Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 23:8 - ಪರಿಶುದ್ದ ಬೈಬಲ್‌

8 “ಆದರೆ ನೀವು ಉಪದೇಶಕರೆನಿಸಿಕೊಳ್ಳಬೇಡಿ. ನೀವೆಲ್ಲರೂ ಸಹೋದರಸಹೋದರಿಯರು. ನಿಮಗೆ ಒಬ್ಬನೇ ಉಪದೇಶಕನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೆ ನೀವು ‘ಬೋಧಕರೆನ್ನಿಸಿಕೊಳ್ಳಬೇಡಿರಿ;’ ಏಕೆಂದರೆ ಕ್ರಿಸ್ತನೊಬ್ಬನೇ ನಿಮಗಿರುವ ಬೋಧಕನು ಮತ್ತು ನೀವೆಲ್ಲರೂ ಸಹೋದರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಹಾಗೆ ಕರೆಸಿಕೊಳ್ಳುವುದು ನಿಮಗೆ ಬೇಡ. ನಿಮಗಿರುವ ಗುರುವು ಒಬ್ಬರೇ ಮತ್ತು ನೀವೆಲ್ಲರೂ ಸಹೋದರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದರೆ ನೀವು ಬೋಧಕರನ್ನಿಸಿಕೊಳ್ಳಬೇಡಿರಿ; ಒಬ್ಬನೇ ನಿಮ್ಮ ಬೋಧಕನು, ನೀವೆಲ್ಲರು ಸಹೋದರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಆದರೆ ನೀವು, ‘ಬೋಧಕರು,’ ಎಂದು ಕರೆಯಿಸಿಕೊಳ್ಳಬೇಡಿರಿ. ಏಕೆಂದರೆ ನಿಮಗಿರುವ ಬೋಧಕರು ಒಬ್ಬರೇ ನೀವೆಲ್ಲರೂ ಸಹೋದರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತುಮಿ ಗುರು ಮನುನ್ ಕೊನಾಕ್‍ಬಿ ಬಲ್ವುತಲೆ ನಕ್ಕೊ. ತುಮಿ ಸಗ್ಳೆ ಜಾನಾ ಎಕಾಮೆಕಾಚೆ ಭಾವ್- ಭೆನಿಯಾ ಅನಿ ತುಮ್ಚೊ ಗುರು ಎಕ್ಲೊಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 23:8
34 ತಿಳಿವುಗಳ ಹೋಲಿಕೆ  

ನನ್ನ ಸಹೋದರ ಸಹೋದರಿಯರೇ, ನಿಮ್ಮಲ್ಲಿ ಅನೇಕರು ಬೋಧಕರಾಗಬಾರದು. ಏಕೆಂದರೆ ಬೋಧಕರಾದ ನಮಗೆ ಇತರ ಜನರಿಗಿಂತ ಕಠಿಣವಾದ ತೀರ್ಪಾಗುತ್ತದೆ ಎಂಬುದು ನಿಮಗೆ ತಿಳಿದಿದೆ.


ನೀವು ಜವಾಬ್ದಾರರಾಗಿರುವ ಆ ಮಂದೆಯ ಮೇಲೆ ದಬ್ಬಾಳಿಕೆ ಮಾಡಬೇಡಿ. ನೀವು ಅವರಿಗೆ ಉತ್ತಮ ಮಾದರಿಯಾಗಿರಿ.


ನಿನ್ನ ನಂಬಿಕೆಯು ಕುಂದಿಹೋಗಬಾರದೆಂದು ನಾನು ಪ್ರಾರ್ಥಿಸಿದೆನು! ನೀನು ಪರಿವರ್ತನೆಗೊಂಡ ನಂತರ ನಿನ್ನ ಸಹೋದರರನ್ನು ಬಲಪಡಿಸು” ಎಂದು ಹೇಳಿದನು.


‘ಗುರು’ವೆಂದೂ ಕರೆಸಿಕೊಳ್ಳಬೇಡಿ. ನಿಮಗೆ ಕ್ರಿಸ್ತನೊಬ್ಬನೇ ಗುರು.


ಪೇತ್ರನು ಮಾತಾಡುತ್ತಿರುವಾಗಲೇ ಪ್ರಕಾಶಮಾನವಾದ ಒಂದು ಮೋಡವು ಅವರ ಮೇಲೆ ಕವಿಯಿತು ಮತ್ತು ಆ ಮೋಡದೊಳಗಿಂದ ಒಂದು ಧ್ವನಿಯು, “ಈತನು ನನ್ನ ಪ್ರಿಯ ಮಗನು. ನಾನು ಈತನನ್ನು ಬಹಳ ಮೆಚ್ಚಿಕೊಂಡಿದ್ದೇನೆ. ಈತನಿಗೆ ವಿಧೇಯರಾಗಿರಿ!” ಎಂದು ಹೇಳಿತು.


ಯೋಹಾನನೆಂಬ ನಾನು ಕ್ರಿಸ್ತನಲ್ಲಿ ನಿಮ್ಮ ಸಹೋದರನಾಗಿದ್ದೇನೆ. ನಾವೆಲ್ಲರೂ ಒಟ್ಟಾಗಿ ಯೇಸುವಿನ ನಿಮಿತ್ತ ಸಂಕಟಗಳಲ್ಲಿಯೂ ರಾಜ್ಯದಲ್ಲಿಯೂ ತಾಳ್ಮೆಯಲ್ಲಿಯೂ ಪಾಲುಗಾರರಾಗಿದ್ದೇವೆ. ನಾನು ದೇವರ ಸಂದೇಶಕ್ಕೂ ಯೇಸುವಿನ ಸತ್ಯಕ್ಕೂ ನಂಬಿಗಸ್ತನಾಗಿದ್ದುದರಿಂದ ಪತ್ಮೊಸ್ ದ್ವೀಪದಲ್ಲಿದ್ದೆನು.


ಆದರೆ ಆ ದೇವದೂತನು ನನಗೆ, “ನನ್ನನ್ನು ಆರಾಧಿಸಬೇಡ! ನಾನು ನಿನ್ನಂತೆ, ಈ ಪುಸ್ತಕದಲ್ಲಿರುವ ವಾಕ್ಯಗಳಿಗೆ ವಿಧೇಯರಾಗಿರುವ ಎಲ್ಲ ಜನರಂತೆ ಮತ್ತು ನಿನ್ನ ಸಹೋದರರಾದ ಪ್ರವಾದಿಗಳಂತೆ ಒಬ್ಬ ಸೇವಕನು. ನೀನು ದೇವರನ್ನು ಆರಾಧಿಸಬೇಕು!” ಎಂದು ಹೇಳಿದನು.


ಆಗ ನಾನು ದೇವದೂತನನ್ನು ಆರಾಧಿಸಲು ಅವನ ಪಾದದ ಮುಂದೆ ಅಡ್ಡಬಿದ್ದೆನು. ಆದರೆ ದೇವದೂತನು ನನಗೆ, “ನನ್ನನ್ನು ಆರಾಧಿಸಬೇಡ! ಯೇಸುವಿನ ಸತ್ಯವನ್ನು ಹೊಂದಿರುವ ನಿನ್ನಂತೆಯೂ ನಿನ್ನ ಸಹೋದರರಂತೆಯೂ ನಾನು ಒಬ್ಬ ಸೇವಕನಾಗಿದ್ದೇನೆ. ಆದ್ದರಿಂದ ದೇವರನ್ನು ಆರಾಧಿಸು! ಏಕೆಂದರೆ ಯೇಸುವಿನ ಸತ್ಯವೇ ಪ್ರವಾದನೆಯ ಸಾಕ್ಷಿಯಾಗಿದೆ” ಎಂದು ಹೇಳಿದನು.


ಭೂಪರಲೋಕಗಳಲ್ಲಿರುವ ಪ್ರತಿಯೊಂದು ಕುಟುಂಬವು ಆತನಿಂದ ತನ್ನ ನಿಜ ಹೆಸರನ್ನು ಪಡೆದುಕೊಳ್ಳುತ್ತದೆ.


ನಾವು ನಮ್ಮ ಬಗ್ಗೆ ಬೋಧಿಸುವುದಿಲ್ಲ. ಆದರೆ ಯೇಸು ಕ್ರಿಸ್ತನೇ ಪ್ರಭುವೆಂದು ಮತ್ತು ಯೇಸುವಿಗೋಸ್ಕರ ನಿಮ್ಮ ಸೇವಕರಾಗಿದ್ದೇವೆಂದು ಬೋಧಿಸುತ್ತೇವೆ.


ನಿಮ್ಮ ನಂಬಿಕೆಯನ್ನು ಹತೋಟಿಯಲ್ಲಿಟ್ಟುಕೊಳ್ಳಲು ನಾವು ಪ್ರಯತ್ನಿಸುತ್ತಿದ್ದೇವೆಂದು ನಾನು ಹೇಳುತ್ತಿಲ್ಲ. ನೀವು ನಂಬಿಕೆಯಲ್ಲಿ ದೃಢವಾಗಿದ್ದೀರಿ. ಆದರೆ ನಾವು ನಿಮ್ಮ ಸಂತೋಷಕ್ಕಾಗಿ ನಿಮ್ಮ ಜೊತೆಕೆಲಸದವರಾಗಿದ್ದೇವೆ.


ಅಂತೆಯೇ ಯೂದನು ಯೇಸುವಿನ ಬಳಿಗೆ ಹೋಗಿ, “ಗುರುವೇ, ನಮಸ್ಕಾರ” ಎಂದು ಹೇಳಿ ಆತನಿಗೆ ಮುದ್ದಿಟ್ಟನು.


ಶಿಷ್ಯನು ತನ್ನ ಗುರುವಿನಂತಾದರೆ ಸಾಕು. ಆಳು ತನ್ನ ದಣಿಯಂತಾದರೆ ಸಾಕು. ಕುಟುಂಬದ ಹಿರಿಯನನ್ನೇ ಬೆಲ್ಜೆಬೂಲ (ದೆವ್ವ) ಎಂದು ಕರೆದರೆ, ಆ ಕುಟುಂಬದ ಇತರರನ್ನು ಮತ್ತಷ್ಟು ಕೆಟ್ಟ ಹೆಸರಿನಿಂದ ಕರೆಯುವುದಿಲ್ಲವೇ?


ಮಾರುಕಟ್ಟೆಗಳಲ್ಲಿ ಜನರು ತಮಗೆ ಮರ್ಯಾದೆ ತೋರಿಸಬೇಕೆಂದು ಆಶಿಸುತ್ತಾರೆ; ಜನರಿಂದ ಉಪದೇಶಕರೆನಿಸಿಕೊಳ್ಳಲು ಇಷ್ಟಪಡುತ್ತಾರೆ.


ಆಗ, ಯೇಸುವನ್ನು ಆತನ ಶತ್ರುಗಳಿಗೆ ಒಪ್ಪಿಸಿಕೊಡಲಿದ್ದ ಯೂದನು, “ಗುರುವೇ, ನಿನಗೆ ವಿರೋಧವಾಗಿರುವವನು ನಾನಲ್ಲ ತಾನೇ?” ಎಂದನು. ಅದಕ್ಕೆ ಯೇಸು, “ಹೌದು, ಅವನು ನೀನೇ?” ಎಂದು ಉತ್ತರಿಸಿದನು.


ಪೇತ್ರನು ಯೇಸುವಿಗೆ, “ಗುರುವೇ, ನಾವು ಇಲ್ಲೇ ಇರುವುದು ಒಳ್ಳೆಯದು. ನಾವು ಇಲ್ಲಿ ಮೂರು ಗುಡಾರಗಳನ್ನು ಹಾಕುತ್ತೇವೆ. ಒಂದು ನಿನಗೆ, ಒಂದು ಮೋಶೆಗೆ ಮತ್ತೊಂದು ಎಲೀಯನಿಗೆ” ಎಂದು ಹೇಳಿದನು.


ಯೇಸು, “ನನ್ನಿಂದ ನಿನಗೆ ಏನಾಗಬೇಕು?” ಎಂದು ಅವನನ್ನು ಕೇಳಿದನು. ಆ ಕುರುಡನು, “ಗುರುವೇ, ನನಗೆ ಕಣ್ಣು ಕಾಣುವಂತೆ ಮಾಡು” ಎಂದು ಉತ್ತರಿಸಿದನು.


ಪೇತ್ರನು ಆ ಮರವನ್ನು ಜ್ಞಾಪಿಸಿಕೊಂಡು, ಯೇಸುವಿಗೆ, “ಗುರುವೇ, ನೋಡು! ನಿನ್ನೆ ನೀನು ಶಪಿಸಿದ ಅಂಜೂರದ ಮರ ಒಣಗಿಹೋಗಿದೆ!” ಎಂದನು.


ಆದ್ದರಿಂದ ಯೂದನು ಯೇಸುವಿನ ಬಳಿಗೆ ಹೋಗಿ, “ಗುರುವೇ!” ಎಂದು ಹೇಳಿ ಯೇಸುವಿಗೆ ಮುದ್ದಿಟ್ಟನು.


ಯೇಸು ಹಿಂತಿರುಗಿ ನೋಡಿ, “ನಿಮಗೇನು ಬೇಕು?” ಎಂದು ಕೇಳಿದನು. ಆ ಇಬ್ಬರು, “ರಬ್ಬಿ, ನೀನು ಎಲ್ಲಿ ಇಳಿದುಕೊಂಡಿರುವೆ?” ಎಂದು ಕೇಳಿದರು. (“ರಬ್ಬಿ” ಅಂದರೆ “ಗುರು” ಎಂದರ್ಥ.)


ಆಗ ನತಾನಿಯೇಲನು ಯೇಸುವಿಗೆ, “ಗುರುವೇ, ನೀನೇ ದೇವರ ಮಗನು. ನೀನೇ ಇಸ್ರೇಲರ ರಾಜ” ಎಂದು ಹೇಳಿದನು.


ಒಂದು ರಾತ್ರಿ ನಿಕೊದೇಮನು ಯೇಸುವಿನ ಬಳಿಗೆ ಬಂದನು. ನಿಕೊದೇಮನು, “ಗುರುವೇ, ನೀನು ದೇವರಿಂದ ಕಳುಹಿಸಲ್ಪಟ್ಟ ಉಪದೇಶಕನೆಂದು ನಮಗೆ ಗೊತ್ತಿದೆ. ನೀನು ಮಾಡುವ ಈ ಸೂಚಕಕಾರ್ಯಗಳನ್ನು ದೇವರ ಸಹಾಯದಿಂದಲ್ಲದೆ ಯಾರೂ ಮಾಡಲಾರರು” ಎಂದು ಹೇಳಿದನು.


ಆದ್ದರಿಂದ ಶಿಷ್ಯರು ಯೋಹಾನನ ಬಳಿಗೆ ಬಂದು, “ಗುರುವೇ, ಜೋರ್ಡನ್ ನದಿಯ ಆಚೆದಡದಲ್ಲಿ ನಿನ್ನೊಂದಿಗಿದ್ದ ವ್ಯಕ್ತಿಯನ್ನು ಜ್ಞಾಪಿಸಿಕೊ. ಆತನ ಕುರಿತಾಗಿ ನೀನೇ ಸಾಕ್ಷಿ ಹೇಳಲಿಲ್ಲವೇ? ಆತನು ಜನರಿಗೆ ದೀಕ್ಷಾಸ್ನಾನ ಕೊಡುತ್ತಿದ್ದಾನೆ. ಅನೇಕ ಜನರು ಆತನ ಬಳಿಗೆ ಹೋಗುತ್ತಿದ್ದಾರೆ” ಎಂದು ಹೇಳಿದರು.


ಅಷ್ಟರಲ್ಲಿ ಯೇಸುವಿನ ಶಿಷ್ಯರು, “ಗುರುವೇ, ಊಟಮಾಡು” ಎಂದು ಆತನನ್ನು ಒತ್ತಾಯ ಮಾಡಿದರು.


ಜನರು ಯೇಸುವನ್ನು ಸರೋವರದ ಆಚೆಯ ದಡದಲ್ಲಿ ಕಂಡುಕೊಂಡರು. ಅವರು ಆತನಿಗೆ, “ಗುರುವೇ, ನೀನು ಇಲ್ಲಿಗೆ ಯಾವಾಗ ಬಂದೆ?” ಎಂದು ಕೇಳಿದರು.


ಯೇಸುವಿನ ಶಿಷ್ಯರು ಆತನಿಗೆ, “ಗುರುವೇ, ಈ ಮನುಷ್ಯನು ಹುಟ್ಟು ಕುರುಡನಾಗಲು ಯಾರ ಪಾಪ ಕಾರಣ? ಅವನ ಸ್ವಂತ ಪಾಪವೇ ಅಥವಾ ಅವನ ತಂದೆತಾಯಿಗಳ ಪಾಪವೇ?” ಎಂದು ಕೇಳಿದರು.


ಶಿಷ್ಯರು, “ಗುರುವೇ, ಜುದೇಯದ ಯೆಹೂದ್ಯರು ನಿನ್ನನ್ನು ಕಲ್ಲುಗಳಿಂದ ಕೊಲ್ಲಲು ಪ್ರಯತ್ನಿಸಿದರು. ಅದಾದದ್ದು ಕೇವಲ ಸ್ವಲ್ಪಕಾಲದ ಹಿಂದೆಯಷ್ಟೇ. ಈಗ ನೀನು ಮತ್ತೆ ಅಲ್ಲಿಗೆ ಹೋಗಬೇಕೆನ್ನುವಿಯಾ?” ಎಂದು ಉತ್ತರಕೊಟ್ಟರು.


ಯೇಸು ಆಕೆಗೆ, “ಮರಿಯಳೇ” ಎಂದನು. ಮರಿಯಳು ಯೇಸುವಿನ ಕಡೆಗೆ ತಿರುಗಿ, ಯೆಹೂದ್ಯರ ಭಾಷೆಯಲ್ಲಿ “ರಬ್ಬೂನಿ” ಎಂದಳು. (ರಬ್ಬೂನಿ ಎಂದರೆ “ಗುರು”.)


ಇನ್ನು ಮೇಲೆ ಅವನು ನಿನಗೆ ಕೇವಲ ಗುಲಾಮನಾಗಿರದೆ ಗುಲಾಮನಿಗಿಂತಲೂ ಹೆಚ್ಚಿನ ಪ್ರಿಯ ಸಹೋದರನಾಗಿದ್ದಾನೆ. ಅವನನ್ನು ಬಹಳವಾಗಿ ಪ್ರೀತಿಸುತ್ತೇನೆ. ಆದರೆ ನೀನು ಅವನನ್ನು ಮತ್ತಷ್ಟು ಹೆಚ್ಚಾಗಿ ಪ್ರೀತಿಸುವೆ. ನೀನು ಅವನನ್ನು ಮನುಷ್ಯನೆಂದು ಮತ್ತು ಪ್ರಭುವಿನಲ್ಲಿ ಒಬ್ಬ ಸಹೋದರನೆಂದು ಪ್ರೀತಿಸುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು