Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:15 - ಪರಿಶುದ್ದ ಬೈಬಲ್‌

15 “ಭಯಂಕರವಾದ ನಾಶಕ್ಕೆ ಕಾರಣವಾದ ವಸ್ತುವೊಂದನ್ನು ಕುರಿತು ಪ್ರವಾದಿ ದಾನಿಯೇಲನು ಹೇಳಿದ್ದಾನೆ. ಈ ಭಯಂಕರವಾದ ವಸ್ತುವು ದೇವಾಲಯದ ಪರಿಶುದ್ಧ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಿರಿ. (ಇದನ್ನು ಓದುತ್ತಿರುವವನು ಇದರ ಅರ್ಥವನ್ನು ಗ್ರಹಿಸಿಕೊಳ್ಳಲಿ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ಪ್ರವಾದಿಯಾದ ದಾನಿಯೇಲನು ಹೇಳಿದ ಹಾಗೆ ವಿನಾಶಕಾರಕ, ವಿಕಾರ ವಸ್ತು ಪವಿತ್ರ ಸ್ಥಾನದಲ್ಲಿ ನಿಂತಿರುವುದನ್ನು ನೀವು ನೋಡುವಾಗ (ಇದನ್ನು ಓದುವವನು ತಿಳಿದುಕೊಳ್ಳಲಿ)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ಪ್ರವಾದಿ ದಾನಿಯೇಲನು ಸೂಚಿಸಿರುವ ‘ವಿನಾಶಕರ ವಿಕಟ ಮೂರ್ತಿ’ ಪವಿತ್ರಸ್ಥಾನದಲ್ಲಿ ನಿಂತಿರುವುದನ್ನು ನೀವು ಕಾಣುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆದದರಿಂದ ಪ್ರವಾದಿಯಾದ ದಾನಿಯೇಲನು ಹೇಳಿದಂಥ ಹಾಳುಮಾಡುವ ಅಸಹ್ಯ ವಸ್ತುವು ಪವಿತ್ರಸ್ಥಾನದಲ್ಲಿ ನಿಂತಿರುವದನ್ನು ನೀವು ಕಾಣುವಾಗ (ಇದನ್ನು ಓದುವವನು ತಿಳುಕೊಳ್ಳಲಿ)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ಆದ್ದರಿಂದ ಪ್ರವಾದಿ ದಾನಿಯೇಲನಿಂದ ಹೇಳಿದ ಹಾಗೆ ‘ಅಸಹ್ಯ ವಸ್ತು’ ಪವಿತ್ರ ಸ್ಥಳದಲ್ಲಿ ನಿಂತಿರುವುದನ್ನು ನೀವು ಕಾಣುವಾಗ, ಓದುವವನು ತಿಳಿದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 “ದಾನಿಯೆಲ್ ಪ್ರವಾದ್ಯಾನ್ ಸಾಂಗಲ್ಲಿ ಸತ್ತ್ಯಾನಾಸ್ ಕರ್‍ತಲಿ ಬುರ್ಶಿ ಸಂಗತ್” ತುಮ್ಕಾ ದಿಸ್ತಾ. ತಿ ಎಕ್ ಪವಿತ್ರ್ ಜಾಗ್ಯಾರ್ ಇಬೆ ರ್‍ಹಾತಾ. ವಾಚ್ವುತಲ್ಯಾಕ್ ಸೂಚನಾ: ಅಶೆ ಮಟ್ಲ್ಯಾರ್ ಕಾಯ್ ಮನುನ್ ಕಳ್ವುನ್ ಘೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:15
19 ತಿಳಿವುಗಳ ಹೋಲಿಕೆ  

“ಆಗ ಭವಿಷ್ಯತ್ತಿನ ನಾಯಕನು ಬಹುಜನರೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಳ್ಳುವನು. ಆ ಒಪ್ಪಂದ ಒಂದು ವಾರದವರೆಗೆ ಮುಂದುವರೆಯುವದು. ಅರ್ಧವಾರದವರೆಗೆ ಯಜ್ಞ ಮತ್ತು ನೈವೇದ್ಯಗಳನ್ನು ನಿಲ್ಲಿಸಲಾಗುವುದು. ಒಬ್ಬ ಘಾತುಕನು ಬರುವನು. ಅವನು ಬಹುವಿನಾಶಕಾರಿ ಕೆಲಸಗಳನ್ನು ಮಾಡುವನು. ಆದರೆ ಆ ಘಾತುಕನನ್ನು ಮುಗಿಸಿಬಿಡಬೇಕೆಂದು ದೇವರ ಆಜ್ಞೆಯಾಗಿದೆ” ಎಂದು ಹೇಳಿದನು.


“ನಿತ್ಯಹೋಮವು ನಿಲ್ಲಿಸಲ್ಪಟ್ಟು ಹಾಳುಮಾಡುವ ಅಸಹ್ಯ ವಸ್ತುವು ಪ್ರತಿಷ್ಠಿತವಾದ ಮೇಲೆ ಒಂದು ಸಾವಿರದ ಇನ್ನೂರ ತೊಂಭತ್ತು ದಿನಗಳು ಕಳೆಯಬೇಕು.


“ವಿನಾಶವನ್ನು ಉಂಟುಮಾಡುವ ಭಯಂಕರ ವಸ್ತುವನ್ನು ನೀವು ನೋಡುತ್ತೀರಿ. ಇದು ನಿಂತುಕೊಳ್ಳಬಾರದಂಥ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಿರಿ. (ಇದನ್ನು ಓದುವವನು ಇದರ ಅರ್ಥವನ್ನು ತಿಳಿದುಕೊಳ್ಳಬೇಕು) ಆ ಸಮಯದಲ್ಲಿ ಜುದೇಯದಲ್ಲಿರುವ ಜನರು ಬೆಟ್ಟಗಳಿಗೆ ಓಡಿಹೋಗಬೇಕು.


“ಜೆರುಸಲೇಮಿನ ಸುತ್ತಲೂ ಸೈನ್ಯಗಳು ಮುತ್ತಿಗೆ ಹಾಕುವುದನ್ನು ನೀವು ನೋಡುವಿರಿ. ಆಗ ಜೆರುಸಲೇಮಿನ ನಾಶನದ ಕಾಲ ಬಂತೆಂದು ನೀವು ತಿಳಿದುಕೊಳ್ಳಿರಿ.


ಉತ್ತರದ ರಾಜನು ಜೆರುಸಲೇಮಿನ ಪವಿತ್ರಾಲಯವನ್ನು ಹೊಲಸು ಮಾಡಲು ತನ್ನ ಸೈನಿಕರನ್ನು ಕಳುಹಿಸುವನು. ದೈನಂದಿನ ಯಜ್ಞಗಳನ್ನು ಅರ್ಪಿಸದಂತೆ ಅವರು ತಡೆಯುವರು. ಆಮೇಲೆ ಅವರು ವಿನಾಶಕಾರಿಯಾದ ಅಸಹ್ಯ ವಸ್ತುವನ್ನು ಪ್ರತಿಷ್ಠಾಪಿಸುವರು.


ದೇವರಿಂದ ಬಂದ ಈ ಸಂದೇಶದ ವಾಕ್ಯಗಳನ್ನು ಓದುವವರೂ ಈ ಸಂದೇಶವನ್ನು ಕೇಳಿ ಅದನ್ನು ಕೈಕೊಂಡು ನಡೆಯುವವರೂ ಭಾಗ್ಯವಂತರಾಗಿದ್ದಾರೆ. ಏಕೆಂದರೆ ನೆರವೇರುವ ಕಾಲವು ಸಮೀಪವಾಗಿದೆ.


ನಿನ್ನ ವೈರಿಗಳು ನಿನ್ನ ಸುತ್ತಲೂ ಗೋಡೆ ಕಟ್ಟಿ ನಿನ್ನನ್ನು ಎಲ್ಲಾ ಕಡೆಗಳಿಂದಲೂ ಮುತ್ತಿಗೆ ಹಾಕಿ,


ನೀನು ಪ್ರಾರ್ಥಿಸಲು ಪ್ರಾರಂಭಿಸಿದಾಗಲೇ ನನಗೆ ದೇವರ ಆಜ್ಞೆಯಾಯಿತು. ನಾನು ಅದನ್ನು ನಿನಗೆ ತಿಳಿಸಲು ಬಂದಿರುವೆನು. ದೇವರು ನಿನ್ನನ್ನು ತುಂಬ ಪ್ರೀತಿಸುತ್ತಾನೆ. ನೀನು ದೈವಾಜ್ಞೆಯನ್ನು ಅರಿತುಕೊಳ್ಳುವೆ ಮತ್ತು ದರ್ಶನದ ಅರ್ಥವನ್ನು ತಿಳಿದುಕೊಳ್ಳುವೆ.


“ದಾನಿಯೇಲನೇ, ಇದನ್ನು ತಿಳಿದುಕೊ. ಇದನ್ನು ಚೆನ್ನಾಗಿ ಅರ್ಥಮಾಡಿಕೊ. ‘ಹೋಗಿ ಜೆರುಸಲೇಮನ್ನು ಸರಿಪಡಿಸಿರಿ’ ಎಂಬ ದೈವೋಕ್ತಿಯು ಹೊರಡುವಂದಿನಿಂದ ಅಭಿಷಿಕ್ತನಾದ ರಾಜನು ಬರುವದರೊಳಗೆ ಏಳು ವಾರಗಳು ಕಳೆಯಬೇಕು. ಆಗ ಜೆರುಸಲೇಮು ಮತ್ತೆ ನಿರ್ಮಾಣವಾಗುವುದು. ಜನರು ಒಂದಾಗಿ ಸೇರುವದಕ್ಕೆ ಜೆರುಸಲೇಮಿನಲ್ಲಿ ಮತ್ತೆ ಸ್ಥಳಾವಕಾಶವಾಗುವುದು. ನಗರದ ಸುತ್ತಲೂ ಅದನ್ನು ರಕ್ಷಿಸುವುದಕ್ಕಾಗಿ ಒಂದು ಕಂದಕವನ್ನು ಕೊರೆಯಲಾಗುವುದು. ಅರವತ್ತೆರಡು ವಾರಗಳವರೆಗೆ ಜೆರುಸಲೇಮ್ ನಗರವನ್ನು ಕಟ್ಟಲಾಗುವುದು. ಆದರೆ ಆ ಅವಧಿಯಲ್ಲಿ ಹಲವಾರು ಕಷ್ಟನಷ್ಟಗಳು ಸಂಭವಿಸುವವು.


ಆದ್ದರಿಂದ ನಮಗೆ ಬೋಧಿಸಲ್ಪಟ್ಟ ಸಂಗತಿಗಳನ್ನು ಬಹಳ ಎಚ್ಚರಿಕೆಯಿಂದ ಅನುಸರಿಸಬೇಕು. ಸತ್ಯಮಾರ್ಗವನ್ನು ಬಿಟ್ಟು ತಪ್ಪಿಹೋಗದಂತೆ ಎಚ್ಚರಿಕೆಯಿಂದಿರಬೇಕು.


ಈ ಯೆಹೂದ್ಯರು ಕೆಲವು ಮಂದಿ ಸುಳ್ಳುಸಾಕ್ಷಿಗಳನ್ನು ಕರೆದುಕೊಂಡು ಬಂದು, “ಈ ಮನುಷ್ಯನು ಈ ಪವಿತ್ರಸ್ಥಳದ (ದೇವಾಲಯದ) ವಿರುದ್ಧವಾಗಿಯೂ ಮೋಶೆಯ ಧರ್ಮಶಾಸ್ತ್ರದ ವಿರುದ್ಧವಾಗಿಯೂ ಕೆಟ್ಟಸಂಗತಿಗಳನ್ನು ಯಾವಾಗಲೂ ಹೇಳುತ್ತಾನೆ.


ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು.”


“ಯೆಹೂದ್ಯ ಜನರೇ, ನಮಗೆ ಸಹಾಯಮಾಡಿ! ಮೋಶೆಯ ಧರ್ಮಶಾಸ್ತ್ರಕ್ಕೂ ನಮ್ಮ ಜನರಿಗೂ ಮತ್ತು ಈ ಸ್ಥಳಕ್ಕೂ (ದೇವಾಲಯ) ವಿರೋಧವಾಗಿ ಎಲ್ಲಾ ಕಡೆಗಳಲ್ಲಿ ಜನರಿಗೆ ಉಪದೇಶಿಸುತ್ತಿದ್ದವನು ಇವನೇ. ಈಗ ಇವನು ಕೆಲವು ಗ್ರೀಕರನ್ನು ದೇವಾಲಯದೊಳಕ್ಕೆ ಕರೆದುಕೊಂಡು ಬಂದಿದ್ದಾನೆ! ಈ ಪವಿತ್ರ ಸ್ಥಳವನ್ನು ಇವನು ಅಶುದ್ಧಗೊಳಿಸಿದ್ದಾನೆ!” ಎಂದು ಕೂಗಿಹೇಳಿ ಗಲಿಬಿಲಿ ಮಾಡಿದರು.


ಆಗ ಅವನು ಹೀಗೆ ಹೇಳಿದನು, “ನರಪುತ್ರನೇ, ನೀನು ನಿನ್ನ ಕಣ್ಣು, ಕಿವಿಗಳನ್ನು ಉಪಯೋಗಿಸು, ಇವೆಲ್ಲವನ್ನೂ ಗಮನಿಸಿ ನನ್ನ ಮಾತುಗಳನ್ನು ಕೇಳು. ನಾನು ತೋರಿಸುವ ಪ್ರತಿಯೊಂದು ವಸ್ತುಗಳ ಮೇಲೆ ಚೆನ್ನಾಗಿ ಲಕ್ಷ್ಯವಿಡು. ಯಾಕೆಂದರೆ ಈ ವಿಷಯಗಳನ್ನು ನಿನಗೆ ತೋರಿಸಬೇಕೆಂದೇ ನಿನ್ನನ್ನು ಇಲ್ಲಿಗೆ ತಂದಿರುವೆ. ನೀನು ನೋಡಿದ್ದೆಲ್ಲವನ್ನೂ ಇಸ್ರೇಲ್ ವಂಶದವರಿಗೆ ತಿಳಿಸಬೇಕು.”


ಈ ಕಾರ್ಯಗಳನ್ನು ಮಾಡಲು ನಾವು ಅವನಿಗೆ ಅವಕಾಶ ಕೊಟ್ಟರೆ ಜನರೆಲ್ಲರೂ ಇವನಲ್ಲಿ ನಂಬಿಕೆ ಇಡುವರು. ಆಗ ರೋಮ್ ರಾಜ್ಯದವರು ಬಂದು ನಮ್ಮ ದೇವಾಲಯವನ್ನೂ ನಮ್ಮ ದೇಶವನ್ನೂ ವಶಪಡಿಸಿಕೊಳ್ಳುವರು” ಅಂದರು.


ನಾನು ನಿಮ್ಮನ್ನು ಇಲ್ಲಿ ಈಜಿಪ್ಟಿನಲ್ಲಿ ದಂಡಿಸುತ್ತೇನೆಂದು ಪ್ರಮಾಣ ಮಾಡುತ್ತೇನೆ. ಆಗ ನಾನು ನಿಮ್ಮನ್ನು ದಂಡಿಸುವೆನೆಂದು ಮಾಡಿದ ಪ್ರತಿಜ್ಞೆ ಈಡೇರುವದೆಂದು ನಿಮಗೆ ತಿಳಿಯುವುದು.’ ಇದು ಯೆಹೋವನ ನುಡಿ.


ಆ ತರುಣರಲ್ಲಿ ಯೆಹೂದ ಕುಲಕ್ಕೆ ಸೇರಿದವರಾದ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಎಂಬವರಿದ್ದರು.


ಆ ಸಮಯದಲ್ಲಿ ಜುದೇಯದಲ್ಲಿರುವ ಜನರು ಬೆಟ್ಟಗಳಿಗೆ ಓಡಿಹೋಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು