್ತಿದ್ದೀರಾ? ನಮಗಾಗಲಿ ನಮ್ಮ ಪಿತೃಗಳಿಗಾಗಲಿ ಈ ಹೊರೆಯನ್ನು ಹೊರವಷ್ಟು ಶಕ್ತಿ ಇರಲಿಲ್ಲ!


ಸುನ್ನತಿ ಮಾಡಿಸಿಕೊಂಡಿರುವ ಅವರೇ ಧರ್ಮಶಾಸ್ತ್ರಕ್ಕೆ ವಿಧೇಯರಾಗುತ್ತಿಲ್ಲ. ಆದರೆ ನಿಮಗೂ ಸುನ್ನತಿ ಮಾಡಿಸಿ ಅದರ ಬಗ್ಗೆ ಹೆಚ್ಚಳಪಡಬೇಕೆಂಬುದೇ ಅವರ ಆಸೆ.


“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನಿಮ್ಮಲ್ಲಿರುವ ಪ್ರತಿಯೊಂದರಲ್ಲೂ ನಿಮ್ಮ ಪುದೀನ, ಸಬ್ಬಸ್ಸಿಗೆ ಸೊಪ್ಪು, ಜೀರಿಗೆ ಗಿಡಗಳಲ್ಲಿಯೂ ಸಹ ಹತ್ತರಲ್ಲೊಂದು ಪಾಲನ್ನು ದೇವರಿಗೆ ಕೊಡುತ್ತೀರಿ. ಆದರೆ ಧರ್ಮಶಾಸ್ತ್ರದ ಬೋಧನೆಗಳಲ್ಲಿ ನಿಜವಾಗಿಯೂ ಪ್ರಾಮುಖ್ಯವಾದ ಆಜ್ಞೆಗಳನ್ನು ಅಂದರೆ ನ್ಯಾಯವನ್ನೂ ಕರುಣೆಯನ್ನೂ ಯಥಾರ್ಥತೆಯನ್ನೂ ನೀವು ತೊರೆದುಬಿಟ್ಟಿದ್ದೀರಿ. ಈ ಆಜ್ಞೆಗಳಿಗೆ ನೀವು ಮೊದಲು ವಿಧೇಯರಾಗಿ, ಈಗ ಮಾಡುತ್ತಿರುವಂಥ ಕಾರ್ಯಗಳನ್ನು ಮಾಡಬೇಕಿತ್ತು.


“ಆದರೆ ಥುವತೈರದಲ್ಲಿರುವ ಇನ್ನಿತರರಿಗೆ ನಾನು ಹೇಳುವುದೇನೆಂದರೆ, ನೀವು ಆಕೆಯ ಬೋಧನೆಗಳನ್ನು ಅನುಸರಿಸಲಿಲ್ಲ, ‘ಸೈತಾನನ ಅಗಾಧವಾದ ರಹಸ್ಯಗಳು’ ಎಂದು ಅವರು ಹೇಳುವ ಸಂಗತಿಗಳನ್ನು ನೀವು ಕಲಿತುಕೊಂಡಿಲ್ಲ. ಆದ್ದರಿಂದ ನಾನು ಬೇರೊಂದು ಹೊರೆಯನ್ನು ನಿಮ್ಮ ಮೇಲೆ ಹೊರಿಸುವುದಿಲ್ಲ.


ನಿಮಗೆ ಇನ್ನೂ ಹೆಚ್ಚಿನ ಭಾರಗಳು ಇರಕೂಡದೆಂಬುದು ಪವಿತ್ರಾತ್ಮನ ನಿರ್ಧಾರ. ಅದಕ್ಕೆ ನಾವು ಒಪ್ಪಿಕೊಂಡಿದ್ದೇವೆ. ನೀವು ಈ ನಿಯಮಗಳನ್ನು ಮಾತ್ರ ಅನುಸರಿಸಬೇಕಾಗಿದೆ:


ಬೇಲ್ ಮತ್ತು ನೆಬೋ ನನ್ನ ಮುಂದೆ ಅಡ್ಡಬೀಳುವವು. ಒಡೆಯನು ಹೀಗೆನ್ನುತ್ತಾನೆ, “ಆ ಸುಳ್ಳುದೇವರುಗಳು ಕೇವಲ ವಿಗ್ರಹಗಳೇ. ಜನರು ಭಾರವಾದ ವಿಗ್ರಹಗಳನ್ನು ಪಶುಗಳ ಮೇಲೆ ಹೊರಿಸುವರು. ಅವು ಕೇವಲ ಹೊತ್ತುಕೊಂಡು ಹೋಗಬೇಕಾದ ಹೊರೆಗಳಾಗಿವೆ. ಆ ಸುಳ್ಳುದೇವರುಗಳು ಜನರನ್ನು ದಣಿಸುವುದೊಂದನ್ನು ಬಿಟ್ಟು ಬೇರೆ ಯಾವ ಕೆಲಸವನ್ನೂ ಮಾಡುವದಿಲ್ಲ.


ಆದ್ದರಿಂದ ನೀವು ಅವರಿಗೆ ವಿಧೇಯರಾಗಿರಬೇಕು ಮತ್ತು ಅವರು ಹೇಳಿದ್ದನ್ನೆಲ್ಲ ಕೈಕೊಂಡು ನಡೆಯಬೇಕು. ಆದರೆ ಅವರ ಜೀವಿತಗಳು ಅನುಸರಿಸತಕ್ಕ ಒಳ್ಳೆಯ ಮಾದರಿ ಜೀವಿತಗಳಲ್ಲ. ಅವರು ನಿಮಗೆ ತಿಳಿಸುವಂಥ ಸಂಗತಿಗಳನ್ನು ತಾವೇ ಅನುಸರಿಸುವುದಿಲ್ಲ.


ದೇವರನ್ನು ಪ್ರೀತಿಸುವುದು ಎಂದರೆ ಆತನ ಆಜ್ಞೆಗಳಿಗೆ ವಿಧೇಯರಾಗಿರುವುದು. ದೇವರ ಆಜ್ಞೆಗಳು ನಮಗೆ ಕಠಿಣವಾದವುಗಳಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು