Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:17 - ಪರಿಶುದ್ದ ಬೈಬಲ್‌

17 ಮಾಳಿಗೆಯ ಮೇಲಿರುವವನು ಇಳಿದು ತನ್ನ ವಸ್ತುಗಳನ್ನು ಮನೆಯಿಂದ ತೆಗೆದುಕೊಳ್ಳದೆ ಓಡಿಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಮಾಳಿಗೆಯ ಮೇಲೆ ಇರುವವನು ತನ್ನ ಮನೆಯೊಳಗಿರುವುದನ್ನು ತೆಗೆದುಕೊಳ್ಳುವುದಕ್ಕೆ ಹೋಗದಿರಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಮಾಳಿಗೆಯ ಮೇಲಿರುವವನು ಇಳಿದು ಮನೆಯಿಂದ ಏನನ್ನೂ ತೆಗೆದುಕೊಳ್ಳದೆ ಓಡಿಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಮಾಳಿಗೆಯ ಮೇಲೆ ಇರುವವನು ತನ್ನ ಮನೆಯೊಳಗಿರುವದನ್ನು ತೆಗೆದುಕೊಳ್ಳುವದಕ್ಕೆ ಇಳಿಯದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಮಾಳಿಗೆಯ ಮೇಲಿರುವವನು ತನ್ನ ಮನೆಯೊಳಗಿಂದ ಏನಾದರೂ ತೆಗೆದುಕೊಳ್ಳುವುದಕ್ಕೆ ಕೆಳಗೆ ಇಳಿಯದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 “ಜೆ ಕೊನ್ ಅಪ್ನಾಚ್ಯಾ ಘರಾಚ್ಯಾ ವರ್‍ತಿ ಮ್ಹಾಳ್ಗಿರ್ ಹಾತ್, ತೆನಿ ಘರಾತ್ ಜಾವ್ನ್ ಅಪ್ನಾಚಿ ಸಾಮಾನಾ ಹಾನುಕ್ ಮನುನ್ ಜಾವ್ನ್ ಎಳ್ ಕರುನಸುಂದಿ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:17
14 ತಿಳಿವುಗಳ ಹೋಲಿಕೆ  

ನಾನು ಕತ್ತಲೆಯಲ್ಲಿ (ರಹಸ್ಯವಾಗಿ) ಈ ಸಂಗತಿಗಳನ್ನು ನಿಮಗೆ ಹೇಳುತ್ತಿದ್ದೇನೆ. ಆದರೆ ನೀವು ಈ ಸಂಗತಿಗಳನ್ನು ಬೆಳಕಿನಲ್ಲಿ ಹೇಳಬೇಕೆಂಬುದು ನನ್ನ ಇಷ್ಟ. ನಾನು ಈ ವಿಷಯಗಳನ್ನು ನಿಮಗೆ ಮೆಲ್ಲಗೆ ಹೇಳುತ್ತಿದ್ದೇನೆ. ಆದರೆ ನೀವು ಈ ವಿಷಯಗಳನ್ನು ಜನರಿಗೆಲ್ಲ ಗಟ್ಟಿಯಾಗಿ ಹೇಳಿರಿ.


ಮರುದಿನ ಈ ಜನರು ಜೊಪ್ಪಕ್ಕೆ ಸಮೀಪಿಸಿದಾಗ ಮಧ್ಯಾಹ್ನದ ಸಮಯವಾಗಿತ್ತು. ಆ ಸಮಯದಲ್ಲಿ ಪೇತ್ರನು ಪ್ರಾರ್ಥಿಸುವುದಕ್ಕಾಗಿ ಮಾಳಿಗೆಯ ಮೇಲೆ ಹೋದನು.


ಕತ್ತಲಿನಲ್ಲಿ (ಗುಪ್ತವಾಗಿ) ನೀವು ಹೇಳುವ ವಿಷಯಗಳು ಬೆಳಕಿನಲ್ಲಿ (ಬಹಿರಂಗವಾಗಿ) ತಿಳಿಸಲ್ಪಡುವವು. ಗುಪ್ತವಾಗಿ ಕೋಣೆಯಲ್ಲಿ ನೀವು ಪಿಸುಗುಟ್ಟುವ ವಿಷಯಗಳು, ಮನೆಯ ಮೇಲಿನಿಂದ ಗಟ್ಟಿಯಾಗಿ ಪ್ರಕಟಿಸಲ್ಪಡುವವು” ಎಂದು ಹೇಳಿದನು.


ಆದರೆ ಅಲ್ಲಿ ಬಹಳ ಜನ ಇದ್ದುದರಿಂದ ಯೇಸುವಿನ ಬಳಿಗೆ ಹೋಗಲು ಅವರಿಗೆ ಸಾಧ್ಯವಾಗಲಿಲ್ಲ. ಆದ್ದರಿಂದ ಅವರು ಮನೆಯ ಮೇಲೆ ಹತ್ತಿ ಹೆಂಚುಗಳನ್ನು ತೆಗೆದು ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯ ಸಹಿತ ಯೇಸುವಿನ ಮುಂದೆ ಇಳಿಸಿದರು.


“ಆದ್ದರಿಂದ ನಿಮ್ಮ ಪ್ರಾಣಧಾರಣೆಗೆ ಬೇಕಾದ ಆಹಾರಕ್ಕಾಗಲಿ ದೇಹಕ್ಕೆ ಬೇಕಾದ ಬಟ್ಟೆಗಾಗಲಿ ನೀವು ಚಿಂತಿಸಬಾರದು. ಪ್ರಾಣವು ಆಹಾರಕ್ಕಿಂತಲೂ ದೇಹವು ಬಟ್ಟೆಗಿಂತಲೂ ಬಹಳ ಮುಖ್ಯವಾದದ್ದೆಂದು ನಾನು ನಿಮಗೆ ಹೇಳುತ್ತೇನೆ.


ಅವರು ಊಟಮಾಡಿದ ನಂತರ, ಆರಾಧನಾ ಸ್ಥಳದಿಂದ ಇಳಿದುಬಂದು, ಪಟ್ಟಣಕ್ಕೆ ಹಿಂದಿರುಗಿದರು. ಸಮುವೇಲನು ಮಲಗಲು ಸೌಲನಿಗಾಗಿ ಮಾಳಿಗೆಯ ಮೇಲೆ ಹಾಸಿಗೆಯನ್ನು ಸಿದ್ಧಪಡಿಸಿದನು. ಸೌಲನು ಅಲ್ಲಿ ಮಲಗಿಕೊಂಡನು.


“ನೀವು ಮನೆ ಕಟ್ಟುವಾಗ ಅದರ ಮೇಲ್ಛಾವಣಿಯ ಸುತ್ತಲೂ ಅರ್ಧ ಗೋಡೆಯನ್ನು ಕಟ್ಟಬೇಕು. ಹೀಗೆ ಮಾಡದೆಹೋದರೆ ಯಾರಾದರೂ ಮೇಲ್ಛಾವಣಿಯಿಂದ ಕೆಳಗೆ ಬಿದ್ದು ಸತ್ತಲ್ಲಿ ಅವನ ಸಾವಿಗೆ ನೀವು ಕಾರಣರಾಗುವಿರಿ.


ಅದಕ್ಕೆ ಸೈತಾನನು, “ಚರ್ಮಕ್ಕೆ ಚರ್ಮ! ಎಂಬಂತೆ ಮನುಷ್ಯನು ತನ್ನ ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೆ ತನ್ನ ಸರ್ವಸ್ವವನ್ನೂ ಕೊಡುವನು.


ಅವನು ಸಾಯಂಕಾಲ ತನ್ನ ಹಾಸಿಗೆಯಿಂದ ಮೇಲೆದ್ದು ಅರಮನೆಯ ಮಾಳಿಗೆಯ ಮೇಲಕ್ಕೆ ಹೋಗಿ ತಿರುಗಾಡುತ್ತಿದ್ದನು. ದಾವೀದನು ಮಾಳಿಗೆಯ ಮೇಲಿರುವಾಗ, ಒಬ್ಬ ಹೆಂಗಸು ಸ್ನಾನ ಮಾಡುತ್ತಿರುವುದನ್ನು ನೋಡಿದನು. ಅವಳು ಅತ್ಯಂತ ಸುಂದರಳಾಗಿದ್ದಳು.


ಆ ಸಮಯದಲ್ಲಿ ಜುದೇಯದಲ್ಲಿರುವ ಜನರು ಬೆಟ್ಟಗಳಿಗೆ ಓಡಿಹೋಗಲಿ.


ಹೊಲದಲ್ಲಿರುವವನು ತನ್ನ ಮೇಲಂಗಿಯನ್ನು ತೆಗೆದುಕೊಳ್ಳುವುದಕ್ಕಾಗಿ ಮನೆಗೆ ಹಿಂತಿರುಗದಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು